Breaking News
Home / ರಾಜ್ಯ (page 550)

ರಾಜ್ಯ

ಮುಗಳಖೋಡ: ಕಾಂಗ್ರೆಸ್‌ ಗೆಲುವಿಗಾಗಿ 300 ಕಿ.ಮೀ ಪಾದಯಾತ್ರೆ

ಮುಗಳಖೋಡ: ರಾಜ್ಯದಲ್ಲಿ ಬಿಜೆಪಿ ಪಕ್ಷದ ದುರಾಡಳಿತ ಕೊನೆಗೊಳ್ಳಲಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಶಾಹಾಪೂರ ವಿಧಾನ ಸಭಾ ಕ್ಷೇತ್ರದ ಮುಡಬೂಳ ಗ್ರಾಮದ ಯುವಕರು ಮುಡಬೂಳ ಗ್ರಾಮದಿಂದ ಮುಗಳಖೋಡದ ಯಲ್ಲಾಲಿಂಗ ಮಹಾರಾಜರ ಮಠದವರೆಗೆ 300 ಕಿ.ಮೀ ಪಾದಯಾತ್ರೆ ಕೈಗೊಂಡಿದ್ದಾರೆ.   ಶಾಹಾಪೂರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಬಸಪ್ಪಗೌಡ ದಶನಾಪೂರ, ಬಬಲೇಶ್ವರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ. ಪಾಟೀಲ ಹಾಗೂ ಕುಡಚಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಹೇಂದ್ರ …

Read More »

104ರ ವೃದ್ಧೆ ಮತದಾನ:

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ಮತದಾನ (Voting) ಪ್ರಾರಂಭವಾಗಿದೆ. ಅರ್ರೆ ಮೇ 10ಕ್ಕೆ ಮತದಾನ ಅಲ್ವೆ ಎಂದು ನೀವು ಹೇಳಬಹುದು. ಚುನಾವಣಾ ಆಯೋಗ ಇದೇ ಮೊದಲಬಾರಿಗೆ ರಾಜ್ಯದಲ್ಲಿ ವಿಶೇಷ ಚೇತನರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ವಯೋವೃದ್ಧರು ತಮ್ಮ ಮನೆಯಿಂದಲೇ ಮತ ಚಲಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಮೂಲಕ ಮಾಡುವ …

Read More »

ಬಿಜೆಪಿ ನನ್ನ ಆತ್ಮೀಯರ ಮೇಲೆ ಷಡ್ಯಂತ್ರ ರೂಪಿಸುತ್ತಿದ್ದಾರೆ: ವಿನಯ್ ಕುಲಕರ್ಣಿ

ಬೆಳಗಾವಿ: ಇವತ್ತು ಕೋರ್ಟ್ ನನಗೆ ಧಾರವಾಡ (Dharwad) ಜಿಲ್ಲಾ ಪ್ರವೇಶಕ್ಕೆ ಅನುಮತಿ ಕೊಟ್ಟಿಲ್ಲ. ಹೊರಗಡೆ ಇದ್ದುಕೊಂಡೇ ನಾನು ಚುನಾವಣೆ ಮಾಡುತ್ತಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಹೇಳಿದರು. ಬೆಳಗಾವಿ (Belagavi)  ಜಿಲ್ಲೆಯ ಕಿತ್ತೂರಿನಲ್ಲಿ ಮನೆ ಮಾಡಿಕೊಂಡು ಇರುವ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ವಿನಯ್ ಕುಲಕರ್ಣಿ, ಕ್ಷೇತ್ರದ ಜನ ಇದೀಗ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಮರಳಿ ನನಗೆ ಅವಕಾಶ ಕೊಡಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು …

Read More »

ಮೋದಿ ಸಮಾವೇಶಕ್ಕೆ ಹೆಚ್ಚಿನ ಜನ ಕೂಡಿಸಲು ಹಣದ ಆಮಿಷ ಆರೋಪ : ಶಾಸಕ ಪಿ‌ ರಾಜೀವ್ ವಿರುದ್ಧ ಕೇಸ್

ಬೆಳಗಾವಿ : ಏಪ್ರಿಲ್ 29ರಂದು ಕುಡಚಿ ಮತಕ್ಷೇತ್ರದ ಕೋಳಿಗುಡ್ಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಹಿರಂಗ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆತರುವ ಉದ್ದೇಶದಿಂದ ಹಣ ಹಂಚಿಕೆ ಮಾಡಿದ ಆರೋಪದ ಮೇಲೆ ಸ್ಥಳೀಯ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ಪಿ ರಾಜೀವ್‌ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.   ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ದೇಶದಿಂದ ರಾಯಬಾಗ …

Read More »

ಅರಭಾವಿ ನಮ್ಮ ಭದ್ರಕೋಟೆ,ಟಿಕೆಟ್ ಸಿಗದ ಕಾರಣ ಕೆಲವರಿಗೆ ಹೊಟ್ಟೆನೋವು ಶುರುವಾಗಿದೆ:ಭಾಲಚಂದ್ರ ಜಾರಕಿಹೊಳಿ

ಅರಭಾವಿ ಕ್ಷೇತ್ರದಲ್ಲಿ ನನ್ನನ್ನು ಆಯ್ಕೆ ಮಾಡಲು ಜನರು ಸ್ಪಷ್ಟ ಸೂಚನೆ ನೀಡಿದ್ದಾರೆ. ಹಾಗಾಗಿ ನನ್ನ ಗೆಲುವು ನಿಶ್ಚಿತ. ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಭಾಲಚಂದ್ರ ಜಾರಕಿಹೊಳಿ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾಧ್ಯಮದವರೊಂದಿಗೆ ಮಾತನಾಡುತ್ತಾ. ಕ್ಷೇತ್ರದ ಹಾಲುಮತ ಸಮಾಜದ ಜನರು ಇಂದು ಸಭೆ ನಡೆಸಿ ನನ್ನನ್ನು ಬೆಂಬಲಿಸಲು ಸರ್ವಾನುಮತದಿಂದ ತೀರ್ಮಾನಿಸಿದ್ದಾರೆ ಎಂದು ಭಾಲಚಂದ್ರ ಜಾರಕಿಹೊಳಿ ಹೇಳಿದರು. ಇದಕ್ಕಾಗಿ ಕೆಲ ದಿನಗಳಿಂದ ಸಿದ್ಧತೆ ನಡೆದಿತ್ತು. ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಬಿಜೆಪಿ ಜತೆ …

Read More »

ನಾಳೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ ಜಿ ಪರಮೇಶ್ವರ ಮತ್ತಿತರ ಮುಖಂಡರು ನಾಳೆ ಮಂಗಳವಾರ ಬೆಳಗ್ಗೆ 9.00 ಗಂಟೆಗೆ ಬೆಂಗಳೂರಿನ ವಸಂತನಗರದ ಶಾಂಘರಿಲಾ …

Read More »

ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು, ಮೂರು ಉಚಿತ ಸಿಲಿಂಡರ್ ನೀಡಲಿದೆ B.JP.?

ರಾಜ್ಯದಲ್ಲಿ ವಸತಿ ರಹಿತರಿಗೆ 10 ಲಕ್ಷ ಮನೆ, ಬಿಪಿಎಲ್ ಕುಟುಂಬಗಳಿಗೆ ದಿನಕ್ಕೆ ಅರ್ಧ ಲೀಟರ್ ನಂದಿನಿ ಹಾಲು, ವರ್ಷಕ್ಕೆ ಮೂರು ಎಲ್ಪಿಜಿ ಸಿಲಿಂಡರ್ಗಳು ಸೇರಿದಂತೆ ವಿವಿಧ ಭರವಸೆಗಳನ್ನು ನೀಡುವ 6 ಅಂಶಗಳ ಪ್ರಣಾಳಿಕೆಯನ್ನು ಬಿಜೆಪಿ ಇಂದು ಪ್ರಕಟಿಸಿದೆ. ಇದು ಏಕರೂಪ ನಾಗರಿಕ ಸಂಹಿತೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿಯ ಅನುಷ್ಠಾನದ ಭರವಸೆಯನ್ನೂ ನೀಡುತ್ತದೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪ. ನಡ್ಡಾ ಅವರು ಇಂದು ಪಕ್ಷದ ಪ್ರಣಾಳಿಕೆಯನ್ನು …

Read More »

ಗಾಂಧಿ ಕುಟುಂಬದ ಬಗ್ಗೆ ನಾಲಿಗೆ ಹರಿ ಬಿಟ್ಟ ಯತ್ನಾಳ್

ಕುಂದಗೋಳ: ವಿಧಾನಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪರಸ್ಪರ ವಾಗ್ದಾಳಿ ನಡೆಸುವ ಬರದಲ್ಲಿ ಬಾಯಿಗೆ ಬಂದಂತೆ ಪದ ಪ್ರಯೋಗ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ವಾಕ್ಪ್ರಹಾರ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಗಾಂಧಿ ಕುಟುಂಬದ ಬಗ್ಗೆ ನಾಲಿಗೆ ಹರಿ ಬಿಟ್ಟಿದ್ದಾರೆ. ಕುಂದಗೋಳದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಯತ್ನಾಳ್, ಕಾಂಗ್ರೆಸ್ ಪಕ್ಷದಲ್ಲಿ ಮೂರು ಬಿಟ್ಟವರು ಇದ್ದಾರೆ. ಊರ ಬದ್ಮಾಷ್ ಗಳು ಇದ್ದಾರೆ ಎಂದು ಕಿಡಿಕಾರಿದ್ದಾರೆ. …

Read More »

ಎಲೆಕ್ಷನ್, ಸೆಲೆಕ್ಷನ್, ಕರೆಕ್ಷನ್ ನಮ್ಮ ಸೂತ್ರ.. 110 ಕ್ಷೇತ್ರದಲ್ಲಿ ಪ್ರಜಾಕೀಯ ಸ್ಪರ್ಧೆ – ಉಪೇಂದ್ರ ಮಾಹಿತಿ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರ ರಂಗೇರಿದೆ. ಮೇ 10ರಂದು ಮತದಾನ ನಡೆಯಲಿದ್ದು, ರಾಜ್ಯದ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ರಾಜ್ಯ ಚುನಾವಣೆಗೆ ಇನ್ನು 9 ದಿನ ಮಾತ್ರ ಬಾಕಿ ಇದೆ. ಈಗ ಬುದ್ಧಿವಂತ ನಟ ಹಾಗು ನಿರ್ದೇಶಕ ಉಪೇಂದ್ರ ತಮ್ಮ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳ ಜೊತೆ ಬೆಂಗಳೂರಿನ ಪ್ರೆಸ್​ಕ್ಲಬ್​ನಲ್ಲಿ ಮಾಧ್ಯಮಗೋಷ್ಟಿ ನಡೆಸಿದರು. ತಮ್ಮ ಉತ್ತಮ ಪ್ರಜಾಕೀಯ ಪಕ್ಷದ 110 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳನ್ನು ಪರಿಚಯಿಸಿದರು. ಪಕ್ಷವು …

Read More »

ರಾಮರಾಜ್ಯ ಕಟ್ಟಲು ರಾವಣನಿಗೆ ಬಿಜೆಪಿಯ ಟಿಕೆಟ್ ಎಂದು ಕಿಡಿ:ವಿವಾದ ಸೃಷ್ಟಿಸಿದ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ವಿಧಾನಸಭಾ ಚುನಾವಣೆಗೆ ಕೇವಲ 9 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಮುಖಂಡರು ಪರಸ್ಪರ ವಾಗ್ದಾಳಿ ನಡೆಸುವ ಬರದಲ್ಲಿ ಮಾತಿನ ಎಲ್ಲೆ ಮೀರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರುವ ಬರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿವಾದ ಸೃಷ್ಟಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಪ್ರಿಯಾಂಕ ಖರ್ಗೆ, ಪ್ರಧಾನಿ ಮೋದಿ ಚುನಾವಣಾ ಪ್ರಚಾರ, ಬಂಜಾರಾ ಸಮುದಾಯದ ಮೀಸಲಾತಿ ವಿಚಾರದ ಬಗ್ಗೆ ಭಾಷಣ ಕುರಿತು ಪ್ರಸ್ತಾಪಿಸುತ್ತಾ ಪ್ರಧಾನಿ ಮೋದಿಯವರನ್ನು ನಾಲಾಯಕ್ ಎಂದು …

Read More »