Breaking News
Home / ರಾಜ್ಯ (page 552)

ರಾಜ್ಯ

2 ವರ್ಷದ ನಂತರ ಹೊಸ ಸಾಲ ಪಡೆಯಲ್ಲ’: ಗೋವಾ ಸಿಎಂ ಹೇಳಿಕೆಗೆ ಪ್ರತಿಪಕ್ಷಗಳು ಕಿಡಿ

ಪಣಜಿ (ಗೋವಾ) : ಎರಡು ವರ್ಷಗಳ ನಂತರ ರಾಜ್ಯದ ಆದಾಯ ಹೆಚ್ಚಾಗುವುದರಿಂದ ಆವಾಗ ರಾಜ್ಯ ಸರ್ಕಾರ ಹೊಸ ಸಾಲ ಪಡೆಯುವ ಅಗತ್ಯ ಬೀಳಲಾರದು ಎಂಬ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆಗೆ ಪ್ರತಿಪಕ್ಷಗಳು ಕಿಡಿಕಾರಿವೆ. ರಾಜ್ಯ ಸರ್ಕಾರದ ಸಾಲದ ಪ್ರಮಾಣ ಸದ್ಯ 24,175.93 ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳು, ರಾಜ್ಯದ ಪ್ರಮುಖ ಆದಾಯ ಮೂಲವಾಗಿದ್ದ ಗಣಿಗಾರಿಕೆ ಇನ್ನೂ ಆರಂಭವಾಗಿಲ್ಲ ಎಂದಿವೆ. ಗಣಿಗಾರಿಕೆ ಇನ್ನಷ್ಟೇ ಆರಂಭವಾಗಬೇಕಿದ್ದು, ಅಲ್ಲಿಯವರೆಗೆ ರಾಜ್ಯ ಸರ್ಕಾರವು …

Read More »

ಬೆಂಗಳೂರು: ಕಾಂಗ್ರೆಸ್​ನ ಐದು ಗ್ಯಾರಂಟಿಗಳು ಹಾಗೂ ಜೆಡಿಎಸ್​ನ ಪಂಚರತ್ನ ಭರವಸೆಗಳ ನಡುವೆ ಆಡಳಿತಾರೂಢ ಬಿಜೆಪಿ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದೆ. ಹತ್ತು ಹಲವು ಸಭೆ ನಡೆಸಿ ಸಲಹೆ ಪಡೆದು ಸಿದ್ಧಪಡಿಸಿರುವ ಪ್ರಣಾಳಿಕೆಯಲ್ಲಿ ರಾಜ್ಯದ ಜನರಿಗೆ ಯಾವ ರೀತಿ ಭರವಸೆ ಸಿಗಲಿದೆ ಎನ್ನುವುದು ಬಹಿರಂಗವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ 10 ದಿನಗಳು ಮಾತ್ರ ಬಾಕಿ ಇದ್ದು, ಬೆಳಗ್ಗೆ 10 ಗಂಟೆಗೆ ನಗರದ ಖಾಸಗಿ ಹೋಟೆಲ್​​​ನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ‌. ಈಗಾಗಲೇ ಕಾಂಗ್ರೆಸ್ ಐದು ಗ್ಯಾರಂಟಿಗಳ ಮೂಲಕ ಬಹುತೇಕ ಪ್ರಣಾಳಿಕೆಯ ಅಂಶವನ್ನು ಬಹಿರಂಗಗೊಳಿಸಿದೆ. ಹಾಗೆಯೇ ಪಂಚರತ್ನ ಯೋಜನೆಗಳ ಪ್ರಣಾಳಿಕೆಯನ್ನು ಜೆಡಿಎಸ್ ಬಿಡುಗಡೆ ಮಾಡಿದೆ. ಹಾಗಾಗಿ ಬಿಜೆಪಿ ಪ್ರಣಾಳಿಕೆ ಯಾವ ರೀತಿ ಇರಲಿದೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಪ್ರಣಾಳಿಕೆ ಸಿದ್ಧಪಡಿಸಲು ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿ ರಚಿಸಿದ್ದು, ವಿವಿಧ ವಲಯಗಳ ನಿರೀಕ್ಷೆಗಳು ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹಿಸಿ ತಜ್ಞರ ಸಲಹೆ ಪಡೆದುಕೊಳ್ಳಲಾಗಿತ್ತು. ಈ ಕುರಿತು ಮಾಹಿತಿ ನೀಡಿರುವ ಡಾ.ಸುಧಾಕರ್, ಪಕ್ಷದ ಪ್ರಣಾಳಿಕೆ ಸಮಿತಿಯಲ್ಲಿ ಸಚಿವ ಬಿ.ಸಿ ನಾಗೇಶ್, ಭಗವಂತ ಖೂಬಾ ಸೇರಿದಂತೆ ಹಲವರು ಇದ್ದಾರೆ. ಎಲ್ಲರೂ ಸೇರಿ ಸಭೆ ಮಾಡಿದ್ದೇವೆ. ಪ್ರಣಾಳಿಕೆಗೆ ಅಭಿಪ್ರಾಯ ಸಂಗ್ರಹ ಮಾಡಿ, ಎಲ್ಲರ ಸಲಹೆ ಪಡೆದಿದ್ದೇವೆ‌. ವಿಭಾಗ, ಜಿಲ್ಲೆ, ತಾಲೂಕುವಾರು ಪಟ್ಟಿ ಮಾಡಿದ್ದೇವೆ. ಈ ಬಾರಿ ನಮ್ಮ ಸರ್ಕಾರ ಬಂದರೆ ಏನು ಮಾಡಬಹುದು ಅಂತ ಪ್ರಣಾಳಿಕೆಯಲ್ಲಿ ಹೇಳಲಿದ್ದೇವೆ ಎಂದರು. ನಮ್ಮ ಕಮಿಟಿಯಲ್ಲಿ ಸಾಕಷ್ಟು ಎಕ್ಸ್‌ಪರ್ಟ್ಸ್‌ ಇದ್ದಾರೆ. ಕರ್ನಾಟಕ ರಾಜ್ಯಕ್ಕೆ ನಮ್ಮ ಪ್ರಣಾಳಿಕೆ ಮಾದರಿಯಾಗಲಿದೆ‌, ದೇಶಕ್ಕೂ ಮಾದರಿಯಾಗಲಿದೆ. ಹೊಸತನ, ಬದುಕು ಕಟ್ಟಿಕೊಡುವ ರೀತಿ ಪ್ರಣಾಳಿಕೆ ಇರಲಿದೆ. ಅಂಗೈಯಲ್ಲಿ ಚಂದ್ರ ತೋರಿಸುವ ಕೆಲಸವಂತೂ ಮಾಡಲ್ಲ. ನಮ್ಮ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಪ್ರಣಾಳಿಕೆ ಇರಲಿದೆ. ರಾಮರಾಜ್ಯ ನಿರ್ಮಾಣ ಪರಿಕಲ್ಪನೆ ಅಡಿಯಲ್ಲಿ ರಾಜ್ಯ ನಿರ್ಮಾಣಕ್ಕೆ ಪೂರಕವಾಗಿ ನಮ್ಮ ಪ್ರಣಾಳಿಕೆ ಇರಲಿದೆ. ಗ್ರೇಟರ್ ಬೆಂಗಳೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಬಯಲು ಸೀಮೆ ಹೀಗೆ ವಲಯವಾರು ಪ್ರಣಾಳಿಕೆ ಮಾಡಿದ್ದೇವೆ ಎಂದು ಸುಧಾಕರ್ ಮಾಹಿತಿ ನೀಡಿದರು.

ಬೆಂಗಳೂರು: ಕಾಂಗ್ರೆಸ್​ನ ಐದು ಗ್ಯಾರಂಟಿಗಳು ಹಾಗೂ ಜೆಡಿಎಸ್​ನ ಪಂಚರತ್ನ ಭರವಸೆಗಳ ನಡುವೆ ಆಡಳಿತಾರೂಢ ಬೆಂಗಳೂರು: ಕಾಂಗ್ರೆಸ್​ನ ಐದು ಗ್ಯಾರಂಟಿಗಳು ಹಾಗೂ ಜೆಡಿಎಸ್​ನ ಪಂಚರತ್ನ ಭರವಸೆಗಳ ನಡುವೆ ಆಡಳಿತಾರೂಢ ಬಿಜೆಪಿ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದೆ. ಹತ್ತು ಹಲವು ಸಭೆ ನಡೆಸಿ ಸಲಹೆ ಪಡೆದು ಸಿದ್ಧಪಡಿಸಿರುವ ಪ್ರಣಾಳಿಕೆಯಲ್ಲಿ ರಾಜ್ಯದ ಜನರಿಗೆ ಯಾವ ರೀತಿ ಭರವಸೆ ಸಿಗಲಿದೆ ಎನ್ನುವುದು ಬಹಿರಂಗವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ 10 ದಿನಗಳು ಮಾತ್ರ ಬಾಕಿ ಇದ್ದು, …

Read More »

ಇಂದು ಬೆಳಗಾವಿಯಲ್ಲಿ ಕಿಚ್ಚನ ರೋಡ್ ಶೋ ಮತ್ತೆಬೆಳಗಾವಿ ವಿವಿಧ ಬಡಾವಣೆಗಳಲ್ಲಿಪ್ರಚಾರ

ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಪರ ಚುನಾವಣೆ ಪ್ರಚಾರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಸೋಮವಾರ ಆಗಮಿಸಲಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿ ಜನಪ್ರಿಯಗಳಿಸಿದ ನಟ  ಸುದೀಪ್ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಅಭಯ ಪಾಟೀಲ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ. ನಾಳೆ ಸಂಜೆ: 5 ಗಂಟೆಗೆ ಖಾಸಭಾಗ ಬಸವೇಶ್ವರ ಸರ್ಕಲ್ ದಿಂದ ಪ್ರಚಾರ ಪಾದಯಾತ್ರೆ …

Read More »

ಬೆಳಗಾವಿಯ ವಿವಿಧೆಡೆಗಳಲ್ಲಿ ಮತದಾನದ ಬಗ್ಗೆ ವಿಶೇಷವಾಗಿ ಜಾಗೃತಿ ಅಭಿಯಾನ

ಬೆಳಗಾವಿ: ಬೆಳಗಾವಿಯ ವಿವಿಧೆಡೆಗಳಲ್ಲಿ ಮತದಾನದ ಬಗ್ಗೆ ವಿಶೇಷವಾಗಿ ಜಾಗೃತಿ ಅಭಿಯಾನ ನಡೆಸಲಾಯಿತು. ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕಾ ಸ್ವೀಪ್ ಸಮಿತಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ರವಿವಾರ ಏಪ್ರಿಲ್.30 ರಂದು ಕಂಗ್ರಾಳಿ ಬಿ.ಕೆ ಗ್ರಾಮದ ಚಾವಟ ವೃತದಲ್ಲಿ ಕಾಲ್ನಡಿಗೆ ಮತದಾನ ಜಾಗೃತಿ ಮತ್ತು ಬೀದಿ ನಾಟಕಕ್ಕೆ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ರವಿ ಬಂಗಾರೆಪ್ಪನವರ ಅವರು ಚಾಲನೆ ನೀಡಿದರು. ಗ್ರಾಮದ ಚಾವಟ ವೃತ್ತದಿಂದ ಸರ್ಕಾರಿ ಹಿರಿಯ ಪ್ರಾಥಮೀಕ ಶಾಲೆವರೆಗೆ ಮತದಾನ ಜಾಗೃತಿ …

Read More »

ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ, ಏ.30(ಕರ್ನಾಟಕ ವಾರ್ತೆ): ಕುಡಚಿ ಮತಕ್ಷೇತ್ರದಲ್ಲಿ ಏ.29 ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ರಾಜೀವ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿರುತ್ತದೆ. ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಿದ್ದ ಬಿಜೆಪಿ ಪಕ್ಷದ ಬಹಿರಂಗ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ಧೇಶದಿಂದ ಮುಗಳಖೋಡ ಪಟ್ಟಣದ ಬಳಿ ಏ.29 …

Read More »

ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಶೋಭಾ ಕರಂದ್ಲಾಜೆ 1d

ಶಿವಮೊಗ್ಗ: ‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಪಕ್ಷವು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಈ ಬಾರಿ ಭಾರತೀಯ ಜನತಾ ಪಾರ್ಟಿ ಪೂರ್ಣ ಬಹುಮತದ ಸರ್ಕಾರವನ್ನು ರಚನೆ ಮಾಡಬೇಕು ಅನ್ನುವ ನಿಟ್ಟಿನಲ್ಲಿ ಕಾರ್ಯಗಳು ಪ್ರಾರಂಭವಾಗಿದೆ. ಕೇಂದ್ರದ ನಮ್ಮ ನಾಯಕರು ರಾಜ್ಯದ ಎಲ್ಲಾ ನಾಯಕರು ಕೂಡ ರಾಜ್ಯಾದ್ಯಂತ ಪ್ರವಾಸ …

Read More »

ಯಾರೋ ದುಷ್ಕರ್ಮಿಗಳು ಕಲ್ಲು ಎಸೆದಿರಬಹುದು : ಡಾ. ಜಿ ಪರಮೇಶ್ವರ್​​​

ತುಮಕೂರು : ಚುನಾವಣಾ ಪ್ರಚಾರದ ವೇಳೆ ತಮ್ಮ ಮೇಲೆ ಕಲ್ಲೆಸೆತ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ನನ್ನ ಮೇಲೆ ಬಿದ್ದ ಕಲ್ಲು ಹೂವಿನಲ್ಲಿ ಬಂತು ಎಂದು ಹೇಳಲಾಗುವುದಿಲ್ಲ. ಯಾರೋ ದುಷ್ಕರ್ಮಿಗಳು ಕಲ್ಲು ಎಸೆದಿರಬಹುದೆಂದು ಎಂದು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಬಿದ್ದ ಕಲ್ಲು ಹೂವಿನಲ್ಲಿ ಬಂತು ಎಂದು ಹೇಳಲು ಆಗುವುದಿಲ್ಲ. ಏಕೆಂದರೆ ಅದು ತುಂಬಾ ದಪ್ಪ ಇತ್ತು. ಯಾರೋ ದುಷ್ಕರ್ಮಿಗಳು ಕಲ್ಲೆಸೆದಿರಬಹುದು. …

Read More »

ಚುನಾವಣಾ ಅಕ್ರಮದ ಅಬ್ಬರ: 300 ಕೋಟಿ ರೂ. ಗಡಿ ದಾಟಿದ ಒಟ್ಟು ಜಪ್ತಿ ಮೊತ್ತ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಚುನಾವಣಾ ಅಕ್ರಮಗಳು ಜೋರಾಗೆ ನಡೆಯುತ್ತಿವೆ. ಚುನಾವಣೆಗೆ ಇನ್ನು 12 ದಿ‌ನಗಳು ಬಾಕಿ ಇರುವಾಗಲೇ ಬರೋಬ್ಬರಿ 302 ಕೋಟಿ ರೂ. ಅಕ್ರಮ ನಗದು, ಮದ್ಯ, ಉಡುಗೊರೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಬಗ್ಗೆ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ. ವಿಧಾನಸಭೆ ಚುನಾವಣೆ ಘೋಷಣೆಯಾದಾಗಿನಿಂದ ಈವರೆಗೆ ಚುನಾವಣಾ ಆಯೋಗ ಸುಮಾರು 302.78 ಕೋಟಿ ರೂ. ಮೌಲ್ಯದ ನಗದು, ಮದ್ಯ ಮತ್ತು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಇದೇ …

Read More »

ಮುಧೋಳದಲ್ಲಿ ದಾಖಲೆ ಇಲ್ಲದ 5 ಕೋಟಿ ಹಣ ಜಪ್ತಿ

ಬಾಗಲಕೋಟೆ : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ತಡೆಗೆ ಚುನಾವಣೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದರೂ ಹಲವೆಡೆ ಇದುವರೆಗೂ ನೂರಾರು ಕೋಟಿ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಅಂತೆಯೇ ಜಿಲ್ಲೆಯ ಮುಧೋಳ ಮತಕ್ಷೇತ್ರದ ಲಕ್ಷಾನಟ್ಟಿ ಚೆಕ್​ಪೋಸ್ಟ್​ ಬಳಿ ಅಧಿಕಾರಿಗಳು ಶನಿವಾರ ವಾಹನದಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 5 ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿಯಿಂದ ಮುಧೋಳಕ್ಕೆ ತೆರಳುತ್ತಿದ್ದ ವಾಹನವನ್ನು ಎಸ್​ಎಸ್​ಟಿ ತಂಡ ಪರಿಶೀಲನೆ ನಡೆಸಿದಾಗ ವಾಹನದಲ್ಲಿದ್ದ ವ್ಯಕ್ತಿಯು ಹಣವು ಯುನಿಯನ್ …

Read More »

ಮನೆಯ ಅಂಗಳದ ಮುಂದೆ ಆಟವಾಡುತ್ತಿದ್ದ ಮಗು ಚರಂಡಿಯಲ್ಲಿ ಮುಳುಗಿ ದಾರುಣ ಸಾವು

ನೆಲಮಂಗಲ(ಬೆ.ಗ್ರಾಮಾಂತರ) : ನಗರದಲ್ಲಿ ಬೆಳಗ್ಗೆ ದುರಂತವೊಂದು ಸಂಭವಿಸಿದೆ. ಮನೆಯ ಮುಂದೆ ಆಟವಾಡುತ್ತಿದ್ದ 11 ತಿಂಗಳ ಮಗು ಮನೆಯ ಮುಂಭಾಗದಲ್ಲಿದ್ದ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ರ್ದುಘಟನೆ ತಾಲೂಕಿನ ಸೋಂಪುರ ಹೋಬಳಿಯ ನಿಡವಂದ ಕಾಲೋನಿಯಲ್ಲಿ ನಡೆದಿದೆ.   ಘಟನೆ ವಿವರ: ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಮನೆಯ ಅಂಗಳದಲ್ಲಿ ಮಗು ಆಟವಾಡಿ, ಮನೆಯ ಮುಂದೆ ನಿಂತಿದ್ದ ಕ್ಯಾಂಟರ್ ಕೆಳಗೆ ನುಸುಳಿ ಹೋಗಿದೆ. ಆದರೆ ಅಲ್ಲೇ ಸುಮಾರು 4 ಅಡಿಯ ಚರಂಡಿಯು ತೆರೆದಿತ್ತು, ಇದೇ ಚರಂಡಿಗೆ …

Read More »