ಬೆಳಗಾವಿ: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶೈಕ್ಷಣಿಕ ವಲಯದ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಅ.23 ರಿಂದ 25 ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
Read More »ಸಿಪಿವೈ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ: ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಸೇರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಏನೆಲ್ಲಾ ಬೆಳವಣಿಗೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ. ಉಪ ಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಗೆಲ್ಲುವ ಅವಕಾಶಗಳಿವೆ ಎಂದರು. ಶಿಗ್ಗಾವಿಯಲ್ಲಿ ಅಲ್ಪಸಂಖ್ಯಾತ ಮತಗಳು ಹೆಚ್ಚಿನ ಪ್ರಮಾಣದಲ್ಲಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡುವ ವಿಷಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಬೇಡಿಕೆಯನ್ನು …
Read More »ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ
ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಬಳಿ ನಡೆದ ದುರ್ಘಟನೆಯಲ್ಲಿ ಕಾಣೆಯಾಗಿರುವ ಶಿರೂರಿನ ಜಗನ್ನಾಥ ನಾಯ್ಕ, ಗಂಗೇಕೊಳ್ಳದ ಲೋಕೇಶ್ ನಾಯ್ಕ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರಕಾರ ಸಮ್ಮತಿಸಿದೆ. ಶವ ಸಿಗದ್ದಿದ್ದರೂ ಪರಿಹಾರ ನೀಡಲು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲು ಜಿಲ್ಲಾಡಳಿತದಿಂದ ಮುಖ್ಯ ಕಾರ್ಯ ದರ್ಶಿಗೆ ಪತ್ರ ಬರೆಯಲಾಗಿತ್ತು. ಕಾಣೆಯಾದ ಇಬ್ಬರು ದುರಂತ ನಡೆದ ಸ್ಥಳದಲ್ಲೇ ಇದ್ದರು. ಅವರು ಕಾಣೆಯಾಗಿರುವುದು ಖಚಿತ ಎಂದು ಪೊಲೀಸ್ …
Read More »ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ಹೋರಾಟ ರೈತ ಮಕ್ಕಳಿಗೆ ಮೀಸಲು ನ್ಯಾಯ ಒದಗಿಸುವ ಹೋರಾಟವಾಗಿದೆ. ಸಾಮಾಜಿಕ ನ್ಯಾಯ, ಮೀಸಲು ಬಗ್ಗೆ ಸಕಾರಾತ್ಮಕ ಚಿಂತನೆ ಹೊಂದಿದ ಮುಖ್ಯಮಂತ್ರಿಯವರು ಮೀಸಲು ಬೇಡಿಕೆಗೆ ಕಾಲಮಿತಿ ಕ್ರಮದ ಭರವಸೆ ನೀಡದಿರುವುದು ಬೇಸರ-ನೋವು ತರಿಸಿದೆ. ಸಮಾಜದ ಕೆಲವರು ಮೀಸಲು ಹೋರಾಟವನ್ನು ಟ್ರಂಪ್ಕಾರ್ಡ್ ಆಗಿಸಿಕೊಂಡು ಅಧಿಕಾರಕ್ಕೇರಿ, ಹೋರಾಟವನ್ನೇ ಮರೆತಿದ್ದಾರೆ, ಮೌನ ತಾಳಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಸರಕಾರ 2ಡಿ ಮೀಸಲು ನೀಡಲು ಮುಂದಾದರೂ, 2ಎ ಮೀಸಲು ಹೋರಾಟ ಜೀವಂತವಾಗಿರಿಸಿ 2ಡಿ …
Read More »ಮಾತೃ ಪಕ್ಷಕ್ಕೆ ಮರಳಿ ಮತ್ತೊಂದು ಹೋರಾಟಕ್ಕೆ ಸಿದ್ದವಾದ ಸೈನಿಕ!
ರಾಜ್ಯದಲ್ಲಿ ಮೂರು ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದರೂ ಭಾರೀ ನಿರೀಕ್ಷೆ ಮೂಡಿಸಿರುವ ಕ್ಷೇತ್ರ ಮಾತ್ರ ಚನ್ನಪಟ್ಟಣ. ಈ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿಯ ಉಳಿವಿನ ಅಸ್ತಿತ್ವದ ಪ್ರಶ್ನೆ ಹುಟ್ಟುಹಾಕಿದ ಕಾರಣದಿಂದಾಗಿಯೇ ಪಕ್ಷಾಂತರ ಪರ್ವ ನಡಯಲೇ ಬೇಕಾದ ಅನಿವಾರ್ಯ ಎದುರಾಯಿತು. ಸದ್ಯ ನೇರ ಹಣಾಹಣಿ ಕ್ಷೇತ್ರದಲ್ಲಿ ಕಂಡು ಬಂದಿದ್ದು ಕಾಂಗ್ರೆಸ್ ಕಾರ್ಯಕರ್ತರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಹುರಿದುಂಬಿಸಿ ಸೈನಿಕನ ಮೂಲಕ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ. …
Read More »200ನೇ ಕಿತ್ತೂರು ವಿಜಯೋತ್ಸವ: ಸಂಸತ್ ಆವರಣದಲ್ಲಿ ಚನ್ನಮ್ಮಳ ಪ್ರತಿಮೆಗೆ ಪುಷ್ಪನಮನ
ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.
Read More »ರಾಜ್ಯದಾದ್ಯಂತ ಸಂಚರಿಸಿ ಬಂದ ವಿಜಯ ಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಿದರು
ಚನ್ನಮ್ಮನ ಕಿತ್ತೂರು: ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಬುಧವಾರ ನಡೆದ ಜಾನಪದ ಕಲಾವಾಹಿನಿ ಮೆರವಣಿಗೆ, ಕ್ರಾಂತಿ ನೆಲದ ಹಿರಿಮೆ ಎತ್ತಿ ಹಿಡಿಯಿತು. ರಾಜಬೀದಿಯಲ್ಲಿ ಎಲ್ಲಿ ನೋಡಿದರೂ ಜನವೋ ಜನ, ಎತ್ತ ನೋಡಿದರೂ ಸಂಭ್ರಮವೋ ಸಂಭ್ರಮ. ಕಲಾವಿದರು, ವಾದ್ಯಗಾರರು, ನೃತ್ಯಪಟುಗಳು, ಮಕ್ಕಳು, ಹಿರಿಯರು, ಮಹಿಳೆಯರೆಲ್ಲ ಸೇರಿ ನೂಪುರ ಲೋಕವನ್ನೇ ಸೃಷ್ಟಿಮಾಡಿದರು. ರಾಜ್ಯದಾದ್ಯಂತ ಸಂಚರಿಸಿ ಬಂದ ವಿಜಯ ಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಿದರು. ಮಹಿಳಾ ಮತ್ತು …
Read More »45 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಶಿವಸೇನಾ ಶಿಂದೆ ಬಣ
ಮುಂಬೈ: ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷವು ಗುರುವಾರ ತಡರಾತ್ರಿ 45 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಏಕನಾಥ ಶಿಂದೆ ಅವರು, ಠಾಣೆಯ ಕೊಪ್ರಿ-ಪಂಚಪಖಾಡಿ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದು, ಅರ್ಧ ಡಜನ್ಗೂ ಅಧಿಕ ಸಂಪುಟ ಸದಸ್ಯರು ಈ ಹಿಂದೆ ಪ್ರತಿನಿಧಿಸಿದ್ದ ಕ್ಷೇತ್ರಗಳಲ್ಲೇ ಟಿಕೆಟ್ ಪಡೆದಿದ್ದಾರೆ. 2022ರ ಜೂನ್ನಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಸಿಡಿದು ಹೊರಬಂದ ಏಕನಾಥ ಶಿಂದೆ …
Read More »ಆರೋಗ್ಯ ಹದಗೆಡದಂತೆ ವಾರಕ್ಕೆ ಎಷ್ಟುಬಾರಿ ಆಲ್ಕೋಹಾಲ್ ಕುಡಿಯಬಹುದು? ತಜ್ಞರು ಹೇಳುವುದೇನು?
ಆಧುನಿಕ ಯುಗದಲ್ಲಿ ಮದ್ಯ ಸೇವನೆ (Alcohol) ಎಂಬುದು ಲೈಫ್ಸ್ಟೈಲ್ನ ಭಾಗವಾಗಿ ಮಾರ್ಪಡುತ್ತಿದೆ. ಔತಣ ಕೂಟ (Dinner), ಆಫೀಸ್ ಪಾರ್ಟಿ, ಕುಟುಂಬ ಸಮಾರಂಭಗಳಲ್ಲಿ (Family Function) ಕೂಡ ಆಲ್ಕೋಹಾಲ್ ಇದ್ದೇ ಇರುತ್ತದೆ. ಮದ್ಯ ಸೇವನೆಯು ಅನಾರೋಗ್ಯಕರ ಪದ್ಧತಿಯಾಗಿದ್ದರೂ ಇದು ಆಧುನಿಕ ಜೀವನ ಶೈಲಿಯ (Lifestyle) ಒಂದು ಭಾಗ ಎಂದೆನಿಸಿದೆ. ಮದ್ಯ ಸೇವಿಸಿಲ್ಲ ಎಂದಾದರೆ ಅವರು ಇನ್ನು ಹಳೆ ಕಾಲದವರು ಮಾಡರ್ನ್ ಅಲ್ಲ ಎಂಬ ಮಾತುಗಳು ಕೇಳಿಬರುತ್ತವೆ. ಒಟ್ಟಿನಲ್ಲಿ ಆಲ್ಕೋಹಾಲ್ ನಿಮ್ಮ ದೇಹಕ್ಕೆ ಒಳ್ಳೆಯದಲ್ಲ …
Read More »ದರ್ಶನ್ ಗೆ ಆಪರೇಷನ್ ಮಾಡಿಸಬೇಕು, ಜಾಮೀನು ಕೊಡಿ ಎಂದರೆ ನ್ಯಾಯಾಧೀಶರು ಹೇಳಿದ್ದೇನು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಆಪರೇಷನ್ ಮಾಡಿಸಬೇಕು, ಜಾಮೀನು ಕೊಡಿ ಎಂದು ಅವರ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ಇದಕ್ಕೆ ನ್ಯಾಯಾಧೀಶರ ಪ್ರತಿಕ್ರಿಯೆ ಏನಿತ್ತು ಇಲ್ಲಿದೆ ವಿವರ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಈಗ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರಿಗೆ ಬೆನ್ನು ನೋವು ತೀವ್ರವಾಗಿದ್ದು ದೈನಂದಿನ ಕೆಲಸ ಮಾಡಲೂ ಸಮಸ್ಯೆಯಾಗುತ್ತಿದೆ. ಈ ನಡುವೆ ಅವರಿಗೆ ಜೈಲಿನಲ್ಲೇ ವೈದ್ಯರ …
Read More »
Laxmi News 24×7