Breaking News

ರಾಜ್ಯ

ನನ್ನ ಕುರ್ಚಿಯೂ ಸರಿಯಿಲ್ಲ – ಸಭಾಪತಿ ಹೊರಟ್ಟಿ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿನ ವಿಧಾನಪರಿಷತ್​​ನಲ್ಲಿ ನಡೆಯುತ್ತಿದ್ದ ಗಂಭೀರ ಚರ್ಚೆ ಮಧ್ಯೆ ಕುರ್ಚಿ ಪ್ರಸಂಗವು ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು. ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಲಕ್ಷಾಂತರ ಸರ್ಕಾರಿ ಹುದ್ದೆಗಳನ್ನು ಯಾವಾಗ ತುಂಬುತ್ತೀರಿ? ಎಂದು ಮೇಲ್ಮನೆ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ ಪ್ರಶ್ನೆಗೆ, ಸಿಎಂ ಸಿದ್ದರಾಮಯ್ಯ ಎದ್ದು ನಿಂತು ಉತ್ತರಿಸುತ್ತಿದ್ದಂತೆ, ಸರಿಯಾಗಿ ನಿಲ್ಲಲು ಸಾಧ್ಯವಾಗುತ್ತಿವಲ್ಲ ಎಂದು ಪರಿಷತ್ ಕಾರ್ಯದರ್ಶಿಗೆ ಪ್ರಶ್ನಿಸಿದರು. ಸಿಬ್ಬಂದಿಯಿಂದ ಕುರ್ಚಿಯನ್ನ ಸರಿಪಡಿಸಿಕೊಂಡು ಮಾತನಾಡಲು ಆರಂಭಿಸುತ್ತಿದ್ದಂತೆ, ಸದಸ್ಯ ಭೋಜೇಗೌಡ …

Read More »

ಉತ್ತರ ಕರ್ನಾಟಕದ ಶಾಸಕರು ಭಿಕ್ಷುಕರ ತರ ಬೇಡಬೇಕು, ಈ ಭಾಗಕ್ಕೆ ₹5000 ಕೋಟಿ ನೀಡಿ: ಶಾಸಕ ರಾಜು ಕಾಗೆ

ಬೆಳಗಾವಿ: ಉತ್ತರ ಕರ್ನಾಟಕದ ಶಾಸಕರು ಬೆಂಗಳೂರಿಗೆ ಬಂದು ಭಿಕ್ಷುಕರ ತರ ಭಿಕ್ಷೆ ಬೇಡಬೇಕು. ಕೊನೆಗೆ ಹತ್ತು, ಇಪ್ಪತ್ತು ಪೈಸೆ ಸಿಗುತ್ತದೆ ಎಂದು ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಅಸಹಾಯಕತೆ ಹೊರಹಾಕಿದರು. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಬಗ್ಗೆ ನಡೆದ ಚರ್ಚೆ ವೇಳೆ ಮಾತನಾಡಿದ ಅವರು, ಉತ್ತರ ಕರ್ನಾಟಕದವರು ಇಲ್ಲಿಗೆ ಬಂದು ಕೈಮುಗಿದು ಎಲ್ಲರ ಮುಂದೆ ನಿಲ್ಲಬೇಕು. ನಾನು ಈ ಬಗ್ಗೆ ಧ್ವನಿ ಎತ್ತಿದ್ದೆ. ಆದರೆ ನಾನು ನನ್ನ ಪಕ್ಷದ ವಿರುದ್ಧ ಮಾತನಾಡಿದ್ದೆ …

Read More »

ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳನ್ನು ತಿಂಗಳೊಳಗೆ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ …

Read More »

ಡ್ರಗ್ಸ್ ದಂಧೆಕೋರರೊಂದಿಗೆ ಪೊಲೀಸರು ಶಾಮೀಲಾಗಿದ್ದು ಕಂಡುಬಂದ್ರೆ ಎಫ್ಐಆರ್ ದಾಖಲಿಸಿ ಸೇವೆಯಿಂದ ವಜಾ: ಜಿ. ಪರಮೇಶ್ವರ್

ಬೆಳಗಾವಿ: ಡ್ರಗ್ಸ್ ಪಿಡುಗಿನ ವಿರುದ್ಧ ಸಮರ ಸಾರಿದ್ದು, ಪೊಲೀಸ್ ಇಲಾಖೆಯಲ್ಲಿದ್ದುಕೊಂಡು ಮಾದಕವಸ್ತು ಮಾರಾಟಕ್ಕೆ ಉತ್ತೇಜನ ನೀಡುವ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ಸೇವೆಯಿಂದಲೇ ವಜಾ ಮಾಡುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ದಾವಣಗೆರೆ ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ಮಾದಕವಸ್ತು ಮಾರಾಟದ ಜಾಲ ಹೆಚ್ಚಾಗುತ್ತಿದೆ. ಡ್ರಗ್ಸ್ ಅಡ್ಡೆಗಳ ಮೇಲೆ ನಡೆಯುವ ದಾಳಿಗೂ ಮುನ್ನವೇ ಕೆಳ ಹಂತದ ಪೊಲೀಸ್ ಸಿಬ್ಬಂದಿಗಳೇ ಮಾಹಿತಿ ನೀಡಿ ದಿಕ್ಕು ತಪ್ಪಿಸುತ್ತಿದ್ದಾರೆ. ಡ್ರಗ್ಸ್ ಎಂಬ ಕ್ಯಾನ್ಸರ್ …

Read More »

ಬೆಳಗಾವಿ ಅಧಿವೇಶನದ 3ನೇ ದಿನವೂ ಪ್ರತಿಭಟನೆಗಳ ಕಾವು ಜೋರು

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಮೂರನೇ ದಿನ ಬುಧವಾರವೂ ರೈತರು, ಆಶಾ ಕಾರ್ಯಕರ್ತೆಯರು, ಅತಿಥಿ ಶಿಕ್ಷಕರು ಸೇರಿ ವಿವಿಧ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದವು. ತಮ್ಮ‌ ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದರು.‌ ಇನ್ನು ಕೆಲ ರೈತ ಹೋರಾಟಗಾರರು ಪೊಲೀಸರ ಕಣ್ತಪ್ಪಿಸಿ ಸುವರ್ಣ ವಿಧಾನಸೌಧಕ್ಕೆ ನುಗ್ಗಲು ಯತ್ನಿಸಿದ ಘಟನೆ ನಡೆಯಿತು. ಇಲ್ಲಿನ ಸುವರ್ಣ ಗಾರ್ಡನ್ ಮತ್ತು ಹಳೆ ಪಿ.ಬಿ. ರಸ್ತೆ ಧಾರವಾಡ ನಾಕಾದಲ್ಲಿ ನಿಗದಿ ಪಡಿಸಿರುವ ಪ್ರತಿಭಟನಾ ಸ್ಥಳದಲ್ಲಿ 9 …

Read More »

ಬೈಲಹೊಂಗಲ ತಾಲೂಕುವನ್ನು ಜಿಲ್ಲೆಯಾಗಿ ಮಾಡಬೆಕೆಂದು ಎಲ್ಲರ ಪರವಾಗಿ ವಿನಂತಿ

ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿಯ ಸರ್ವ ಸದಸ್ಯರು ಹಾಗೂ ಪರಮ ಪೂಜ್ಯರುಗಳ ನಿಯೋಗದೊಂದಿಗೆ ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಬೆಳಗಾವಿ ಜಿಲ್ಲೆ ಅಖಂಡವಾಗಿ ಉಳಿಯಬೇಕು ಒಂದು ವೇಳೆ ವಿಭಜನೆಯಾದರೆ ಉಪ ವಿಭಾಗವಾಗಿರುವ ಬೈಲಹೊಂಗಲ ತಾಲೂಕುವನ್ನು ಜಿಲ್ಲೆಯಾಗಿ ಮಾಡಬೆಕೆಂದು ಎಲ್ಲರ ಪರವಾಗಿ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ, ಮಹಿಳಾ …

Read More »

ಶಬರಿಮಲೈ – ಪೊಂಗಲ್ ಪ್ರಯುಕ್ತ ವಿಶೇಷ ರೈಲುಗಳ ಸೇವೆ ವಿಸ್ತರಣೆ

ಶಬರಿಮಲೈ – ಪೊಂಗಲ್ ಪ್ರಯುಕ್ತ ವಿಶೇಷ ರೈಲುಗಳ ಸೇವೆ ವಿಸ್ತರಣೆ ಹುಬ್ಬಳ್ಳಿ: ಶಬರಿಮಲೆ ಋತುವಿನಲ್ಲಿ ಮತ್ತು ಮುಂಬರುವ ಪೊಂಗಲ್ ಹಬ್ಬದ ಸಮಯದಲ್ಲಿ ಭಕ್ತರಿಂದ ಹೆಚ್ಚಿನ ಪ್ರಯಾಣದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆಗಳ ಅವಧಿಯನ್ನು ಮುಂದುವರಿಸಲಾಗುತ್ತಿದೆ. 1. ರೈಲು ಸಂಖ್ಯೆ 07313 ಎಸ್‌ಎಸ್‌ಎಸ್ ಹುಬ್ಬಳ್ಳಿ – ಕೊಲ್ಲಂ ವಿಶೇಷ ರೈಲು, ಈ ಹಿಂದೆ 28.12.2025ರವರೆಗೆ ಓಡಲಿದೆ ಎಂದು ತಿಳಿಸಲಾಗಿತ್ತು. ಆದರೆ, ಈ ಸೇವೆಯನ್ನು ಈಗ 04.01.2026 ರಿಂದ 25.01.2026 …

Read More »

ಆಚಾರ್ಯ ರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94ನೇ ಜನ್ಮ ಜಯಂತಿ ಮಹೋತ್ಸವ

ಬೆಳಗಾವಿಯ ಹಲಗಾದ ಶ್ರೀ ಬಾಲಾಚಾರ್ಯ ಸಿದ್ಧಸೇನ ಮುನಿ ಮಹಾರಾಜ ಆಧ್ಯಾತ್ಮಿಕ ಅನುಸಂಧಾನ ಫೌಂಡೇಶನ್ ವತಿಯಿಂದ ನಡೆದ ಆಚಾರ್ಯ ರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94ನೇ ಜನ್ಮ ಜಯಂತಿ ಮಹೋತ್ಸವ ಹಾಗೂ ಸರ್ವದೋಷ ಪ್ರಾಯಶ್ಚಿತ್ತ ವಿಧಾನ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು. ‌ ಈ ವೇಳೆ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರು, ಪರಮಪೂಜ್ಯ ಬಾಲಾಚಾರ್ಯ ಡಾ.ಶ್ರೀ 108 ಸಿದ್ದಸೇನ ಮಹಾರಾಜರು, ಮುಖ್ಯಮಂತ್ರಿ ಸಿದ್ದರಾಮಯ್ಯ, …

Read More »

ಲಿಂಗರಾಜ ಕಾಲೇಜಿಗೆ ಸಮಗ್ರ ವೀರಾಗ್ರಣಿ ಲಿಂಗರಾಜ ಕಾಲೇಜು ಸತತ 9 ನೇ ಬಾರಿ ಚಾಂಪಿಯನ್

ಬೆಳಗಾವಿ: ವಿದ್ಯಾರ್ಥಿಗಳು ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್, ಒಲಂಪಿಕ್ಸ್ ಕ್ರೀಡಾಕೂಟಗಳವರೆಗೂ ತಲುಪಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶವನ್ನು ಪ್ರತಿನಿಧಿಸಿ ಆ ಮೂಲಕ ದೇಶದ ಗೌರವವನ್ನು ಜಾಗತಿಕವಾಗಿ ರಾರಾಜಿಸುವಂತೆ ಮಾಡಬೇಕೆಂದು ಕೆ.ಎಲ್.ಇ ಸಂಸ್ಥೆಯ ಕಾರ್ಯಾದ್ಯಕ್ಷ ಡಾ.ಪಭಾಕರ ಕೊರೆಯವರು ಹೇಳಿದರು. ಸಲ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಆಯೋಜಿಸಿದ್ದ 9 ನೇ ಅಥ್ಲೆಟಿಕ್ ಕ್ರಿಡಾಕೂಟದಲ್ಲಿ 17 ದಾಖಲೆಗಳೊಂದಿಗೆ ಸತತ 9 ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡ ಕೆ.ಎಲ್.ಇ ಸಂಸ್ಥೆಯ …

Read More »

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ಸಿಎಂ, ಡಿಸಿಎಂ ಜೊತೆ ಚರ್ಚೆ: ವೆಂಕಟೇಶ ಪ್ರಸಾದ್

ಬೆಳಗಾವಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯ ನಡೆಸುವ ಸಂಬಂಧ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್​ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು. ಬೆಳಗಾವಿ ನಗರದಲ್ಲಿರುವ ಕೆಎಸ್​ಸಿಎ ಮೈದಾನಕ್ಕೆ ಬುಧವಾರ ಭೇಟಿ ನೀಡಿದ ವೇಳೆ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಘಟನೆ ಬಳಿಕ ಯಾವುದೇ …

Read More »