Breaking News

ರಾಜ್ಯ

ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Case) ಜೈಲಿನಲ್ಲಿರುವ ನಟ ದರ್ಶನ್‌(Actor Darshan) ಅವರ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ಮತ್ತೆ (ಅ.5ರಂದು) ನಡೆದಿದೆ. 57ನೇ ಸಿಸಿಹೆಚ್‌ ಕೋರ್ಟಿನಲ್ಲಿ ದರ್ಶನ್‌ ಪರ ವಕೀಲ ಹಿರಿಯ ವಕೀಲರಾದ ಸಿ.ವಿ ನಾಗೇಶ್ ವಾದ ಮಂಡನೆ ಮಾಡಿದ್ದಾರೆ. ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯ ಜಾಮೀನು ಅರ್ಜಿ ವಿಚಾರಣೆ 57ನೇ ಸಿಸಿಹೆಚ್‌ ಕೋರ್ಟ್‌ನಲ್ಲಿ ನಡೆಯುತ್ತಿದೆ. ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದ್ದು …

Read More »

ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ. ಸ್ಥಳದಲ್ಲಿಯೇ ಬೈಕ್ ಸವಾರ ಸಾವು

ಬೈಲಹೊಂಗಲ: ತಾಲೂಕಿನ ಹಳೇ ಜಾಲಿಕೊಪ್ಪ ಗ್ರಾಮದ ಮಲಪ್ರಭಾ ನದಿ ಸಮೀಪ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ತುರಮರಿ ಗ್ರಾಮದ ರಾಮನಿಂಗ ಫಕೀರಪ್ಪ ಶಿಂಗಾಡಿ (40) ಮೃತ ವ್ಯಕ್ತಿ. ಬೈಕ್ ಸವಾರ ಬೈಲಹೊಂಗಲದಿಂದ ತುರಮರಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಬೆಳಗಾವಿ ಘಟಕಕ್ಕೆ ಸೇರಿದ ಸಾರಿಗೆ ಬಸ್ ಯಲ್ಲಮ್ಮನಗುಡ್ಡದಿಂದ ಬೈಲಹೊಂಗಲ ಕಡೆ ಬರುವಾಗ ಮಲಪ್ರಭಾ ನದಿ ಬಳಿ ಈ ದುರ್ಘಟನೆ ಸಂಭವಿಸಿದೆ.   …

Read More »

ದೀಪಾವಳಿ ಕಾರಣಕ್ಕೆ ನವೆಂಬರ್‌ 1ರಂದು ರಾಜ್ಯೋತ್ಸವ ಮೆರವಣಿಗೆ ಆಯೋಜನೆಗೆ ಪರ-ವಿರೋಧ

ಬೆಳಗಾವಿ: ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆ ಆಯೋಜನೆ ದಿನಾಂಕ ಅಂತಿಮಗೊಳಿಸುವ ವಿಚಾರವಾಗಿ, ಶನಿವಾರ ಜಿಲ್ಲಾಧಿಕಾರಿ ಭೇಟಿಯಾಗಿ ಚರ್ಚಿಸುವ ತೀರ್ಮಾನವನ್ನು ಇಲ್ಲಿ ಶುಕ್ರವಾರ ನಡೆದ ಕನ್ನಡ ಸಂಘಟನೆಗಳ ಸಭೆಯಲ್ಲಿ ಕೈಗೊಳ್ಳಲಾಯಿತು. ಪ್ರತಿವರ್ಷ ನವೆಂಬರ್‌ 1ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆ ನಡೆಯುತ್ತದೆ. ಈ ಬಾರಿ ನ.1ರಂದೇ ದೀಪಾವಳಿ ಹಬ್ಬವೂ ಇರುವ ಕಾರಣ, ರಾಜ್ಯೋತ್ಸವದ ಮೆರವಣಿಗೆ ಮುಂದೂಡಬೇಕು ಎಂದು ಕೆಲವರು ಒತ್ತಾಯಿಸುತ್ತಿದ್ದಾರೆ. ಸಂಪ್ರದಾಯದಂತೆ ನವೆಂಬರ್‌ 1ರಂದೇ ಮೆರವಣಿಗೆ ಮಾಡಬೇಕು ಎಂಬ ಅಭಿಪ್ರಾಯವೂ …

Read More »

ಮಾರಾಟಕ್ಕಿಲ್ಲ’ ಎಂದು‌ ಮುದ್ರಿಸದ ಔಷಧಿ ಖರೀದಿಸಿದ ಬಿಮ್ಸ್

ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆ ಖರೀದಿಸಿದ ಔಷಧಿ ಮತ್ತು ಕಾಸ್ಮೊಟಿಕ್ ಸಾಮಗ್ರಿಗಳ ಮೇಲೆ ‘ಮಾರಾಟಕ್ಕಿಲ್ಲ'(ನಾಟ್ ಫಾರ್ ಸೇಲ್) ಎಂಬ ಅಕ್ಷರ ಮುದ್ರಿಸಿಲ್ಲ. ಇದರಿಂದ ಔಷಧಗಳು ಕಾಳಸಂತೆಯಲ್ಲಿ ಮಾರಾಟವಾಗುವ ಸಾಧ್ಯತೆ ಇದೆ‌ ಎಂದು ರೋಗಿಗಳು ದೂರಿದ್ದಾರೆ. ಇದರಿಂದ ಎಚ್ಚೆತ್ತ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್) ನಿರ್ದೇಶಕರು ಎಲ್ಲ ಔಷದಿಗಳನ್ನೂ ಹಿಂದಿರುಗಿಸಲು ಮುಂದಾಗಿದ್ದಾರೆ. ಬೆಂಗಳೂರಿನ ಅರ್ಚನಾ ಅಸೋಸಿಯೇಟ್ಸ್ ಎಂಬ ಔಷಧ ತಯಾರಿಕಾ ಕಂಪನಿ‌ಗೆ ಬಿಮ್ಸ್ ಫೆಬ್ರವರಿಯಲ್ಲಿ ಟೆಂಡರ್ ನೀಡಿದೆ. ಏಪ್ರಿಲ್‌ನಿಂದ ಔಷಧಿಗಳು‌ ಹಾಗೂ …

Read More »

ಬ್ಯಾಡಗಿ: ಕಳ್ಳರ ಹಾವಳಿ ತಡೆಗೆ ಸ್ಥಳೀಯರ ಗಸ್ತು

ಬ್ಯಾಡಗಿ: ಪಟ್ಟಣದಲ್ಲಿ ಕಳೆದ ಐದಾರು ತಿಂಗಳಿಂದ ಕಳ್ಳತನದ ಪ್ರಕರಣ ನಡೆಯು ತ್ತಿದ್ದು, ಸ್ಟೇಶನ್‌ ರಸ್ತೆ ಬಳಿಯ ಪೋಲಿಸ್‌ ಸಿಬ್ಬಂದಿ ಮನೆ ಸೇರಿದಂತೆ ಸಂಗಮೇಶ್ವರ ನಗರದಲ್ಲಿ ಎರಡು ಮತ್ತು ಕಾಕೋಳ ರಸ್ತೆಯ ಸೋಮೇಶ್ವರ ನಗರದಲ್ಲಿ ಒಂದು ಮನೆ ಕಳ್ಳತನವಾಗಿದೆ. ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆದಿವೆ. ಹಗಲು ಹೊತ್ತಿನಲ್ಲಿಯೂ ಚಾಲಾಕಿ ಕಳ್ಳರು ಎರಡು ಮನೆಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಮಹಜೂರ …

Read More »

ಕಾರ್ಮಿಕರಿಗೆ ಗುಡ್‌ ನ್ಯೂಸ್‌ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 1 ಲಕ್ಷ ರೂ. ವಿಮೆ!

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆAಡಾಲ್ ಕೆಲಸ ನಿರ್ವಹಿಸುವ ಎಲ್ಲಾ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಜಾಲಿಕಟ್ಟಿ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಬಿಜೆಪಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ದೂರು

ಬೆಂಗಳೂರು : ತಾವು ಸಕ್ರಿಯ ರಾಜಕಾರಣದಲ್ಲಿ ಇಲ್ಲದಿದ್ದರೂ ನಿರಂತರವಾಗಿ ತಮ್ಮ ಹಾಗೂ, ತಮ್ಮ ಸಮುದಾಯದ, ಕುಟುಂಬದ ವಿರುದ್ಧ ಅವಹೇಳನಕಾರಿ ಬಿಜೆಪಿಯು ಕೋಮುವಾದಿ ಹೇಳಿಕೆ ನೀಡುತ್ತಿದೆ ಎಂದು ಆರೋಪಿಸಿ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ (ತಬಸುಮ್ ರಾವ್) ಅವರು ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.     ಕೆಲವೊಮ್ಮೆ ಮಹಿಳೆಯರ ಮೇಲೆ ಹಲ್ಲೆ ಮಾಡಿದರೆ ಅದು ತಪ್ಪೇ..ಅದು ಕ್ಷುಲ್ಲಕವಾದರೂ ಮಹಿಳೆಯರ ಗೌರವಕ್ಕೆ ಧಕ್ಕೆ ತರುವುದು, ನಿಂದಿಸುವುದು …

Read More »

ಸವದತ್ತಿ | ಮರ ಕಡಿದು ಅಕ್ರಮ ಸಾಗಣೆ : ಗ್ರಾಮಸ್ಥರ ಆಕ್ರೋಶ

ಸವದತ್ತಿ: ತಾಲ್ಲೂಕಿನ ಹಿರೇಕುಂಬಿ ಗ್ರಾಮದ ಹೊರವಲಯದಲ್ಲಿ ಕಾಲುವೆ ಬದಿ ಇದ್ದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಗ್ರಾಮಸ್ಥರು ತಡೆ ಹಿಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಾಲುವೆ ಬದಿಯಲ್ಲಿ ಬೆಳೆದಿದ್ದ ಬೃಹದಾಕಾರದ ನೀಲಗಿರಿ ಮರಗಳನ್ನು ಇಲಾಖೆಯ ಸಿಬ್ಬಂದಿ ಸಮ್ಮುಖದಲ್ಲಿ ಕಡಿದು ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದಾಗ ಅನುಮಾನಗೊಂಡ ಗ್ರಾಮಸ್ಥರು ವಾಹನವನ್ನು ಅಡ್ಡಗಟ್ಟಿ ವಿಚಾರಿಸಿದರು. ಈ ವೇಳೆ ಇದು ಅಕ್ರಮ ಸಾಗಣೆ ಎಂದು ಸಂಶಯ ವ್ಯಕ್ತಪಡಿಸಿ ಘಟನಾ ಸ್ಥಳದಲ್ಲಿ ಹಾಜರಿದ್ದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ‘ತಾಲ್ಲೂಕಿನಾದ್ಯಂತ …

Read More »

ಭಾರತದೆಡೆ ಹೆಚ್ಚಿದ ವಿಶ್ವದ ನಿರೀಕ್ಷೆ: ಗಡ್ಕರಿ

ನಿಪ್ಪಾಣಿ: ‘ತಾಂತ್ರಿಕ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಪ್ರತಿಭಾವಂತ ಮಾನವಶಕ್ತಿ ಕೇವಲ ಭಾರತದಲ್ಲಿ ಮಾತ್ರ ಇರುವುದರಿಂದ ಇಡಿ ವಿಶ್ವವು ಭಾರತವನ್ನು ಬಹು ನಿರೀಕ್ಷೆಯಿಂದ ಗಮನಿಸುತ್ತಿದೆ. ಇಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ತಯಾರಿಸುವ ಕಾರ್ಯ ಕೆ.ಎಲ್.ಇ.ಯಂತಹ ಶಿಕ್ಷಣ ಸಂಸ್ಥೆಗಳು ಈ ಭಾಗದಲ್ಲಿ ಮಾಡುತ್ತಿವೆ’ ಎಂದು ಕೇಂದ್ರ ರಸ್ತೆ, ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತೀನ ಗಡ್ಕರಿ ಹೇಳಿದರು.   ನಿಪ್ಪಾಣಿಯ ವಿಎಸ್‍ಎಂ ಸೋಮಶೇಖರ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಡಾ. ಪ್ರಭಾಕರ ಕೋರೆ …

Read More »