ಕೊಪ್ಪಳ : ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಿಣಿಗೇರ ಏರ್ ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಗಣತಿ ಜಾರಿ ಮಾಡುವ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಯರೆಡ್ಡಿಯವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. …
Read More »ಖರ್ಗೆ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ: ಸತೀಶ ಜಾರಕಿಹೊಳಿ
ನಿಪ್ಪಾಣಿ: ‘ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ವರಿಷ್ಠರು. ದೆಹಲಿಗೆ ಹೋದಾಗ ಅವರನ್ನು ಭೇಟಿ ಆಗಲೇಬೇಕು. ಇದು ಸಹಜ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರಿಶಿಷ್ಟ ಮುಖ್ಯಮಂತ್ರಿ ಕೂಗು ಎದ್ದಿಲ್ಲ. ಖರ್ಗೆ ಅವರೊಂದಿಗೆ ಮುಡಾ ಪ್ರಕರಣದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ರಾಜಕೀಯವಾಗಿ ನಮ್ಮ ಸಮಸ್ಯೆಗಳ ಕುರಿತಾಗಿ ಚರ್ಚಿಸಿದ್ದೇವೆ. ಸದ್ಯ ರಾಜ್ಯ ರಾಜಕಾರಣದಲ್ಲಿ …
Read More »ಬೆಳಗಾವಿ ದಕ್ಷಿಣ ಸಬ್ ರೆಜಿಸ್ಟಾರ್ ಕಾರ್ಯಾಲಯದಲ್ಲಿ ಏಜೆಂಟರ ದರ್ಬಾರ್…!!!
ಬೆಳಗಾವಿ ದಕ್ಷಿಣ ಸಬ್ ರೆಜಿಸ್ಟಾರ್ ಕಾರ್ಯಾಲಯದಲ್ಲಿ ಏಜೆಂಟರ ದರ್ಬಾರ್…!!! ಜನರಿಗೊಂದು ನ್ಯಾಯ… ಏಜೆಂಟರಿಗೊಂದು ನ್ಯಾಯ…!!!?? ನ್ಯಾಯಕ್ಕಾಗಿ ಸಬ್ ರಜಿಸ್ಟರಗೆ ಮುತ್ತಿಗೆ ಹಾಕಿದ ನ್ಯಾಯವಾದಿಗಳು….#innews ಬೆಳಗಾವಿ ದಕ್ಷಿಣ ಉಪನೋಂದಣಿ ಕಾರ್ಯಾಲಯದಲ್ಲಿ ನಡೆಯುತ್ತಿರುವ ಏಜೆಂಟರ ದರ್ಬಾರ ಮತ್ತು ಜನಸಾಮಾನ್ಯರಿಗಾಗಿ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ವಕೀಲ ಸಂಘಟನೆಯ ವತಿಯಿಂದ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.
Read More »ನಕ್ಷತ್ರ ಆಮೆಗಳನ್ನು ಸಾಗಿಸುತ್ತಿದ್ದ ಮೂವರ ಬಂಧನ
ಕೊಳ್ಳೇಗಾಲ,ಸೆ.19- ನಕ್ಷತ್ರ ಆಮೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ತಾಲೂಕು ಕುಳ್ಳೂರು ಗ್ರಾಮದ ಮಾದೇಶ್ (32) , ತಮಿಳುನಾಡು ಮೂಲದ ಶಿವಕುಮಾರ್ (22), ಪಿರಿಯಪಟ್ಟಣದ ಮೂಲದ ಜಾಕಿರ್ ಷರೀಪ್ (31) ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ಪಟ್ಟಣದ ಮುಡಿಗುಂಡ ಆದರ್ಶ ಶಾಲೆಯ ಮಾರ್ಗದಲ್ಲಿ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದಾರೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಸಂಚಾರಿ …
Read More »ಇನ್ಮುಂದೆ ತಿಮ್ಮಪ್ಪನ ದರ್ಶನಕ್ಕೆ ವಾಟ್ಸಾಪ್ನಲ್ಲೇ ಬುಕಿಂಗ್ ವ್ಯವಸ್ಥೆ
ತಿರುಪತಿ,ಅ.4-ತಿರುಮಲ ಶ್ರೀಗಳ ದರ್ಶನಕ್ಕೆ ಶಿಫಾರಸ್ಸು ಪತ್ರಗಳ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ಯಾವುದೇ ಶಿಫಾರಸ್ಸುಗಳಿಲ್ಲದೆ ಜನಸಾಮಾನ್ಯರು ಸುಲಭವಾಗಿ ತಿರುಮಲ ಶ್ರೀಕ್ಷೇತ್ರಕ್ಕೆ ಭೇಟಿ ನೀಡುವಂತೆ ಮುಂಗಡ ಬುಕಿಂಗ್ ವ್ಯವಸ್ಥೆ ಜಾರಿಗೆ ತರಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇತ್ತೀಚಿನ ಪರಿಶೀಲನೆಯಲ್ಲಿ ಹಲವು ಸಲಹೆಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ. ವಿಶ್ವಾದ್ಯಂತ ಲಕ್ಷಾಂತರ ಜನರ ದೈನಂದಿನ ಜೀವನದ ಭಾಗವಾಗಿರುವ ವಾಟ್ಸಾಪ್ ಮೂಲಕವೇ ಟಿಕೆಟ್ ಬುಕ್ ಮಾಡಲು ಅನುಕೂಲವಾಗುವಂತೆ ಆಂಧ್ರಪ್ರದೇಶ ಸರ್ಕಾರ ಚಿಂತನೆ ನಡೆಸಿದೆ. ವಾಟ್ಸಾಪ್ …
Read More »ತೀವ್ರಗೊಂಡ ಪಿಡಿಒ,ಅನಿರ್ದಿಷ್ಟಾವಧಿ ಪ್ರತಿಭಟನೆ
ಬೆಂಗಳೂರು, ಅ.4- ಇಲಾಖೆಗಳಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಪಿಡಿಓಗಳು ಹಾಗೂ ಕಾರ್ಯದರ್ಶಿಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ನಗರದ ಫ್ರೀಡಂಫಾರ್ಕ್ನಲ್ಲಿ ರಾಜ್ಯದ ನಾನಾಕಡೆಯಿಂದ ಬಂದಿರುವ ಸಾವಿರಾರು ಮಂದಿ ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದು, ನಮ ಭಾವನೆಗಳಿಗೆ ಮತ್ತು ಬೇಡಿಕೆಗಳಿಗೆ ಸ್ಪಂದಿಸದ ಹೊರತು ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಮದು ಶಾಂತಿಯುತ ಹೋರಾಟ. ನಮ ಹಕ್ಕಿನ ಬೇಡಿಕೆಯಾಗಿದ್ದು, ಇದನ್ನು ಸಹಾನುಭೂತಿಯಿಂದ ಕೇಳಿಸಿಕೊಳ್ಳದೆ …
Read More »ಮಂತ್ರಾಲಯ’ದ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!
ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶಾಸಕ ಹಾಗೂ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಶುಕ್ರವಾರ ಮಹಾರಾಷ್ಟ್ರದ ಮಂತ್ರಾಲಯ(ಸಚಿವಾಲಯ)ದ ಛಾವಣಿಯಿಂದ ಜಿಗಿದಿದ್ದು, ಕೆಳಗೆ ಸುರಕ್ಷತಾ ನೆಟ್ ಅಳವಡಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಬೈನಲ್ಲಿರುವ ಮಹಾರಾಷ್ಟ್ರ ಸರ್ಕಾರದ ಆಡಳಿತ ಕೇಂದ್ರವಾದ ಮಂತ್ರಾಲಯದ ಮೂರನೇ ಮಹಡಿಯಿಂದ ನರಹರಿ ಜಿರ್ವಾಲ್ ಅವರು ಜಿಗಿದಿದ್ದಾರೆ ಎನ್ನಲಾಗಿದೆ. ಮೂರನೇ ಮಹಡಿಯಿಂದ ಜಿಗಿದ ಬಳಿಕ ನೆಟ್ನಲ್ಲಿ ಸಿಲುಕಿದ್ದ ಜಿರ್ವಾಲ್ ಅವರನ್ನು …
Read More »ರೋಲ್ಕಾಲ್ ಸ್ವಾಮಿ-ಸೂಟ್ಕೇಸ್ ಸ್ವಾಮಿ’ ಎಚ್ಡಿಕೆಗೆ ಚಾಯ್ಸ್ ಕೊಟ್ಟ ಕಾಂಗ್ರೆಸ್
ಚನ್ನಪಟ್ಟಣ ಉಪಚುನಾವಣೆಗೆ 50 ಕೋಟಿ ರೂಪಾಯಿ ಕೊಡುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ವಿಜಯ್ ತಾತಾ ದೂರು ನೀಡಿದ್ದಾರೆ. ಈ ಸಂಬಂಧ ಎಫ್ಐಆರ್ ಕೂಡ ದಾಖಲಾಗಿದ್ದು, ಕಾಂಗ್ರೆಸ್ ಈ ವಿಚಾರವಾಗಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಬಗ್ಗ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ರೋಲ್ಕಾಲ್swamy ಅವರ ದಾಹಗಳಿಗೆ ಮಿತಿ ಇಲ್ಲ. ಅಧಿಕಾರ ದಾಹ, ಭೂ ದಾಹ, ಹಣ ದಾಹಗಳಿಗೆ ಹಲವು ನಿದರ್ಶನಗಳಿವೆ. ಗಂಗೇನಹಳ್ಳಿಯ …
Read More »ಚನ್ನಪಟ್ಟಣ ಎಲೆಕ್ಷನ್ಗೆ 50 ಕೋಟಿ ಹಣಕ್ಕೆ ಡಿಮ್ಯಾಂಡ್: ಹೆಚ್ ಡಿ ಕುಮಾರಸ್ವಾಮಿ A2 ಆರೋಪಿ
ಬೆಂಗಳೂರು, ಅಕ್ಟೋಬರ್ 04: ಉದ್ಯಮಿ ವಿಜಯ್ ಟಾಟಾ ನೀಡಿದ ದೂರಿನ ಮೇರೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚನ್ನಪಟ್ಟಣ ಎಲೆಕ್ಷನ್ಗೆ 50 ಕೋಟಿ ಹಣಕ್ಕಾಗಿ ಡಿಮ್ಯಾಂಡ್ ಇಟ್ಟು ಬೆದರಿಕೆ ಹಾಕಿದ್ರು ಅಂತಾ ಉದ್ಯಮಿ ವಿಜಯ್ ಟಾಟಾ ದೂರು ನೀಡಿದ್ದಾರೆ. A1 ರಮೇಶ್ ಗೌಡ, A2 ಹೆಚ್. ಡಿ. ಕುಮಾರಸ್ವಾಮಿಯನ್ನ ಆರೋಪಿಗಳಾಗಿ ಹೆಸರಿಸಿ ಎಫ್ಐಆರ್ ದಾಖಲಾಗಿದ್ದು, ಬಿಎನ್ …
Read More »“ಸ್ಥಳೀಯ’ ಚುನಾವಣೆ ನಡೆಸದಿದ್ದರೆ ಅನುದಾನಕ್ಕೆ ಕತ್ತರಿ?
ಬೆಂಗಳೂರು: ಕಾಲಮಿತಿಯೊಳಗೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯದಿದ್ದರೆ ಅವುಗಳಿಗೆ ಬರಬೇಕಾದ ಅನುದಾನವನ್ನು ತಡೆ ಹಿಡಿಯುವ ಬದಲು ರಾಜ್ಯ ಸರಕಾರಕ್ಕೆ ಬರಬೇಕಾದ ಅನುದಾನವನ್ನು ತಡೆ ಹಿಡಿಯಿರಿ…’ ಇದು ಕೇಂದ್ರ ಸರಕಾರದ 16ನೇ ಹಣಕಾಸು ಆಯೋಗದ ಮುಂದೆ ರಾಜ್ಯ 5ನೇ ಹಣಕಾಸು ಆಯೋಗ ಇಟ್ಟಿರುವ ಷರತ್ತು. ಪ್ರತಿ 5 ವರ್ಷಗಳ ಅವಧಿಗೆ ಕಾಲ-ಕಾಲಕ್ಕೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕು. ಪ್ರತಿ 5 ವರ್ಷಕ್ಕೊಮ್ಮೆ ರಾಜ್ಯ ಹಣಕಾಸು ಆಯೋಗ ರಚನೆ ಆಗಬೇಕು. ಇಲ್ಲದಿದ್ದರೆ …
Read More »
Laxmi News 24×7