ಬೆಳಗಾವಿ: ‘ಈ ಹಿಂದೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿಬಂದಾಗ, ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಈಗ ಅವರ ನೈತಿಕತೆ ಎಲ್ಲಿಗೆ ಹೋಗಿದೆ’ ಎಂದು ಶಾಸಕ ಅಭಯ ಪಾಟೀಲ ಪ್ರಶ್ನಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಪ್ರಕರಣದಲ್ಲಿ ಎಫ್ಐಆರ್ ದಾಖಲಾದರೂ ಸಿದ್ದರಾಮಯ್ಯ ರಾಜೀನಾಮೆ ಕೊಡದ ವಿಚಾರವಾಗಿ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ‘ರಾಜ್ಯದಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳದೆ ಕೆಲಸ ಮಾಡಿದ ಕೆಲವೇ ರಾಜಕಾರಣಿಗಳ ಪೈಕಿ ಸಿದ್ದರಾಮಯ್ಯ …
Read More »ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ಸರ್ಕಾರಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ: ಯತ್ನಾಳ
ದಾವಣಗೆರೆ: ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ. ಶಾಸಕರ ಖರೀದಿ, ಆಪರೇಷನ್ಗೆ ಬಿಜೆಪಿ ವರಿಷ್ಠರು ಅವಕಾಶ ನೀಡುವುದಿಲ್ಲ, ನಾವೂ ಒಪ್ಪುವುದಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಆರೋಪ ಮಾಡಿದರು. ‘ರಾಜ್ಯ ಸರ್ಕಾರ ತಾನಾಗಿಯೇ ಪತನವಾಗುವ ಕಾಲ ಸನ್ನಿಹಿತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನ ಮಾಡುವುದಿಲ್ಲ. ಸರ್ಕಾರ ಬೀಳಿಸಲು ಕೆಲವರ ಬಳಿ ಹಣ ಇರಬಹುದು. ಏಕೆಂದರೆ …
Read More »ಹೊಂಡ-ಗುಂಡಿಗಳ ರಸ್ತೆ: ಬಸ್ ಸಂಚಾರ ಬಂದ್
ಹಾನಗಲ್: ತಾಲ್ಲೂಕಿನ ಯಳ್ಳೂರ-ಬಸಾಪುರ ಗ್ರಾಮೀಣ ರಸ್ತೆ ಹದಗೆಟ್ಟಿದೆ. ಮೊಣಕಾಲು ಮಟ್ಟದ ತಗ್ಗುಗಳು ಸೃಷ್ಟಿಯಾಗಿದ್ದು ಸಾರಿಗೆ ಬಸ್ ಸಂಚಾರ ಕೂಡ ಅಸಾಧ್ಯವಾಗಿದೆ. ಈ ಭಾಗದ ಜನರು ಮತ್ತು ಶಾಲೆ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಮಳೆಗಾಲದ ಆರಂಭದಿಂದಲೇ ರಸ್ತೆ ಸಂಚಾರ ದುಸ್ತರವಾಗುತ್ತಿದೆ. ಈಚೆಗಂತೂ ಹೆಜ್ಜೆಗೊಂದು ಗುಂಡಿ ಬಾಯ್ತೆರೆದುಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಈ ರಸ್ತೆಯಲ್ಲಿ ಹಾನಗಲ್ ಸಾರಿಗೆ ಘಟಕದ ಬಸ್ ಸಂಚಾರ ಬಂದ್ ಮಾಡಿ ಒಂದು ತಿಂಗಳು ಗತಿಸಿದೆ. ಮಹರಾಜಪೇಟೆ …
Read More »ಮಾವನ ಮೇಲೆ ಸಿಟ್ಟು: 106 ಅಡಿಕೆ ಗಿಡ ಕಡಿದು ಹಾಕಿದ ಅಳಿಯ
ಹಾವೇರಿ: ತನ್ನ ಪತ್ನಿಯನ್ನು ಮನೆಗೆ ಕಳುಹಿಸಲಿಲ್ಲವೆಂಬ ಕಾರಣಕ್ಕೆ ಮಾವನ ಮೇಲೆ ಸಿಟ್ಟಾದ ಅಳಿಯನೊಬ್ಬ, ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು ಕಡಿದು ಹಾಕಿ ನಾಶಪಡಿಸಿರುವ ಬಗ್ಗೆ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.‘ಹಾನಗಲ್ ತಾಲ್ಲೂಕಿನ ಬಸಾಪುರ ಗ್ರಾಮದ ದೇವೇಂದ್ರಪ್ಪ ಫಕ್ಕೀರಪ್ಪ ಗಾಣಿಗೇರ (55) ಅವರು ದೂರು ನೀಡಿದ್ದಾರೆ. ಅವರ ಅಳಿಯನಾದ ಬಸವರಾಜ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ದೂರುದಾರ ದೇವೇಂದ್ರಪ್ಪ, ತಮ್ಮ ಮಗಳನ್ನು …
Read More »ತೇವಾಂಶ ಹೆಚ್ಚಳ; ಕುಸಿದ ಮೆಕ್ಕೆಜೋಳ ಬೆಲೆ
ರಾಣೆಬೆನ್ನೂರು: ಮುಂಗಾರು ಹಂಗಾಮಿಗೆ ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೆಳೆ ಕಟಾವಿಗೆ ಬಂದಿದೆ. ಜಿಲ್ಲೆಯ ಹಲವು ತಾಲ್ಲೂಕು ಹಾಗೂ ಹೊರ ಜಿಲ್ಲೆಗಳ ರೈತರು ತಾವು ಬೆಳೆದಿರುವ ಮೆಕ್ಕೆಜೋಳವನ್ನು ಮಾರಾಟ ಮಾಡಲು ನಗರದ ಎಪಿಎಂಸಿಗೆ ತರುತ್ತಿದ್ದಾರೆ. ಬದಲಾದ ವಾತಾವರಣದಿಂದಾಗಿ ಮೆಕ್ಕೆಜೋಳದ ತೇವಾಂಶ ಹೆಚ್ಚಾಗಿದ್ದು, ಬೆಲೆಯಲ್ಲಿಯೂ ಕುಸಿತ ಕಂಡುಬರುತ್ತಿದೆ. ಜಿಲ್ಲೆಯಲ್ಲಿ ವಾರದಿಂದ ವಾತಾವರಣ ಹೆಚ್ಚು ತಂಪಾಗಿದ್ದು, ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಕೆಲ ರೈತರು, ಮೆಕ್ಕೆಜೋಳದ ತೆನೆ ಮುರಿದು ಅಲ್ಲಲ್ಲಿ ರಾಶಿ ಮಾಡಿ ಇರಿಸುತ್ತಿದ್ದಾರೆ. …
Read More »ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್ 26ರ ಮುನ್ನ ನಡೆಯುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ಪರಿಶೀಲಿಸಲು ಮುಂಬೈಗೆ ಭೇಟಿ ನೀಡಿದ್ದ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾವು 11 ಪಕ್ಷಗಳ ನಾಯಕರನ್ನು ಭೇಟಿಯಾಗಿದ್ದೇವೆ. ಚುನಾವಣೆ ದಿನಾಂಕಗಳನ್ನು ಘೋಷಿಸುವ ಮುನ್ನ ದೀಪಾವಳಿ …
Read More »ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ₹60 ಕೋಟಿ ಅವ್ಯವಹಾರದ ತನಿಖೆಗೆ ನಿರ್ಣಯ!
ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ₹60 ಕೋಟಿ ಅವ್ಯವಹಾರದ ತನಿಖೆಗೆ ನಿರ್ಣಯ ಕೈಗೊಳ್ಳಲಾಗಿದೆ. ಇದೇ ವಿಚಾರವಾಗಿ ರೈತರು ಕಳೆದ ವಾರ ನಿರಂತರ ಹೋರಾಟ ಮಾಡಿದರು. ಫಲವಾಗಿ ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ರೈತರು ತನಿಖೆ ಮಾಡಿಸುವ ನಿರ್ಧಾರಕ್ಕೆ ಬಂದಿದ್ದಾರೆ. ದಶಕಗಳಿಂದಲೂ ರೈತರ ಜೀವನಾಡಿಯಾಗಿದ್ದ ಕಾರ್ಖಾನೆಯ ಈಗ ವಿವಾದದ ಕೇಂದ್ರವಾಗಿದೆ. ‘ಕಾರ್ಖಾನೆಯಲ್ಲಿ ನಡೆದ ಅವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಕಾರ್ಖಾನೆಯ ಈ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅವರ …
Read More »ಕಂದಾಯ ಅಧಿಕಾರಿಗೆ ಪ್ರಶಸ್ತಿ
ಬೆಳಗಾವಿ: ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿದ ಕಾರಣಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ವಿಪತ್ತು ನಿರ್ವಹಣಾ ಸಮಾಲೋಚಕ ನಿಂಗನಗೌಡ ಚನಬಸನಗೌಡರ ಅವರಿಗೆ ‘ಅತ್ಯುತ್ತಮ ಕಂದಾಯ ಅಧಿಕಾರಿ-2024’ ಪ್ರಶಸ್ತಿ ಲಭಿಸಿದೆ. ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಜರುಗಿದ ಸಮಾರಂಭದಲ್ಲಿ ನಿಂಗನಗೌಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಸೇರಿದಂತೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ …
Read More »ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಇಂದು: ನಿಷೇಧಾಜ್ಞೆ
ಮೈಸೂರು: ಮಹಿಷ ದಸರಾ ಆಚರಣೆ ಸಮಿತಿಯು ಭಾನುವಾರ (ಸೆ.29) ‘ಮಹಿಷ ಮಂಡಲೋತ್ಸವ’ದ ಅಂಗವಾಗಿ, ಬೆಳಿಗ್ಗೆ 8.30ಕ್ಕೆ ಚಾಮುಂಡಿ ಬೆಟ್ಟದಲ್ಲಿ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಪುರಭವನದಲ್ಲಿ ಕಾರ್ಯಕ್ರಮ ನಡೆಸಲಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾರ್ಯಕ್ರಮದ ಕುರಿತು ತಮ್ಮ ಫೇಸ್ಬುಕ್ ಪುಟದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ ಸಿಂಹ, ‘ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ, ನೋಡೆ ಬಿಡೋಣ’ ಎಂದು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಅವರು, ಮಹಿಷ ದಸರಾಕ್ಕೆ ಪ್ರತಿಯಾಗಿ ಚಾಮುಂಡಿ ಬೆಟ್ಟ …
Read More »ಕೌಟುಂಬಿಕ ಕಲಹದಿಂದ ಕುಡುಗೋಲಿನಿಂದ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ
ಕಲಬುರ್ಗಿ: ಕೌಟುಂಬಿಕ ಕಲಹಕ್ಕೆ ಬೇಸತ್ತಂತ ಪತಿಯೊಬ್ಬ, ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು, ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವಂತ ಘಟನೆ ಕಲಬುರ್ಗಿಯ ಸೇಡಂನ ಬೇಟಗೇರ(ಬಿ) ಗ್ರಾಮದಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಬೇಡಗೇರ(ಬಿ) ಗ್ರಾಮದ ನಾಗಮ್ಮ ಹಾಗೂ ಶೇಖರಪ್ಪ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು. ದಿನೇ ದಿನೇ ಹೆಚ್ಚಾಗಿ ಇದರಿಂದ ಬೇಸತ್ತು ಕೂಡ ಹೋಗಲಾಗಿತ್ತು ಎನ್ನಲಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದಂತ ಶೇಖರಪ್ಪ ತನ್ನ ಪತ್ನಿ ನಾಗಮ್ಮ(42) ಎಂಬುವರನ್ನು ಕುಡುಗೋಲಿನಿಂದ ಕೊಚ್ಚಿ …
Read More »
Laxmi News 24×7