ಮೈಸೂರು: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಮೊದಲ ಟೋಲ್ ಸಂಗ್ರಹ ಸೋಮವಾರದಿಂದ ಆರಂಭವಾಗಲಿದೆ. ಬೆಂಗಳೂರು- ನಿಡಘಟ್ಟ ನಡುವಿನ ಶೇಷಗಿರಿಹಳ್ಳಿಯ ಟೋಲ್ ಕಾರ್ಯಾಚರಣೆ ಆರಂಭಿಸಲಾಗಿದೆ. ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ. ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ. ರಸ್ತೆಗೆ ಶುಲ್ಕ ಸಂಗ್ರಹಿಸಲಾಗುತ್ತಿದೆ. ಲಘು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಹಾಗೂ ಅದೇ ದಿನ ಮರು ಸಂಚಾರಕ್ಕೆ 205 ರೂ., ಲಘು ವಾಣಿಜ್ಯ ವಾಹನಗಳು/ಲಘು ಸರಕು ವಾಹನಗಳು/ಮಿನಿ ಬಸ್ಗಳ ಏಕಮುಖ …
Read More »ಶಿವಮೊಗ್ಗ ವಿಮಾನ ನಿಲ್ದಾಣ: ಲೋಕಾರ್ಪಣೆ ಇಂದು
ಶಿವಮೊಗ್ಗ: ಸಮೀಪದ ಸೋಗಾನೆ ಗ್ರಾಮದ ಬಳಿ ನಿರ್ಮಿಸಲಾದ ನೂತನ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಲೋಕಾರ್ಪಣೆ ಮಾಡಲಿದ್ದಾರೆ. ಶಿವಮೊಗ್ಗ- ಭದ್ರಾವತಿ ನಗರಗಳ ಮಧ್ಯೆ ಇರುವ ಸೋಗಾನೆ ಬಳಿ ₹449.22 ಕೋಟಿ ವೆಚ್ಚದಲ್ಲಿ 778.62 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. 2007ರಲ್ಲಿ ಬಿ.ಎಸ್.ಯಡಿಯೂರಪ್ಪ ಉಪಮುಖ್ಯಮಂತ್ರಿ ಆಗಿದ್ದಾಗ ಸೋಗಾನೆಯಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿತ್ತು. ಮೊದಲು ಟೆಂಡರ್ ಪಡೆದಿದ್ದ ಗುತ್ತಿಗೆದಾರರು ಕಾಮಗಾರಿ ನಿರ್ವಹಣೆಯಿಂದ ಹಿಂದೆ …
Read More »ಸಿದ್ದರಾಮಯ್ಯ – ಖರ್ಗೆ ರಹಸ್ಯ ಚರ್ಚೆ | ಹೆಚ್ಚಿದ ಆಕಾಂಕ್ಷಿಗಳ ಕುತೂಹಲ
ಬೆಂಗಳೂರು: ಛತ್ತೀಸಗಢದ ರಾಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮಹಾಧಿವೇಶನದ ವೇಳೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಮಾರು 45 ನಿಮಿಷ ರಹಸ್ಯ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನೇನು ಕೆಲವೇ ದಿನಗಳಲ್ಲಿ ಹೊರಬೀಳಲಿದ್ದು, ಈ ಮಧ್ಯೆ ಇಬ್ಬರ ನಡುವಿನ ಚರ್ಚೆ ಟಿಕೆಟ್ ಆಕಾಂಕ್ಷಿಗಳ ಕುತೂಹಲ ಹೆಚ್ಚಿಸಿದೆ. ‘ಸಿದ್ದರಾಮಯ್ಯ ವಾಸ್ತವ್ಯವಿದ್ದ ಹೋಟೆಲ್ ಕೊಠಡಿಯ ಎದುರಿನ ಕೊಠಡಿಯಲ್ಲಿ ಖರ್ಗೆ ಕೂಡಾ ಇದ್ದಾರೆ. ಶನಿವಾರ ರಾತ್ರಿ …
Read More »ಬಿ.ಎಸ್. ಯಡಿಯೂರಪ್ಪ ಅವರ ಕಣ್ಣೀರಿನ ಶಾಪ ಬಿಜೆಪಿಗೆ ತಟ್ಟಲಿದೆ. ಚುನಾವಣೆಯಲ್ಲಿ 40 ಸ್ಥಾನ ಗೆಲ್ಲಲು ಆ ಪಕ್ಷಕ್ಕೆ ಸಾಧ್ಯವಿಲ್ಲ’ :ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: ‘ಬಿ.ಎಸ್. ಯಡಿಯೂರಪ್ಪ ಅವರ ಕಣ್ಣೀರಿನ ಶಾಪ ಬಿಜೆಪಿಗೆ ತಟ್ಟಲಿದೆ. ಯಡಿಯೂರಪ್ಪ ಇಲ್ಲದ ಈ ಬಾರಿಯ ಚುನಾವಣೆಯಲ್ಲಿ 40 ಸ್ಥಾನ ಗೆಲ್ಲಲು ಆ ಪಕ್ಷಕ್ಕೆ ಸಾಧ್ಯವಿಲ್ಲ’ ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಲೇವಡಿ ಮಾಡಿದರು. ‘ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದಾಗ ಬಿ.ಎಸ್. ಯಡಿಯೂರಪ್ಪ ಕಣ್ಣೀರು ಹಾಕಿದ್ದರು. ಅಂದರೆ ಬಿಜೆಪಿಯಲ್ಲಿನ ದುಷ್ಟ ಶಕ್ತಿಗಳಾದ ಕೆ.ಎಸ್. ಈಶ್ವರಪ್ಪ, ಸಿ.ಟಿ.ರವಿ ಹಾಗೂ ಬಸನಗೌಡ ಯತ್ನಾಳ ಷಡ್ಯಂತ್ರದಿಂದ ಯಡಿಯೂರಪ್ಪ ಕಣ್ಣೀರಿಟ್ಟಿದ್ದಾರೆ. ಯಡಿಯೂರಪ್ಪ ಅವರನ್ನು ಬಿಟ್ಟು …
Read More »ಕೇಂದ್ರ ಸರ್ಕಾರದ ನಿರ್ಧಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ರಿಲೀಫ್
ಕೇಂದ್ರ ಸರ್ಕಾರದ ನಿರ್ಧಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ದೇಶಾದ್ಯಂತ ಹೊಸ ನಿಯಮ ಜಾರಿಯಾಗ್ತಿದೆ. ಈ ಮೂಲಕ ಪಡಿತರ ಚೀಟಿಯಿಂದ ಆಹಾರ ಧಾನ್ಯ ಪಡೆಯುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲಾಗಿದ್ದು, ಇದರ ನಂತರ ಎಲ್ಲಾ ಅಂಗಡಿಗಳಲ್ಲಿ ಆನ್ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಪಿಒಎಸ್) ಸಾಧನಗಳನ್ನು ಕಡ್ಡಾಯಗೊಳಿಸಲಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ …
Read More »ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲು ತೂರಾಟ
ಬೆಂಗಳೂರು: ಮೈಸೂರು – ಚೆನ್ನೈ ಮಾರ್ಗದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದರಿಂದಾಗಿ ಕೋಚ್ನ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನ ಕೆ.ಆರ್ಪುರಂ ಬಳಿ ಶನಿವಾರ ಈ ಘಟನೆ ಸಂಭವಿಸಿದೆ. ಚೆನ್ನೈ- ಬೆಂಗಳೂರು- ಮೈಸೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಚೆನ್ನೈನಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಬೆಂಗಳೂರಿನಲ್ಲಿ ಇಲ್ಲಿವರೆಗೆ …
Read More »ಮಕ್ಕಳೆ ರಾಜಕಾರಣಿ ಮಾತ್ರ ಆಗಬೇಡಿ: ಶಾಸಕ ಎಂ.ವೈ.ಪಾಟೀಲ್ ಕರೆ
ಕಲಬುರಗಿ: ಮಕ್ಕಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ಗುರಿಯೊಂದಿಗೆ ಸಾಧನೆ ಮಾಡಬೇಕು ಎಂದು ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಮಕ್ಕಳಿಗೆ ಸಲಹೆ ನೀಡಿದರು. ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಕಲಬುರಗಿ ವಿವಿಯ ಬಯಲು ರಂಗಮಂದಿರ ಶನಿವಾರ ಆಯೋಜಿಸಿದ ಮಕ್ಕಳ ಉತ್ಸವ ಉದ್ಘಾಟಿಸಿ ಮಾತನಾಡಿ, ಇದು ಕೇವಲ ಉತ್ಸವ ಅಲ್ಲ, ನಮ್ಮ ಭಾಗದ ದೊಡ್ಡ ಹಬ್ಬವಾಗಿದೆ. ಭಾರತ ಸ್ವಾತಂತ್ರ್ಯ ಮತ್ತು ನಿಜಾಮ ಶಾಹಿಯಿಂದ ಮುಕ್ತಿ ಪಡೆದ ಬಳಿಕ ಸ್ವಾತಂತ್ರೋತ್ಸವವನ್ನು ಮಾರ್ಪಾಟಾಗಿ ಕಲ್ಯಾಣ ಕರ್ನಾಟಕ ಉತ್ಸವವಾಗಿ ಆಚರಿಸಲಾಗುತ್ತಿದೆ. …
Read More »ಸನ್ಯಾಸಿಗಳೂ ಬಿಜೆಪಿ ಸೇರಬಹುದು: ಸಚಿವ ಡಾ|ಅಶ್ವತ್ಥನಾರಾಯಣ
ದಾವಣಗೆರೆ: ಭಾರತೀಯ ಜನತಾ ಪಾರ್ಟಿಗೆ ಸನ್ಯಾಸಿಗಳೂ ಸೇರಿದಂತೆ ಎಲ್ಲರಿಗೂ ಮುಕ್ತ ಆಹ್ವಾನವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ|ಅಶ್ವತ್ಥನಾರಾಯಣ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ದಲ್ಲಿ ಎಲ್ಲರೂ ಭಾಗವಹಿಸಬೇಕಾಗುತ್ತೆ. ಅಂತಹ ಆಲೋಚನೆ-ವಿಚಾರ ಇರೋರು ಬಿಜೆಪಿ ಸೇರಬಹುದು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸನ್ಯಾಸಿ ಆಗಿದ್ದವರು. ಸನ್ಯಾಸಿಗಳಾಗಿದ್ದವರು ಶಾಸಕ-ಮಂತ್ರಿಯಾಗಿದ್ದಾರೆ. ಲೋಕಸಭೆಗೂ ಆಯ್ಕೆಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಎಲ್ಲರೂ ಇದ್ದಾರೆ. ಹೀಗಾಗಿ ಎಲ್ಲರಿಗೂ ಮುಕ್ತ ಆಹ್ವಾನವಿದೆ ಎಂದರು. ಅರ್ಕಾವತಿ ಬಡಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ …
Read More »ಸ್ವಾಮೀಜಿಗಳು ವಿಧಾನಸೌಧದಲ್ಲಿ ಕಾಣಿಸಿಕೊಳ್ಳುವುದು ಸರಿಯಲ್ಲ: ಹೊರಟ್ಟಿ
ಧಾರವಾಡ: ಸ್ವಾಮೀಜಿಗಳು ಸಮಾಜಕ್ಕೆ ಮಾದರಿ. ಅವರು ಮಠ ಬಿಟ್ಟು ವಿಧಾನಸೌಧದಲ್ಲಿ ಕಾಣಿಸಿಕೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಾನು ನೋಡಿದಂತೆ ಬಹುತೇಕ ಸ್ವಾಮೀಜಿಗಳು ವಿಧಾನಸೌಧದಲ್ಲಿಯೇ ಇರುತ್ತಾರೆ. ಇದು ಸರಿಯಾದ ಬೆಳವಣಿಗೆಯಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸ್ವಾಮೀಜಿಗಳು ರಾಜಕಾರಣಕ್ಕೆ ಬರಲಿ ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಚುನಾವಣೆಯಲ್ಲಿ ಮತ ಚಲಾವಣೆ ಮಾಡುವವರು ಬುದ್ಧಿವಂತರಾಗುವವರೆಗೂ ಒಳ್ಳೆಯ ಸರಕಾರ …
Read More »ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆಂದ ಕಟೀಲು
ಲಿಂಗಸೂಗುರು: ಅರ್ಕಾವತಿ ಪ್ರಕರಣದ ತನಿಖೆ ಲೋಕಾಯುಕ್ತಕ್ಕೆ ವಹಿಸಿದ್ದು, ತನಿಖೆ ಬಳಿಕ ತಪ್ಪಿತಸ್ಥರು ಜೈಲು ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಹೇಳಿದರು. ಶನಿವಾರ ವಿಜಯ ಸಂಕಲ್ಪ ಯಾತ್ರೆ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆಂದು ನಾನು ಹೇಳಿದ್ದೆ. ನ್ಯಾ| ಕೆಂಪಣ್ಣ ಕೊಟ್ಟ ವರದಿ ಲೋಕಾಯುಕ್ತಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾದ ನಾಯಕರ ವಿರುದ್ಧ ಕ್ರಮ ಜರಗಲಿದೆ. ತಪ್ಪಿತಸ್ಥರು ಜೈಲಿಗೆ ಹೋಗುತ್ತಾರೆ …
Read More »