Breaking News
Home / ರಾಜ್ಯ (page 648)

ರಾಜ್ಯ

ನಗರಸಭೆ: ₹7.32 ಲಕ್ಷ ಉಳಿತಾಯ ಬಜೆಟ್‌

ಗೋಕಾಕ: ಇಲ್ಲಿನ ನಗರಸಭೆಯ 2023-24ನೇ ಸಾಲಿನ ₹7.32 ಲಕ್ಷದ ಉಳಿತಾಯದ ಬಜೆಟ್ ಅನ್ನು ಪ್ರಭಾರಿ ಪೌರಾಯುಕ್ತ ಶಿವಾನಂದ ಹಿರೇಮಠ ಅವರು, ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಂಡಿಸಿದರು. ನಗರದ ಸ್ವಚ್ಛತೆಗಾಗಿ 19 ಜನ ಪೌರಕಾರ್ಮಿಕರ ನೇಮಕ ಪ್ರಕ್ರಿಯೆ ನಡೆದಿದ್ದು, ಉಳಿದ ಕಾರ್ಮಿಕರನ್ನು ಹೊರಗುತ್ತಿಗೆ ಹಾಗೂ ನೇರ ಪಾವತಿ ಆಧಾರದ ಮೇಲೆ ಸೇವೆಯನ್ನು ಪಡೆಯುವ ಉದ್ದೇಶಕ್ಕೆ ₹3.84 ಕೋಟಿ ಅವಶ್ಯ ನಿಗದಿ ಮಾಡಿರುವುದಾಗಿ ತಿಳಿಸಿದರು.   …

Read More »

15ನೇ ವಿಧಾನಸಭೆ ಅಧಿವೇಶನ ಅಂತ್ಯ; ಪರಸ್ಪರ ಶುಭಾಶಯ ಕೋರಿದ ಸದಸ್ಯರು

ಬೆಂಗಳೂರು: 15ನೇ ವಿಧಾನಸಭೆಯ ಕೊನೆಯ ಅಧಿವೇಶನದ ಕೊನೆಯ ದಿನವಾದ ವಿಧಾನಸಭೆಯಲ್ಲಿ ವಿದಾಯ ಭಾಷಣದ್ದೇ ಕಾರುಬಾರು. ಕಳೆದ 5 ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ, ಜನತೆಯ ಹಿತಕ್ಕಾಗಿ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡು ತನುಮನದಿಂದ ದುಡಿದ ಸಂತೃಪ್ತ, ಸಾರ್ಥಕ ಭಾವನೆಯನ್ನು ಎಲ್ಲ ಸದಸ್ಯರುಗಳು ವ್ಯಕ್ತಪಡಿಸಿ, ಪರಸ್ಪರ ಶುಭಾಶಯ,, ಅಭಿನಂದನೆಗಳ ವಿನಿಮಯ ಮಾಡಿಕೊಂಡರು. ಜತೆಗೆ ಮತ್ತೆ ಚುನಾವಣೆಯಲ್ಲಿ ಗೆದ್ದು ಸದನಕ್ಕೆ ಬರೋಣ ಶುಭ ಹಾರೈಕೆಗಳ ವಿನಿಮುಂವೂ ಸದನದಲ್ಲಿ ಆಯಿತು. 2018ರ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ …

Read More »

ಮದ್ಯಪಾನವನ್ನೇ ಮುಂದಿಟ್ಟುಕೊಂಡು ಸರ್ಕಾರಗಳು ರಾಜಕಾರಣ ಮಾಡುತ್ತಿವೆ! ಮುತಾಲಿಕ್

ಉಡುಪಿ: ರಾಜ್ಯ ಸರ್ಕಾರ ಮದ್ಯಪಾನದ ವಯಸ್ಸನ್ನು 21 ರಿಂದ 18 ವರ್ಷಕ್ಕೆ ಇಳಿಕೆ ಮಾಡಿರುವು ಆಘಾತಕಾರಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮದ್ಯ ಸೇವನೆ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತಿದೆ. ದೇಶದಾದ್ಯಂತ ಮದ್ಯಪಾನವನ್ನು ನಿಷೇಧ ಮಾಡಬೇಕೆಂದು ಗಾಂಧೀಜಿ 75 ವರ್ಷದ ಹಿಂದೆಯೇ ಸಲಹೆ ಕೊಟ್ಟಿದ್ದರು. ಆದರೆ ಮದ್ಯಪಾನವನ್ನೇ ಅನುಸರಿಸಿ ಸರಕಾರಗಳು ರಾಜಕಾರಣ ಮಾಡುತ್ತಿವೆ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದರು. ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಮಧ್ಯಪಾನಕ್ಕೆ ಬಲಿಯಾಗುತ್ತಿದ್ದಾರೆ. …

Read More »

ಪ್ರಜಾಕೀಯ ಪಕ್ಷಕ್ಕೆ ಸಿಕ್ಕಿತು ‘ಆಟೋ ರಿಕ್ಷಾ’ ಚಿಹ್ನೆ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ. ಈಗಾಗಲೇ ಎಲ್ಲಾ ಪಕ್ಷಗಳು ರಾಜ್ಯದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿವೆ. ಹೊಸ ಹೊಸ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ಧೇಶದಿಂದ ಕ್ಷೇತ್ರದಲ್ಲಿ ನಿರಂತರ ಓಡಾಟ ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ ಜನರಿಗೆ ಕುತೂಹಲ ಕೆರಳಿಸಿರುವುದು ನಟ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷ. ಇದೀಗ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಈ ಕುರಿತು ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ತಮ್ಮ ಪಕ್ಷದ ಚಿಹ್ನೆಯನ್ನು ನಟ …

Read More »

ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ : ಮಾಜಿ ಸಿಎಂ ಬಿಎಸ್ ವೈ ಘೋಷಣೆ

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಸಿಸುವ ಮಾತೇ ಇಲ್ಲ ಎಂದು . ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ತರಲು ಪ್ರಯತ್ನಿಸಲಾಗುವುದು. ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಎಂದು ಹೇಳಿದ್ದಾರೆ. ನಮ್ಮೆಲ್ಲರಿಗೂ ಹೆಚ್.ದೇವೇಗೌಡರೇ ಆದರ್ಶವಾಗಿದ್ದಾರೆ. ಇದು ನನ್ನ …

Read More »

SC/ST ಮೀಸಲಾತಿ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್,… ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. …

Read More »

ನನ್ನ ಮರ್ಮಾಂಗಕ್ಕೆ ಗುದ್ದುತ್ತಿದ್ದ” ಪ್ರಸಿದ್ಧ ನಿರ್ಮಾಪಕನ ವಿಕೃತ ಮನಸ್ಥಿತಿ ಬಿಚ್ಚಿಟ್ಟ ನಟಿ

ರವಿಚಂದ್ರನ್ – ಶಿವರಾಜ್ ಕುಮಾರ್ ನಟನೆಯ ಕೋದಂಡರಾಮ, ಕಿಚ್ಚ ಸುದೀಪ್ ಅಭಿನಯದ ನಮ್ಮಣ್ಣ ಸೇರಿದಂತೆ ಕನ್ನಡ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ನಟಿ ಫ್ಲೋರಾ ಸೈನಿ ಅಲಿಯಾಸ್ ಆಶಾ ಸೈನಿ ಅವರ ವೈಯಕ್ತಿಕ ಜೀವನದ ದುರಂತ ಕಥೆಯಿದು. ಪ್ರಸಿದ್ಧ ನಿರ್ಮಾಪಕ ಗೌರಂಗ್ ದೋಷಿ ಜೊತೆ ಅನುಭವಿಸಿದ ನರಕಯಾತನೆ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಅವರ ಬಾಯ್‌ಫ್ರೆಂಡ್‌ ಆಗಿದ್ದ ಪ್ರಸಿದ್ಧ ನಿರ್ಮಾಪಕ ಗೌರಂಗ್ ದೋಷಿ ಅವರ ಜೊತೆ ತಾವು ಅನುಭವಿಸಿದ ಚಿತ್ರಹಿಂಸೆಯನ್ನು ಫ್ಲೋರಾ ಸೈನಿ …

Read More »

ನನಗೆ ಬೆದರಿಕೆ ಕರೆ ಬಂದಾಗ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರು:ಯು.ಟಿ ಖಾದರ್

ಬೆಂಗಳೂರು: ಇಂದು ವಿಧಾನಸಭೆ ಕಲಾಪದಲ್ಲಿ ಬಿ.ಎಸ್‌ ಯಡಿಯೂರಪ್ಪ ಕೊನೆಯ ಅಧಿವೇಶದ ಭಾಷಣ ಮಾಡಿದ್ದರು. ಇದಕ್ಕೆ ಯು.ಟಿ.ಖಾದರ್​ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಬೆದರಿಕೆ ಕರೆ ಬಂದಾಗ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರು ಎಂದು ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಬಿ.ಎಸ್‌ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರಿಂದ ಮುಕ್ತವಾಗಿ ಓಡಾಡಲು ಸಾಧ್ಯವಾಯ್ತು. ಜನರ ಕೆಲಸ ಫುಟ್​​ಬಾಲ್ ರೀತಿ ಆಗಬಾರದು. ಆಧಿಕಾರಿಗಳು ಕೆಲಸ ಮಾಡಬೇಕು, ನಾವು ನೇರಾನೇರ ಇರಬೇಕು. ಎಲ್ಲವನ್ನೂ ಗಳಿಸಿ ಪರಿಸ್ಥಿತಿ ವಿಷಮವಾದರೆ …

Read More »

ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಭಾಗ-2 ಶೀಘ್ರದಲ್ಲೇ ತೆರೆಗೆ

ಬೆಂಗಳೂರು: ಇತ್ತೀಚೆಗೆ, ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ನಿರ್ಮಾಪಕರು ಚಿತ್ರದ ಭಾಗ-2 ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧವಾಗಿದೆ ಎಂದು ಖಚಿತಪಡಿಸಿದ್ದಾರೆ ಮತ್ತು ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಪ್ರಸ್ತುತ ಭರದಿಂದ ಸಾಗುತ್ತಿವೆ.   ಈ ಮಧ್ಯೆ, ಕಾಂತಾರ ಭಾಗ-2ರಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲು ಚಿತ್ರತಂಡ ರಜನಿಕಾಂತ್ ಅವರನ್ನು ಸಂಪರ್ಕಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಹಾಗಾಗಿ ಚಿತ್ರತಂಡದಿಂದ ಅಧಿಕೃತ ಪ್ರಕಟಣೆ …

Read More »

ಹಗರಣ ಮುಚ್ಚಿಕೊಳ್ಳಲು ಬೊಮ್ಮಾಯಿಯಿಂದ ಸುಳ್ಳು ಆರೋಪ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ‘ಬಿಜೆಪಿ ಸರ್ಕಾರದ ವಿರುದ್ಧದ ಶೇಕಡ 40ರಷ್ಟು ಕಮಿಷನ್‌ ಆರೋಪ ಹಾಗೂ ಸಾಲು ಸಾಲಾಗಿ ಹೊರಬರುತ್ತಿರವ ಹಗರಣಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಸದನದಲ್ಲಿ ಅವರು ಮಾಡಿರುವ ಯಾವ ಆರೋಪಗಳಿಗೂ ಆಧಾರವಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.   ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅರ್ಕಾವತಿ ಬಡಾವಣೆ ನಿರ್ಮಾಣ ಪ್ರಾರಂಭವಾದದ್ದು 2003ರಲ್ಲಿ. ನಾನು ಅಧಿಕಾರಕ್ಕೆ ಬರುವ ಮೊದಲೇ 2,750 …

Read More »