Breaking News

ರಾಜ್ಯ

ಹದಗೆಟ್ಟ ಕೇಜ್ರಿವಾಲ್ ಆರೋಗ್ಯ

ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದು, ಇದನ್ನು ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟವು ಜುಲೈ 30ರಂದು ಜಂತರ್‌ ಮಂತರ್‌ನಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ. ‘ಅರವಿಂದ ಕೇಜ್ರಿವಾಲ್‌ ಅವರನ್ನು ಜೈಲಿನಲ್ಲಿ ಕೊಲ್ಲಲು ಬಿಜೆಪಿ ಸಂಚು ರೂಪಿಸುತ್ತಿದೆ. ಅಲ್ಲದೆ, ಕೇಜ್ರಿವಾಲ್‌ ಅವರ ಜೀವನದೊಂದಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಲೆಫ್ಟಿನಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಆಟವಾಡುತ್ತಿದ್ದಾರೆ’ ಎಂದು ಪಕ್ಷ …

Read More »

17 ಪಿಎಸ್‌ಐಗಳ ವರ್ಗಾವಣೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ ಠಾಣೆಗಳಿಗೆ ಆಂತರಿಕ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ. ಇತ್ತೀಚೆಗೆ ಒಂದೇ ಠಾಣೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸಿದ್ದ ಎಎಸ್‌ಐ, ಹೆಡ್‌ ಕಾನ್‌ಸ್ಟೆಬಲ್‌, ಕಾನ್‌ಸ್ಟೆಬಲ್‌ಗಳನ್ನು ಕೌನ್ಸ್‌ಲಿಂಗ್‌ ಮೂಲಕ ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿತ್ತು.

Read More »

ಹುಬ್ಬಳ್ಳಿ: ₹173 ಕೋಟಿ ನೀರಿನ ಕರ ಬಾಕಿ

ಹುಬ್ಬಳ್ಳಿ: ಅವಳಿ ನಗರದಲ್ಲಿ ಎಲ್‌ ಆಯಂಡ್ ಟಿ ಕಂಪನಿಯಿಂದ 24X7 ಕುಡಿಯುವ ನೀರಿನ ಕಾಮಗಾರಿ ಕುಂಟುತ್ತಾ ಸಾಗಿದ್ದು, ನೀರಿನ ಕರ ಬಾಕಿ ವಸೂಲಿ ಸವಾಲಾಗಿದೆ. ಈ ನಡುವೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ನೀರಿನ ಕರ ಸಂಗ್ರದಲ್ಲಿ ಶೇ 94ರಷ್ಟು ಪ್ರಗತಿ ಸಾಧಿಸಿದೆ. ಏಪ್ರಿಲ್‌, ಮೇ, ಜೂನ್‌ ತಿಂಗಳಲ್ಲಿ ₹13.1 ಕೋಟಿ ನೀರನ ಕರ ಸಂಗ್ರಹಿಸುವ ಗುರಿ ಇತ್ತು. ಅದರಲ್ಲಿ ಈಗಾಗಲೇ ₹12.18 ಕೋಟಿ ಸಂಗ್ರಹಿಸಲಾಗಿದೆ. ಅವಳಿ …

Read More »

ಮನೆಗಳಿಗೆ ನುಗ್ಗಿದ ನೀರು; ಆಕ್ರೋಶ

ಬೆಳಗಾವಿ: ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಸತತ ಮಳೆಯಿಂದಾಗಿ ನಗರದ ಹೊರವಲಯದ ಬಸವನ ಕುಡಚಿಯ ಹಲವು ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿ, ಜನರು ಪರದಾಡುವಂತಾಯಿತು. ಕೆಎಲ್‌ಇ ಸಂಕಲ್ಪ ವೆಲ್‌ನೆಸ್‌ ಸೆಂಟರ್‌ಗೆ ಸಹ ನೀರು ನುಗ್ಗಿದ ಪರಿಣಾಮ ಔಷಧಗಳು ಮತ್ತು ವೈದ್ಯಕೀಯ ಪರಿಕರಗಳಿಗೆ ಹಾನಿಯಾಯಿತು. ಈ ನೀರು ಹೊರಹಾಕಲು ಮಹಾನಗರ ಪಾಲಿಕೆಯವರು ಬುಧವಾರ ಬೆಳಿಗ್ಗೆಯಿಂದ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದು ಕಂಡುಬಂತು. ‘ವಾರದಿಂದ ನಮ್ಮಲ್ಲಿ ಸತತ ಮಳೆಯಾಗುತ್ತಿದೆ. …

Read More »

ಮೈದುಂಬಿ ಹರಿಯುತ್ತಿರುವ ಮಲಪ್ರಭೆ

ಎಂ.ಕೆ.ಹುಬ್ಬಳ್ಳಿ: ನಿರಂತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲಪ್ರಭೆ ಮೈದುಂಬಿ ಹರಿಯುತ್ತಿದ್ದಾಳೆ. ಖಾನಾಪುರದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಮಲಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎಂ.ಕೆ.ಹುಬ್ಬಳ್ಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದಲ್ಲಿ ಮಲಪ್ರಭಾ ನದಿ ಮಧ್ಯದಲ್ಲಿರುವ ಶರಣೆ ಗಂಗಾಂಬಿಕಾ ಐಕ್ಯಮಂಟಪದ ಸುತ್ತ ಮಲಪ್ರಭೆಯ ಮೈದುಂಬಿ ಹರಿಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಮಳೆಯ ಆರ್ಭಟ ಮುಂದುವರಿದಿದ್ದು, ದಿನದಿಂದ ದಿನಕ್ಕೆ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ಸದ್ಯ ಎಂ.ಕೆ‌.ಹುಬ್ಬಳ್ಳಿ ಬಳಿಯ …

Read More »

ಜಿಲ್ಲೆಯಲ್ಲಿ ಮುಂದುವರೆದ ಮಳೆ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಎಲ್ಲಾ ಸಿದ್ದತೆ ಮಾಡಿಕೊಳ್ಳಲು ಸೂಚನೆ: ಸತೀಶ ಜಾರಕಿಹೊಳಿ

ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದಿರುವ ಕಾರಣ ಮಾನ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಶ್ರೀ ಸತೀಶ ಜಾರಕಿಹೊಳಿ ರವರು ರಾಯಬಾಗ ತಾಲೂಕಿನ ಕುಡಚಿ ಸೇತುವೆ, ಹಳೆ-ದಿಗ್ಗೇವಾಡಿ ಮತ್ತಿತರ ಪ್ರವಾಹ ಪ್ರದೇಶಗಳ ವೀಕ್ಷಣೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌ ರವರು ಜಿಲ್ಲಾ ಪೋಲೀಸ್‌ ಅಧೀಕ್ಷಕರು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪರೀಕ್ಷಾರ್ಥ ಐ.ಎ.ಎಸ್.‌ ಅಧಿಕಾರಿ ಹಾಗೂ ಇತರೆ ಇಲಾಖಾ ಅಧಿಕಾರಿಗಳ ಜೊತೆಯಲ್ಲಿ ಹಾಜರಿದ್ದರು. ಜಿಲ್ಲಾ ಉಸ್ತುವಾರಿ ಮಂತ್ರಿಗಳ ಸೂಚನೆಯಂತೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು …

Read More »

ಗಡ್ಕರಿ,ಕೋರೆ ಭೇಟಿ: ಚರ್ಚೆ

ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಭೇಟಿಯಾಗಿ, ವಿವಿಧ ಕಾಮಗಾರಿಗಳ ಕುರಿತು ಚರ್ಚಿಸಿದರು. ‘ಅಥಣಿ ತಾಲ್ಲೂಕಿನ ಮುರಗುಂಡಿಯಿಂದ ಕಾಗವಾಡ, ಚಿಕ್ಕೋಡಿ ಮಾರ್ಗವಾಗಿ ಗೋಟೂರವರೆಗೆ (87 ಕಿ.ಮೀ) ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ಶಿರಗುಪ್ಪಿಯಿಂದ ಅಂಕಲಿಯವರೆಗೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಮಂಜೂರುಗೊಳಿಸಿರುವುದು ಸ್ವಾಗತಾರ್ಹ. ಈ ಕಾಮಗಾರಿ ಬೇಗ ಆರಂಭಿಸಬೇಕು’ ಎಂದು ಕೋರಿದರು. ‘ನವೀಕರಿಸಬಹುದಾದ ಎಥೆನಾಲ್ ಬಳಕೆಯಿಂದ ರೈತರಿಗೆ …

Read More »

ಮದುವೆ ಆಗುವಂತೆ ಕೇಳಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಲೆ

ಆನಂದಪುರ: ಮದುವೆ ಆಗುವಂತೆ ಕೇಳಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಲೆ ಮಾಡಿ ಸಮೀಪದ ಮುಂಬಾಳು ಗ್ರಾಮದ ರೈಲ್ವೆ ಹಳಿ ಪಕ್ಕ ಶವ ಹೂತು ಹಾಕಿದ್ದ ಪ್ರಕರಣವನ್ನು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಕೊಪ್ಪ ತಾಲ್ಲೂಕಿನ ಗುಣವಂತೆಯ ನರ್ಸಿಂಗ್ ವಿದ್ಯಾರ್ಥಿನಿ ಸೌಮ್ಯಾ (27) ಕೊಲೆಯಾದವರು. ಸಾಗರ ತಾಲ್ಲೂಕಿನ ತಾಳಗುಪ್ಪದ ಸೃಜನ್ ಆರೋಪಿ ಯುವಕ. ತೀರ್ಥಹಳ್ಳಿಯ ಫೈನಾನ್ಸ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೃಜನ್‌, ಪರಿಶಿಷ್ಟ ಸಮುದಾಯಕ್ಕೆ ಸೇರಿದ ಸೌಮ್ಯಾರನ್ನು ಪ್ರೀತಿಸಿದ್ದ. …

Read More »

UPSC, SSC ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ:‌ ಕೇಂದ್ರ ಸರ್ಕಾರ

ನವದೆಹಲಿ: ‘ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ), ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ), ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಮತ್ತು ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್‌) ಕಳೆದ ಎರಡು ವರ್ಷಗಳಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಯಾವುದೇ ಪ್ರಕರಣ ವರದಿಯಾಗಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ. ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜೀತೇಂದ್ರ ಸಿಂಗ್‌ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು …

Read More »

ಹುಬ್ಬಳ್ಳಿ: ರೈತರಿಗೆ ನೆರವಾದ ‘ಕೃಷಿ ಸಿಂಚಾಯಿ’

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ ಯೋಜನೆಗೆ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2023-24ರ ಸಾಲಿನಲ್ಲಿ 11,143 ಜನ ರೈತರು ಅರ್ಜಿ ಸಲ್ಲಿಸಿದ್ದು, ಇವರಲ್ಲಿ 8,009 ರೈತರಿಗೆ ಯೋಜನೆಯ ಲಾಭ ದಕ್ಕಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಇದು ಅತ್ಯಧಿಕವಾಗಿದೆ.   ಉತ್ತಮ ಇಳುವರಿ ಪಡೆಯಲು ಹಾಗೂ ಬೆಳೆಗೆ ಆಗುವ ನೀರಿನ ತೊಂದರೆ ನೀಗಿಸಲು 2015ರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ಯೋಜನೆ ಜಾರಿಗೆ ತರಲಾಗಿದೆ. ಯೋಜನೆಯ ಲಾಭ ಪಡೆಯುತ್ತಿರುವ ರೈತರ ಸಂಖ್ಯೆ ವರ್ಷದಿಂದ …

Read More »