Breaking News

ರಾಜ್ಯ

ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ; ಸಿಎಂ

ವಿಜಯಪುರ: ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಇದ್ದಾಗ ಶೇ.35ರಷ್ಟಿತ್ತು. ಈಗ ರಾಜ್ಯದಲ್ಲಿ ತೈಲ ದರ 102.86 ಪೈಸೆ ಆಗಿದೆ. ತಮಿಳುನಾಡು ಸಮ ಆಗಿದೆ. ಆಂಧ್ರಪ್ರದೇಶದಲ್ಲಿ 109 ರೂ ಇದೆ. ಹೈದರಾಬಾದ್ ನಲ್ಲಿಯೂ ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ 104 …

Read More »

₹2.30 ಲಕ್ಷಕ್ಕೆ ಎರಡು ಮೇಕೆ ಮಾರಾಟ

ರಾಯಬಾಗ(ಬೆಳಗಾವಿ ಜಿಲ್ಲೆ): ಬಕ್ರೀದ್‌ ಹಿನ್ನೆಲೆಯಲ್ಲಿ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ರೈತ ಮಹೇಶ ಖೋತ ಅವರಿಗೆ ಸೇರಿದ ಎರಡು ಮೇಕೆಗಳು ಒಟ್ಟು ₹2.30 ಲಕ್ಷಕ್ಕೆ ಮಾರಾಟವಾಗಿವೆ. ‘ಸಾಮಾನ್ಯವಾಗಿ ಮೇಕೆ ದರ ₹10 ಸಾವಿರ ದಿಂದ ₹25 ಸಾವಿರ ಇರುತ್ತದೆ. ಆದರೆ ನನ್ನ ಎರಡೂ ಮೇಕೆಗಳು ಕ್ರಮವಾಗಿ ₹1.20 ಲಕ್ಷ ಮತ್ತು ₹1.10 ಲಕ್ಷಕ್ಕೆ ಮಾರಾಟವಾಗಿವೆ. ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾದ ಗ್ರಾಹಕರು ಖರೀದಿಸಿದರು’ ಎಂದು ಮಹೇಶ ಖೋತ ತಿಳಿಸಿದರು. ‘ನಮ್ಮದು …

Read More »

ಪ್ರಾಣಿಗಳ ಬಾಯಾರಿಕೆ ತಣಿಸುವ ರೈತ

ಬೈಲಹೊಂಗಲ: ಬಿಸಿಲಿನ ಬೇಗೆಯಿಂದ ಬಳಲಿದ ಪಶು, ಪಕ್ಷಿ, ದನ-ಕರು, ಕುರಿಗಳಿಗೆ ನಿತ್ಯವೂ ಕುಡಿಯಲು ಉಚಿತವಾಗಿ ನೀರು ಪೂರೈಸುತ್ತಿರುವ ರೈತ ಬಾಬು ನಾಯ್ಕರ ಅವರ ಸಾಮಾಜಿಕ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಪಟ್ಟಣದ ಹೊಸೂರ ರಸ್ತೆಯ ತಮ್ಮ ಬರಡು ಕೃಷಿ ಭೂಮಿಯಲ್ಲಿರುವ ಹೊಂಡದಲ್ಲಿ ಬೋರ್‌ವೆಲ್ ಮೂಲಕ ಎರಡು ಹೊತ್ತು ನೀರು ಸಂಗ್ರಹಿಸಿ, ನಿತ್ಯ ನೂರಾರು ಕುರಿಗಳ ದಾಹ ತಣಿಸುತ್ತಿದ್ದಾರೆ. ಬಿಸಿಲಿನ ದಗೆಗೆ ಬಾಯಾರಿದ ಕುರಿಗಳು ದಾರಿ ಮಧ್ಯೆ ಈ ರೈತನ ಜಮೀನಿಗೆ ಬಂದು …

Read More »

ನಕಲಿ ವೈದ್ಯ ಲೀಸ್‌ಗೆ ಪಡೆದಿದ್ದ ತೋಟದಲ್ಲಿ 3 ಭ್ರೂಣ ಪತ್ತೆ

ಕಿತ್ತೂರು: ಹೆಣ್ಣು ಶಿಶು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡ್ ಖಾನ್ ಲೀಸ್ ಮೇಲೆ ಮಾಡಿದ ತೋಟಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ಭಾನುವಾರ ಭೇಟಿ ನೀಡಿ ತಪಾಸಣೆ ನಡೆಸಿದ್ದು, ನೆಲದಡಿ ಮುಚ್ಚಲಾಗಿದ್ದ ಮೂರು ಭ್ರೂಣ ಪತ್ತೆಯಾಗಿವೆ. ತಿಗಡೊಳ್ಳಿ ಮಾರ್ಗದ ಬಸರಕೋಡ ಗ್ರಾಮ ವ್ಯಾಪ್ತಿಯ ಜಮೀನಿನಲ್ಲಿ ಭ್ರೂಣಗಳು ಪತ್ತೆಯಾಗಿದ್ದು, ತಪಾಸಣೆ ಮುಂದುವರಿದಿದೆ. ‘ಹೆಣ್ಣು ಶಿಶು ಮಾರಾಟ ಪ್ರಕರಣದಲ್ಲಿ ಬಂಧಿತನಾಗಿರುವ …

Read More »

ಸರ್ಕಾರದಿಂದ ವಾಹನ ಸವಾರರಿಗೆ ಗ್ಯಾರಂಟಿ ಬರೆ: ಕಡಾಡಿ

ಮೂಡಲಗಿ:ಲೋಕಸಭಾ ಚುನಾವಣೆ ನಂತರ ರಾಜ್ಯದ ವಾಹನ ಸವಾರರಿಗೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ 3 ರೂ, ಡೀಸೆಲ್ 3.50 ರೂ. ಏರಿಸುವ ಮೂಲಕ ಗ್ಯಾರಂಟಿ ಬರೆ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ. ಅಂತರಾಷ್ಟ್ರೀ ಯ ತೈಲಬೆಲೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ಭಾರತೀಯ ತೈಲ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ. ಇಲ್ಲಿ ಯಾವುದೇ ಏರಿಕೆಗಳು ಇಲ್ಲದಿದ್ದರೂ ಕೂಡ ರಾಜ್ಯ ಸರ್ಕಾರ ಏಕಾಏಕಿ …

Read More »

ಕರ್ನಾಟಕದ ಎರಡನೇ ರಾಜಧಾನಿಯಾಗಲಿಬೆಳಗಾವಿ

ಬೆಳಗಾವಿ: ನಗರದ ಎಸ್‌. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತಾಯಿ ಭುವನೇಶ್ವರಿ, ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಕೇಶಿ, ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣರ ಪುತ್ಥಳಿಗಳ ಮೆರವಣಿಗೆ, ವೀರಗಾಸೆ ಕಲಾಪ್ರದರ್ಶನ, ಸುಮಾರು 250 ಜನ ನಿರಾಶ್ರಿತರಿಗೆ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಂಗೀತ ರಸಮಂಜರಿ ಕಾರ್ಯ ಕ್ರಮಗಳನ್ನೊಳಗೊಂಡಂತೆ ಉಸಿರುಗನ್ನಡ ಕನ್ನಡ ಉತ್ಸವವನ್ನು ಇತ್ತೀಚೆಗೆ ಅರ್ಥಪೂರ್ಣ ವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಗನೂರು ರುದ್ರಾಕ್ಷಿಮಠದ ಪೀಠಾಧಿಪತಿಗಳಾದ ಡಾ. ಅಲ್ಲಮಪ್ರಭು ಸ್ವಾಮಿಗಳು, …

Read More »

ಅಗತ್ಯವಿದ್ದರೆ ಗೋವಾ ಸಿಎಂ ಜತೆ “ಕಳಸಾ ಬಂಡೂರಿ’ ಚರ್ಚೆ: ಶೆಟ್ಟರ್‌

ಬೆಳಗಾವಿ: ನಾಲ್ಕು ಜಿಲ್ಲೆಗಳಿಗೆ ಅನುಕೂಲವಾಗುವ ಮಹತ್ವಾಕಾಂಕ್ಷೆಯ ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ನನ್ನ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಗತ್ಯವಿದ್ದರೆ ಗೋವಾ ಸಿಎಂ ಜತೆ ಮಾತುಕತೆ ಸಹ ನಡೆಸಲಾಗುವುದು ಎಂದು ಬೆಳಗಾವಿ ಕ್ಷೇತ್ರದ ನೂತನ ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳಸಾ ಬಂಡೂರಿ ಯೋಜನೆಯಡಿ ಈಗಾಗಲೇ ಕರ್ನಾಟಕಕ್ಕೆ 13 ಟಿಎಂಸಿ ನೀರು ಹಂಚಿಕೆಯಾಗಿದೆ. ಅಧಿಸೂಚನೆ ಸಹ ಹೊರಡಿಸಲಾಗಿದೆ. ಆದರೆ, ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿ ಸಿಗದಿರುವುದರಿಂದ ಸಮಸ್ಯೆಯಾಗಿದೆ. …

Read More »

ಬಡಮಕ್ಕಳನ್ನು ಭೇಟಿಯಾದ ನಟ ಕಿಚ್ಚ ಸುದೀಪ್

ಮೈಸೂರು: ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರು ಇಂದು ಮೈಸೂರಿನಲ್ಲಿ ಮಕ್ಕಳೊಂದಿಗೆ ಕಾಲ ಕಳೆಯುತ್ತಿದ್ದಾರೆ. ಮೈಸೂರಿನಲ್ಲಿ ಕಿಚ್ಚ ಸುದೀಪ್ ಬಡಮಕ್ಕಳನ್ನು ಭೇಟಿಯಾಗಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಅರ್ಜುನವರ ಜ್ಯುವೆಲರ್ಸ್​ ಕಡೆಯಿಂದ ಒಂದು ದಿನದ ಈ ಕಾರ್ಯಕ್ರಮದಲ್ಲಿ ನಟ ಸುದೀಪ್ ಅವರು ಇದೀಗ ಮೈಸೂರಿನಲ್ಲಿ ನಿರ್ಗತಿಕ ಮಕ್ಕಳ ಜತೆ ಕಾಲ ಕಳೆಯುತ್ತಿದ್ದಾರೆ. ಸಾಧ್ಯವಾದಷ್ಟೂ ಮಕ್ಕಳಿಗೆ ಸ್ವತಃ ತಾವೇ ತಿಂಡಿಯನ್ನು ತಮ್ಮ ಕೈಯಾರೆ ಕೊಡುತ್ತಿರುವ ನಟ ಕಿಚ್ಚ ಸುದೀಪ್ …

Read More »

ಜನರ ಕಿವಿಗೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ಕಾಂಗ್ರೆಸ್ ಸರ್ಕಾರ-ಸಿ.ಟಿ ರವಿ

ಬೆಂಗಳೂರು, ಜೂನ್.16: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮೇಲೆ 3 ರೂಪಾಯಿ, ಡಿಸೇಲ್ ಬೆಲೆಯಲ್ಲಿ ಮೂರೂವರೆ ರೂಪಾಯಿ ಏರಿಕೆ ಮಾಡಿದೆ. ಸರ್ಕಾರದ ಈ ನಡೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಕಿವಿಯಲ್ಲಿ ದಾಸವಾಳ ಮುಡಿದು, ಕೈಯಲ್ಲಿ ತೆಂಗಿನ ಚಿಪ್ಪು ಹಿಡಿದು ಕಾಂಗ್ರೆಸ್‌ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪೆಟ್ರೋಲ್‌ ಹಾಗೂ ಡಿಸೇಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ವಿಧಾನ …

Read More »

ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿ ಎದ್ದಿದೆ. ಹೀಗಾಗಿ ಜನರ ಮೇಲೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ಬರೆ ಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕುಟುಕಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣೆ ಮುನ್ನ ಬೆಲೆ ಏರಿಕೆ ಇಟ್ಟುಕೊಂಡು ರಾಜಕಾರಣ ಮಾಡಿದರು. ಇವತ್ತು ಪೆಟ್ರೋಲ್, ಡಿಸೇಲ್ ದರ 3 ರೂ. ಹೆಚ್ಚಾಗಿದ್ದು ನೋಡಿದರೆ ಕರ್ನಾಟಕದಲ್ಲಿ ಅತೀ ಹೆಚ್ಚು ಬೆಲೆ ಆಗುತ್ತದೆ. ಸಾರಿಗೆ …

Read More »