Breaking News

ರಾಜ್ಯ

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌: ‘ತರಬೇತಿ ರಹಿತ ವೇತನ ಶ್ರೇಣಿʼ ನಿಗಧಿಪಡಿಸಿ ಸರ್ಕಾರ ಆದೇಶ

ಬೆಂಗಳೂರು : ತರಬೇತಿ ಹೊಂದದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತರಬೇತಿ ಹೊಂದಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿಯನ್ನು ನಿಗಧಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ ನಿರ್ಧರಿಸಿರುವುದನ್ನು ಹಂತ ಹಂತವಾಗಿ ವಿವರಿಸಲಾಗಿರುತ್ತದೆ. ಪ್ರಯುಕ್ತ, ಉಲ್ಲೇಖ(2)ರ ಅನುಬಂಧ-02 ರಲ್ಲಿನ ಸೂಚನೆಗಳನ್ನಯ ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ …

Read More »

ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

ಹುಬ್ಬಳ್ಳಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದೇ ಚುರುಕುತನದಿಂದ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ವರ್ತನೆಯಾಗಿದೆ. ಸೆಲೆಬ್ರಿಟಿ, ಅಧಿಕಾರದಲ್ಲಿರುವವರು ಯಾರೇ ಆದರೂ ಈ ರೀತಿ ನಡೆದುಕೊಳ್ಳಲು ಅಧಿಕಾರವಿಲ್ಲ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾವುದೇ …

Read More »

ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಚೆನ್ನೈ: ಖ್ಯಾತ ನಟರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ. ಕಾಲಿವುಡ್‌ ನಟ ಪ್ರದೀಪ್ ವಿಜಯನ್ ಬುಧವಾರ (ಜೂನ್ 12 ರಂದು) ಚೆನ್ನೈನ ಪಲವಕ್ಕಂನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಟನ ಸ್ನೇಹಿತ ಕಳೆದ ಎರಡು ದಿನಗಳಿಂದ ಪ್ರದೀಪ್ ವಿಜಯನ್ ಅವರಿಗೆ ಫೋನ್‌ ಮೂಲಕ ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ ಕರೆಯನ್ನು ರಿಸೀವ್‌ ಮಾಡದ ಕಾರಣ ಒಬ್ಬ ಸ್ನೇಹಿತ ಮನೆಗೆ ಹೋಗಿ ನೋಡಿದಾಗ ಪ್ರದೀಪ್‌ ಶವವಾಗಿ ಪತ್ತೆಯಾಗಿದ್ದಾರೆ. ಆ ಬಳಿಕ …

Read More »

ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ

ಕುಣಿಗಲ್ : ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕುಣಿಗಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದ ರಾಮಚಂದ್ರ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ತಗೆರೆ ಪಾಳ್ಯದ ಸೀನಾ ಅಲಿಯಾಸ್ ಶ್ರೀನಿವಾಸ್ (34), ಉಮೇಶ (32), ಚನ್ನಪ್ಪಗೌಡನಪಾಳ್ಯ ಗುರುರಾಜ್ (40), ಬಿದನಗೆರೆ ಗ್ರಾಮದ ಶಿವರಾಮ್ (38), ಸೊಬಗಾನಹಳ್ಳಿ ಗ್ರಾಮದ ಲಕ್ಷ್ಮಣ (36) ಅವರನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಜೂ 10 ಸೋಮವಾರ …

Read More »

ಕೊಲೆ ಕೇಸ್ ಬೆನ್ನಲ್ಲೇ ಹೊರಬಿತ್ತು ನಟ ದರ್ಶನ್ ಮತ್ತೊಂದು ಪ್ರಕರಣ

ಕೊಲೆ ಕೇಸ್ ಬೆನ್ನಲ್ಲೇ ಹೊರಬಿತ್ತು ನಟ ದರ್ಶನ್ ಮತ್ತೊಂದು ಪ್ರಕರಣ ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರ ಇನ್ನಷ್ಟು ಕರಾಳ ಮುಖಗಳು ಬಯಲಾಗುತ್ತಿವೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲ್ಲೇ ಮತ್ತಷ್ಟು ಹಳೆ ಪ್ರಕರಣಗಳು ಹೊರಬರುತ್ತಿವೆ. ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಪರಿಹಾರ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟು ಹೆದರಿಸಿ ವಿಕೃತಿ ಮೆರೆದಿದ್ದರು. ಪರಿಣಾಮ ಬೇರೆ ಆಗುತ್ತದೇ ಎಂದು …

Read More »

ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’

ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ಬೆಂಗಳೂರು : ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ರಾಜ್ಯ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ …

Read More »

ಇಸ್ಟೀಟ್​ ಅಡ್ಡೆ ಮೇಲೆ ದಾಳಿ: ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಕೋಲಾರ, ಜೂ.12: ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಬಳಿ ಇಸ್ಪೀಟ್​(Gambling) ಆಡುತ್ತಿದ್ದ ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೆರೆಗೆ ಹಾರಿ ತನ್ನ ಜೀವವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ನರಸಿಂಹ (45) ಮೃತ ರ್ದುದೈವಿ. ಗುಡಸವಾರ ಪಲ್ಲಿ ಗ್ರಾಮದ ಕೊಂಡರೆಡ್ಡಿಚೆರವು ಎನ್ನುವ ಕೆರೆಯ ದಡದಲ್ಲಿ ಇಸ್ಪೀಟ್​ ಅಡ್ಡೆ ನಡೆಯುತ್ತಿದ್ದು, ಅಲ್ಲಿ ಹತ್ತು ಹನ್ನೆರಡು ಜನ ಇಸ್ಪೀಟ್​ ಆಡುತ್ತಿದ್ದರು. ಈ ವೇಳೆ ಪೊಲೀಸರು ಬರ್ತಿದ್ದಾರೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಅಲ್ಲಿದ್ದವರೆಲ್ಲ ಚೆಲ್ಲಾಪಿಲ್ಲಿಯಾಗಿ ಓಡಿ ಹೋಗಿದ್ದಾರೆ. ಅದರಲ್ಲಿ …

Read More »

ರೇಣುಕಾಸ್ವಾಮಿ ಹತ್ಯೆ; ಕಠಿಣ ಶಿಕ್ಷೆಗೆ ಒತ್ತಾಯ

ಹುಬ್ಬಳ್ಳಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕುರಿತು ಸಮರ್ಪಕವಾಗಿ ತನಿಖೆ ನಡೆಸಿ, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆ ವತಿಯಿಂದ ಆಗ್ರಹಿಸಲಾಯಿತು. ನಗರದ ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್‌ ಕಚೇರಿ ಸಿಬ್ಬಂದಿಗೆ ಸಂಘಟನೆಯ ಮುಖಂಡರು ಈ ಕುರಿತು ಬುಧವಾರ ಮನವಿ ಸಲ್ಲಿಸಿದರು. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ₹1 ಕೋಟಿ ಪರಿಹಾರ ನೀಡಬೇಕು. ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಯುವ …

Read More »

ತೋಟದಲ್ಲಿ ಮೊಸಳೆ ಕುಟುಂಬ

ಚಿಕ್ಕೋಡಿ: ತಾಲ್ಲೂಕಿನ ಕಲ್ಲೋಳ ಗ್ರಾಮದ ಹೊರ ವಲಯದಲ್ಲಿ ಕೃಷ್ಣಾ ಹಾಗೂ ದೂಧಗಂಗಾ ನದಿ ದಡದ ಗ್ರಾಮಗಳಲ್ಲಿ ಮತ್ತೆ ಮೊಸಳೆ ಉಪಟಳ ಹೆಚ್ಚಾಗಿದೆ. ಪ್ರತಿ ಬಾರಿ ಮುಂಗಾರು ಮಳೆ ಆರಂಭಕ್ಕೆ ಕೃಷ್ಣಾ ನದಿ ನೀರಿನೊಂದಿಗೆ ಹರಿದುಬರುವ ಮೊಸಳೆಗಳು ಗ್ರಾಮಸ್ಥರ ನಿದ್ದೆಗೆಡಿಸಿವೆ. ಸಂಗಮ ಸ್ಥಳದಿಂದ 500 ಮೀಟರ್ ದೂರದಲ್ಲಿ ಒಂದು ಹೆಣ್ಣು ಹಾಗೂ ಒಂದು ಗಂಡು ಮೊಸಳೆ ಪತ್ತೆಯಾಗಿವೆ. ಅಲ್ಲದೇ ಏಳು ಮೊಸಳೆ ಮರಿಗಳು ಕೂಡ ಪತ್ತೆಯಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. 5-6 …

Read More »

ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಕಲ್ಲೆದ್ದ ರಸ್ತೆಯಲ್ಲೇ ಮಕ್ಕಳ ನಡಿಗೆ!

ಚನ್ನಮ್ಮನ ಕಿತ್ತೂರು: ಕಾಲು ದಾರಿ ಮೇಲೆ ಮುಷ್ಟಿಗಾತ್ರದ ಚೂಪನೆಯ ಕಲ್ಲುಗಳು ಎದ್ದು ಕುಳಿತಿವೆ. ಸ್ಮಶಾನಕ್ಕೂ ಇದೇ ದಾರಿ ಅವಲಂಬನೆ. ಮಳೆಯಾದರೆ ಸಾಕು ಮನೆಯೊಳಗೆ ನೀರು ನುಗ್ಗಿ ಬದುಕೇ ಯಾತನಾಮಯ ಆಗುತ್ತದೆ. ಇದು ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತಿಮ್ಮಾಪುರ ಗ್ರಾಮದ ಅಂಬೇಡ್ಕರ್ ಕಾಲೊನಿ ಮಕ್ಕಳು ಮತ್ತು ನಾಗರಿಕರ ಗೋಳು.   ‘ಕಾಲೊನಿಯಿಂದ ಸುಮಾರು ಅರ್ಧ ಕಿ.ಮೀ ದೂರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಮಕ್ಕಳು ರಸ್ತೆ ಮೇಲೆ ಎದ್ದು …

Read More »