Breaking News
Home / ರಾಜ್ಯ (page 782)

ರಾಜ್ಯ

ರಾಯಚೂರು: ಡಾಬಾಗೆ ಅನಧಿಕೃತ ವಿದ್ಯುತ್ ಕೊಡುತ್ತಿದ್ದ ಜೆಸ್ಕಾಂ ಎಂಜಿನಿಯರ್ ಅಮಾನತು

ಸಿರವಾರ (ರಾಯಚೂರು ಜಿಲ್ಲೆ): ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ)‌ ವ್ಯಾಪ್ತಿಯ ಸಿರವಾರ ತಾಲ್ಲೂಕಿನ ಮಲ್ಲಟ ಉಪವಿಭಾಗದ ಶಾಖಾಧಿಕಾರಿ, ಕಿರಿಯ ಎಂಜಿನಿಯರ್ ಹಣಮಂತ್ರಾಯ ಡಿ. ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ.   ಮಲ್ಲಟ ಗ್ರಾಮದ ಶಾಂಭವಿ ದಮ್ ಬಿರಿಯಾನಿ ದಾಬಾಗೆ ಲಿಂಗಸುಗೂರು ರಸ್ತೆಯ ಸ್ಥಾವರದಿಂದ ಅನಧಿಕೃತವಾಗಿ 25 ಕೆವಿಎ ವಿದ್ಯುತ್ ಪರಿವರ್ತಕ ಮತ್ತು ವಿದ್ಯುತ್ ಮಾಪಕ ಅಳವಡಿಸಿ ಕಂಪನಿಗೆ ₹1.46 ಲಕ್ಷ ಆರ್ಥಿಕ ನಷ್ಟವನ್ನುಂಟು ಮಾಡಿದ್ದಾರೆ ಎಂದು …

Read More »

ಹಿರಿಯರ ಸೂಚನೆಯಂತೆ ಪಕ್ಷದ ಒಳಗೆ ಯಾರನ್ನೂ ಬೈಯ್ಯುವುದಿಲ್ಲ; ಶಾಸಕ ಬಸನಗೌಡ ಪಾಟೀಲ್

ಬೆಂಗಳೂರು: ಹೌದು. ಹಿರಿಯರು ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಪಕ್ಷದೊಳಗೆ ಯಾರನ್ನೂ ಬಯ್ಯುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಯಾರ ವಿರುದ್ಧವೂ ಮಾತಾಡದಂತೆ ವರಿಷ್ಠರು ಹೇಳಿದ್ದಾರಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು ಹಿರಿಯರು ಸೂಚನೆ ನೀಡಿದ್ದಾರೆ. ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚಿಸಿದ್ದಾರೆ. ಇನ್ಮುಂದೆ ಕಾಂಗ್ರೆಸ್ ಪಕ್ಷದವರನ್ನು ಮಾತ್ರ ಬೈಯ್ಯುತ್ತೇನೆ. ಪಕ್ಷದ ಒಳಗೆ ಯಾರನ್ನೂ ಬೈಯ್ಯುವುದಿಲ್ಲ ಎಂದರು. ಇದು ಪಕ್ಷದ ಬೆಳವಣಿಗೆ ಹಾಗೂ ವೈಯಕ್ತಿಕ ಬೆಳವಣಿಗೆಗೂ …

Read More »

ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಶಕ್ಕೆ ಪಡೆದ ಪೊಲೀಸರು

ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ವಿರೋಧಿಸಿದ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ನಗರದ ಚೆನ್ನಮ್ಮ ವೃತ್ತದಲ್ಲಿಂದು ವಶಕ್ಕೆ ಪಡೆದುಕೊಂಡರು. ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಚೆನ್ನಮ್ಮ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಮುತಾಲಿಕ್ ಸೇರಿದಂತೆ ಹಲವು ಕಾರ್ಯಕರ್ತರು ಟಿಪ್ಪು ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ಹೊರಹಾಕಿದರು. ಇನ್ನೂ ಇದೇ ವೇಳೆ ಶ್ರೀರಾಮ ಸೇನಾ ಕಾರ್ಯಕರ್ತರು ಹಾಗೂ ಪೊಲೀಸರ ಜೊತೆಗೆ ಮಾತಿನ ಚಕಮಕಿ ನಡೆದು …

Read More »

ಪಕ್ಷಕ್ಕೆ ಡ್ಯಾಮೆಜ್ ಆಗುವುದನ್ನ ತಡೆಯಲು ನನ್ನ ಹೇಳಿಕೆ ವಾಪಸ್ ಪಡೆದಿರುವೆ. : ಸತೀಶ ಜಾರಕಿಹೊಳಿ

ನನ್ನ ಪಕ್ಷಕ್ಕೆ ಡ್ಯಾಮೆಜ್ ಆಗುವುದನ್ನ ತಡೆಯಲು ನನ್ನ ಹೇಳಿಕೆ ವಾಪಸ್ ಪಡೆದಿರುವೆ. ನನಗೆ ಎಲ್ಲಕ್ಕಿಂತ ಪಕ್ಷ ದೊಡ್ಡದು ಹೀಗಾಗಿ ಪಕ್ಷಕ್ಕೆ ಡ್ಯಾಮೆಜ್ ಆಗಬಾರದೆಂದು ಆ ಪದ ವಾಪಸ್ ಪಡೆದಿರುವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಹಿಂದು ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ನಿನ್ನೆಯμÉ್ಟೀ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿ ಸತೀಶ್ ಜಾರಕಿಹೊಳಿ ವಿμÁದ ವ್ಯಕ್ತಪಡಿಸಿದ್ದರು. ಇಂದು ಗುರುವಾರ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ …

Read More »

ಅಕ್ಕ ಅಕ್ಕಮಹಾದೇವಿ ಅವರ ಜೀವನ ಇಡೀ ಮಹಿಳಾ ಸಂಕುಲಕ್ಕೆ ಬಹಳ ದೊಡ್ಡ ಆದರ್ಶ ಎಂದು ಗದಗ-ಡಂಬಳದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ

12ನೇ ಶತಮಾನದ ಶ್ರೇಷ್ಠ ವಚನಕಾರ್ತಿ, ಜಗದ ಅಕ್ಕ ಅಕ್ಕಮಹಾದೇವಿ ಅವರ ಜೀವನ ಇಡೀ ಮಹಿಳಾ ಸಂಕುಲಕ್ಕೆ ಬಹಳ ದೊಡ್ಡ ಆದರ್ಶ ಎಂದು ಗದಗ-ಡಂಬಳದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೆಳಗಾವಿ ಜಿಲ್ಲಾ ಪ್ರಥಮ ಕದಳಿ ಮಹಿಳಾ ಸಮಾವೇಶವನ್ನು ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದ ಶ್ರೀಮತಿ ಪದ್ಮಾವತಿ ಅಂಗಡಿ ವೇದಿಕೆ, …

Read More »

ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ

ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ ಜರುಗಿಸಿದ ಕಾಂಗ್ರೆಸ್ ಕಾರ್ಯಕರ್ತರು. ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ರಾಜ್ಯ ಸರ್ಕಾರ ವಿರುದ್ದ ಘೋಷಣೆ ಕೂಗಿ ಶಾಸಕ ಸತೀಶ ಜಾರಕಿಹೋಳಿ ಯವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಮಾಜಿ ಜಿಲ್ಲಾ ಚಾಯತ ಸದಸ್ಯ ಮಂಜುನಾಥ ಪಾಟೀಲ ನಿಪ್ಪಾಣಿಯಲ್ಲಿ ಜರುಗಿದ ಬುದ್ದ …

Read More »

ಪ್ರಮೋದ್ ಮುತಾಲಿಕ್ ಮೇಲೆ ಕಾನೂನು ಕ್ರಮ ಜರುಗಿಸಬೇಕು : ವಿಜಯ ಗುಂಟ್ರಾಳ

ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕೋಮು ಗಲಭೆಗೆ ಪ್ರಚೋದನೆಕಾರಿ ಹೇಳಿಕೆ ನೀಡುತ್ತಿದ್ದು, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಎಐಎಂಐಎಂ ಪಕ್ಷದ ವಿಜಯ ಗುಂಟ್ರಾಳ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಅವರಿಗೆ ಕಾನೂನಿನ ಕುರಿತು ಗೌರವವಿಲ್ಲ. ಅಲ್ಲದೇ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿಯೂ ಕೂಡಾ ಅವರಿಗೆ ನಂಬಿಕೆ ಇಲ್ಲ ಎಂದು ಹರಿಹಾಯ್ದರು. ನಗರದ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ವಿಜೃಂಭಣೆಯಿಂದ ಮಾಡಲಾಗಿದ್ದು, ಯಾವುದೇ …

Read More »

ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಗ್ರೀನ್ ಸಿಗ್ನಲ್

ಹುಬ್ಬಳ್ಳಿ: ನಗರದ ವಿವಾದಿತ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿದಂತೆ ಅರ್ಜಿ ಸಲ್ಲಿಸುವ ಎಲ್ಲಾ ಮಹಾಪುರುಷರ ಜಯಂತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಷರತ್ತು ವಿಧಿಸಿ ಅನುಮತಿ ನೀಡುವ ಬಗ್ಗೆ ಹು-ಧಾ ಮಹಾನಗರ ಪಾಲಿಕೆ ನಿರ್ಧರಿಸಿದೆ.   ಸರ್ವ ಪಕ್ಷಗಳ ಸಭೆಯ ನಂತರಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಮೇಯರ್ ಹಾಗೂ ಪಾಲಿಕೆ ವಿರೋಧ ಪಕ್ಷದ ನಾಯಕ ದೊರೈರಾಜು ಜಂಟಿ ಸುದ್ದಿ ಗೋಷ್ಠಿ ನಡೆಸಿದರು.‌ಆದರೆ ಸುದ್ದಿಗೋಷ್ಠಿಯಲ್ಲಿಯೇ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ, ಅಸಮಾಧಾನ ಸ್ಫೋಟಗೊಂಡಿತು.‌ …

Read More »

ವಿನಯ್ ಗುರೂಜಿ ಸಲಿಂಗಕಾಮಿ : ಸ್ಫೋಟಕ ಮಾಹಿತಿ ಬಿಚ್ಚಿಟ್ಟ ‘ಆಪ್ತ ಮಿತ್ರ’

ಚಿಕ್ಕಮಗಳೂರು: ವಿನಯ್ ಗುರೂಜಿ ಸಲಿಂಗಕಾಮಿಯಾಗಿದ್ದು, ಆತನ ನನ್ನೊಂದಿಗೆ ಒಂದು ದಿನ ಅಸಭ್ಯವಾಗಿ ವರ್ತಿಸಿದ್ದ ಅಂತ ವಿನೋದ್‌ ಎನ್ನುವ ವ್ಯಕ್ತಿಯೊಬ್ಬರು ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದೆ.   ವಿನೋದ್‌ ವಿಡಿಯೋದಲ್ಲಿ ಹೇಳಿರೋದು ಏನು? : ನಾನು ವಿನಯ್‌ ಸ್ನೇಹಿತರು, ದೂರದಲ್ಲಿ ನನ್ನ ಸಂಬಂಧಿ ಕೂಡ ಆಗಬೇಕು, ವಿನಯ್ ತೀರ್ಥಹಳ್ಳಿಯಲ್ಲಿ ಕೆಲಸದಲ್ಲಿ ಇರೋ ಟೈಮ್‌ನಲ್ಲಿ ಅನೈತಿಕ ಕೆಲಸಗಳನ್ನು ಮಾಡುತ್ತಿದ್ದ, ಇದಲ್ಲದೇ ಮಣಿಪಾಲ್‌ಗೆ ಹೋಗೋಣಾ ಬಾ ಮಾಲ್‌ ಇದೇ ಅಂತ …

Read More »

ಈಗ ಜನ ಸಂಕಲ್ಪ ಯಾತ್ರೆ, ಮುಂದೆ ವಿಜಯ ಯಾತ್ರೆ: ಬಸವರಾಜ ಬೊಮ್ಮಾಯಿ

ರಾಯಬಾಗ: ‘ಈಗ ನಾವು ನಡೆಸುತ್ತಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಗಳು ಮುಂದಿನ ಚುನಾವಣೆಯ ಬಳಿಕ ವಿಜಯ ಯಾತ್ರೆಗಳಾಗಿ ನಡೆಯಲಿವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದಲ್ಲಿ ಬುಧವಾರ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ’60 ವರ್ಷ ಕಾಂಗ್ರೆಸ್‌ ಆಡಳಿತವನ್ನು ಜನ ನೋಡಿದ್ದಾರೆ. ಯಾವ ಭಾಗ್ಯವೂ ಜನರನ್ನು ಮುಟ್ಟಲಿಲ್ಲ. ಕಾಂಗ್ರೆಸ್‌ನ ದುರಾಡಳಿತ ಮತ್ತು ಅವರ ದೌರ್ಭಾಗ್ಯ ಜನರಿಗೆ ಬೇಡವಾಗಿದೆ‌’ ಎಂದರು. ‘ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜಗಳವೇ …

Read More »