ರಾಣಿಬೆನ್ನೂರು: ಇಲ್ಲಿನ ದೊಡ್ಡಪೇಟೆ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಹೋಳಿ ಹಬ್ಬದ ಪ್ರಯುಕ್ತ ನಗರದ ಶ್ರೀ ರಾಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಭೀಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಶಕ್ತಿ ಯುವಕ ಸಂಘ ಹಾಗೂ ಜೆಬಿಸಿಸಿ ಯುವಕ ಮಂಡಳಿ ವತಿಯಿಂದ ಕುಳ್ಳರಿಸಿದ್ದ ಜೀವಂತ ರತಿ-ಮನ್ಮಥರು ಈ ಬಾರಿಯೂ ನಗು ಚಿಮ್ಮಿಸದೇ ತಮ್ಮ ದಾಖಲೆ ಮುಂದುವರಿಸಿಕೊಂಡು ಬಂದಿದ್ದಾರೆ.
Read More »2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?
2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ ಆಕಾಶದಲ್ಲಿ ಒಂದು ಕೌತುಕ ನಡೆಯಲಿದೆ. ಮಾರ್ಚ್ 3 ಇಂದು ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದ್ದು, ಇದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಮೇಲೆ ಭಾರಿ ಪರಿಣಾಮ ಬೀರಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಚಂದ್ರಗ್ರಹಣವು ಎಲ್ಲಾ ರಾಶಿಗಳ ಮೇಲೆ ಮಿಶ್ರ ಫಲ ನೀಡಲಿದೆ. ಮುಖ್ಯವಾಗಿ ಸಿಂಹ ಮತ್ತು ಕುಂಭ ರಾಶಿಯವರು …
Read More »ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್ಡಿಕೆ ಪತ್ರ
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ನಿರ್ಧಾರ ಕೈಬಿಡಬೇಕು ಎಂದು ಮಂಡ್ಯದ ಲೋಕಸಭೆ ಸದಸ್ಯರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವರು, ಜನಾಭಿಪ್ರಾಯ ಪರಿಗಣಿಸದೇ ಏಕಪಕ್ಷೀಯವಾಗಿ ಸಂಪುಟ ಸಭೆಯಲ್ಲಿ ಕೂಡ …
Read More »ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ
ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ ಶಾಲಾ ಶಿಕ್ಷಕರು (1-5ನೇ ತರಗತಿ) ಮತ್ತು ಪದವೀಧರ ಶಾಲಾ ಶಿಕ್ಷಕರು (6-8ನೇ ತರಗತಿ) ವೃಂದದಿಂದ ಅನುಕ್ರಮವಾಗಿ 2:1 ಅನುಪಾತದಲ್ಲಿ ಮುಂಬಡ್ತಿ ನೀಡುವ ಮೂಲಕ ಪ್ರತಿ ಮೂರನೇ ರಿಕ್ತ ಸ್ಥಾನವನ್ನು ತುಂಬುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆಯಲ್ಲಿ ನಿರ್ದೇಶಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ …
Read More »ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ
ಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರವಾಗಲಿದೆ. ಭಾರತದಲ್ಲಿ ಮಾ.3ರಂದು ಮಧ್ಯಾಹ್ನ 3:20ಕ್ಕೆ ಗ್ರಹಣ ಆರಂಭವಾಗಿ ಸಂಜೆ 6:47ಕ್ಕೆ ಮುಕ್ತಾಯವಾಗಲಿದ್ದು, ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ. ರಕ್ತಚಂದ್ರಗ್ರಹಣ ಸಮಯದಲ್ಲಿ ಏನು ಮಾಡಬೇಕು? – ಗ್ರಹಣದ ಮುನ್ನ ಮತ್ತು ಗ್ರಹಣ …
Read More »ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಹಿರೇನಂದಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »Job: ಅಗ್ನಿವೀರ ನೇಮಕಾತಿ ಆನ್ಲೈನ್ ನೋಂದಣಿ ಪ್ರಾರಂಭ
ಬೆಳಗಾವಿ: ಇಲ್ಲಿನ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಫೆ.13ರಿಂದ ಏಪ್ರಿಲ್ 1ರವರೆಗೆ ಬೆಳಗಾವಿ, ಬೀದರ ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಗ್ನಿವೀರ ನೇಮಕಾತಿ ಆನ್ಲೈನ್ ನೋಂದಣಿ ಪ್ರಾರಂಭವಾಗಿದೆ. ಅಗ್ನಿವೀರ ಜನರಲ್ ಡ್ಯೂಟಿ, ಟೆಕ್ನಿಕಲ್, ಟ್ರೇಡ್ಸ್ಮನ್ 10ನೇ ತರಗತಿ ಪಾಸ್, ಅಗ್ನಿವೀರ ಟ್ರೇಡ್ಸ್ಮನ್ 8ನೇ ತರಗತಿ ಪಾಸ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳ ದಾಖಲಾತಿಗೆ ನೋಂದಣಿ ಪ್ರಕ್ರಿಯೆ ಚಾಲನೆಯಲ್ಲಿರುತ್ತದೆ. ಅಭ್ಯರ್ಥಿಗಳು ಭಾರತೀಯ ಸೇನೆಯ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ …
Read More »ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್ ಆಕ್ಷೇಪ
ಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ ಮಾಡಿದ್ದರು. ಈಗ ಅವ್ರೇ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಿರೋದು ಸರಿಯಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ) ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ (Media Restriction) ವಿಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದರು. ವಿಧಾನಸೌಧದಲ್ಲಿ …
Read More »ಬಾಂಗ್ಲಾದಲ್ಲಿ ಮಾತ್ರ ಅಲ್ಲ ನಮ್ಮ ದೇಶದಲ್ಲೂ ಹಿಂದೂಗಳ ಸ್ಥಿತಿ ಹೀನಾಯ: ವಿಶ್ವಪ್ರಸನ್ನ ತೀರ್ಥ ಶ್ರೀ
ದಾವಣಗೆರೆ: ಬಾಂಗ್ಲಾದಲ್ಲಿ ಅಷ್ಟೇ ಅಲ್ಲ ನಮ್ಮ ದೇಶದಲ್ಲೂ ಕೂಡ ಹಿಂದೂಗಳ ಪರಿಸ್ಥಿತಿ ಹೀನಾಯವಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನಾ ತೀರ್ಥ ಶ್ರೀಗಳು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದುಗಳ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದರು. ಇದರ ಬಗ್ಗೆ ಕೇಂದ್ರ ಸರ್ಕಾರ ಕ್ರಮವನ್ನು ಕೈಗೊಳ್ಳಬೇಕು. ಹಿಂದೂಗಳ ಹೀನಾಯ ಸ್ಥಿತಿಯಲ್ಲಿ ಇರೋದು ಕೇವಲ ಬಾಂಗ್ಲಾದಲ್ಲಿ ಅಷ್ಟೇ ಅಲ್ಲ. ನಮ್ಮ ಭಾರತದಲ್ಲಿ ಕೂಡ ಹೀನಾಯ ಸ್ಥಿತಿಯಲ್ಲಿದ್ದಾರೆ ಎಂದು …
Read More »
Laxmi News 24×7