Breaking News

ರಾಜ್ಯ

ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಬಿಡುವುದಿಲ್ಲ : ರಮೇಶ್ ಕತ್ತಿ ಸ್ಪಷ್ಟನೆ

ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕತ್ತಿ ಅವರಿಗೆ ಟಿಕೆಟ್ ಮಿಸ್ ಆಗಿದ್ದು ಅಣ್ಣ ಸಾಹೇಬ ಜೊಲ್ಲೆಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ ಈ ಕುರಿತು ರಮೇಶ್ ಕತ್ತಿ ಬೇಸರ ವ್ಯಕ್ತಪಡಿಸಿದ್ದು, ಯಾಕೆ ಟಿಕೆಟ್ ಕೈತಪ್ಪಿದೆ ಎಂದು ನನಗೆ ಮಾಹಿತಿ ಇಲ್ಲ ಎಂದು ಅವರು ಬೇಸರ ಹೊರಹಕಿದ್ದಾರೆ. ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚಿಕ್ಕೋಡಿಯಿಂದ ಅಣ್ಣಾ ಸಾಹೇಬ ಜೊಲ್ಲೆಗೆ ಟಿಕೆಟ್ ನೀಡಿದ್ದಾರೆ.ಪಕ್ಷದ ಕಾರ್ಯಕರ್ತನಾಗಿ ಅವರ ಗೆಲುವಿಗೆ ನಾನು ಶ್ರಮಿಸುತ್ತೇನೆ. …

Read More »

‘ಪಕ್ಷೇತರ’ ಅಭ್ಯರ್ಥಿಯಾಗಿ ಸಂಗಣ್ಣ ಕರಡಿ ಸ್ಪರ್ಧೆ

ಕೊಪ್ಪಳ : ತಮ್ಮ ಮಗನಿಗೆ ಲೋಕಸಭಾ ಟಿಕೆಟ್ ಸಿಕ್ಕಿಲ್ಲವೆಂದು ಈಗಾಗಲೇ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯವೇದಿದ್ದು ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇದೀಗ ಬಿಜೆಪಿ ಮತ್ತೊಬ್ಬ ನಾಯಕ ಬಂಡಾಯವೇದಿದ್ದು ಕೊಪ್ಪಳದಿಂದ ಸಂಸದ ಕರಡಿ ಸಂಗಣ್ಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕೆಎಸ್ ಈಶ್ವರಪ್ಪ ಬಳಿಕ ಮತ್ತೊಬ್ಬ ಬಿಜೆಪಿ ನಾಯಕ ಬಂಡಾಯವೆದ್ದಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಂಗಣ್ಣ …

Read More »

ರೇಣುಕಾಚಾರ್ಯ ಅವರನ್ನು ಪಕ್ಷದಿಂದ ಹೊರ ಹಾಕುವಂತೆ ಹೈಕಮಾಂಡ್ ಸೂಚಿಸಿದೆಯಾ..?

ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಕೆಲವು ಭಿನ್ನಾಭಿಪ್ರಾಯ ಹೊಗೆಯಾಡುತ್ತಿದೆ. ಕೆಲವರು ಬಂಡಾಯವನ್ನೇ ಎದ್ದಿದ್ದಾರೆ. ದಾವಣಗೆರೆಯ ವಿಚಾರದಲ್ಲೂ ಅಷ್ಟೇ ಟಿಕೆಟ್ ವಿಚಾರಕ್ಕೆ ರೇಣುಕಾಚಾರ್ಯ ಬೇಸರ ಮಾಡಿಕೊಂಡು ಕೂತಿದ್ದಾರೆ. ಸಂಸದ ಸಿದ್ದೇಶ್ವರ ಪತ್ನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಕೋಪ ಹೊರಗೆ ಹಾಕಿದ್ದಾರೆ. ಅಷ್ಟೇ ಅಲ್ಲ ಅತೃಪ್ತರ ತಂಡ ಕಟ್ಟಿಕೊಂಡು ಬಹಿರಂಗವಾಗಿಯೇ ಸಭೆ ನಡೆಸಿದ್ದಾರೆ. ರೇಣುಕಾಚಾರ್ಯರ ಟೀಂ ಹೈಕಮಾಂಡ್ ನಾಯಕರಿಗೆ ಟಿಕೆಟ್ ಬದಲಿಸುವಂತೆ ಸೂಚನೆ ನೀಡಿದೆ. ಹೀಗಾಗಿ ಹೈಕಮಾಂಡ್ ನಿಂದ ಎಚ್ಚರಿಕೆಯ ಸಂದೇಶ ಸಿಕ್ಕಿದೆ‌. ಹೈಕಮಾಂಡ್ ಸೂಚನೆ …

Read More »

ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಗೆಲ್ಲಲಿದೆ?

ರಾಜ್ಯದಲ್ಲಿ ಕೂಡ ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಮೂರು ಪಕ್ಷಗಳೂ ಗೆಲುವಿನ ಲೆಕ್ಕಾಚಾರದಲ್ಲಿ ಇವೆ. ಈ ಮಧ್ಯೆ ಇಂಡಿಯಾ ಟಿವಿ ತಾಜಾ ಸಮೀಕ್ಷೆ ಹೊರ ಬಿದ್ದಿದ್ದು, ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇಂಡಿಯಾ ಟಿವಿಯ ಸಮೀಕ್ಷೆಯಂತೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಲಿದೆ.ಆದರೆ, ಕಳೆದ ಬಾರಿಯಷ್ಟು ಸ್ಥಾನಗಳು ಬಿಜೆಪಿಗೆ ಸಿಗುವುದಿಲ್ಲ. ಕೆಲವು ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ. ತೆಲಂಗಾಣದಲ್ಲಿ …

Read More »

ಟಿಕೆಟ್‌ ಕೈ ತಪ್ಪಿದ್ದಕ್ಕೆ ಗಳಗಳನೆ ಅತ್ತ ವೀಣಾ ಕಾಶಪ್ಪನವರ್

ಬೆಂಗಳೂರು, : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಪಕ್ಷಗಳಲ್ಲಿಯೂ ಟಿಕೆಟ್‌ ಲಾಬಿ ಜೋರಾಗಿದೆ. ಈಗಾಗಲೇ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮವಾಗಿದ್ದು, ಉಳಿದ ಕ್ಷೇತ್ರಗಳ ಟಿಕೆಟ್‌ಗಾಗಿ ಆಕಾಂಕ್ಷಿಗಳು ಹೋರಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿಯೂ ಟಿಕೆಟ್‌ ಫೈಟ್‌ ಜೋರಾಗಿದ್ದು, ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ವೀಣಾ ಕಾಶಪ್ಪನವರ್ ಕಣ್ಣೀರು ಹಾಕಿರುವ ಪ್ರಸಂಗ ನಡೆದಿದೆ.ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ವೀಣಾ ಕಾಶಪ್ಪನವರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಕಳೆದು ಕೆಲವು …

Read More »

ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಶಾಕ್- ಕಾಂಗ್ರೆಸ್‌ ಕಥೆ ಏನು?

ಬೆಂಗಳೂರು, ಮಾರ್ಚ್‌ 20: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಜೋರಾಗಿದ್ದು, ಗೆಲ್ಲುವ ಅಭ್ಯರ್ಥಿಯ ಹುಡುಕಾಟವನ್ನ ಕಾಂಗ್ರೆಸ್‌ ಹಾಗೂ ಬಿಜೆಪಿ ನಡೆಸುತ್ತಿದೆ. ಇತ್ತ ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್‌ 26 ಮತ್ತು ಮೇ 7ರಂದು ಚುನಾವಣೆ ನಡೆಯಲಿದ್ದು, ಜೂನ್‌ 4 ರಂದು ಫಲಿತಾಂಶ ಬರಲಿದೆ. ಲೋಕಸಮರಕ್ಕೆ ಬಿಜೆಪಿ – ಜೆಡಿಎಸ್‌ ಮೈತ್ರಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಚುನಾವಣೆಗೆ ರೆಡಿಯಾಗುತ್ತಿದ್ದು, ಇದರ ನಡುವೆಯೇ ಸಮೀಕ್ಷೆಯೊಂದು ಪ್ರಕಟವಾಗಿದ್ದು, 28 ಕ್ಷೇತ್ರಗಳನ್ನು …

Read More »

ಕಾಂಗ್ರೆಸ್‌ ಪಟ್ಟಿ ಬಹುತೇಕ ಅಂತಿಮ: ಅಧಿಕೃತ ಘೋಷಣೆ ಒಂದೇ ಬಾಕಿ

ನವದೆಹಲಿ, : ಲೋಕಸಭಾ ಚುನಾವಣೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಪಡೆ ಕರ್ನಾಟಕದ ಏಳು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಚಿಸಿದ್ದು, ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯೇ ದೊಡ್ಡ ಸವಾಲ್‌ ಆಗಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆದಿದೆ.ಸಭೆಯಲ್ಲಿ ರಾಜ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿದ್ದಾರೆ. ಕರ್ನಾಟಕದ 21 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತಂತೆ ಸಭೆಯಲ್ಲಿ ಚರ್ಚೆ …

Read More »

ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ವದಂತಿ

ಹಾವೇರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ಬದಲಾವಣೆ ಆಗಲಿದೆ ಎಂಬ ಚರ್ಚೆ ಮಂಗಳವಾರದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿದಾಡ ತೊಡಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗದ ಸಭೆಗೆ ಕೆ ಎಸ್ ಈಶ್ವರಪ್ಪನವರು ಚಕ್ಕರ ಹೊಡೆದ ನಂತರದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದೆ.

Read More »

ಲೋಕಸಭಾ ಚುನಾವಣೆ-2024: ಇದೇ ಮೊದಲ ಬಾರಿಗೆ ಪತ್ರಕರ್ತರು ಸೇರಿದಂತೆ 11 ಇಲಾಖೆಗಳ ನೌಕರರಿಗೆ ಅಂಚೆ ಮತಪತ್ರ ಸೌಲಭ್ಯ

ನವದೆಹಲಿ : ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರಲ್ಲಿ ಸೇವಾ ಮತದಾರರ ಜೊತೆಗೆ, ಭಾರತದ ಚುನಾವಣಾ ಆಯೋಗವು 11 ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಸೌಲಭ್ಯವನ್ನು ಸಹ ನೀಡಿದೆ. ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಈ ವರ್ಗಕ್ಕೆ ಸೇರಿಸಲಾಗಿದೆ. ಈ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ವಿದ್ಯುತ್-ನೀರು, ರಸ್ತೆ-ಮೆಟ್ರೋ, ಡೈರಿ, ಅಗ್ನಿಶಾಮಕ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು …

Read More »

ಮಾರ್ಚ್ 22ಕ್ಕೆ ಉಳಿದ 5 ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮ: B.S.Y.

ಬೆಂಗಳೂರು, ಮಾರ್ಚ್ 20: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಇಪ್ಪತ್ತು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು ಉಳಿದ 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಅಳೆದು ತೂಗಿ ಅಭ್ಯರ್ಥಿ ಆಯ್ಕೆ ನಡೆಯುತ್ತಿದೆ. ಹೀಗಾಗಿಯೇ ಐದು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಕಾತುರ ಹೆಚ್ಚಾಗಿಯೇ ಇದೆ.ಅಭ್ಯರ್ಥಿ ಘೋಷಣೆ ಬಳಿಕ ರಾಜ್ಯದಲ್ಲಿ ಎದ್ದಿರುವ ಬಂಡಾಯ ಶಮನಕ್ಕೆ ಪ್ರಯತ್ನ ತುಸು ಹೆಚ್ಚಾಗಿಯೇ ಇದೆ. ಕುತೂಹಲಗಳ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ …

Read More »