Breaking News

ರಾಜ್ಯ

ಮೂಡಲಗಿ: ಕಲ್ಮೇಶ್ವರಬೋಧ ಸ್ವಾಮಿ ಜಯಂತಿ

ಮೂಡಲಗಿ: ಮೂಡಲಗಿಯ ಶಿವಬೋಧರಂಗ ಮಠದ ಪವಾಡ ಪುರುಷ, ವಾಕ್ಸಿದ್ಧಿಪುರುಷ ಕಲ್ಮೇಶ್ವರಬೋಧ ಸ್ವಾಮಿಗಳ 119ನೇ ಜಯಂತಿಯನ್ನು ಭಾನುವಾರ ಕಲ್ಮೇಶ್ವರ ವೃತ್ತದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸಂಭ್ರಮದಿಂದ ಆಚರಿಸಿದರು. ಕಲ್ಮೇಶ್ವರಬೋಧ ಸ್ವಾಮಿಗಳ ಅಶ್ವಾರೂಢ ಮೂರ್ತಿಗೆ ಶ್ರೀರಂಗ ಜೋಶಿ ಮತ್ತು ಪಂಚಯ್ಯ ಹಿರೇಮಠ ಅವರು ಪೂಜೆ ನೆರವೇರಿಸಿದರು. ಕಲ್ಮೇಶ್ವರ ವೃತ್ತವನ್ನು ತಳಿರು ತೋರಣಗಳಿಂದ ವಿಶೇಷವಾಗಿ ಸಿಂಗಾರಗೊಳಿಸಿದ್ದರು. ಕಲ್ಮೇಶ್ವರಬೋಧ ಸ್ವಾಮೀಜಿಯವರಿಗೆ ಸೇರಿದ ಅಪಾರ ಭಕ್ತವೃಂದವು ಒಕ್ಕೊರಲಿನಿಂದ ಜಯಘೋಷಗಳನ್ನು ಹಾಕಿದರು. ಪುರಸಭೆ ಸದಸ್ಯರು, ಮುಖಂಡರು, ಕಲ್ಮೇಶ್ವರಬೋಧ ಮೂರ್ತಿ ಪ್ರತಿಷ್ಠಾನ …

Read More »

ಭಾನುವಾರ ಏರ್ಪಡಿಸಿದ್ದ ಸಿರಿಧಾನ್ಯ ಮೇಳ: ಎಚ್.ಕೆ.ಪಾಟೀಲ

ಗದಗ: ಹುಲಕೋಟಿಯ ಕೈಲಾಸ ಆಶ್ರಮದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಿರಿಧಾನ್ಯ ಮೇಳ ಹಾಗೂ ಕೃಷಿ ತಂತ್ರಜ್ಞಾನ ಪ್ರದರ್ಶನ ಮೇಳ ಸಾರ್ವಜನಿಕರ ಗಮನ ಸೆಳೆಯಿತು. ಸಿರಿಧಾನ್ಯ ಪ್ರತಿಯೊಬ್ಬರ ಆರೋಗ್ಯ ರಕ್ಷಣೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂಬ ಸಂದೇಶ ಸಾರಿದ ಚಿತ್ತಾಕರ್ಷಕ ರಂಗೋಲಿಯು ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಯಿತು.   ಅಂತರರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಪ್ರಾಮುಖ್ಯತೆಯನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಸಿರಿಧಾನ್ಯ ಉತ್ಸವ ಆಯೋಜಿಸಲಾಗಿತ್ತು. ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳ …

Read More »

ಅಜ್ಜನ ಜಾತ್ರೆಯ ಸಮಾರೋಪ

ಕೊಪ್ಪಳ: ಗವಿಮಠ ಜಾತ್ರೆಯ ಸಮಾರೋಪ ಸಮಾರಂಭ ಸೋಮವಾರ ನಡೆಯಲಿದ್ದು, ಕೊನೆಯ ದಿನ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಬೆಳಿಗ್ಗೆ 10 ಗಂಟೆಗೆ ಮಠದ ಆವರಣದಲ್ಲಿ ಪುರುಷರ ಹಾಗೂ ಮಹಿಳೆಯರ ಆಹ್ವಾನಿತ ಕಬಡ್ಡಿ ಟೂರ್ನಿ ಜರುಗಲಿದೆ. 11ರಿಂದ ಮಧ್ಯಾಹ್ನ 1.30ರ ತನಕ ಶಾಂತವನ ಯಾತ್ರಿ ನಿವಾಸ ರಸ್ತೆಯಲ್ಲಿ ಆನ್ವೇಷಣೆ ಆತ್ಮಚಿಂತನೆ ಆಯೋಜನೆಯಾಗಿದೆ.   ಸಂಜೆ 5.30ಕ್ಕೆ ಕೈಲಾಸ ಮಂಟಪದಲ್ಲಿ ನಡೆಯುವ ಸಮಾರೋಪದಲ್ಲಿ ಶಿವಗಂಗಾಕ್ಷೇತ್ರದ ಮೇಲಣಗವಿ ವೀರಸಿಂಹಾಸನ ಸಂಸ್ಥಾನಮಠದ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, …

Read More »

ಒಣ ಮೆಣಸಿನಕಾಯಿ ದರ ಏರಿಕೆ: ರೈತರ ಸಂತಸ

ಹಟ್ಟಿಚಿನ್ನದಗಣಿ: ಮಾರುಕಟ್ಟೆಯಲ್ಲಿ ಒಣಮೆಣಸಿಕಾಯಿ ದರ ಏರಿಕೆ ಆಗಿರುವುದರಿಂದ ಮೆಣಸಿನಕಾಯಿ ಬೆಳೆ ಬೆಳದ ರೈತರು ಸಂತಸದಲ್ಲಿದ್ದಾರೆ. ರೈತರು ಒಣಮೆಣಸಿನಕಾಯಿ ಮಾರಾಟ ಮಾಡಲು ಮಾರುಕಟ್ಟೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಅಲ್ಲಿ, ಹತ್ತಿಗಿರಿ ತಳಿಯ ಒಣ ಮೆಣಸಿನಕಾಯಿ, ಪ್ರತಿ ಕ್ವಿಂಟಲ್‌ಗೆ ₹25 ಸಾವಿರ ಇದೆ. ₹38 ಸಾವಿರ ಬ್ಯಾಡಗಿ ಹಾಗೂ ಗುಂಟೂರು ತಳಿ ತಲಾ 16 ರಿಂದ 18 ಸಾವಿರದಿಂದ ಧಾರಣೆ ಸಿಗುತ್ತಿರುವುದರಿಂದ ಬೆಳೆಗಾರರ ಮೊಗದಲ್ಲಿ ಹರ್ಷ ಮೂಡಿದೆ.

Read More »

ಅಜ್ಜನ ಜಾತ್ರೆ: ನಾಲ್ಕೂವರೆ ಲಕ್ಷ ಭಕ್ತರಿಗೆ ದಾಸೋಹದಲ್ಲಿ ಮಿರ್ಚಿ ಸೇವೆ

ಕೊಪ್ಪಳ: ಇಲ್ಲಿನ ಗವಿಮಠದ ಜಾತ್ರೆಯ ಮಹಾದಾಸೋಹದಲ್ಲಿ ಎರಡನೇ ದಿನವಾದ ಭಾನುವಾರ ಉತ್ತರ ಕರ್ನಾಟಕದ ಪ್ರಸಿದ್ಧ ಖಾದ್ಯ ಮಿರ್ಚಿ ಎಲ್ಲರ ಆಕರ್ಷಣೆಯ ಕೇಂದ್ರವಾಗಿತ್ತು. ಮಿರ್ಚಿ ತಯಾರಿಕೆಗೆ ಕೊಪ್ಪಳದ ಸಮಾನ ಮನಸ್ಕ ಸ್ನೇಹಿತರು ಮಿರ್ಚಿ ಸೇವಾ ಬಳಗ ಆರಂಭಿಸಿದ್ದು ಈ ಬಾರಿ ಸೇವಾ ಕಾರ್ಯದಲ್ಲಿ ಗಣ್ಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.   ದಾಸೋಹಕ್ಕಾಗಿ ಬರುವ ಲಕ್ಷಾಂತರ ಭಕ್ತರಿಗೆ ಮಿರ್ಚಿ ಉಣಬಡಿಸಿದರು. ಬೆಳಗಿನ ಜಾವವೇ ಆರಂಭವಾಗಿದ್ದು 400 ಬಾಣಸಿಗರು ಈ ಕಾರ್ಯದಲ್ಲಿ ಭಾಗಿಯಸದರು. ಮಿರ್ಚಿ ರುಚಿಗೆ ಮನಸೋತ …

Read More »

ಪಟಾಕಿ ಗೋಡೌನ್​​ನಲ್ಲಿ ಬ್ಲಾಸ್ಟ್; 3 ಸಾವು,

ಮಂಗಳೂರು: ಪಟಾಕಿ ಗೋಡೌನ್ ಬ್ಲಾಸ್ಟ್‌ ಆಗಿ ಮೂವರು ಮೃತಪಟ್ಟಿದ್ದಾರೆ. ಮಂಗಳೂರಿನ ಬೆಳ್ತಂಗಡಿ ತಾಲೂಕಿನ ವೇಣೂರಿನ ಗೋಳಿಯಂಗಡಿಯಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ. ಸಾಲಿಡ್ ಫೈರ್‌ವರ್ಕ್ ಎಂಬ ಗೋಡೌನ್‌ನಲ್ಲಿ ಈ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ವೇಣೂರು ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮೃತಪಟ್ಟವರನ್ನು ಕೇರಳದ ಸ್ವಾಮಿ (55) , ಕೇರಳದ ವರ್ಗಿಸ್ (68), ಹಾಸದ ಅರಸಿಕೆರೆ ನಿವಾಸಿ ಚೇತನ್ (25) ಎಂದು ಗುರುತಿಸಲಾಗಿದೆ. ಸ್ಪೋಟದ ತೀವ್ರತೆಗೆ ಕಾರ್ಮಿಕರ ಮೃತದೇಹಗಳು ಛಿದ್ರ …

Read More »

ಕೇಂದ್ರದತ್ತ ಬೆರಳು ತೋರದೆ ಪರಿಹಾರ ಬಿಡುಗಡೆ ಮಾಡಲಿ: ಬಿ.ವೈ.ವಿಜಯೇಂದ್ರ

ರಾಯಚೂರು: ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ಬೆರಳು ಮಾಡದೆ ಮೊದಲು ರೈತರಿಗೆ ಬರ ಪರಿಹಾರ ನೀಡಲಿ. ಹಿಂದೆ ಬಿ.ಎಸ್.ಯಡಿಯೂರಪ್ಪ ಕೆಂದ್ರದ ಅನುದಾನಕ್ಕೆ ಕಾಯದೆ ಬರಪರಿಹಾರ ಕೊಟ್ಟಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್ ನವರು ಯಾಕೆ ಕೇಂದ್ರದ ಕಡೆ ಬೆಟ್ಟು ಮಾಡಿ ತೋರಿಸುತ್ತಾರೆ. ನೀವು ಕೊಡಬೇಕಾದ ಪರಿಹಾರವನ್ನು ಮೊದಲು ಕೊಡಿ. ದೇಶದಲ್ಲಿ ಅನೇಕ ರಾಜ್ಯಗಳಿವೆ. ಕೇಂದ್ರ ಸರ್ಕಾರ ಸೂಕ್ತ ತೀರ್ಮಾನ ಮಾಡಿ …

Read More »

ನಿತೀಶ್ ಕುಮಾರ್ ಮೈತ್ರಿ ತೊರೆಯುತ್ತಾರೆಂದು 5 ದಿನಗಳ ಹಿಂದೆಯೇ ಗೊತ್ತಾಗಿತ್ತು: ಖರ್ಗೆ

ಕಲಬುರಗಿ: ಬಿಹಾರದಲ್ಲಿ ಐದು ದಿನಗಳ ಹಿಂದೆಯೇ ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದಿಂದ ಹೊರ ಬಂದು ಮೈತ್ರಿ ತೊರೆಯುತ್ತಾರೆಂದು ತಿಳಿದಿತ್ತು ಎಂದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಇಲ್ಲಿಂದ ಡೆಹ್ರಾಡೂನ್ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ ಯಾದವ್ ಅವರೇ ತಮಗೆ ಫೋನ್ ಮಾಡಿ ಮೈತ್ರಿ ತೊರೆಯುವ ಬಗ್ಗೆ ಮಾಹಿತಿ ತಿಳಿಸಿದ್ದರು. ಆಗ ಪಕ್ಷಗಳ ಬಲಾಬಲ ಬಗ್ಗೆ ಸ್ಪಷ್ಟ ಮಾಹಿತಿ …

Read More »

ಆಸ್ತಿಗಾಗಿ ಅಪ್ಪನನ್ನೇ ಕೊಲೆ ಮಾಡಿಸಿದ್ದ ಮಗ, ಸೊಸೆ ಅರೆಸ್ಟ್

ಬಾಗಲಕೋಟೆ, ಜನವರಿ : ಆಸ್ತಿಗಾಗಿ (Property) ಸುಪಾರಿ ಕೊಟ್ಟು ಅಪ್ಪನನ್ನೇ ಮಗಕೊಲೆಮಾಡಿಸಿದ್ದಾನೆ. ಚೆನ್ನಪ್ಪ (66) ಕೊಲೆಯಾದ ತಂದೆ. ಚನ್ನಬಸಪ್ಪ ಕೊಲೆ‌ ಮಾಡಿಸಿದ‌ ಮಗ. ಮಾಂತೇಶ್ ಮರಡಿಮಠ ಕೊಲೆ‌ ಮಾಡಿದ ಆರೋಪಿ. ಚೆನ್ನಪ್ಪನ ಕುಟುಂಬ ಬಾಗಲಕೋಟೆ (Bagalkot) ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ವಾಸಿಸುತ್ತಿತ್ತು. 37 ಎಕರೆ ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಪದೆ ಪದೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಚನ್ನಬಸಪ್ಪ, ಪತ್ನಿ ಶಿವಬಸವ್ವ ಮತ್ತು ಚನ್ನಬಸಪ್ಪನ ಆಪ್ತ …

Read More »

ಬಾರ್​​ನಲ್ಲಿ ಶುರುವಾದ ಗೆಳೆಯರ ಗಲಾಟೆ ಮನೆ ಮುಂದೆ ಕೊಲೆಯಲ್ಲಿ ಅಂತ್ಯ

ಬೆಂಗಳೂರು, ಜನವರಿ 28: ಸ್ನೇಹಿತರ ಮಧ್ಯೆ ಶುರುವಾದ ಗಲಾಟೆಕೊಲೆಯಲ್ಲಿ ಅಂತ್ಯ ಕಂಡಿದೆ. ದರ್ಶನ್ ಕೊಲೆಯಾದ ದುರ್ದೈವಿ. ಚಂದ್ರಶೇಖರ್ ಅಲಿಯಾಸ್​​ ಪ್ರೀತಂ, ಯಶವಂತ, ಪ್ರಶಾಂತ್, ಲಂಕೇಶ್ ಮತ್ತು ದರ್ಶನ್ ಕೊಲೆ ಮಾಡಿದ ಆರೋಪಿಗಳು. ಸುಬ್ರಹ್ಮಣ್ಯಪುರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಹಾಗದರೆ ದರ್ಶನ್ ಕೊಲೆಗೆ ಕಾರಣ ಏನು? ಜನವರಿ 24 ರಂದು ಕೊಲೆಯಾದ ದರ್ಶನ್ ದೊಡ್ಡಮ್ಮ ತನ್ನ ತಾಯಿಗೆ ಕೊಡಲು 3 ಸಾವಿರ ಹಣವನ್ನು ದರ್ಶನಗೆ ನೀಡಿದ್ದಳು. ಇದೇ ಹಣವನ್ನು ತೆಗೊಂಡು …

Read More »