Home / ರಾಜ್ಯ (page 898)

ರಾಜ್ಯ

ನಾವು ಹೋರಾಟ ಮಾಡಿದ್ರೆ ಬಿಜೆಪಿಯವರು ಓಡಾಡಲು ಆಗಲ್ಲ : ಸಿದ್ದರಾಮಯ್ಯ

ಮಡಿಕೇರಿ: ಕಾರಿನ ಮೇಲೆ ಮೊಟ್ಟೆ ಎಸೆದು ಬಿಜೆಪಿ ಕಾರ್ಯಕರ್ತರ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮಗೂ ಮೊಟ್ಟೆ ಎಸೆಯಲು ಬರುತ್ತೆ. ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಡಲು ಆರಂಭಿಸಿದರೆ ಸಿಎಂ ಓಡಾದಲು ಆಗಲ್ಲ ಎಂದು ಎಚ್ಚರಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಅರ್ಥವಿಲ್ಲ. ದುಡ್ಡುಕೊಟ್ಟು ಜನರನ್ನು ಕರೆತಂದು ಬಿಜೆಪಿ ಕಾರ್ಯಕರ್ತರು ಎಂದು ಪ್ರತಿಭಟನೆ ಮಾಡಿಸಿದ್ದಾರೆ. ಇದು ಹೇಡಿಗಳು ಮಾಡುವ ಕೆಲಸ ಎಂದು ಕಿಡಿಕಾರಿದರು. …

Read More »

ಸಿದ್ದರಾಮಯ್ಯಗೆ ಸಾವರ್ಕರ್ ಭಾವಚಿತ್ರ ನೀಡಿ, ಕಪ್ಪು ಬಾವುಟದ ಸ್ವಾಗತ

ಮಡಿಕೇರಿ: ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ಧರಾಮಯ್ಯ ಮಡಿಲಲ್ಲಿಟ್ಟರಲ್ಲದೇ ಕಪ್ಫುಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ ಘೋಷಣೆ ಕೂಗಿದ ಘಟನೆ ಗುರುವಾರ ನಡೆದಿದೆ.   ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ …

Read More »

ಯಡಿಯೂರಪ್ಪ ಅವರನ್ನು ಸಿಎಂ ಎಂದು ಘೋಷಿಸಲಿ: ಎಂ.ಬಿ ಪಾಟೀಲ್

ಬೆಂಗಳೂರು: ಯಡಿಯೂರಪ್ಪ ಅವರ ಬಗ್ಗೆ ಗೌರವ ಇದ್ದಿದ್ದರೆ ಸಿಎಂ ಸ್ಥಾನದಿಂದ ಯಾಕೆ ಕೆಳಗೆ ಇಳಿಸಿದರು? ಪ್ರೀತಿ ಇದ್ದರೆ ಅವರನ್ನ ಸಿಎಂ ಎಂದು ಘೋಷಿಸಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಣ ಎಂ.ಬಿ ಪಾಟೀಲ್ ಬಿಜೆಪಿಗೆ ಸವಾಲು ಹಾಕಿದ್ದಾರೆ.   ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪನವರು ಹಿರಿಯರು,ಅವರಿಗೆ ಒಳ್ಳೆಯದಾಗಲಿ ಅಂತಾ ಆಶಿಸುತ್ತೇನೆ.75 ವರ್ಷವಾದ ಕಾರಣ ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದ್ದರು.ಈಗ ಸಂಸದೀಯ ಮಂಡಳಿಯಲ್ಲಿ ಸ್ಥಾನಮಾನ‌ ಕೊಟ್ಟಿದ್ದಾರೆ. ಅವರು ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ, ಸಿಎಂ …

Read More »

ಭಾರತದ 7 ಹಾಗೂ ಪಾಕಿಸ್ತಾನದ 1 ಯೂಟ್ಯೂಬ್ ಚಾನಲ್ ಬ್ಯಾನ್

ನವದೆಹಲಿ: ತಪ್ಪು ಮಾಹಿತಿ ಪ್ರಸಾರ ಮಾಡುತ್ತಿದ್ದ ಐಟಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದ 8 ಯೂಟ್ಯೂಬ್ ಚಾನಲ್ ಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ. ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು, ಸಾರ್ವಜನಿಕ ಸುವ್ಯಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿ ಹರಡುತ್ತಿದ್ದ ಕಾರಣಕ್ಕೆ 7 ಭಾರತೀಯ ಹಾಗೂ 1 ಪಾಕಿಸ್ತಾನ ಮೂಲದ ಯೂಟ್ಯೂಬ್ ಸುದ್ದಿ ಚಾನಲ್ ಗಳನ್ನು ನಿರ್ಬಂಧ ಮಾಡಿದೆ. ನಿರ್ಬಂಧಿಸಲಾದ ಯೂಟ್ಯೂಬ್ ಚಾನಲ್ ಗಳು 114 ಕೋಟಿಗೂ ಅಧಿಕ ವೀಕ್ಷಣೆ ಹೊಂದಿದ್ದು, 85 ಲಕ್ಷದ …

Read More »

ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ತೋಟದ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಅನುಮತಿ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳನ್ನು ಇತ್ತೀಚೆಗೆ ಕೋರಿದ್ದರು ಎಂಬುದು ಉಲ್ಲೇಖಾರ್ಹ.   *ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ :* ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಈಗಾಗಲೇ ಸರ್ಕಾರ ಆದೇಶಿಸಿದ್ದು, ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ಬಿದ್ದಿರುವ ಗುಂಡಿಗಳನ್ನು ಮುಚ್ಚಬೇಕು. ನೇತಾಡುತ್ತಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಬೇಕು:. ಅಭಯ್ ಪಾಟೀಲ

ಕೇಲವೇ ದಿನಗಳಲ್ಲಿ ಬೆಳಗಾವಿಯಲ್ಲಿ ಗಣೇಶೋತ್ಸವ ನಡೆಯಲಿದೆ ಈ ಹಿನ್ನೆಲೆ ಇಂದು ದಕ್ಷಿಣ ಶಾಸಕ ಅಭಯ ಪಾಟೀಲ ಅವರು ದಕ್ಷಿಣ ಕ್ಷೇತ್ರದ ಪಾರಂಪರೀಕ ಮಾರ್ಗದಲ್ಲಿ ಸಂಚರಿಸಿ, ಗಣೇಶೋತ್ಸವದ ಮೆರವಣಿಗೆಗೆ ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು. ಇದೇ ತಿಂಗಳು 31 ರಂದು ಗಣೇಶೋತ್ಸವ ನಡೆಯಲಿದ್ದು, ಕೊರೋನಾ ನಂತರ 2 ವರ್ಷಗಳ ಬಳಿಕ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಗಣೇಶೋತ್ಸವವನ್ನು ಆಚರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಇಂದು ದಕ್ಷಿಣ ಶಾಸಕ ಅಭಯ ಪಾಟೀಲ ಅವರು ನಗರ …

Read More »

ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ ಹೋಗುವ …

Read More »

ಸವದತ್ತಿಯಲ್ಲಿ ಕೊಲೆ ಪ್ರಕರಣದ ಬಗ್ಗೆ ಎಸ್ಪಿ ಸಂಜೀವ್ ಪಾಟೀಲ ಹೇಳಿದ್ದೇನು?

ವಿವಾಹ ವಿಚ್ಛೇದನ ಪಡೆದು ಬೇರೆಯವರೊಂದಿಗೆ ಸಂಸಾರ ನಡೆಸಲು ಮುಂದಾಗಿದ್ದರಿಂದಲೇ ಸವದತ್ತಿಯಲ್ಲಿ ಪತ್ನಿಯನ್ನು ಪತಿಯೋರ್ವ ಕೊಲೆ ಮಾಡಿರುವ ಸತ್ಯ ಪ್ರಾಥಮೀಕ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್ಪಿ ಸಂಜೀವ್ ಪಾಟೀಲ್ ಅವರು ತಿಳಿಸಿದರು. ಇಂದು ಬೆಳಿಗ್ಗೆ ಸವದತ್ತಿ ಪಟ್ಟಣ ಸಾಯಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಬಾನಾ ಎಂಬ ಮಹಿಳೆಯ ಕೊಲೆಯನ್ನು ಮಾಡಲಾಗಿದೆ. ಪತಿಯೇ ಈ ಕೊಲೆಯನ್ನು ಮಾಡಿದ್ದು, ಈಗಾಗಲೇ ಈ ದಂಪತಿ ವಿಚ್ಛೇದನ ಕೋರಿ ಕೋರ್ಟ್ ಮೊರೆ ಹೋಗಿದೆ. 10 …

Read More »

ಬಿಜೆಪಿ ಕಳಪೆ ಸರಕಾರ ಎನ್ನುವುದಕ್ಕೆ ಬೇರೆ ಪುರಾವೆ ಬೇಕೇ? ಕಾಂಗ್ರೆಸ್‌

ಬೆಂಗಳೂರು: ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್‌ ಟ್ವೀಟ್‌ ಕುಟುಕು ಮುಂದುವರಿಸಿದ್ದು, ಸಚಿವರ ಹೇಳಿಕೆ ಆಧರಿಸಿ ತಿರುಗೇಟು ನೀಡಿದೆ. ಸಚಿವರು ಕೆಲಸ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹೇಳುತ್ತಾರೆ. ನಾವು ಸರಕಾರ ನಡೆಸುತ್ತಿಲ್ಲ, ಮ್ಯಾನೇಜ್‌ ಮಾಡು ತ್ತಿದ್ದೇವೆ. ಸಹಕಾರ ಸಚಿವರು ಕೆಲಸ ಮಾಡುತ್ತಿಲ್ಲ ಎಂದು ಜವಾಬ್ದಾರಿಯುತ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳುತ್ತಾರೆ. ಕಾನೂನು ಸಚಿವರೇ ಕೆಲಸ ಮಾಡುತ್ತಿಲ್ಲ ಎಂದು ಎಸ್‌.ಟಿ. ಸೋಮಶೇಖರ್‌ ತಿಳಿಸುತ್ತಾರೆ. ಮಾಧುಸ್ವಾಮಿ ರಾಜೀನಾಮೆ ಕೊಡಲಿ ಎಂದು …

Read More »

ಬಿಜೆಪಿ ಜನೋತ್ಸವ ಮತ್ತೆ ಮುಂದೂಡಿಕೆ; ಕಾಂಗ್ರೆಸ್‌ ಲೇವಡಿ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ. ಆ.28 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿತ್ತು. ಈ ಕುರಿತಂತೆ ಪೂರ್ವ ಸಿದ್ಧತಾ ಸಭೆಗಳನ್ನೂ ನಡೆಸಲಾಗಿತ್ತು. ಆದರೆ, ಆಗಸ್ಟ್‌ ಕೊನೆ ವಾರದಲ್ಲಿ ಗಣೇಶ ಚತುರ್ಥಿ ಇರುವುದರಿಂದ ಆ ಸಂದರ್ಭದಲ್ಲಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡರೆ ಜನರನ್ನು ಸೇರಿಸುವುದು ಸಮಸ್ಯೆಯಾಗುವ ಕಾರಣಕ್ಕೆ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾಧ್ಯಮಗಳಿಗೆ …

Read More »