ಚಿಕ್ಕೋಡಿ: ಮನುಷ್ಯನ ಜೀವನ ಶೈಲಿಯ ಬದಲಾವಣೆಯಿಂದ ನಿಸರ್ಗ ತನ್ನ ಗುಣಮಟ್ಟ ಕಳೆದುಕೊಳ್ಳುತ್ತಿದೆ. ಮಣ್ಣು, ಗಾಳಿ ಹಾಗು ನೀರಿನಲ್ಲಿ ರಾಸಾಯನಿಕ ಸೇರಿಕೊಂಡು ಹೊಸ ಸಮಸ್ಯೆಗಳಿಗೆ ನಿಸರ್ಗ ಜನ್ಮ ನೀಡುತ್ತಿದೆ. ಹೀಗಾಗಿ ಮಣ್ಣು, ನೀರು, ಗಾಳಿ, ಇಂಧನ ರಕ್ಷಣೆಗೆ ಜನವರಿ 12, 13ರಂದು ಭೂತಾಯಿಯ ರಕ್ಷಣೆಗೆ ಸಂತರ-ರೈತರ ಮಹಾಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕನ್ಹೇರಿ ಸಿದ್ಧಗಿರಿ ಸಂಸ್ಥಾನ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ …
Read More »ಕನ್ನಡ ಧ್ವಜ ಹಾಕಿದ್ದಕ್ಕೆ ದುಷ್ಕರ್ಮಿಗಳು ಯುವಕರಿಗೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಚಿಕ್ಕೋಡಿ(ಬೆಳಗಾವಿ): ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಇಬ್ಬರು ಯುವಕರಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ. ಹಲ್ಲೆ ನಡೆಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂಕಲಿ ಗ್ರಾಮದ ಬಸವರಾಜ ಪಾಟೀಲ, ಹಾಗೂ ಶುಭಂ ಕಿವುಂಡಾ ಎಂಬವರ ಮೇಲೆ ಹಲ್ಲೆಯಾಗಿದೆ. ಅಂಗತ ಕರಮೆ, ಅನಿಕೇತ್ ಕರಮೆ, ಶಾಹು ಮಗದುಮ್ ಸೇರಿದಂತೆ ಹಲವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಂಕಲಿ ಗ್ರಾಮದಲ್ಲಿ ಕೆಲವು ಯುವಕರು ಶಿವಾಜಿ …
Read More »ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗಷ್ಟೇ ಕೆವೈಸಿ ಕಡ್ಡಾಯ
ಸುರತ್ಕಲ್, ಡಿ.20: ಇಲ್ಲಿನ ಗ್ಯಾಸ್ ಏಜೆನ್ಸಿಯೊಂದರಲ್ಲಿ ಕೆವೈಸಿ ಮಾಡಿಸಿಕೊಳ್ಳಲು ನೂರಾರು ಗ್ರಾಹಕರು ಜಮಾಯಿಸಿದ್ದು, ನೂಕುನುಗ್ಗಲಿಗೆ ಏಜೆನ್ಸಿಯವರು ಹೈರಾಣಾಗಿದ್ದಾರೆ. ಭಾರತ ಸರಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯಿಂದ 2023ರ ಅಕ್ಟೋಬರ್ 18ರಂದು ಹೊರಡಿಸಲಾಗಿದ್ದ ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇ ಈ ಗೊಂದಲಕ್ಕೆ ಕಾರಣ ಎಂದು ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಕರ್ನಾಟಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿ ಡೇನಿಯಲ್ …
Read More »ಐಶ್ವರ್ಯಾ ರೈ ಇಷ್ಟವಿರಲಿಲ್ಲ
ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ನಟ ಅಭಿಷೇಕ್ ಬಚ್ಚನ್ ನಡುವಿನ ಸಂಬಂಧದ ಬಗ್ಗೆ ಅನೇಕ ವಿಷಯಗಳು ಬೆಳಕಿಗೆ ಬರುತ್ತಿವೆ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ನಡುವೆ ಭಿನ್ನಾಭಿಪ್ರಾಯವಿದೆ, ಇಬ್ಬರೂ ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ಅನೇಕ ವರದಿಗಳು ಹೇಳುತ್ತಿವೆ. ಇದರ ಜೊತೆಗೆ ಕೆಲ ದಿನಗಳಿಂದಬಚ್ಚನ್ಕುಟುಂಬ ಸೊಸೆ ಐಶ್ವರ್ಯಾ ರೈ ಅವರನ್ನು ಕಡೆಗಣಿಸುತ್ತಿದೆ ಎಂದು ಹೇಳಲಾಗುತ್ತಿದೆ. ಕೆಲ ಮೂಲಗಳ ಪ್ರಕಾರ, ಜಯಾ …
Read More »ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್ಡಿಎಲ್) ಟೆಂಡರ್ಗಾಗಿ ಲಂಚ ಪಡೆದ ಆರೋಪದಲ್ಲಿ ಬಿಜೆಪಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಇಂದು ರದ್ದುಪಡಿಸಿ ಆದೇಶಿಸಿತು. ತಮ್ಮ ವಿರುದ್ಧದ ಪ್ರಕರಣ ರದ್ದತಿ ಕೋರಿ ಮಾಡಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಹಾಕಿತು. ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ ಸೆ.17 ಎ …
Read More »ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಕೆಶಿ
ದೆಹಲಿ/ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಬೆಂಗಳೂರು ಸಂಬಂಧಿತ ಮೂರು ಪ್ರಮುಖ ಯೋಜನೆಗಳಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹೆಚ್ಚಿನ ಆಸ್ಥೆ ವಹಿಸಿದ್ದು, ಈ ಸಂಬಂಧ ಕೆಲವು ಯೋಜನೆಗಳನ್ನು ರೂಪಿಸಲಾಗಿದೆ. ಇದರ ಅನುಷ್ಠಾನದಲ್ಲಿ ಹಣಕಾಸು, ಸಂಪನ್ಮೂಲ ಕ್ರೋಢೀಕರಣ, ಸಮನ್ವಯತೆ ಸೇರಿ ಹಲವು ತೊಡಕುಗಳಿವೆ. ಹೀಗಾಗಿ ಕೇಂದ್ರದ ನೆರವು ಅತ್ಯಗತ್ಯ ಎಂದು ಪತ್ರದಲ್ಲಿ ಕೋರಿದ್ದಾರೆ. …
Read More »ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳಿಗೆ ವಿದಾಯ: ಹೊಸ 3 ಮಸೂದೆಗಳು ಲೋಕಸಭೆಯಲ್ಲಿ ಪಾಸ್
ಲೋಕಸಭೆಯಲ್ಲಿ ಇಂದು ಮೂರು ಕ್ರಿಮಿನಲ್ ಕಾನೂನು ಮಸೂದೆಗಳು ಅಂಗೀಕಾರಗೊಂಡವು. ನವದೆಹಲಿ: ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ ಮೂರು ಹೊಸ ಮಸೂದೆಗಳು ಇಂದು ಲೋಕಸಭೆಯಲ್ಲಿ ಪಾಸ್ ಆಗಿವೆ. ಭಾರತೀಯ ನ್ಯಾಯ (ಎರಡನೇ) ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತೆ-2023 ಮತ್ತು ಭಾರತೀಯ ಸಾಕ್ಷ್ಯ (ಎರಡನೇ)-2023 ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.
Read More »ಶಕ್ತಿ ಯೋಜನೆಯಿಂದ ಹೆಚ್ಚಿದ ಸಾರಿಗೆ ನಿಗಮಗಳ ಆದಾಯ: ಸದ್ಯಕ್ಕಿಲ್ಲ ಬಸ್ ಪ್ರಯಾಣ ದರ ಹೆಚ್ಚಳ
ಬೆಂಗಳೂರು : ಶಕ್ತಿ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 15-20 ರಷ್ಟು ಹೆಚ್ಚಳವಾಗಿರುವುದರಿಂದ ನಾಲ್ಕು ಸಾರಿಗೆ ನಿಗಮಗಳ ಆದಾಯದಲ್ಲಿಯೂ ಹೆಚ್ಚಳವಾಗಿದೆ. ಹಾಗಾಗಿ ಸದ್ಯದ ಮಟ್ಟಿಗೆ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾಪದಿಂದ ಸಾರಿಗೆ ನಿಗಮಗಳು ದೂರ ಸರಿದಿವೆ. ಉಚಿತ ಟಿಕೆಟ್ ದರದ ಮೊತ್ತ ರೀ ಎಂಬರ್ಸ್ ಮೆಂಟ್ ಸರಿಯಾಗಿ ಮಾಡಿದಲ್ಲಿ ಸಾರಿಗೆ ನಿಗಮಗಳ ನಿರ್ವಹಣೆಗೆ ಯಾವುದೇ ತೊಂದರೆ ಆಗಲ್ಲ. ಟಿಕೆಟ್ ದರ ಪರಿಷ್ಕರಣೆ ಪ್ರಸ್ತಾಪದ ಪ್ರಮೇಯವೂ ಎದುರಾಗಲ್ಲ ಎನ್ನುವ ಲೆಕ್ಕಾಚಾರದಲ್ಲಿ ಸಾರಿಗೆ …
Read More »64 ವರ್ಷದ ವಿಧವಾ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಮುಂಬೈ(ಮಹಾರಾಷ್ಟ್ರ): 64 ವರ್ಷದ ವಿಧವಾ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿರುವ ಹೀನ ಕೃತ್ಯ ಈಶಾನ್ಯ ಮುಂಬೈನ ಟ್ರಾಂಬೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯ ವಿವರ: ಸಂತ್ರಸ್ತೆಯ ಮಗಳು ನೀಡಿರುವ ದೂರಿನ ಆಧಾರದ ಪ್ರಕಾರ ಘಟನೆ ಕುರಿತು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. “ಮಹಿಳೆಯು ಸೋಮವಾರ ರಾತ್ರಿ ಕುರ್ಲಾದ ನೆಹರು ನಗರ ಪ್ರದೇಶದ ಸಮೀಪದ ಖಂಡೋಬಾ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದರು. ಈ ವೇಳೆ ಅಲ್ಲಿದ್ದ ಅಪರಿಚಿತ ಮೂವರು ವ್ಯಕ್ತಿಗಳು ಅಪಹರಿಸಿ …
Read More »ಚಾಕು ತೋರಿಸಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ
ಕಲಬುರಗಿ: ಚಾಕು ತೋರಿಸಿ ಬೇದರಿಕೆ ಹಾಕಿ ಅಪ್ರಾಪ್ತೆ ಮೇಲೆ ಇಬ್ಬರು ಬಾಲಕರು ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಬಾಲಕಿ ಕುಟುಂಬಸ್ಥರು ದುಡಿಯಲು ಮುಂಬೈಗೆ ತೆರಳಿದ್ದು, ವಿದ್ಯಾಭ್ಯಾಸಕ್ಕಾಗಿ ಹತ್ತು ವರ್ಷದ ಬಾಲಕಿ ಸಂಬಂಧಿಕರ ಮನೆಯಲ್ಲಿದ್ದಾಳೆ. ಹೀಗಿರುವಾಗ 14 ಮತ್ತು 16 ವರ್ಷದ ಇಬ್ಬರು ಬಾಲಕರು ಸೇರಿ ಬಾಲಕಿಗೆ ಮಾರಕಾಸ್ತ್ರ ತೋರಿಸಿ ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರ ಮಾಡಿರುವ ದೃಶ್ಯ ತಮ್ಮ ಮೊಬೈಲ್ನಲ್ಲಿ ವಿಡಿಯೋ …
Read More »
Laxmi News 24×7