Breaking News
Home / ರಾಜ್ಯ (page 962)

ರಾಜ್ಯ

ಟೈರ್‌ಗೆ ಬೆಂಕಿ ಹಚ್ಚುವ ವೇಳೆ ಮೂವರಿಗೆ ತಗುಲಿತು ಬೆಂಕಿ..!

ಹಾವೇರಿ; ಟೈರ್‌ಗೆ ಬೆಂಕಿ ಹಚ್ಚುವ ವೇಳೆ ಪ್ಯಾಂಟ್‌ಗೆ ಬೆಂಕಿ ತಗುಲಿ ಮೂವರು ಪ್ರತಿಭಟನಾಕಾರರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಮೂವರು ಮಂದಿಯ ಪ್ಯಾಂಟ್‍ಗೆ ಬೆಂಕಿ ಕಿಡಿ ತಗುಲಿದ ಘಟನೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ನಡೆದಿದೆ. ಹಾವೇರಿಯಲ್ಲಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ …

Read More »

ಜೈಲಿನಿಂದ ಬಿಡುಗಡೆಯಾಗುತ್ತಲೇ ʼಶಾಕಿಂಗ್‌ʼ ಸಂಗತಿ ಹೇಳಿದ ನಟಿ ಚಿತಾಳೆ

ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಅವಹೇಳನಾಕಾರಿ ಪದ್ಯ ಬರೆದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮರಾಠಿ ನಟಿ ಕೇಟಕಿ ಚಿತಾಳೆ, ಪೊಲೀಸ್ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ತನಗೆ ಕಿರುಕುಳ ಮತ್ತು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಮನೆಯಲ್ಲಿದ್ದಾಗ ನನ್ನನ್ನು ಕಾನೂನುಬಾಹಿರವಾಗಿ ವಶಕ್ಕೆ ತೆಗೆದುಕೊಂಡ ಪೊಲೀಸರು ಯಾವುದೇ ಬಂಧನ ವಾರಂಟ್ ಮತ್ತು ನೊಟೀಸ್ ನೀಡದೇ ನನ್ನನ್ನು ಜೈಲಿಗೆ ಹಾಕಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ನಾನು ಸತ್ಯವನ್ನೇ …

Read More »

ಡಿಕೆಶಿ ಬುಡ ಅಲ್ಲಾಡಿಸಲು ತ್ರಿಶೂಲವ್ಯೂಹ! ‘ವಿಶ್ವನಾಥ್’ ಅಸ್ತ್ರ ಬಳಕೆಗೆ ಅಶ್ವಥ್ ನಾರಾಯಣ, ಸಿಪಿವೈ, ಜಾರಕಿಹೊಳಿ ರಣತಂತ್ರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ರ ರಾಜಕೀಯ ಬುಡ ಅಲ್ಲಾಡಿಸಲು ಬಿಜೆಪಿ ಭಾರಿ ರಣತಂತ್ರ ರೂಪಿಸಿದೆ. ಡಿಕೆಶಿಯ ಬದ್ಧವೈರಿಗಳಾದ ಅಶ್ವಥ್ ನಾರಾಯಣ, ಸಿ.ಪಿ.ಯೋಗೇಶ್ವರ್ ಮತ್ತು ರಮೇಶ್ ಜಾರಕಿಹೊಳಿ ಅವರು ಡಿಕೆಶಿ ಮಣಿಸಲು ತ್ರಿಶೂಲವ್ಯೂಹ ರಚನೆ ಮಾಡಿದ್ದಾರೆ.   ಸರ್ಕಾರ ಇರುವ ಸಂದರ್ಭದಲ್ಲಿ ಹಲವು ಬಿಜೆಪಿ ನಾಯಕರಿಗೆ ಖೆಡ್ಡಾ ತೋಡಲು ಸಿದ್ಧತೆ ನಡೆಸಿದ್ದ ಡಿಕೆಶಿಗೆ, ಇದೀಗ ಅವರ ಬದ್ಧವೈರಿಗಳು ‘ವಿಶ್ವನಾಥ್’ ಎಂಬ ಅಸ್ತ್ರವನ್ನ ಹೂಡುತ್ತಿದ್ದಾರೆ. ಈ ಹಿಂದೆ ಚುನಾವಣೆಯಲ್ಲಿ ಡಿಕೆಶಿ ವಿರುದ್ಧ ಅತ್ಯಂತ ಕಡಿಮೆ …

Read More »

ಬೆಳಗಾವಿ: ಮಲಗಿರುವ ರೀತಿಯಲ್ಲಿ ವ್ಯಕ್ತಿಯ ಅಸ್ತಿಪಂಜರ ಪತ್ತೆ!

ಬೆಳಗಾವಿ: ಮನೆಯಲ್ಲಿ ಮಲಗಿಕೊಂಡಿರುವ ರೀತಿಯಲ್ಲಿ ಸಾವನ್ನಪ್ಪಿದ ಮನುಷ್ಯನ ಅಸ್ತಿಪಂಜರ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಶಿವಾಪೂರ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಮೃತರನ್ನು ಶಿವಾಪೂರ ಗ್ರಾಮದ ಪ್ರಕಾಶ ತವನಪ್ಪ ಮುರಗುಂಡಿ ಮತ್ತು ಅಂದಾಜು 8 ರಿಂದ 9 ತಿಂಗಳ ಹಿಂದೆ ಸಾವಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಬುದ್ಧಿಮಾಂದ್ಯನಾಗಿದ್ದ ಆತ ಮನೆಯಲ್ಲಿ ತಾನೊಬ್ಬನೇ ವಾಸ ಮಾಡುತ್ತಿದ್ದ. ಹಳೇ ಕಟ್ಟಡದಲ್ಲಿ ಏಕಾಂಗಿ ಜೀವನ ನಡೆಸುತ್ತಿದ್ದ ಆತ ಪದವೀಧರನಾಗಿದ್ದ. ಮನೆಯ ಒಳಗೆ ಕೀಲಿ …

Read More »

ಸರ್ಕಾರಿ ಮತ್ತು  ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ  50ಕ್ಕೂ ಹೆಚ್ಚು ಜನರು ಗಾಯ

ಶಿವಮೊಗ್ಗ: ಸರ್ಕಾರಿ (KSRTC) ಮತ್ತು  ಖಾಸಗಿ ಬಸ್ ( Privet Bus ) ನಡುವೆ ಅಪಘಾತ ( Accident ) ಸಂಭವಿಸಿ  50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ( Injured ) ಘಟನೆ ಶಿವಮೊಗ್ಗ ( Shivamogga ) ತಾಲೂಕಿನ ತೋಟದಕೆರೆ ಬಳಿ ನಡೆದಿದೆ. ಗಾಯಾಳುಗಳನ್ನು ಮೆಗ್ಗಾನ್ (Meggan Hospital) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಬಸ್ ಚಾಲಕ ಶ್ರೀಧರ್‌ ಸ್ಥಿತಿ ಗಂಭೀರವಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ. ಖಾಸಗಿ ಬಸ್ ಕೆಕೆಬಿ ಶಿವಮೊಗ್ಗದಿಂದ ಶೃಂಗೇರಿ ಹೊರಟಿತ್ತು. …

Read More »

ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ :

ಬೆಂಗಳೂರು: ಮುಂಗಾರು ಮಳೆ ಆರಂಭಟ ರಾಜ್ಯಾಧ್ಯಂತ ಜೋರಾಗಿದೆ. ಕರಾವಳಿ ಭಾಗದ ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ಜನ ಜೀವನವೇ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ರಾಜ್ಯಾಧ್ಯಂತ ಜುಲೈ.5ರವರೆಗೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಇಂದಿನಿಂದ ಜುಲೈ 5 ರವರೆಗೆ …

Read More »

ಬೆಳಗಾವಿ | ಮುನ್ನೆಚ್ಚರಿಕೆ ಇಲ್ಲದೆ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ: ಆಯೋಜಕರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ, ಜು.1: ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆ ಜೂ.29ರಂದು ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ ನಡೆದಿದ್ದು, ಇದರ ವಿಡಿಯೋಗಳು ಜು.1ರಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಈ ಹಿನ್ನೆಲೆಯಲ್ಲಿ ಆಯೋಜಕರ ವಿರುದ್ಧ ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚಮಕೇರಿ ಗ್ರಾಮದ ರಸ್ತೆಯಲ್ಲಿ ಬೀರಲಿಂಗೇಶ್ವರ ಜಾತ್ರೆ ಪ್ರಯುಕ್ತ ಬುಧವಾರ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅಪಾಯವನ್ನೂ ಲೆಕ್ಕಿಸದೆ ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಪೆÇಲೀಸರು ಗ್ರಾಮಕ್ಕೆ …

Read More »

ಡಿಸೆಂಬರ್​ನಲ್ಲೇ ವಿಧಾನಸಭೆ ಚುನಾವಣೆ ಸಾಧ್ಯತೆ: ಸಜ್ಜಾಗಿ ಎಂದ H.DK

ಬೆಂಗಳೂರು: ವಿಧಾನಸಭೆ ಚುನಾವಣೆ ಡಿಸೆಂಬರ್​ನಲ್ಲೇ ಎದುರಾಗುವ ಸಾಧ್ಯತೆಗಳಿವೆ. ಜೆಡಿಎಸ್​ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ. ಜೆಡಿಎಸ್​ ರಾಜ್ಯ ಕಚೇರಿ ಜೆಪಿ ಭವನದಲ್ಲಿ ‘ಜನತಾಮಿತ್ರ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕನಿಷ್ಠ ಹದಿನೈದು ಕ್ಷೇತ್ರಗಳನ್ನುಗೆಲ್ಲುವ ವಾತಾವರಣ ಜೆಡಿಎಸ್​ಗೆ ಇದೆ. ವಿಧಾನಸಭೆ ಮತ್ತು ಬಿಬಿಎಂಪಿ ಚುನಾವಣೆಗೆ ಕಾರ್ಯಕರ್ತರು ಸಂಘಟಿತರಾಗಬೇಕು. ಬೆಂಗಳೂರು ಹಂತ-ಹಂತವಾಗಿ ಬೆಳೆಯುತ್ತಿದೆ. ಬೆಂಗಳೂರಿನಲ್ಲಿ ನಮ್ಮ ಪಕ್ಷ ಶಕ್ತಿಯುತವಾಗಿಲ್ಲ ಎಂಬ ಭಾವನೆ ತೆಗೆದುಹಾಕಬೇಕು ಎಂದು …

Read More »

2022ರ ವಿಧಾನಸಭೆ ಚುನಾವಣೆ ಮಾಜಿ ಸಿಎಂ ಸಿದ್ದರಾಮಯ್ಯ ಸವದತ್ತಿ ಯಿಂದ ಸ್ಪರ್ಧೆ ?

ಬೆಳಗಾವಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೆಚ್ಚಿರುವ ವಿಧಾನಸಭೆ ಕ್ಷೇತ್ರಗಳ ಮೇಲೆ ಕಾಂಗ್ರೆಸ್‌ನ ಕೆಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಕಾಂಗ್ರೆಸ್ ನಾಯಕರು ತಾವು ಈಗ ಶಾಸಕರಾಗಿರುವ ಕ್ಷೇತ್ರವನ್ನು ಮುಂದಿನ ಚುನಾವಣೆಯಲ್ಲಿ ಉಳಿಸಿಕೊಳ್ಳಲು ಸಮರ್ಥರಿದ್ದರೂ ಕೂಡ ಕ್ಷೇತ್ರ ಬದಲಾಯಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿಯ ಆನಂದ್ ಮಾಮ್ನಿ ಗೆದ್ದಿರುವ ಪಕ್ಷದ ಮತಗಳ …

Read More »

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ.. ಹೈದರಾಬಾದ್​ಗೆ ಸಿಎಂ

ಬೆಂಗಳೂರು: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದಿನಿಂದ ಹೈದರಾಬಾದ್‌ನಲ್ಲಿ ಆರಂಭವಾಗಲಿದ್ದು, ಚುನಾವಣೆ, ಪಕ್ಷ ವಿಸ್ತರಣೆ ಮತ್ತು ಮೋದಿ ಆಡಳಿತವನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವ ಪ್ರಮುಖ ವಿಷಯಗಳು ಚರ್ಚೆಯಾಗಲಿವೆ. ಹೈದರಾಬಾದ್​ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.ಎರಡು ದಿನ ಕಾರ್ಯಕಾರಣಿ ಸಭೆಯಲ್ಲಿ …

Read More »