Home / ರಾಜ್ಯ (page 993)

ರಾಜ್ಯ

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್ ಬೆಂಗಳೂರು: ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ಕನ್ನಡ ಭಾಷೆಯಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನಾರ್ಹವಾಗಿತ್ತು.

Read More »

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಸತತ 8 ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನ ಪರಿಷತ್ ಚುನಾವಣೆಯಲ್ಲಿ ದಾಖಲೆಯನ್ನು ನಿರ್ಮಿಸಿದ್ದಾರೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 11,000ನಲ್ಲಿ 7070 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ.

Read More »

ಹಣಮಂತ ನಿರಾಣಿ ಪಿ ಎ ಮೇಲೆ ಗರಂ ಆದ ಬೆಳಗಾವಿ ಡಿಸಿ

ವಿಧಾನ ಪರಿಷತ್ ಚುನಾವಣೆ ಎಲ್ಲೆಡೆ ಬಿಗಿ ಭದ್ರತೆ ಇಂದ ಮತದಾನ ನಡೆಯುವಾಗ ಹಣಮಂತ ನಿರಾಣಿ ಆಪ್ತ ಸಹಾಯಕ ಮೇಲೆ ಬೆಳಗಾವಿ ಡಿಸಿ ಗರಂ ಆಗಿದ್ದಾರೆ ಪಾಸ್ ಇಲ್ಲದೆ ಒಳಗಡೆ ಪ್ರವೇಶ ಮಾಡಿದವನಿಗೆ ಚಳಿ ಬಿಡಿಸಿದ ಬೆಳಗಾವಿ ಡಿಸಿ ಹಣಮಂತ ನಿರಾಣಿ ಸಹಾಯಕ ಪಾಸ್ ಇಲ್ಲದೆ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ಮಾಡುತ್ತಿದ್ದರು ಅದನ್ನು ನೋಡಿ ಡಿ ಸಿ ಇವರನ್ನ ಆಚೆ ಹಾಕಿ ಎಂದು ಗರಂ ಆಗಿದ್ದರೆ  ಇವನ್ನ ಆಚೆ ಕಳಸಿ …

Read More »

ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದ ಬೈಕ್

ಧರ್ಮಸ್ಥಳ, ಜೂ.15. ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರರೋರ್ವರು ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಿಗ್ಗೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಧರ್ಮಸ್ಥಳದ ಸ್ನಾನಘಟ್ಟ ಸಮೀಪ ಹೊಟೇಲ್ ನಡೆಸುತ್ತಿದ್ದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್(42) ಎಂದು ಗುರುತಿಸಲಾಗಿದೆ. ಇವರು ಧರ್ಮಸ್ಥಳದಿಂದ ಸ್ನಾನಘಟ್ಟದ ಕಡೆಗೆ ತನ್ನ ಬೈಕ್ ನಲ್ಲಿ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರವನ್ನು ಗಮನಿಸದೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. …

Read More »

ಬೆಳಗಾವಿ ತಾಲೂಕಿನ ಹುಂಚ್ಯಾನಟ್ಟಿಯಲ್ಲಿ ಎರಡು ಗುಂಪುಗಳ ಮಧ್ಯ ಗಲಾಟೆ: ಇಬ್ಬರಿಗೆ ಗಾಯ

ವಯಕ್ತಿಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಜಗಳವಾಗಿದ್ದು. ಗಲಾಟೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Read More »

ಆತ್ಮಹತ್ಯೆ ಪ್ರಕರಣ: ಎಸ್‌.ಆರ್‌.ಪಾಟೀಲರ ಕೈವಾಡ- ಶಾಸಕ ನೆಹರು ಓಲೇಕಾರ ಗಂಭೀರ ಆರೋಪ

ಬ್ಯಾಡಗಿ: ತಾಲ್ಲೂಕಿನ ಶಿಡೇನೂರು ಗ್ರಾಮದಲ್ಲಿ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆಯ ಹಿಂದೆ ಬ್ಯಾಡಗಿಯ ಕಾಂಗ್ರೆಸ್‌ ಮುಖಂಡ ಎಸ್‌.ಆರ್‌.ಪಾಟೀಲ ಅವರ ಕೈವಾಡವಿದೆ. ನಿನ್ನೆ ರೈತರನ್ನು ಕರೆಸಿಕೊಂಡು ಪ್ರಚೋದನೆ ನೀಡಿದ್ದಾರೆ ಎಂದು ಶಾಸಕ ನೆಹರು ಓಲೇಕಾರ ಗಂಭೀರ ಆರೋಪ ಮಾಡಿದ್ದಾರೆ.   ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ‘ನಮ್ಮ ಕುಟುಂಬದವರು ಆಸ್ತಿ ಕೊಡಿ ಅಂತಾ ಯಾರನ್ನೂ ಕೇಳಿಲ್ಲ. ನನ್ನ ಜೊತೆಗೆ ಯಾರೂ ಚರ್ಚೆ ಮಾಡಿಲ್ಲ. ನಾನೇ ಶಿಡೇನೂರು ಗ್ರಾಮದ ಕೆಲವು ಕುಟುಂಬಗಳಿಗೆ ಹಿಂದೆ …

Read More »

ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಮತಾ ಎಣಿಕೆ ಆರಂಭ..

ಬೆಳಗಾವಿ – ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕ, ವಾಯವ್ಯ ಪದವೀಧರ ಹಾಗೂ ಪಶ್ಚಿಮ ಶಿಕ್ಷಕ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆಗೆ ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಸಕಲ ಸಿದ್ಧತೆಗಳಾಗಿದ್ದು, ಮತ ಎಣಿಕೆ ಇನ್ನೇನು ಆರಂಭವಾಗಲಿದೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ ಈ ಕುರಿತು ಮಾಹಿತಿ ನೀಡಿದ್ದಾರೆ. ಮತ ಎಣಿಕೆಗೆ ಉಸ್ತುವಾರಿಗಳಾಗಿ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಡಾ.ರವಿಶಂಕರ ಜೆ, ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ ಮುನೀಶ್ ಮೌಜ್ಗಿಲ್ ಹಾಗೂ ವಾಯವ್ಯ ಪದವೀಧರ ಕ್ಷೇತ್ರಕ್ಕೆ ರಾಜೇಂದ್ರ ಕುಮಾರ …

Read More »

ಬೆಳಗಾವಿ ಬಳ್ಳಾರಿ ನಾಲೆಯ ಸೇತುವೆ ಕಾಮಗಾರಿಯು ಅತ್ಯಂತ ತ್ವರಿತವಾಗಿ ನಡೆಯುತ್ತಿದೆ.

ಬೆಳಗಾವಿಯ ಬಸವನಕುಡಚಿಯ ಹೊಲಗದ್ದೆಯಲ್ಲಿರುವ ಬಳ್ಳಾರಿ ನಾಲೆಯ ಸೇತುವೆ ಕಾಮಗಾರಿಯು ಅತ್ಯಂತ ತ್ವರಿತವಾಗಿ ನಡೆಯುತ್ತಿದೆ. ಪ್ರತಿ ವರ್ಷ ಮಳೆಯ ಆರ್ಭಟಕ್ಕೆ ಸಾವಿರಾರು ಎಕರೆ ಕೃಷಿ ಭೂಮಿ ಮುಳುಗಡೆಯಾಗಿದ್ದು, ಪ್ಲಾಸ್ಟಿಕ್ ಬಾಟಲಿಗಳು ನಾಲಾದಲ್ಲಿ ಜಲಾವೃತವಾಗಿವೆ. ಇಂಜೆಕ್ಷನ್ ಸೂಜಿ ಗದ್ದೆಯಲ್ಲಿ ಹರಡಿ ರೈತರ ಕಾಲಿಗೆ ಚುಚ್ಚುತ್ತಿದೆ. ಗ್ರಾಮಸ್ಥರು ಕಳೆದ 20 ವರ್ಷಗಳಿಂದ ಹಲವು ಬಾರಿ ದೂರು ನೀಡಿದರೂ ಆಡಳಿತ ಗಮನಕ್ಕೆ ತಂದರೂ ಕೂಡ ಯಾವುದೇ ಕೆಲಸವಾಗಿಲ್ಲ. ಹೀಗಾಗಿ ಕುಡಚಿ ಗ್ರಾಮದಲ್ಲಿ ಶಾಸಕ ಅನಿಲ್ ಬೆನಕೆ …

Read More »

ಎಪ್ರೀಲ್ ಅಂತ್ಯಕ್ಕೆ ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆಗೆ ಚಾಲನೆ: ಶ್ರೀಮಂತ ಪಾಟೀಲ್

ಕಳೆದ ಅನೇಕ ವರ್ಷಗಳಿಂದ ಕಾಗವಾಡ ತಾಲೂಕಿನ ಸಾವಿರಾರು ರೈತರ ಜೀವನಾಡಿಯಾಗಿರುವ ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆ ಬರುವ ಏಪ್ರಿಲ್ ತಿಂಗಳದ ಕೊನೆವರೆಗೆ ಚಾಲನೆಗೊಳ್ಳಲಿದೆ ಎಂದು ಮಾಜಿ ಸಚಿವರು ಹಾಗೂ ಕಾಗವಾಡ ಕ್ಷೇತ್ರ ಶಾಸಕ ಶ್ರೀಮಂತ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಒಂದು ಕಾರ್ಯಕ್ರಮದಲ್ಲಿ ಇನ್ ನ್ಯೂಸ್ ವಾಹಿನಿಗೆ ಮಾಹಿತಿ ನೀಡುವಾಗ ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆಯಿಂದ ಬರಡ ಭೂಮಿಗೆ ನೀರು ಹರಿಸಲಾಗುವುದು ಎಂದು …

Read More »

ಕರ್ನಾಟಕದ ಉಪಲೋಕಾಯುಕ್ತರಾಗಿರುವ , ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್

ಬೆಂಗಳೂರು : ಕರ್ನಾಟಕದ ಉಪಲೋಕಾಯುಕ್ತರಾಗಿರುವ , ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಬುಧವಾರ ಬೆಳಗ್ಗೆ ನೂತನ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯ ಸರಕಾರ ಬಿ.ಎಸ್. ಪಾಟೀಲ್ ಅವರಿಗೆ ಪದೋನ್ನತಿ ನೀಡಿದ್ದು,ಸರಕಾರದ ಶಿಫಾರಸಿಗೆ ರಾಜ್ಯಪಾಲರಾದ ಗೆಹಲೋಟ್ ಅವರು ಸಹಿ ಹಾಕಿದ್ದಾರೆ. ಬುಧವಾರ ಬೆಳಗ್ಗೆ 9.45 ಕ್ಕೆ ರಾಜ ಭವನದಲ್ಲಿ 9 ನೇ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಾಯುಕ್ತರಾಗಿದ್ದ ಪಿ. ವಿಶ್ವನಾಥ್ ಶೆಟ್ಟಿ ನಿವೃತ್ತಿ ಘೋಷಿಸಿದ ಬಳಿಕ ಸ್ಥಾನ ತೆರವಾಗಿತ್ತು.

Read More »