Home / ರಾಜ್ಯ (page 998)

ರಾಜ್ಯ

ಇಳಿದ ಟೊಮೆಟೊ ಬೆಲೆ, ಗ್ರಾಹಕರಿಗೆ ಸಮಾಧಾನ

 ಹಲವು ವಾರಗಳಿಂದ ನಿರಂತರವಾಗಿ ಏರಿಕೆಯಾಗಿದ್ದ ಟೊಮೆಟೊ ಬೆಲೆ ಈ ವಾರ ಇಳಿಕೆ ಕಂಡಿದ್ದು, ಗ್ರಾಹಕರು ಸ್ವಲ್ಪ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ನಗರಕ್ಕೆ ಕೊಪ್ಪಳ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಟೊಮೆಟೊ ಬರುತ್ತದೆ. ಎರಡ್ಮೂರು ವಾರ ಅಲ್ಪ ಮಳೆಯಾಗಿದ್ದರಿಂದ ಬೆಳೆದಿದ್ದ ಟೊಮೆಟೊದಲ್ಲಿ ಕೆಲವೊಂದಿಷ್ಟು ಕೆಟ್ಟು ಹೋಗಿದ್ದವು. ಕಳೆದ ವಾರದಿಂದ ಮಳೆ ಇಲ್ಲ. ಹೀಗಾಗಿ ಈಗ ಬೆಲೆ ಇಳಿಕೆಯಾಗಿದೆ ಎನ್ನುತ್ತಾರೆ ವ್ಯಾಪಾರಿಗಳು. ಚಿಲ್ಲರೆ ಮಾರುಕಟ್ಟೆಯಲ್ಲಿ ನಗರದಲ್ಲಿ ಹೋದ ವಾರ ಒಂದು ಕೆ.ಜಿ. ಟೊಮೆಟೊಗೆ ₹80 …

Read More »

ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆ ‘ಶಾಲಾ-ಕಾಲೇಜು’ಗಳಿಗೆ ರಜೆ

ಬೆಂಗಳೂರು: ಕರ್ನಾಟಕದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಲವಾರು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ, ಅಂದರೆ ಜೂನ್ 13 ರಂದು ರಜೆ ಘೋಷಿಸಿದೆ. ವಿಜಯಪುರ, ಬಾಗಲಕೋಟೆ, ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.   ಇದಲ್ಲದೆ, ಸರ್ಕಾರಿ-ಅನುದಾನಿತ, ಅನುದಾನರಹಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳು ( …

Read More »

ಬೆಳಗಾವಿಯಲ್ಲಿ ಸ್ಟ್ರಾಂಗ್ ರೂಮ್ ಇರುವುದರಿಂದ ವಿಶೇಷ ಕಾಳಜಿ:ಬೊರಲಿಂಗಯ್ಯ

ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಯ ಎಲ್ಲಾ ಹಂತದಲ್ಲಿಯೂ ವ್ಯಾಪಕ ಬಂದೋಬಸ್ತ್ ಮಾಡಲಾಗುತ್ತದೆ ಎಂದು ನಗರಪೊಲೀಸ್ ಆಯುಕ್ತರಾದ ಡಾ. ಬೊರಲಿಂಗಯ್ಯ ತಿಳಿಸಿದ್ದಾರೆ. ಬೆಳಗಾವಿ ನಗರದಲ್ಲಿ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಂದೋಬಸ್ತ್ ಕುರಿತಂತೆ ಮಾತನಾಡಿದ ಡಾ. ಬೊರಲಿಂಗಯ್ಯನವರು, ಪರಿಷತ್ ಚುನಾವಣೆ ಹಿನ್ನೆಲೆ ಪೋಲಿಂಗ್ ಡೇದಿಂದಲೇ ಬಂದೋಬಸ್ತ್ ಕಾರ್ಯವನ್ನು ಮಾಡಲಾಗುತ್ತದೆ. ಬೆಳಗಾವಿ ನಗರದಲ್ಲಿಯೂ ವಿಶೇಷ ಭದ್ರತೆ ಒದಗಿಸಲಾಗುತ್ತದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರ ಅಧೀನದಲ್ಲಿ ಬರುವ ಎಲ್ಲಾ ಕಡೆ ಬಂದೋಬಸ್ತ್ …

Read More »

ಹೊರಟ್ಟಿ ಮೇಲೆ ಕೇಸ್, ನೋಟಿಸ್ :R.C. ಆದಿತ್ಯಾ ಬಿಸ್ವಾಸ್

ವಿಧಾನಪರಿಷತ್ ಚುನಾವಣೆ ಹಿನ್ನೆಲೆ ನೀತಿಸಂಹಿತೆ ಉಲ್ಲಂಘನೆ ಕೇಸ್‍ನಡಿ ಐದು ಸೀಜ್‍ಗಳಾಗಿವೆ. ಇದು ಬಿಟ್ಟು ಎರಡು ಮೇಜರ್ ದೂರು ಬಂದಿವೆ, ಕೆಲವು ಸಣ್ಣಪುಟ್ಟ ದೂರುಗಳನ್ನು ನಾವು ಇತ್ಯರ್ಥ ಮಾಡಿದ್ದೇವೆ ಎಂದು ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯಾ ಬಿಸ್ವಾಸ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯಾ ಬಿಸ್ವಾಸ್ ಅವರು ಬಾಗಲಕೋಟೆಯಿಂದ ಓರ್ವ ವ್ಯಕ್ತಿ ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಭಾಷ ಕೋಟೆ …

Read More »

ಪೊಲೀಸ್ ಇನ್ಸ್​​ಪೆಕ್ಟರ್ ಧಮ್ಕಿಗೆ ಹೆದರಿದ 13 ವರ್ಷದ ಬಾಲಕಿ ಶಾಲೆಗೆ ಹೋಗದೇ, ಭಯಭೀತ

ಕಾರವಾರ: ಪೊಲೀಸ್ ಇನ್ಸ್​​ಪೆಕ್ಟರ್ ಧಮ್ಕಿಗೆ ಹೆದರಿದ 13 ವರ್ಷದ ಬಾಲಕಿಯೋರ್ವಳು ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದು ಕುಳಿತ ಘಟನೆ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ಮುಂಡಗೋಡ ಪೊಲೀಸ್ ಠಾಣೆ ಇನ್ಸ್​​ಪೆಕ್ಟರ್ ಸಿದ್ದಪ್ಪ ಸಿಮಾನಿ‌ ಬಾಲಕಿಗೆ ಧಮ್ಕಿ ಹಾಕಿದ್ದಾರೆ ಎನ್ನಲಾಗ್ತಿದೆ. ಜೂನ್​​ 5ರಂದು ಹೊಲದ ವಿಷಯವಾಗಿ ಸುಭಾನ್‌ಸಾಬ್‌ ನಬಿಸಾಬ್ ಹುಲಗುರ ಹಾಗೂ ಮುಂಡಗೋಡ ಠಾಣೆ ಇನ್ಸ್​​ಪೆಕ್ಟರ್ ಸಿದ್ದಪ್ಪ ಸಿಮಾನಿ‌ ನಡುವೆ ಜೋರಾದ ಮಾತುಕತೆ ನಡೆದಿದೆ. ಇದನ್ನು ದೂರದಿಂದಲೇ ನೋಡುತ್ತಿದ್ದ ಬಾಲಕಿ …

Read More »

ಶಿಕ್ಷಕರ ಹಾಗೂ 2 ಪದವೀಧರರ ಕ್ಷೇತ್ರಗಳಿಗೆ ಸೋಮವಾರಮತದಾನ, ಜೂ.15 ರಂದು ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ಮತ ಎಣಿಕೆ

ವಿಧಾನ ಪರಿಷತ್ತಿನ 2 ಶಿಕ್ಷಕರ ಕ್ಷೇತ್ರ ಹಾಗೂ 2 ಪದವೀಧರರ ಕ್ಷೇತ್ರಗಳಿಗೆ ಸೋಮವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ವಾಯವ್ಯ ಪದವೀಧರ ಕ್ಷೇತ್ರ, ವಾಯವ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಪದವೀಧರರ ಕ್ಷೇತ್ರಗಳ ಚುನಾವಣೆಗೆ ಚುನಾವಣಾ ಆಯೋಗ ಎಲ್ಲ ಸಿದ್ಧತೆ ಮಾಡಿದೆ. ನಾಲ್ಕು ಕ್ಷೇತ್ರದಲ್ಲಿ ಒಟ್ಟು 607 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 45 ಪುರುಷ ಹಾಗೂ 4 ಮಹಿಳೆ ಸೇರಿ 49 ಮಂದಿ …

Read More »

ಬೆಳಗಾವಿ ಸೇರಿ ರಾಜ್ಯದೆಲ್ಲೆಡೆ ಇಂದಿನಿಂದ ಭಾರಿ ಮಳೆಯ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಬಿರುಸಾಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ …

Read More »

ದೇಶದಲ್ಲಿ ಅವಘಡ ಆಗುತ್ತೆ ಎಂದಿದ್ದೆ, ಅದೀಗ ಆರಂಭವಾಗಿದೆ. ಮುಂದೆ ದೊಡ್ಡ ಅಪಾಯವಿದೆ: ಕೋಡಿಶ್ರೀ ಭವಿಷ್ಯ

ಬಳ್ಳಾರಿ: ಇನ್ನು ಒಂದೂವರೆ ವರ್ಷದಲ್ಲಿ ಮಹಾಮಾರಿ ಕೋವಿಡ್​-19 ಸಂಪೂರ್ಣವಾಗಿ ಮರೆಯಾಗುತ್ತದೆ. ಆದರೆ, ಹೋಗುವಾಗ ವಿಶೇಷವಾದ ಕಷ್ಟ ಒಂದನ್ನು ಕೊಟ್ಟು ಹೋಗುತ್ತದೆ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದರು.   ಬಳ್ಳಾರಿಯಲ್ಲಿ ಇಂದು ಮಾತನಾಡಿದ ಕೋಡಿಮಠದ ಶ್ರೀಗಳು, ಕೋವಿಡ್​ ಮತ್ತೆ ಬರುತ್ತದೆ ಎಂದು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಅದರಂತೆ ಕರೊನಾ ಪ್ರಕರಣಗಳು ನಿತ್ಯವು ಏರಿಕೆಯಾಗುತ್ತಿದೆ. ಆದರೆ, ಕೊವಿಡ್ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ. ಒಂದೂವರೆ ವರ್ಷದಲ್ಲಿ …

Read More »

ಫಡ್ನವಿಸ್ ಅವರು ಪಕ್ಷೇತರ ಶಾಸಕರನ್ನು ನಮ್ಮ ಪಾಳೆಯದಿಂದ ದೂರವಿಡುವ ಮೂಲಕ “ಪವಾಡ” ಮಾಡುವಲ್ಲಿ ಯಶಸ್ವಿ: ಶರದ್ ಪವಾರ್

ಪುಣೆ/ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಆರು ಸ್ಥಾನಗಳ ಪೈಕಿ ಪ್ರತಿಪಕ್ಷ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕೇಸರಿ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಪಕ್ಷೇತರ ಶಾಸಕರನ್ನು ನಮ್ಮ ಪಾಳೆಯದಿಂದ ದೂರವಿಡುವ ಮೂಲಕ “ಪವಾಡ” ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶನಿವಾರ ಹೇಳಿದ್ದಾರೆ.   ಚುನಾವಣಾಯಲ್ಲಿ ಮಿತ್ರ ಪಕ್ಷ ಶಿವಸೇನೆಯ ಅಭ್ಯರ್ಥಿಯೊಬ್ಬರು ಸೋತಿರುವುದರಿಂದ ನಾನು ಆಘಾತಕ್ಕೆ ಒಳಗಾಗಿಲ್ಲ ಎಂದು …

Read More »

ಅಕ್ಕಿ ಸಾಗಾಟ ಕೇಸ್: ಮುಖ್ಯ ಶಿಕ್ಷಕ ಶರಣಪ್ಪ ಅಮಾನತು

ಅಕ್ಕಿ ಸಾಗಾಟ ಕೇಸ್ ಅಕ್ಷರ ದಾಸೋಹ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನಲೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನ್ನು ಅಮಾನತ್ತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಂ. ಹರನಾಳ ಆದೇಶಿಸಿದ್ದಾರೆ. ಇನ್ನು ಅಂದಾಜು 44,900 ರೂ.ಮೌಲ್ಯದ ಆಹಾರ ಸಾಮಗ್ರಿಗಳನ್ನು ಬೇರೆ ಕಡೆಗೆ ಸಾಗಿಸುತ್ತಿರುವುದು ಸಾಬೀತಾಗಿದೆ. ಅದಕ್ಕಾಗಿ ಮುಖ್ಯಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಂ. …

Read More »