ಬೆಂಗಳೂರು: “ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. “ಶಿವಕುಮಾರ್ ಅವರು ಜಲಸಂಪನ್ಮೂಲ …
Read More »ಹುಬ್ಬಳ್ಳಿಯಲ್ಲಿ ಅನಧಿಕೃತ ಬ್ಯಾನರ್ಗಳ ಹಾವಳಿ: ಮಹಾನಗರ ಪಾಲಿಕೆ ಆದಾಯಕ್ಕೂ ಕೊಕ್ಕೆ
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಅವಳಿ ನಗರದಲ್ಲಿ ಬ್ಯಾನರ್ಗಳು, ಬಂಟಿಂಗ್ ಹಾಗೂ ಫ್ಲೆಕ್ಸ್ಗಳ ಹಾವಳಿ ಮಿತಿಮೀರಿದೆ. ಮುಖ್ಯ ರಸ್ತೆಗಳು ಸೇರಿದಂತೆ ಎಲ್ಲೆಂದರಲ್ಲಿ ಅನಧಿಕೃತವಾಗಿ ಬ್ಯಾನರ್ಗಳನ್ನು ಅಳವಡಿಸಿರುವುದರಿಂದ ನಗರ ಸೌಂದರ್ಯಕ್ಕೂ ಧಕ್ಕೆಯಾಗಿದೆ. ಸುಗಮ ಸಂಚಾರಕ್ಕೂ ಸಮಸ್ಯೆಯಾಗಿದೆ. ಜೊತೆಗೆ ಮಹಾನಗರ ಪಾಲಿಕೆ ಆದಾಯಕ್ಕೂ ಕುತ್ತು ಬಂದಿದೆ. ನಗರದಲ್ಲಿ ರಾಜಕೀಯ ಪಕ್ಷದ ಅಥವಾ ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಕೂಡ ಶುಭಕೋರುವ ಹಾಗೂ ಸ್ವಾಗತಕೋರುವ ಬ್ಯಾನರ್ಗಳು ದೊಡ್ಡ ಪ್ರಮಾಣದಲ್ಲಿವೆ. ಗೋಕುಲ ರಸ್ತೆಯ ವಿಮಾನ ನಿಲ್ದಾಣದಿಂದ …
Read More »ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೊಪ್ಪಿಸಿದ ಜನ
ಬೆಂಗಳೂರು: ವಿಶೇಷಚೇತನ ಯವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಸ್ಥಳಿಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನವೆಂಬರ್ 9ರಂದು ಆಡುಗೋಡಿಯ ಎಂ.ಆರ್. ನಗರದಲ್ಲಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ಮಾಹಿತಿಯನ್ವಯ ಆರೋಪಿ ವಿಘ್ನೇಶ್ ಅಲಿಯಾಸ್ ದಾಡು ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾತು ಬಾರದ, ಕಾಲು ಸ್ವಾಧೀನವಿರದ 21 ವರ್ಷ ವಯಸ್ಸಿನ ಯುವತಿಯನ್ನು ಮನೆಯಲ್ಲಿ ಬಿಟ್ಟು, ಹೊರಗಿನಿಂದ ಬಾಗಿಲ ಚಿಲಕ ಹಾಕಿಕೊಂಡು ಆಕೆಯ …
Read More »ಕುರುಬರ ಸಂಘ, ಕುರುಬ ಸಮಾಜದ ಪೀಠವನ್ನು ಉಳಿಸಿದ್ದು ನಾನು: ಸಿಎಂ
ಬೆಂಗಳೂರು: ನಾನು ಮೊದಲಿನಿಂದಲೂ ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸುವ ಸನಾತನವಾದಿ ಆರ್ಎಸ್ಎಸ್ ವಿರೋಧಿಯಾಗಿದ್ದೇನೆ. ಈ ಕಾರಣಕ್ಕಾಗಿ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದೇನೆ. ಈ ಮೂಲಕ ಜಾತಿ ಪದ್ದತಿ ಹಾಗೂ ಮೌಢ್ಯದ ವಿರುದ್ದ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಲ್ಲಿನ ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಮಾತನಾಡಿದರು. ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ …
Read More »ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ: ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಸಿ ನೃತ್ಯ ಮಾಡಿದ ಆರೋಪದಡಿ ನಾಲ್ಕು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಮಾನತುಗೊಂಡ ಬೆಂಗಳೂರು ಕೇಂದ್ರ ಕಾರಾಗೃಹ ಅಧೀಕ್ಷಕ ಇಮಾಮ್ ಸಾಬ್ ಮ್ಯಾಗೇರಿ ನೀಡಿದ ದೂರು ಆಧರಿಸಿ ಕಾರ್ತಿಕ್, ಧನಂಜಯ, ಮಂಜುನಾಥ್ ಹಾಗೂ ಚರಣ್ ರಾವ್ ಎಂಬುವರ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ. ಪರಪ್ಪನ ಕಾರಾಗೃಹದಲ್ಲಿ ಉಗ್ರ ಜುಹಾಬ್ ಶಕೀಲ್ …
Read More »ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್: ಓರ್ವ ಅಧಿಕಾರಿ ಎತ್ತಂಗಡಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಜೈಲಾಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಒಂದು ತಿಂಗಳ ಒಳಗಾಗಿ ಸಮಿತಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದರು. ಪ್ರಕರಣ ಸಂಬಂಧ ಓರ್ವ ಅಧಿಕಾರಿಯನ್ನು ತಕ್ಷಣ ವರ್ಗಾವಣೆ ಮಾಡಲಾಗಿದೆ. …
Read More »ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’
ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’ ವೈಜಯಂತಿ ಕಾಶಿ ಉಪಸ್ಥಿತಿಯಲ್ಲಿ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಮನಮೋಹಕ ಪ್ರದರ್ಶನ ಬೆಳಗಾವಿ : ಗಂಗಾ ನದಿಯ ಕಥಾನಕವನ್ನು ಬಿಂಬಿಸುವ ನಮಾಮಿ ಗಂಗೆ ಎನ್ನುವ 56 ನಿಮಿಷಗಳ ಅದ್ಭುತ ನೃತ್ಯ ರೂಪಕ ಪ್ರದರ್ಶನದ ಮೂಲಕ ಬೆಳಗಾವಿಯ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳು ಶನಿವಾರ ಸಂಜೆ ಹೊಸ ಇತಿಹಾಸ ನಿರ್ಮಾಣ ಮಾಡಿದರು. ಶಾಂತಲಾ ನಾಟ್ಯಾಲಯದ 36ನೇ ವಾರ್ಷಿಕೋತ್ಸವದ ನಿಮಿತ್ತ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಲೋಕಮಾನ್ಯ ರಂಗಮಂದಿರದಲ್ಲಿ …
Read More »ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ. ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು ಸೌತ್ ಇಂಡಿಯಾ ಶುಗರ್ ಮಿಲ್ಸ್ ಅಸೋಸಿಯೇಷನ್ ಅಧ್ಯಕ್ಷ ಯೋಗೇಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂದು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಅಗಿದೆ. ರೈತರ ಸಮಸ್ಯೆ ಮತ್ತು ಕಾರ್ಖಾನೆಯ ಸಮಸ್ಯೆ ಬಗ್ಗೆ ಚರ್ಚೆ ನಡೆದಿದೆ. ಸಕ್ಕರೆ ಬೆಲೆ ಹಾಗೂ ಎಥನಾಲ್ ಬೆಲೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಎಫ್ಆರ್ಪಿ ದರವನ್ನು ಸರಿಯಾದ …
Read More »ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿಪ್ರತಿಭಟನೆ: ಪೊಲೀಸರು – ರೈತರ ನಡುವೆ ಜಟಾಪಟಿ
ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ: ಪೊಲೀಸರು – ರೈತರ ನಡುವೆ ಜಟಾಪಟಿ ಚಾಮರಾಜನಗರ: ಕಬ್ಬಿಗೆ ಬೆಲೆ ಹೆಚ್ಚಳ ಘೋಷಣೆ ಮಾಡುವಂತೆ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘವು ಚಾಮರಾಜನಗರದ ದೊಡ್ಡರಾಯಪೇಟೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ರೈತ ಮುಖಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಮಹೇಶ್ ಪ್ರಭು ಹಾಗೂ ಮಹೇಶ್ ಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ರೈತರು ರಾಷ್ಟ್ರೀಯ ಹೆದ್ದಾರಿಯನ್ನು ಒಂದು …
Read More »ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕ ಪರಿಷ್ಕರಣೆಗೆ ಸಂಪನ್ಮೂಲ ಕ್ರೋಢೀಕರಣ ಸಮಿತಿ ಶಿಫಾರಸು
ಬೆಂಗಳೂರು: ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರ ಶುಲ್ಕಗಳನ್ನು ತರ್ಕಬದ್ಧಗೊಳಿಸಿ, ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆಯನ್ನು ರೂಪಿಸುವಂತೆ ಸಂಪನ್ಮೂಲ ಕ್ರೋಢೀಕರಣ ಸಮಿತಿ (RMC) ತನ್ನ ಅಂತಿಮ ವರದಿಯಲ್ಲಿ ಶಿಫಾರಸು ಮಾಡಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿ ತನ್ನ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದೆ. ಸಂಪನ್ಮೂಲ ಕ್ರೋಢೀಕರಣ ಸಮಿತಿಯು ಕೈಗೊಂಡ ಸಮಗ್ರ ವಿಶ್ಲೇಷಣೆ ಮತ್ತು …
Read More »
Laxmi News 24×7