ಮೊಳಕಾಲ್ಮುರು: ಬಸ್ ಹಾಗೂ ಕ್ರೂಸರ್ ಮಧ್ಯೆ ಮೊಳಕಾಲ್ಮುರು ತಾಲ್ಲೂಕಿನ ಬಿಜಿ ಕೆರೆ ಬಳಿ ಭಾನುವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಿಮ್ಮಣ್ಣ(40) ಪತ್ನಿ ರತ್ನಮ್ಮ(38) ಸೋಮನಮರಡಿ ಗ್ರಾಮದ ದುರುಗಪ್ಪ(16), ಗಜಲಿ ಗ್ರಾಮದ ಮಹೇಶ (19) ಹಾಗು 55 ವರ್ಷದ ಓರ್ವ ವ್ಯಕ್ತಿ ಎಂದು ತಿಳಿದು ಬಂದಿದೆ. ಮೃತರು ರಾಯಚೂರು ಜಿಲ್ಲೆ ದೆವದುರ್ಗ ತಾಲೂಕಿನ ಹುಣಸೂರು ಗ್ರಾಮದವರಾಗಿದ್ದಾರೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಬಳ್ಳಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬಸ್ …
Read More »ಗ್ರಾಪಂ.ಚುನಾವಣೆಗೆ ಸ್ಪರ್ಧಿಸಿದ್ದ ಅಂಬೋಜಿ ನಿಧನ
ಖಾನಾಪುರ : ತಾಲ್ಲೂಕಿನ ನ್ಯಾಯವಾದಿ, ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಸಿ.ಬಿ.ಅಂಬೋಜಿ (64) ಭಾನುವಾರ ಬೆಳಿಗಿನ ಜಾವ ನಿಧನರಾದರು. ಬಿಷ್ಟಾದೇವಿ ಜೀರ್ಣೊದ್ದಾರ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಕಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಕ್ಕೇರಿ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮಂಗಳವಾರ ನಡೆದ ಗ್ರಾಪಂ ಚುಣಾವಣೆಗೆ ಕಕ್ಕೇರಿ ಗ್ರಾಮದ ವಾರ್ಡ್ ನಂ.2ಕ್ಕೆ ಸ್ಪರ್ಧೆ ಮಾಡಿದ್ದರು.
Read More »ಮೂರು ಸಾವಿರ ಮಠದ ಆಸ್ತಿ ವಾಪಸ್ ನೀಡಿ: ಕೆಎಲ್ಇ ಸಂಸ್ಥೆಗೆ ದಿಂಗಾಲೇಶ್ವರ ಸ್ವಾಮೀಜಿ ಒತ್ತಾಯ
ಹುಬ್ಬಳ್ಳಿ : ಹುಬ್ಬಳ್ಳಿಯ ಮೂರು ಸಾವಿರ ಮಠದ ಆಸ್ತಿಯನ್ನು ಕೆ ಎಲ್ ಇ ಸಂಸ್ಥೆಯವರು ವಾಪಸ್ ಮಠಕ್ಕೆ ನೀಡಬೇಕು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ಸಾವಿರ ಮಠದ ಆಸ್ತಿಯಲ್ಲಿ ನಗರದ ಗಬ್ಬೂರು ಬಳಿ ಕೆಎಲ್ ಇ ಸಂಸ್ಥೆ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುತ್ತಿದೆ. ಕೆಎಲ್ಇ ಸಂಸ್ಥೆಯವರಿಗೆ ಮಠದಿಂದ 24 ಎಕರೆ 30 ಗುಂಟೆ ಜಾಗ ಕೊಟ್ಟಿದ್ದು ತಪ್ಪು. ಮಠದ ಆಡಳಿತ ಮಂಡಳಿ ನೇತೃತ್ವದಲ್ಲೇ …
Read More »ಗೋಕಾಕ: ಜ.6 ರಂದು ತೆರಿಗೆ ಸಂದಾಯ ಮಾಡದ 21 ವಾಹನಗಳ ಹರಾಜು!!
ಗೋಕಾಕ: ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯ ಪ್ರಕಾರ ತೆರಿಗೆ ಸಂದಾಯ ಮಾಡದಿರುವ ಕಾರಣ ಮುಟ್ಟುಗೋಲು ಹಾಕಿಕೊಂಡಿರುವ 21 ವಾಹನಗಳನ್ನು ಜ. 6 ರಂದು ಮುಂಜಾನೆ 10.30 ಘಂಟೆಗೆ ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಬಹಿರಂಗು ಹರಾಜು ಮಾಡಲಾಗುವುದು ಸಾರಿಗೆ ಅಧಿಕಾರಿ ಟಿ.ಜೆ.ಹೇಮಾವತಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಬಾಕಿ ಇರುವ ತೆರಿಗೆ ಸಂದಾಯ ಮಾಡಿ ವಾಹನವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳುಲು …
Read More »ಬ್ಯಾಲೇಟ್ ಪೇಪರ್ ನಲ್ಲಿ ಬಕೆಟ್ ಬದಲು ಅಲ್ಮೇರಾ ಚಿಹ್ನೆ: ಮತದಾನ ಸ್ಥಗಿತ
ರಾಮದುರ್ಗ: ಬ್ಯಾಲೆಟ್ ಪೇಪರ್ನಲ್ಲಿ ಅಭ್ಯರ್ಥಿ ಚಿಹ್ನೆಯನ್ನು ತಪ್ಪಾಗಿ ಮುದ್ರಿಸಿರುವ ಹಿನ್ನೆಲೆ ಕದಂಪೂರ ವಾರ್ಡ್ ನಂಬರ್ 6 ರ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ತಾಲೂಕಿನ ಕದಂಪೂರ ಗ್ರಾಮದಲ್ಲಿ 6 ನೇ ವಾರ್ಡ್ಗೆ ನಿರ್ಮಲಾ ಮಹಾಂತೇಶ ಖಾನಪೇಟ್ ಎಂಬುವರು ಸ್ಪರ್ಧಿಸಿದ್ದಾರೆ. ಇವರಿಗೆ ಬಕೆಟ್ ಚಿಹ್ನೆ ನೀಡಲಾಗಿತ್ತು. ಆದರೆ ಮತದಾನದ ಬ್ಯಾಲೆಟ್ ಪೇಪರ್ನಲ್ಲಿ ‘ಬಕೆಟ್’ ಚಿಹ್ನೆ ಬದಲು ‘ಅಲ್ಮೇರಾ’ ಚಿಹ್ನೆ ಮುದ್ರಣವಾಗಿದೆ. ಇದರಿಂದಾಗಿ ಮತದಾನ ಮೂಂದೂಡಿಕೆ ಮಾಡಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ …
Read More »ಮತದಾನ ಮಾಡಿದ ಅಭ್ಯರ್ಥಿ ಭಿಕ್ಷುಕ ಅಂಕ ನಾಯಕ : ಗೆಲುವಿನ ವಿಶ್ವಾಸ
ಮೈಸೂರು : ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಕಣಕ್ಕೆ ಇಳಿಸಿದರುವ ಭಿಕ್ಷುಕ ಅಂಕ ನಾಯಕ ಮತದಾನ ಮಾಡಿದರು. ಅಂಕ ನಾಯಕ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಬ್ಲಾಕ್ ನಂ.1ರಲ್ಲಿ ಭಾನುವಾರ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, “ಗ್ರಾಮದ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ವಿದೆ” ಎಂದರು. ಈ ಹಿಂದೆ ಗ್ರಾಪಂ.ಸದಸ್ಯರು ಯಾವುದೇ ಮೂಲ ಸೌಕರ್ಯ …
Read More »ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ
ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …
Read More »FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ
FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ 2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು. 2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡು ನಿಯಮಾನುಸಾರ ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ …
Read More »ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ತಡೆ ಕಾರ್ಯಕ್ರಮ
ಬೆಳಗಾವಿ ಜಿಲ್ಲೆಯಲ್ಲಿ ಅಪರಾದ ಮಾಸಾಚಾರಣೆ ತಡೆ ನಿಮಿತ್ಯವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಉಪ ಪೋಲಿಸ್ ಠಾಣಾವತಿಯಿಂದ ASI ಟಿ,ಎಸ್,ದಳವಾಯಿ, ನೇತೃತ್ವದಲ್ಲಿ ಪೋಲಿಸ್ ಸಿಬ್ಬಂದಿಗಳಾದ ದುಂಡೇಶ ಅಂತರಗಟ್ಟಿ, ಸಂಜೀವ ಮಾನೆಪ್ಪಗೋಳ, ಮಹೇಶ ಕಾಂಬಳೆ ಹಾಗೂ ಸರದಾರ ಹಸರಂಗಿಯವರು ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಪರಾದ ಮಾಡುವುದರಿಂದ ಎನೆನು ಹಾನಿಯಾಗುತ್ತದೆ ಎಂದು ತಿಳುವಳಿಕೆ ನೀಡಿದರು, ಅದರಂತೆ ಕೊರಾನಾದ ಬಗ್ಗೆ ಎಲ್ಲರೂ ಮಾಸ್ಕ್ ದರಿಸಿ ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಿದರು.
Read More »ಅವಸಾನದ ಅಂಚಿನಲ್ಲಿನ 5 ಸರ್ಕಾರಿ ಶಾಲೆಗಳನ್ನ ದತ್ತು ಪಡೆದ ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ : ಗೋಕಾಕ್ ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿರುವ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸೇರಿ ಒಟ್ಟು ಐದು ಶಾಲೆಗಳನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ದತ್ತು ಪಡೆದು, ಮಾನವೀಯತೆ ಮೆರೆದಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಗೋಕಾಕ್ ತಾಲ್ಲೂಕಿನಲ್ಲಿರುವ ಖನಗಾಂವ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ, ಮಮದಾಪೂರದ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ, ಅಂಕಲಗಿಯ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಧುಪಧಾಳದ …
Read More »
Laxmi News 24×7