ನವದೆಹಲಿ, ಡಿ.24- ನ್ಯೂಮೋನಿಯಾಗೆ ಸೆರಂ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೈಗೆಟುಕುವ ಬೆಲೆಯ ಲಸಿಕೆ ಮುಂದಿನ ವಾರದಿಂದ ಜನರಿಗೆ ದೊರೆಯುವ ಸಾಧ್ಯತೆಗಳಿವೆ. ಭಾರತದಲ್ಲೇ ಅಭಿವೃದ್ದಿಪಡಿಸಿರುವ ಲಸಿಕೆಯನ್ನು ಲೋಕಾರ್ಪಣೆ ಮಾಡಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಮುಂದಿನ ವಾರದಿಂದ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ವಿದೇಶಿ ನಿರ್ಮಿತ ಲಸಿಕೆಯನ್ನು ಬಳಕೆ ಮಾಡಲಾಗುತ್ತಿದೆ. ವಿದೇಶಿ ಲಸಿಕೆಗಳಿಗಿಂತ ಕಡಿಮೆ ದರದಲ್ಲಿ ಸೆರಂ ಸಂಸ್ಥೆಯ ನ್ಯೂಮೋನಿಯಾ ಲಸಿಕೆ ದೊರೆಯಲಿದೆ. ಪೂನಾ ಮೂಲದ …
Read More »ದಿ.25ರಂದು ಅಯ್ಯಪ್ಪ ಸ್ವಾಮಿ ಮಹಾಪೂಜೆ
ಗೋಕಾಕ: ಇಲ್ಲಿಯ ಉಪ್ಪಾರ ಗಲ್ಲಿಯಲ್ಲಿರುವ ಶ್ರೀ ರಾಮ ಸನ್ನಿಧಾನ ಉಪ್ಪಾರ ಕಲ್ಯಾಣ ಮಂಟಪದಲ್ಲಿ ದಿ.25ರಂದು ಈ ವರ್ಷವೂ ಕನ್ಯಾ ಸ್ವಾಮಿ ಪೂಜೆ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಸಂಜೆ 7 ಗಂಟೆಗೆ ಜರುಗಲಿದೆ. ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿ ಅಯ್ಯಪ್ಪನ ಕೃಪೆಗೆ ಪಾತ್ರರಾಗಬೇಕೆಂದು ಗುರುಸ್ವಾಮಿಗಳು ಪ್ರಕಟನೆಯಲ್ಲಿ ತಿಳಸಿದ್ದಾರೆ.
Read More »ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಜಿಎಲ್ಬಿಸಿಗೆ 2400, ಜಿಆರ್ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ
ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ …
Read More »ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಸಾವಂತ ತಳವಾರ ಆಯ್ಕೆ ಶುಭ. ಹಾರೈಸಿದ ಸದಸ್ಯರು
ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವಾರ್ಡ ನಂಬರ 19 ನೆಯ ಸದಸ್ಯರಾದ ಸಾವಂತ ತಳವಾರ ಇವರನ್ನು ಸರ್ವ ಸದಸ್ಯರು ಕೂಡಿಕೊಂಡು ಒಮ್ಮತದಿಂದ. ಕೊಣ್ಣೂರ ಪುರಸಭೆಗೆ ಸ್ಥಾಯಿ ಸಮಿತಿ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿದರು, ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಯಾದ. ಶಿವಾನಂದ ಹೀರೆಮಠ ,ಅದಕ್ಷರಾದ ರಜಿಯಾಬೇಗಂ ಹೊರಕೇರಿ ಉಪಾದಕ್ಷರಾದ ಮಲ್ಲಪ್ಪ ಹುಕ್ಕೇರಿ, ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ, ಅಟಲ್ ಕಡಲಗಿ, ಮಾರುತಿ ಪೂಜೇರಿ,ಗೂಳಪ್ಪ ಅಸೂದೆ,ಅಶೋಕ ಕುಮಾರನಾಯಿಕ,ಕುಮಾರ ಕೊಣ್ಣೂರ, ರಾಮಲಿಂಗ್, ಮಗದುಮ್, ಇಮ್ರಾನ್ ಜಮಾದಾರ ಮಹಿಳಾ …
Read More »ಸಚಿವ ರಮೇಶ್ ಜಾರಕಿಹೊಳಿ ಪ್ರಯತ್ನ : ಮಾರಿಹಾಳ ಗ್ರಾಪಂ.ಗೆ 5 ಸ್ಥಾನಗಳು ಅವಿರೋಧ ಆಯ್ಕೆ
ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಯತ್ನ ದಿಂದ ಸಮೀಪದ ಮಾರಿಹಾಳ ಗ್ರಾಮ ಪಂಚಾಯತಿಯ 18 ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಅವಿರೋಧ ಆಯ್ಕೆಯಾದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮಗಳ ಅಭ್ಯುದಯಕ್ಕಾಗಿ ಗ್ರಾಮ ಪಂಚಾಯತಿಯಲ್ಲಿ ಸರ್ವ ಸಮ್ಮತ ಅರ್ಹವ್ಯಕ್ತಿಗಳ ಅವಿರೋಧ ಆಯ್ಕೆಯಾಗಬೇಕು ಇದರಿಂದ ಗ್ರಾಮಸ್ಥರಲ್ಲಿ ಒಗ್ಗಟ್ಟು ಹಾಗೂ ನೆಮ್ಮದಿಯ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯ …
Read More »ವರ್ತೂರು ಕಿಡ್ನಾಪ್ ಕೇಸ್: ಇಬ್ಬರು ವಿದ್ಯಾರ್ಥಿಗಳು ಸೇರಿ 6 ಜನರ ಬಂಧನ
ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಕಾರಿನಲ್ಲಿ ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನ ಆರು ಮಂದಿಯನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ವಲಯದ ಐಜಿಪಿ ಸೀಮಂತ್ಕುಮಾರ್ ಸಿಂಗ್ ತಿಳಿಸಿದರು. ಮೂಲತಃ ತಮಿಳುನಾಡಿನ ಬೆಂಗಳೂರಿನ ವಿನಾಯಕನಗರದಲ್ಲಿ ವಾಸಿಸುತ್ತಿರುವ ಕವಿರಾಜ್ (43), ಬೆಳ್ಳಂದೂರು-ಸರ್ಜಾಪುರ ರಸ್ತೆಯ ಅರಳೂರು ನಿವಾಸಿ, ಬಿಕಾಂ ವಿದ್ಯಾರ್ಥಿಗಳಾದ ಲಿಖಿತ್ (20), ಉಲ್ಲಾಸ್ (21), …
Read More »ಕೊರೋನದ ಹೊಸ ಪ್ರಭೇದ ಪತ್ತೆ; ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು: ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಕೋವಿಡ್ 19 ಸೋಂಕು ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು …
Read More »ಶಾಲೆ ಆರಂಭದ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್
ಬೆಂಗಳೂರು : ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುತ್ತಿದೆ. ಜನವರಿಯಿಂದಲೇ ಶಾಲೆ ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮ ಅಂತಿಮಗೊಳಿಸಲಾಗುತ್ತದೆ. ಕನಿಷ್ಠ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ …
Read More »ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ
ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇಂದಿನಿಂದ 9 ದಿನಗಳವರೆಗೆ ಅಂದರೆ ಜನೆವರಿ 2 ವರೆಗೆ ಈ ಆದೇಶ ಅನ್ವಯವಾಗಲಿದೆ. ಇನ್ನು ಹೊರ ದೇಶದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗೆ ಒಳಪಡಬೇಕು. ರಾತ್ರಿ ಹೊತ್ತು …
Read More »ಕೇಂದ್ರ ಗೃಹ ಮಂತ್ರಿ ಅವರಿಗೆ ಸುಳ್ಳು ಹೇಳುವುದು ಶೋಭೆ ತರಲ್ಲ: ಮಮತಾ ಬ್ಯಾನರ್ಜಿ ಬಿಜೆಪಿಗೆ ಗುದ್ದು ನೀಡಿದ್ದಾರೆ.
ಕೋಲ್ಕತ್ತಾ: ಕೇಂದ್ರ ಗೃಹ ಮಂತ್ರಿ ಅವರಿಗೆ ಸುಳ್ಳು ಹೇಳುವುದು ಶೋಭೆ ತರಲ್ಲ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿಗೆ ಗುದ್ದು ನೀಡಿದ್ದಾರೆ. ಇಂದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡಸಿದರು. ಗೃಹ ಮಂತ್ರಿಗಳಾದವರು ಸರಿಯಾದ ಅಂಕಿ ಅಂಶಗಳನ್ನಿಟ್ಟುಕೊಂಡು ಮಾತನಾಡಬೇಕು. ಶಾ ತಮ್ಮ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳ ಅಂಕಿ ಅಂಶಗಳನ್ನ ನೋಡಿಲ್ಲ. ರಾಜ್ಯದಲ್ಲಿ ನಡೆಯುವ ಆತ್ಮಹತ್ಯೆಗಳನ್ನ ಕೊಲೆ ಎಂದು ಬಿಂಬಿಸಿ ಸುಳ್ಳು …
Read More »
Laxmi News 24×7