Breaking News

ರಾಷ್ಟ್ರೀಯ

ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ

ಹೈದರಾಬಾದ್: ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈತ ಎಲ್‍ಬಿ ನಗರ ನಿವಾಸಿ. ಆನ್‍ಲೈನ್ ಗೇಮ್ ಚಟದಿಂದಾಗಿ ಜಗದೀಶ್ ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡನು. ಅಲ್ಲದೆ ಸಾಲ ತೀರಿಸಲು ಅಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ದಾರಿ ಕಾಣದೆ ತನ್ನ ಪ್ರಾಣವನ್ನೇ ಕಳೆದುಕೊಳ್ಳಲು ನಿರ್ಧರಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲವು ದಿನಗಳ ಹಿಂದೆ ಜಗದೀಶ್ ತಂದೆ …

Read More »

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಮಂದಿಗೆ ಕೊರೊನಾ ಪಾಸಿಟಿವ್…!

ನವದೆಹಲಿ,ನ.28-ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿಯತ್ತ ದಾಪುಗಾಲಿಡುತ್ತಿದೆ. ಈಗಾಗಲೇ ಸೋಂಕಿತರ ಸಂಖ್ಯೆ 93.51 ಲಕ್ಷಕ್ಕೆ ಏರಿಕೆಯಾಗಿದ್ದು, ಪ್ರತಿ ನಿತ್ಯ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 41,322 ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಕಳೆದ ಹಲವಾರು ದಿನಗಳಿಂದ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿ ದಾಟುವ ಸಾಧ್ಯತೆಗಳಿವೆ. ಅದಾಗ್ಯೂ ಚೇತರಿಕೆ ಪ್ರಮಾಣ ಶೇ.93.68ಕ್ಕೆ ಏರಿಕೆಯಾಗಿದೆ. ಇದುವರೆಗೂ 87,59,969 ಸೋಂಕಿತರು …

Read More »

ಬೆಳಗಾವಿ: ಕುರುಬ ಸಮುದಾಯದವರಿಗೆ ಟಿಕೆಟ್ ನೀಡಲು ಒತ್ತಾಯ

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 2ನೇ ಅತೀ ದೊಡ್ಡ ಮತದಾರರಾಗಿ ಕುರುಬ ಸಮುದಾಯದವರಿದ್ದಾರೆ. ಹೀಗಾಗಿ ಈ ಬಾರಿಯ ಬೆಳಗಾವಿ ಲೋಕಸಭೆಯ ಟಿಕೆಟ್ ಕುರುಬ ಸಮುದಾಯದವರಿಗೆ ನೀಡಬೇಕು ಎಂದು ಕುರುಬ ಸಮುದಾಯದ ಮುಖಂಡ ರಾಜೇಂದ್ರ ಸಣ್ಣಕ್ಕಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಸಂಬಂಧ ನಡೆದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಸಣ್ಣಕ್ಕಿ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಸಮಾಜದ ಎರಡೂವರೆ ಲಕ್ಷ ಮತದಾರರಿದ್ದಾರೆ. …

Read More »

ಹೊಸ ಕಾರ ಬರ್ತಿದೆ ಇದು ಹಾರುತ್ತೆ ಮತ್ತೆ ಓಡುತ್ತೆ ರಸ್ತೆ ಮೇಲೆ..

ಆಂಸ್ಟರ್ಡ್ಯಾಮ್: ಗುಜರಾತಿನಲ್ಲಿ ಘಟಕ ತೆರೆದಿರುವ ನೆದರ್‌ಲ್ಯಾಂಡ್‌ನ ಪಾಲ್‌ -ವಿ ಕಂಪನಿಯ ಹಾರುವ ಕಾರು ಮುಂದಿನ ಎರಡು ವರ್ಷದಲ್ಲಿ ರಸ್ತೆಯಲ್ಲಿ ಇಳಿಯಲಿದೆ. ಈ ವರ್ಷದ ಫೆಬ್ರವರಿಯಿಂದ ವೇಗ, ಬ್ರೇಕ್‌, ಎಮಿಷನ್‌, ಶಬ್ಧಮಾಲಿನ್ಯ ಸೇರಿದಂತೆ ವಿವಿಧ ಡ್ರೈವಿಂಗ್‌ ಪರೀಕ್ಷೆಗಳನ್ನು ಕಾರು ಎದುರಿಸಿತ್ತು. ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಮೈಕ್‌ ಸ್ಟೇಕಲನ್‌ಬರ್ಗ್‌ ಪ್ರತಿಕ್ರಿಯಿಸಿ, ಸಂಬಂಧಪಟ್ಟ ಇಲಾಖೆಗಳ ಜೊತೆ ಹಲವು ವರ್ಷಗಳ ಕಾಲ ಸಹಕಾರ ನೀಡಿ ನಾವು ಈ ಮೈಲಿಗಲ್ಲನ್ನು ಸೃಷ್ಟಿಸಿದ್ದೇವೆ. ನೆಲ ಮತ್ತು ಆಕಾಶದಲ್ಲಿ …

Read More »

ಕಾಂಗ್ರೆಸ್ ಹಾಗೂ ಜೆಡಿಎಸ್‍ನ 10ಕ್ಕೂ ಹೆಚ್ಚು ಶಾಸಕರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಹೊರಗಿಟ್ಟು ಬೆಂಗಳೂರಿನಲ್ಲಿ ಸಭೆ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕರಿಗೆ ನೀಡಿದ್ದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ತಡ ಮಾಡುತ್ತಿರುವ ಸಲುವಾಗಿ ಹಲವು ವಲಸಿಗ ಸಚಿವರು, ಶಾಸಕರು ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಮೂಲಕ ಸಚಿವ ರಮೇಶ್ ಜಾರಕಿ ಹೊಳಿಯವರನ್ನು ಹೊರತುಪಡಿಸಿ ಬೆಂಗಳೂರಿನಲ್ಲಿ ಇಂದು ರಾತ್ರಿ ಸಭೆ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವನ್ನು ಉರುಳಿಸಿ ಬಿಜೆಪಿ ಸರಕಾರ ರಚನೆಗೆ ಕಾರಣವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್‍ನ 10ಕ್ಕೂ ಹೆಚ್ಚು ಶಾಸಕರು …

Read More »

ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಅಣೆಕಟ್ಟೆಗಳ ಪುನಶ್ಚೇತನ ಹಾಗೂ ಸುಧಾರಣಾ ಯೋಜನೆಗಳ ಅನುದಾನದಲ್ಲಿ ಕರ್ನಾಟಕ ಹಲವು ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದೆ. ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಅನುದಾನ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ಆಯೋಗವು ದೇಶದ ಪ್ರಮುಖ ಅಣೆಕಟ್ಟೆಗಳ ಸಬಲೀಕರಣಕ್ಕಾಗಿ ವಿಶ್ವಬ್ಯಾಂಕ್ ನೆರವಿನ ಡ್ರಿಪ್ …

Read More »

ಸಾನಿಧ್ಯ ವಹಿಸಿದ್ದ ಸ್ಥಳೀಯ ವಿಜಯ ಸಿದ್ಧೇಶ್ವರ ಸ್ವಾಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …

Read More »

ಗೋಕಾಕ್ : ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಗೋಕಾಕ : ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ. ಇಂತಹ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ನಿರ್ಧಾರ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ತೀರ್ಮಾನ ಖಂಡನೀಯ ಎಂದು ಸಿಎಂ …

Read More »

ಎಚ್.ಐ.ವಿ, ಏಡ್ಸ್ ಪೀಡಿತರಿಗೆ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ: ಎಚ್.ಐ.ವಿ, ಏಡ್ಸ್ ಪೀಡಿತರಿಗೆ ರೇಷನ್ ಕಾರ್ಡ್, ವೈದ್ಯಕೀಯ ಸೌಲಭ್ಯ, ಶಾಲಾ ಪ್ರವೇಶ, ವಿದ್ಯಾರ್ಥಿ ವೇತನ, ವಸತಿ ಯೋಜನೆಯಡಿ ವಸತಿ ಸೇರಿದಂತೆ ಸರ್ಕಾರದಿಂದ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಎಚ್.ಐ.ವಿ., ಏಡ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಚ್.ಐ.ವಿ. ಸೋಂಕಿತರಿಗೆ ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿದರೆ …

Read More »

ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ

ಚೆನ್ನೈ: ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಸೇಲಂನ ಲಿನೆಮೇಡನಲ್ಲಿ ನಡೆದಿದೆ. ಸಾಲ ತೀರಿಸಲು ಹಣವಿಲ್ಲದೆ ಇರುವಾಗ ತಂದೆಯೇ ತನ್ನ 6 ತಿಂಗಳ ಮಗುವನ್ನು ಒಂದು ಲಕ್ಷರೂಪಾಯಿಗೆ ಮಾರಿದ್ದಾನೆ. ಆರೋಪಿ ತಂದೆಯನ್ನು ಸೌಕತ್ ಆಲಿ ಎಂದು ಗುರುತಿಸಲಾಗಿದೆ. ಈತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸೌಕತ್‍ನ ಗೆಳೆಯ ಸೆಡ್ಡು ಹಾಗೂ ಮಗುವನ್ನು ಖರೀದಿಸಿದ ಸುಂದರಮ್ ಮಗು ಮಾರಾಟದಲ್ಲಿ ಶಾಮಿಲಾಗಿದ್ದಾರೆ. ಮಗುವನ್ನು …

Read More »