ಗೋಕಾಕ್ ಗ್ರಾಮೀಣ ಮಂಡಲ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ಗೋಕಾಕ್ ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲ ವತಿಯಿಂದ ಎರಡು ದಿನಗಳ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
Read More »ಸಿಎಂ ಬದಲಾವಣೆ ಇಲ್ಲ – ರಮೇಶ್ ಜಾರಕಿಹೊಳಿ*
ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು …
Read More »ಅರವಿಂದ್ ಪಾಟೀಲ ಬಿಜೆಪಿಗೆ,ಸಿಎಂ ಸಹಮತ- ಡಿಸಿಎಂ ಸವದಿ
ಬೆಳಗಾವಿ-ಡಿಸಿಸಿ ಬ್ಯಾಂಕ್ ಚುನಾವಣೆ ಇಂದು ನಡೆಯುತ್ತಿದೆ. 16 ನಿರ್ದೇಶಕ ಸ್ಥಾನದ ಪೈಕಿ ಈಗಾಗಲೇ 13ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದಾರೆ. ಮೂರು ಕ್ಷೇತ್ರದಲ್ಲಿ ಮಾತ್ರ ಚುನಾವಣೆ ನಡೆಯುತ್ತಿದೆ. ಖಾನಾಪುರ ಕ್ಷೇತ್ರದಲ್ಲಿ ಎನೂ ಕುತೂಹಲ ಇಲ್ಲ ಮತದಾರರು ಜಾನರಿದ್ದಾರೆ. ಎಂದು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಖಾನಾಪುರ ತಾಲೂಕಿನಲ್ಲಿ ಕಾಂಗ್ರೆಸ್ ಶಾಸಕರು ಸ್ಪರ್ಧೆ, ಮಾಜಿ ಶಾಸಕ ಅರವಿಂದ್ ಪಾಟೀಲ್ …
Read More »ನ್ಯಾಯ ಎಲ್ಲಿದೆ…? ಅಂತಾ ಇವರು ಕೇಳುತ್ತಿದ್ದಾರೆ….!
ಬೆಳಗಾವಿ- ಗಂಡ,ಹೆಂಡತಿ,ಇಬ್ಬರು ಹೆಣ್ಣು ಮಕ್ಕಳೊಂದಿದೆ ಬೆಳಗಾವಿಯ ಡಿಸಿ ಕಚೇರಿಯ ಎದುರು ಕುಳಿತುಕೊಂಡಿದ್ದಾರೆ.ನ್ಯಾಯ ಎಲ್ಲಿದೆ ಅಂತಾ ಕೇಳುತ್ತಿದ್ದಾರೆ. ನ್ಯಾಯ ಸಿಗೋವರೆಗೂ ಅಹೋರಾತ್ರಿ ಧರಣಿ ಮಾಡುತ್ತೇವೆ,ಅಲ್ಲಿಯವರೆಗೆ ಇಲ್ಲಿಯೇ ಕುಳಿತುಕಿಳ್ಳುತ್ತೇವೆ ಅಂತ,ಈ ಕುಟುಂಬ ಡಿಸಿ ಕಚೇರಿ ಎದುರು ಧರಣಿ ಆರಂಭಿಸಿದೆ. ರಾಯಬಾಗ ತಾಲ್ಲೂಕಿನ, ನರಸಲಾಪೂರ ಗ್ರಾಮದ ಸಂಗೀತಾ ಬಂಡು ಚಾವರೆ ಕುಟುಂಬ ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.ಈವರ ಪಾಲಿಗೆ ಬರುವ ಜಮೀನು ಮತ್ತು ಆಸ್ತಿಯನ್ನು,ಇವರ ಸಮಂಧಿಕರು ಮಾಡಿಕೊಡುತ್ತಿಲ್ಲ,ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎನ್ನುವ ಕಾರಣಕ್ಕಾಗಿ ನಮಗೆ …
Read More »ಬೆಳಗಾವಿಯ ನಿವಾಸಿ ಈಗ ಅಮೇರಿಕಾದ ಸಂಸದ
ಅಜ್ಜನ ಕಡೆ ಮಾಸ್ಕ್ ಯಾವ ತರಾ ಇದೆ ಈ ವಿಡಿಯೋ ಕೊನೇವರಿಗೆ ನೀವು ನೋಡ್ಲೆ ಬೇಕು……. ಬೆಳಗಾವಿ- ಬೆಳಗಾವಿಯ ನಿವಾಸಿಯೊಬ್ಬ ಅಮೇರಿಕಾದ ಸಂಸದನಾಗಿ ಆಯ್ಕೆಯಾಗಿದ್ದಾನೆ. ಬೆಳಗಾವಿ ಶಹಾಪೂರ ಪ್ರದೇಶದ ಮೀರಾಪೂರ ಗಲ್ಲಿಯ ನಿವಾಸಿ ಶ್ರೀನಿವಾಸ ಥಾಣೆದಾರ ಈಗ ಅಮೆರಿಕಾ ದೇಶದ ಸೆನೆಟ್ ಮೆಂಬರ್ ಆಗಿ ಆಯ್ಕೆಯಾಗಿದ್ದಾರೆ. ಚಿಂತಾಮಣರಾವ ಶಾಲೆಯಲ್ಲಿ ಹೈಸ್ಕೂಲ ಕಲೆತಿರುವ ಶ್ರೀನಿವಾಸ ಥಾಣೆದಾರ್ ಅಮೇರಿಕಾದಲ್ಲಿ ಕೆಮಿಕಲ್ ಉದ್ಯಮಿಯಾಗಿದ್ದಾರೆ.
Read More »ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ.
ತುಮಕೂರು : ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ದ್ವೇಷದ ರಾಜಕೀಯ ತುಂಬಿ ತುಳುಕುತ್ತಿದೆ. ಸಹ ಸಮಾಜದ ನಾಯಕರು, ಸಮಾಜದ ಮುಖಂಡರನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ. ಸಿಎಂ ಯಡಿಯೂರಪ್ಪನವರು ಇದ್ದನ್ನು ಸರಿಪಡಿಸಬೇಕು ಎಂದಿದ್ದಾರೆ. ಪ್ರಾಥಮಿಕ ವರದಿಯಲ್ಲೂ ಅವರ ಹೆಸರು …
Read More »ಅಲಿಭಾಗ್ ಕೋವಿಡ್ ಶಾಲೆಯಲ್ಲಿ ರಾತ್ರಿ ಕೆಳದ ಬಂಧಿತ ಅರ್ನಬ್ ಗೋಸ್ವಾಮಿ..!
ಅಲಿಭಾಗ್, ನ.5-ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿತರಾಗಿ ನ್ಯಾಯಾಂಗ ವಶದಲ್ಲಿರುವ ರಿಪಬ್ಲಿಕ್ ಟವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ರಾಯ್ಗಢ ಜಿಲ್ಲೆಯ ಅಲಿಭಾಗ್ ಬಂಧೀಖಾನೆಗಾಗಿ ಕೋವಿಡ್-19 ಕೇಂದ್ರವಾಗಿ ಪರಿವರ್ತಿತವಾಗಿರುವ ಸ್ಥಳೀಯ ಶಾಲೆಯೊಂದರಲ್ಲಿ ರಾತ್ರಿ ಕಳೆದರು. ಈ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಮತ್ತು ಇನ್ನಬರಿಗೆ ಅಲಿಭಾಗ್ ಸ್ಥಳೀಯ ನ್ಯಾಯಾಲಯವೊಂದು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅರ್ನಬ್ ಅವರನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಅಲಿಭಾಗ್ಪೆÇಲೀಸರು ಕೋರಿದ್ದರು. …
Read More »ಲವ್ ಜಿಹಾದ್ ಹೆಸರಲ್ಲಿ ಮತಾಂತರವಾಗ್ತಿರೋದನ್ನು ಕೊನೆಗಾಣಿಸುತ್ತೇವೆ: ಸಿಎಂ
ಮಂಗಳೂರು: ಲವ್ ಜಿಹಾದ್ ಹೆಸರಲ್ಲಿ ಮತಾಂತವಾಗುತ್ತಿದೆ. ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಈ ವ್ಯವಸ್ಥೆ ಕೊನೆ ಮಾಡುತ್ತೇವೆ. ಮತಾಂತರದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ 20 ವರ್ಷಗಳ ನಂತರ ರಾಜ್ಯಕಾರ್ಯಕಾರಿಣಿ ಸಭೆಯಾಗುತ್ತಿದೆ. ರಾಜ್ಯಾಧ್ಯಕ್ಷರಾದ ಬಳಿಕ ನಳಿನ್ ಕುಮಾರ್ ಕಟೀಲ್ ಪಕ್ಷ ಬಲಪಡಿಸಿದ್ದಾರೆ. ಎರಡು ವರ್ಷಗಳ ಬಳಿಕ …
Read More »ಬಾಲಿವುಡ್ ನಟ ಮತ್ತು ಮಾಡೆಲ್ ಮಿಲಿಂದ್ ಸೋಮನ್ ಬೀಚಿನಲ್ಲಿ ಬೆತ್ತಲೇ ಫೋಟೋ ಶೂಟ್
ಪಣಜಿ: ಬಾಲಿವುಡ್ ನಟ ಮತ್ತು ಮಾಡೆಲ್ ಮಿಲಿಂದ್ ಸೋಮನ್ ಬೀಚಿನಲ್ಲಿ ಬೆತ್ತಲೇ ಫೋಟೋ ಶೂಟ್ ಮಾಡಿಸಿಕೊಳ್ಳುವ ಮೂಲಕ ತಮ್ಮ 55ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಮಾಡೆಲ್ ಮಿಲಿಂದ್ ತನ್ನ 55ನೇ ವಯಸ್ಸಿನಲ್ಲೂ ಕೂಡ ಯುವಕರು ನಾಚುವಂತೆ ಬಾಡಿಯನ್ನು ಮಾಡಿದ್ದಾರೆ. ಈಗಲೂ ಕೂಡ ಸಿಕ್ಸ್ ಪ್ಯಾಕ್ ಮಾಡುತ್ತಾರೆ. ಇಂದು 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಅವರು ಗೋವಾದ ಬೀಚಿನಲ್ಲಿ ಬೆತ್ತಲೆಯಾಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ …
Read More »ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ.
ಚಿಕ್ಕೋಡಿ: ‘ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ. ರಾಜಯೋಗದ ಮೂಲಕ ಶುದ್ಧ, ಸಕಾರಾತ್ಮಕ, ಶ್ರೇಷ್ಠ, ಶಕ್ತಿಶಾಲಿ ಭಾವನೆಗಳು ಪಸರಿಸಿ ಬೆಳೆಗಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಾತ್ವಿಕ ಆಹಾರವನ್ನು ಪಡೆಯಬಹುದು. ಇದು ಶಾಶ್ವತ ಯೋಗಿಕ ಬೇಸಾಯ ಪದ್ಧತಿಯಿಂದ ಸಾಧ್ಯ’. – ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸೇವಾ ಕೇಂದ್ರದ ಸಂಚಾಲಕರಾದ ಗ್ರಾಮ ವಿಕಾಸ ಬೆಳಗಾವಿ ವಿಭಾಗದ ಸಂಯೋಜಕಿ ಶಾಂತಕ್ಕ ಅವರ ಮಾತಿದು. ‘ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ಲಕ್ಷ್ಮಣ ಹೊಳಬಸಪ್ಪ …
Read More »
Laxmi News 24×7