Breaking News

ರಾಷ್ಟ್ರೀಯ

ಸ್ಯಾಂಡಲ್​ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ.

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಡ್ರಗ್ಸ್ ಸಿಗದೇ ನಟಿಯರನ್ನು ಅರೆಸ್ಟ್ ಮಾಡಿದ್ದಾರೆ ಎಂದವರಿಗೆ ಅರಗಿಸಿಕೊಳ್ಳಲಾಗದ ಸತ್ಯ ಬಯಲಾಗಿದೆ. ಅರೋಪಿಗಳು ಒಳಸಂಚು ರೂಪಿಸಿ ದಂಧೆ ನಡೆಸುತ್ತಿದ್ದರು ಜೊತೆಗೆ ಡ್ರಗ್ಸ್ ವ್ಯವಹಾರ ನಡೆಸುತ್ತಿದ್ದರು ಎಂಬುವುದನ್ನು ಸಿಸಿಬಿ ಬಯಲಿಗೆಳೆದಿದೆ. ಹೀಗಾಗಿ ಸಂಜನಾ, ರಾಗಿಣಿ ಮನೆಯಲ್ಲಿ ಅಥವಾ ಅವರ ಬಳಿ ಡ್ರಗ್ಸ್ ಸಿಕ್ಕಿಲ್ಲ. ಆದರೆ ಈ ಇಬ್ಬರು ನಟಿಮಣಿಯರು ಈ ದಂಧೆಯಲ್ಲಿ ಹಣ ಮಾಡಿರುವುದು ಸಾಭೀತಾಗಿದೆ. ಈವರೆಗಿನ ತನಿಖೆಯಲ್ಲಿ ವೀರೇನ್ ಖನ್ನನೇ ಕಿಂಗ್ ಪಿನ್ …

Read More »

ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಇದ್ದಿದ್ದಕ್ಕೆ ರೋಗಿ ಕೊನೆಯುಸಿರೆಳೆದಿದ್ದಾರೆ ಎಂದು ಶಾಂತಿನಗರದ ನ್ಯೂ ಮೆಡ್ ಡಯಾಗ್ನೊಸ್ಟಿಕ್ ಸೆಂಟರ್ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 47 ವರ್ಷದ ರವೀಂದ್ರನಾಥ್ ಎಂಬುವವರು ಕೊರೊನಾ ಸೋಂಕು ನೆಗೆಟಿವ್ ಬಂದ ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಉಸಿರಾಟದ ಸಮಸ್ಯೆ ಹಿನ್ನೆಲೆ ಮನೆಯಲ್ಲಿ ಆಕ್ಸಿಜನ್ …

Read More »

ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಕರೆದೊಯ್ದರು. ಮಾಜಿ ಸಚಿವರನ್ನು ಹುಬ್ಬಳ್ಳಿಯ ಸಿಎಆರ್ ಮೈದಾನದಿಂದ ಕರೆದೊಯ್ದು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಿದರು.       ಆದರೆ, ಇಂದು ನ್ಯಾಯಾಲಯದಲ್ಲಿ ವಿನಯ್​ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಅಸಾಧ್ಯವೆಂಬ ಮಾಹಿತಿ ಸಿಕ್ಕಿದೆ.   ಮಾಜಿ ಸಚಿವರ ಪರ ಜಾಮೀನು …

Read More »

ಪಟಾಕಿ ನಿಷೇಧ ವಿರೋಧಿಸಿ ಪಟಾಕಿ ಸುಡುವ ಮೂಲಕ ಪ್ರತಿಭಟಿಸಿದ ವಾಟಾಳ್

ಬೆಂಗಳೂರು, ನ.8- ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧ ಮಾಡಿರುವ ಕ್ರಮ ಸಂಪ್ರದಾಯಕ್ಕೆ ಮಾಡಿರುವ ಅಪಚಾರ ಎಂದು ಆರೋಪಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಇಂದು ಪಟಾಕಿ ಸುಡುವ ಮೂಲಕ ಸರ್ಕಾರದ ಕ್ರಮ ವಿರೋಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟಾಕಿ ಹಚ್ಚುವುದರಿಂದ ಕೊರೊನಾ ಬರುತ್ತದೆ ಎಂಬ ಸರ್ಕಾರದ ಹೇಳಿಕೆ ಅತ್ಯಂತ ಅವೈಜ್ಞಾನಿಕವಾಗಿದೆ. ಕೊರೊನಾ ಸಾಂಕ್ರಾಮಿಕ ರೋಗ ಪಟಾಕಿಯಿಂದ ಬರುತ್ತದೆ ಎಂದು ಎಲ್ಲೂ …

Read More »

ಆರ್‌ಸಿಬಿ ನಾಯಕತ್ವದಿಂದ ಕೊಹ್ಲಿಯನ್ನು ತೆಗೆದುಹಾಕಿ : ಗೌತಮ್ ಗಂಭೀರ್

ನವದೆಹಲಿ,ನ.7-ನಿರಂತರ ವೈಫಲ್ಯಕ್ಕೆ ಕಾರಣವಾಗಿರುವ ವಿರಾಟ್ ಕೊಹ್ಲಿ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ನಾಯಕತ್ವದಿಂದ ತೆಗೆದು ಹಾಕಬೇಕೆಂದು ಖ್ಯಾತ ಕ್ರಿಕೆಟ್ ತಾರೆ ಗೌತಮ್ ಗಂಭೀರ್ ಆಗ್ರಹಿಸಿದ್ದಾರೆ.  ನೇರ ಮತ್ತು ನಿಷ್ಠೂರ ಮಾತುಗಳಿಗೆ ಹೆಸರಾಗಿರುವ ಮಾಜಿ ಆರಂಭಿಕ ಆಟಗಾರ ಮತ್ತು ಎರಡು ಬಾರಿ ಐಪಿಎಲ್ ಚಾಂಪಿಯನ್‍ಶಿಪ್ ಗೆದ್ದ ತಂಡದ ನಾಯಕತ್ವದ ವಹಿಸಿದ್ದ ಗೌತಮ್, ವಿರಾಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕ್ರೀಡಾ ವಾರ್ತಾ ವಾಹಿನಿಯೊಂದಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ ಗೌತಮ್, ಇದು ವಿಶ್ವಾಸಾರ್ಹತೆ ಮತ್ತು …

Read More »

ಭೀಮಾತೀರದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಅರೆಸ್ಟ್ ; ಬಂಧಿತರಿಂದ ಎರಡು ಕಂಟ್ರಿ ಪಿಸ್ತೂಲ್ ವಶಕ್ಕೆ..!

    ವಿಜಯಪುರ : ನವೆಂಬರ್ 2 ರಂದು ಭೀಮಾತೀರದ ಕುಖ್ಯಾತಿಯ ಮಹಾದೇವ ಭೈರಗೊಂಡ ಮೇಲೆ ನಡೆದಿದ್ದ ಶೂಟೌಟ್  ಪ್ರಕರಣಕ್ಕೆ ಸಂಭಂದಿಸಿದಂತೆ ವಿಜಯಪುರ. ಪೋಲೀಸರು ಮತ್ತೆ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಹೌದು ನವೆಂಬರ್ 2 ರಂದು ನಡೆದಿದ್ದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಯಾಶೀನ್ ರಮಜಾನಸಾಬ್ ದಂದರಗಿ,  ಕರೆಪ್ಪ ಸೊನ್ನದ ,  ಸಿದ್ದರಾಯ ಬೊಮ್ಮನಜೋಗಿ ,  ಸಚೀನ ಮಾನವರ್ , ಚಡಚಣ. ಮೂಲದ ರವಿ ಬಂಡಿ ಬಂಧಿತ ಆರೋಪಿಗಳು, ಬಂಧಿತ ಆರೋಪಿಗಳಿಂದ  ಐದು …

Read More »

ಖಾನಾಪುರ ಸ್ಥಾನ ಕೊನೆ ಗಳಿಗೆಯಲ್ಲಿ ಸೋಲು : ಶಾಸಕ ಸತೀಶ್ ಜಾರಕಿಹೊಳಿ

  ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ವ್ಯಕ್ತಿಗತ ಅವರ ಗೌರವ, ಸ್ಥಾನದ ಮೇಲೆ ನಡೆಯುತ್ತದೆ. ಖಾನಾಪುರ ನಿರ್ದೇಶಕರ ಸ್ಥಾನ ಗೆಲ್ಲುವ ಎಲ್ಲ ಅವಕಾಶಗಳು ಇತ್ತು. ಆದರೆ ಕೊನೆ ಗಳಿಗೆಯಲ್ಲಿ ಸಮಸ್ಯೆಯಾಗಿ, ಸೋತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿ, ಡಿಸಿಸಿ ಬ್ಯಾಂಕ್ ರೈತರು ಇರುವಂತಹ ಬ್ಯಾಂಕ್ ಆಗಿದೆ. ಇಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಂತ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್, …

Read More »

ಡಿಸಿಎಂ ಲಕ್ಷ್ಮಣ ಸವದಿಗೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ : ಇತ್ತಿಚೇಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದ್ದು, ಅವನತಿಯ ಅಂಚಿನಲ್ಲಿದೆ ಎಂಬ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇರುತ್ತದೆ. ಅದೇನು ಹೊಸದಲ್ಲ. ಬಿಜೆಪಿ ಪಕ್ಷದಲ್ಲಿಯೂ ಸಹ ಮೂರು ಗುಂಪುಗಳು ಇವೆ. ದೆಹಲಿ ಅಲ್ಲಿ ಒಂದು ಗುಂಪು, ಕರ್ನಾಟಕದಲ್ಲಿ ಎರಡು ಇದಾವೆ ಎಂದು …

Read More »

ಬಿಜೆಪಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಸಚಿವ ಜಾರಕಿಹೊಳಿ‌

  ಗೋಕಾಕ್ ಗ್ರಾಮೀಣ ಮಂಡಲ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಜಲಸಂಪನ್ಮೂಲ ಸಚಿವರಾದ  ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ಗೋಕಾಕ್ ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲ ವತಿಯಿಂದ ಎರಡು ದಿನಗಳ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Read More »

ಸಿಎಂ ಬದಲಾವಣೆ ಇಲ್ಲ – ರಮೇಶ್ ಜಾರಕಿಹೊಳಿ‌*

  ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ‌, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು …

Read More »