Breaking News

ರಾಷ್ಟ್ರೀಯ

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »

ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು.

ಶಿವಮೊಗ್ಗ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಈಶ್ವರಪ್ಪ ಹೇಳಿಕೆಗೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.   ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು. ಮೀಸಲಾತಿ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಂದು ಬಾರಿ ವಾಲ್ಮೀಕಿ ಜನಾಂಗ ಬೇಡಿಕೆ ಈಡೇರಿಸಲಾಗುವುದು ಎನ್ನುತ್ತಾರೆ. ಮತ್ತೊಮ್ಮೆ ಕುರುಬ ಜನಾಂಗ ಸೇರಿದಂತೆ ಇನ್ನೂ ಎರಡು ಮೂರು …

Read More »

ಮಂಕಡಿಂಗ್​ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ!

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ , ಆರ್​ಸಿಬಿಯ ಓಪನರ್ ಆರನ್ ಫಿಂಚ್ ಅವರನ್ನು ‘ಮಂಕಡಿಂಗ್’ ಮಾಡದೆ ಕೇವಲ ಎಚ್ಚರಿಸಿದ್ದು ಕ್ರಿಕೆಟ್ ವಲಯಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ . ಭಾರತದ ಮಾಜಿ ಕ್ಯಾಪ್ಟನ್​ಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲೆ ದೇವ್ , ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್​ನನ್ನು ಮಂಕಡಿಂಗ್ ( ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್ , ಬೌಲರ್ ಚೆಂಡೆಸೆಯುವ ಮೊದಲೇ ಕ್ರೀಸ್ ಬಿಟ್ಟು ಮುಂದೆ ಸಾಗಿದಾಗ ಬೌಲರ್ ಅವನನ್ನು …

Read More »

ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ

ಬೆಳಗಾವಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ್ ಬಾಕಿ ಬಿಲ್ ನೀಡದ ಇರುವ ಹಿನ್ನೆಲೆಯಲ್ಲಿ ರೈತನೊಬ್ಬ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ  ನಡೆದಿದೆ.   https://www.facebook.com/105350550949710/posts/202232631261501/?sfnsn=wiwspmo       ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ಶಿವಾನಂದ ಗೋಹಾರ್ ತನ್ನ ಸಮಾಧಿಯನ್ನು ತೋಡಿಕೊಂಡ ರೈತ ಎನ್ನಲಾಗುತ್ತಿದೆ. ಮಲಪ್ರಭಾ ಸಕ್ಕರೆ ಕಾರ್ಖಾನೆಗೆ  114 ಟನ್ ಕಬ್ಬಿನ, 85 ಸಾವಿರ ರೂಪಾಯಿ ಬಾಕಿ ಬಿಲ್ ಬರಬೇಕು . ಕಾರ್ಖಾನೆಗೆ ಈಗಾಗಲೇ 20 …

Read More »

ಲಾಕ್‌ಡೌನ್ ಎಫೆಕ್ಟ್: ಪೊಲೀಸ್ ಠಾಣೆಯಲ್ಲಿ ಕೇಳೋರೇ ಇಲ್ಲ ಮಾಲೀಕರಿಲ್ಲದ ವಾಹನಗಳನ್ನು!

ಕೊರೋನಾ ವೈರಸ್ ಇನ್ನೂ ತನ್ನ ಕಬಂದಬಾಹುವನ್ನ ಚಾಚುತ್ತಲೇ ಇದೆ. ಮಾರ್ಚ್ ತಿಂಗಳ ಕೊನೆಯಲ್ಲಿ ಪ್ರಾರಂಭವಾದ ವೈರಸ್ ಅಕ್ಟೋಬರ್ ಬಂದರೂ ಕಡಿಮೆಯಾಗದೆ, ಇನ್ನೂ ಹೆಚ್ಚುತ್ತಲೆ ಇದೆ. ಮಾರ್ಚ್ ತಿಂಗಳಲ್ಲಿ ಕೊರೋನಾ ಹರಡುವಿಕೆಯ ಸರಪಳಿ ತುಂಡರಿಸಲು ಕೇಂದ್ರ ಸರ್ಕಾರ ಲಾಕ್‌ಡೌನ್ ನಿಯಮಾವಳಿಯನ್ನ ಜಾರಿಗೆ ತಂದಿತ್ತು. ಜನರು ಯಾರೂ ಅನಗತ್ಯವಾಗಿ ಓಡಾಡಬಾರದು, ಊರಿನಿಂದ ಊರಿಗೆ ಅಷ್ಟೆ ಅಲ್ಲ ಒಂದು ಏರಿಯಾದಿಂದ ಮತ್ತೊಂದು ಏರಿಯಾಗೆ ಹೋಗುವುದನ್ನು ಸಹ ನಿಷೇಧಿಸಿತ್ತು. ಅನಗತ್ಯ ಓಡಾಡಿದವರ ವಾಹನಗಳನ್ನ ಸಹ ಪೊಲೀಸ್ …

Read More »

ಶಾರ್ಜಾಗೆ ವಾಪಸ್ಸಾಗಿರುವುದು ರಾಜಸ್ತಾನ ರಾಯಲ್ಸ್​ಗೆ ನೆರವಾಗಲಿದೆಯೇ?

ಗೆಲ್ಲುವುದನ್ನು ಮರೆತಂತಿರುವ ರಾಜಸ್ತಾನ ರಾಯಲ್ಸ್ ಮತ್ತು ಗೆಲ್ಲುವುದನ್ನು ಅಭ್ಯಾಸ ಮಾಡಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಇಂಡಿಯನ್ ಪ್ರಿ ಮೀಯರ್ ಲೀಗ್ 13 ನೇ ಅವೃತಿಯ 23 ನೇ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿಂ ದು ನಡೆಯಲಿದೆ . ರಾಯಲ್ಸ್​ಗೆ ಇವತ್ತು ಅನುಕೂಲವಾಗಬಹುದಾದಸಂಗತಿಯೆಂದರೆ ಅದು ಶಾರ್ಜಾಗೆ ವಾಪಸ್ಸಾಗಿರುವುದು. ನಿಮಗೆ ಗೊತ್ತಿರುವ ಹಾಗೆ, ಈ ಮೈದಾನದಲ್ಲಿ ತಾನಾಡಿದ ಮೊದಲೆರಡು ಪಂದ್ಯಗಳನ್ನು ಸ್ಟಿವೆನ್ ಸ್ಮಿತ್​ನ ಅವರ ತಂಡ ಸುಲಭವಾಗಿ ಗೆದ್ದಿತ್ತು. ಆದರೆ. ನಂತರ, ದುಬೈ …

Read More »

ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾ ಪಾತ್ರ ಬಹಳ ಮುಖ್ಯ: ಡಿ.ಕೆ ಶಿವಕುಮಾರ್

ಬೆಂಗಳೂರು: ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಸೋಶಿಯಲ್ ಮೀಡಿಯಾ ಘಟಕದ ಜತೆ ಸಭೆ ನಡೆಸಿದರು. ‘ಬೈಎಲೆಕ್ಷನ್‌ನಲ್ಲಿ ಸೋಶಿಯಲ್ ಮೀಡಿಯಾ ಸ್ಟ್ರಾಂಗ್ ಮಾಡಿ’ ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾದ ಪಾತ್ರ ಮುಖ್ಯ. ಸೋಶಿಯಲ್ ಮೀಡಿಯಾ ಇನ್ನಷ್ಟು ಌಕ್ಟಿವ್ ಆಗಬೇಕು. ಸೋಶಿಯಲ್ ಮೀಡಿಯಾದಲ್ಲಿ ಮಾರ್ಕೆಟಿಂಗ್ ಮಾಡ್ತಾರೆ. ಏನೂ ಮಾಡದಿದ್ರೂ ಬಿಜೆಪಿಯವ್ರು ಮಾರ್ಕೆಟಿಂಗ್ ಮಾಡ್ತಾರೆ. ನಾವು ಹಲವು ಬಾರಿ ಈ ವಿಚಾರದಲ್ಲಿ ಎಡವಿದ್ದೇವೆ. ಈಗ ಎಚ್ಚೆತ್ತುಕೊಳ್ಳದಿದ್ದರೆ ಕಷ್ಟವಾಗುತ್ತದೆ …

Read More »

ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ, ಇನ್ನೂ ಪರಪ್ಪನ ಜೈಲಿನಲ್ಲೇ ಇರಬೇಕು..

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. NDPS ವಿಶೇಷ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಕೋರ್ಟ್ ನಟಿಮಣಿಯರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್​ 23ರವರೆಗೆ ವಿಸ್ತರಿಸಿದೆ. ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ನಟಿ ಪರ ವಕೀಲ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ …

Read More »

ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ. ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.

Read More »

ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು.

ನವದೆಹಲಿ: ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು. ದೆಹಲಿಯಲ್ಲಿರುವ ರಾಮ್‌ ವಿಲಾಸ್‌ ಪಾಸ್ವಾನ್‌ ನಿವಾಸಕ್ಕೆ ತೆರಳಿದ ಮೋದಿ ಪಾಸ್ವಾನ್‌ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು. ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಗಣ್ಯರು …

Read More »