Breaking News

ರಾಷ್ಟ್ರೀಯ

ಬೆಳಗ್ಗೆ ಸುರಿದ ಮಳೆಗೆ ತತ್ತರಿಸಿದ ಮುಂಬೈ………………

ಮುಂಬೈ: ಇಂದು ಬೆಳಗ್ಗೆ ಸುರಿದ ವರ್ಷಧಾರೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿದ್ದು, ಎಲ್ಲಿ ನೋಡಿದಲ್ಲಿ ನೀರು ಕಾಣಿಸುತ್ತಿದೆ. ರಸ್ತೆಯಲ್ಲಿ ನೀರು ಹರಿಯುತ್ತಿರೋದರಿಂದ ವಾಹನ ಸವಾರರು ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡುವಂತಾಯ್ತು. ಹವಾಮಾನ ಇಲಾಖೆ ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಸಮುದ್ರದಲ್ಲಿ ಮೂರು ಮೀಟರ್ ಗಿಂತ ಎತ್ತರ ಅಲೆಗಳು ಸೃಷ್ಟಿಯಾಗಲಿವೆ. ಹಾಗಾಗಿ ಸಮುದ್ರ ತೀರಗಳಿಗೆ ಸಾರ್ವಜನಿಕರಿಗೆ ಪ್ರವೇಶ …

Read More »

ರಾತ್ರಿ ಲಾಡ್ಜ್‌ಗೆ ಹೋದ ಪ್ರೇಮಿಗಳು- ಬೆಳಗ್ಗೆ ಯುವತಿ ಸಾವು, ಯುವಕ ಗಂಭೀರ

ಹೈದರಾಬಾದ್: ಲಾಡ್ಜ್‌ನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಯುವಕ ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ತೆಲಂಗಾಣದ ಮೆಡ್ಚಲ್-ಮಲ್ಕಾಜ್ಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೆಡಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಲಾಡ್ಜ್‌ನಲ್ಲಿ ಕೀಟನಾಶಕವನ್ನು ಕುಡಿದು ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಘಟನೆಯಲ್ಲಿ ಯುವತಿ ಶ್ರಾವಣಿ ಸ್ಥಳದಲ್ಲೇ ಮೃತಪಟ್ಟಿದ್ದು, ಗೆಳೆಯ ಅಜಯ್ ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಶ್ರಾವಣಿ ಮತ್ತು ಅಜಯ್ ಇಬ್ಬರು ಪರಸ್ಪರ …

Read More »

ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಮೇಷ – ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ ವೃಷಭ – ಹೊಟ್ಟೆ ಸಂಬಂಧಿ ಆರೋಗ್ಯ ವ್ಯತ್ಯಾಸ, ಸಹೋದರರೊಂದಿಗೆ ಸಮಾಧಾನವಿರಲಿ, ನಷ್ಟ ಸಾಧ್ಯತೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಮಿಥುನ – ಸುಖಹಾನಿ, ಅಸಮಧಾನದ ದಿನ, ಕೃಷಿಕರಿಗೆ ಕೊಂಚ ಕಾರ್ಯ ವಿಘ್ನಗಳು, ಗ್ರಾಮದೇವತಾರಾಧನೆ ಮಾಡಿ ಕನ್ಯಾ – ಸ್ತ್ರೀಯರಿಗೆ ಕೆಲಸದಲ್ಲಿ ಮಂಕು, ಸಹೋದರರಿಂದ ಅಸಹಾಯಕತೆ, ದುರ್ಗಾ ಪ್ರಾರ್ಥನೆ ಮಾಡಿ ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ …

Read More »

ಟೆಂಪೋದೊಳಗೆ ಕರೆದೊಯ್ದು ತನ್ನ 7 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಭೂಪ!

ಜೈಪುರ: ತನ್ನ 7 ವರ್ಷದ ಮಗಳ ಮೇಲೆಯೇ ಪಾಪಿ ತಂದೆಯೊಬ್ಬ ಅತ್ಯಾಚಾರವೆಸಗಿದ ಹೀನಾಯ ಘಟನೆ ರಾಜಸ್ಥಾನದ ಉದಯ್ ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ ಸುರ್ಫಾಲಾ ಕಾಯ ಗ್ರಾಮದ ಗೋವರ್ಧನ್ ವಿಲಾಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಆರೋಪಿ 36 ವರ್ಷದ ಟೆಂಪೋ ಚಾಲಕನನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯ ತಾಯಿ ತನ್ನ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನಿಡಿದ್ದು, ದೂರಿನಲ್ಲಿ …

Read More »

ಕೊಹ್ಲಿ, ಧೋನಿ, ವಾರ್ನರ್ ಬಿಟ್ಟು ರೋಹಿತ್‍ಗೆ ನಾಯಕನ ಪಟ್ಟ

ಮುಂಬೈ: ಐಪಿಎಲ್‍ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಕೋಚ್ ಆಗಿರುವ ಆಸ್ಟ್ರೇಲಿಯಾದ ಮಾಜಿ ಆಟಗಾರ ಟಾಮ್ ಮೂಡಿ ಅವರು, ತಮ್ಮ ವಿಶ್ವಶ್ರೇಷ್ಠ ಟಿ-20 ತಂಡವನ್ನು ಆಯ್ಕೆ ಮಾಡಿದ್ದು, ಭಾರತದ ಹಿಟ್‍ಮ್ಯಾನ್ ರೋಹಿತ್ ಶರ್ಮಾ ಅವರಿಗೆ ನಾಯಕ ಪಟ್ಟ ದೊರೆತಿದೆ. ಟಾಮ್ ಮೂಡಿ ಅವರು, ಸದ್ಯದಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಇರುವ ಖ್ಯಾತ ಕೋಚ್ ಆಗಿದ್ದಾರೆ. ಇವರ ತರಬೇತಿಯಲ್ಲಿ ಹೈದರಾಬಾದ್ ತಂಡ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಈಗ ಕಮೆಂಟೇಟರ್ ಹರ್ಷ ಭೋಗ್ಲೆ …

Read More »

ಮಗನ‌ ಅದ್ದೂರಿ‌ ಮದುವೆ‌ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್

ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ‌ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …

Read More »

ಬೇರೊಬ್ಬಳೊಂದಿಗೆ ಕಾರಿನಲ್ಲಿದ್ದ ಪತಿಯನ್ನು ಚೇಸ್ ಮಾಡಿ ಹಿಡಿದ ಪತ್ನಿ- ವೈರಲ್ ವಿಡಿಯೋ

ಮುಂಬೈ: ಗೆಳತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಪತಿಯನ್ನು ಪತ್ನಿ ಚೇಸ್ ಮಾಡಿ ಹಿಡಿದಿರುವ ಘಟನೆ ಮುಂಬೈ ನಗರದಲ್ಲಿ ನಡೆದಿದೆ. ಮಹಿಳೆಯ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮುಂಬೈ ನಗರದಲ್ಲಿ ಪ್ರಮುಖ ರಸ್ತೆಯೊಂದರಲ್ಲಿ ಜುಲೈ 11ರ ಸಂಜೆ ಘಟನೆ ನಡೆದಿದೆ. ಮುಂಬೈ ನಿವಾಸಿಯಾಗಿದ್ದ 30 ವರ್ಷದ ವ್ಯಕ್ತಿ ಕಪ್ಪು ಬಣ್ಣದ ಕಾರಿನಲ್ಲಿ ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ. ಈ ಕಾರನ್ನು ಮತ್ತೊಂದು ಕಾರಿನಲ್ಲಿ ಬೆನ್ನತ್ತಿದ್ದ ಆತನ ಪತ್ನಿ ನಡುರಸ್ತೆಯಲ್ಲಿ ಕಾರನ್ನು …

Read More »

ಲಾಕ್‍ಡೌನ್ ಉಲ್ಲಂಘಿಸಿದ್ದಕ್ಕೆ ಬೈಕ್ ಸೀಜ್- ಮನನೊಂದು ಬೆಂಕಿ ಹಚ್ಚಿಕೊಂಡ ಯುವಕ

ಚೆನ್ನೈ: ಲಾಕ್ ಡೌನ್ ಉಲ್ಲಂಘನೆ ಮಾಡಿದ್ದಕ್ಕೆ ಪೊಲೀಸರು ಬೈಕ್ ಸೀಜ್ ಮಾಡಿದ್ದಾರೆ. ಆದರೆ ಇದರಿಂದ ಮನನೊಂದ ಯುವಕ ಚಿಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಿರುಪತ್ತೂರು ಜಿಲ್ಲೆಯ ಅಂಬುರ್ ಪಟ್ಟಣದಲ್ಲಿ ನಡೆದಿದೆ. ಯುವಕನನ್ನು ಮುಗಿಲನ್ ಎಂದು ಗುರುತಿಸಲಾಗಿದೆ. ಅಂಬುರ್ ಪಟ್ಟಣದಲ್ಲಿರುವ ಅಣ್ಣ ನಗರ್ ನಿವಾಸಿಯಾಗಿರುವ ಈತ ಲಾಕ್ ಡೌನ್ ಘೋಷನೆ ಮಾಡಿದರೂ, ನಿಯಮವನ್ನು ಉಲ್ಲಂಘಿಸಿ ಭಾನುವಾರ ತನ್ನ ಬೈಕಿನಲ್ಲಿ ಸುತ್ತಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈತನ ಬೈಕ್ ಸೀಜ್ ಮಾಡಿದ್ದಾರೆ. …

Read More »

ಚೀನಿ ರಾಖಿಗಳಿಗೆ ಕೊಕ್- ಮಹಿಳಾ ಸ್ವ ಸಹಾಯ ಸಂಘಗಳಿಂದ ತಯಾರಾಗುತ್ತಿವೆ ರಾಖಿಗಳು

ಲಕ್ನೊ: ಗಾಲ್ವಾನಾ ವ್ಯಾಲಿಯಲ್ಲಿ ಚೀನಾ ಪುಂಡಾಟಿಕೆ ಮೆರೆದ ನಂತರ ಜನ ಚೀನಾ ವಸ್ತುಗಳನ್ನು ಬಹಿಷ್ಕರಿಸಲಾರಂಭಿಸಲಾಗುತ್ತಿದೆ. ನಂತರ ಭದ್ರತೆ ಉದ್ದೇಶದಿಂದ ಕೇಂದ್ರ ಸರ್ಕಾರ ಚೀನಿ ಮೂಲದ 59 ಆ್ಯಪ್‍ಗಳನ್ನು ಸಹ ಬ್ಯಾನ್ ಮಾಡಿ ಆದೇಶಿಸಿತು. ಇದೀಗ ಚೀನಾದಿಂದ ಬರುತ್ತಿದ್ದ ವಿವಿಧ ಶೈಲಿಗಳ ರಾಖಿಗಳ ರೀತಿಯಲ್ಲೇ ಭಾರತದ ಮಹಿಳೆ ತಮ್ಮದೇ ಮಹಿಳೆಯರ ಸಂಘ ಕಟ್ಟಿಕೊಂಡು ವಿವಿಧ ರೀತಿಯ ಬಣ್ಣ ಬಣ್ಣದ ಆಕರ್ಷಕ ರಾಖಿಗಳನ್ನು ತಯಾರಿಸುತ್ತಿದ್ದಾರೆ. ಇನ್ನೇನು ರಕ್ಷಾ ಬಂಧನ ಸಮೀಪಿಸುತ್ತಿದ್ದು, ಆಗಲೇ ಬಣ್ಣ …

Read More »

ರಾಯಚೂರು, ಸಿಂಧನೂರು ಒಂದು ವಾರ ಸಂಪೂರ್ಣ ಲಾಕ್‍ಡೌನ್……….

ರಾಯಚೂರು: ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ 250 ಪಾಸಿಟಿವ್ ಪ್ರಕರಣ ದಾಖಲಾದ ಹಿನ್ನೆಲೆ ಒಂದು ವಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಯಚೂರು ಹಾಗೂ ಸಿಂಧನೂರು ನಗರಗಳನ್ನ ಮಾತ್ರ ಜುಲೈ 15 ರಿಂದ 22 ರವರೆಗೆ ಸಂಪೂರ್ಣ ಲಾಕ್‍ಡೌನ್ ಮಾಡಲಾಗುತ್ತಿದೆ ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಹೇಳಿದ್ದಾರೆ. ಇನ್ನುಳಿದ ತಾಲೂಕು ಪ್ರದೇಶಗಳಲ್ಲಿ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಬಳಿಕ …

Read More »