Breaking News

ರಾಷ್ಟ್ರೀಯ

ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್‌ – ಕಮಲ್‌ ಪಂಥ್‌ ಎಚ್ಚರಿಕೆ

ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಎಚ್ಚರಿಕೆ ನೀಡಿದ್ದಾರೆ. ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಹೇಳಿದರು.   ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ …

Read More »

ಸುಶಾಂತ್ ಸಿಂಗ್ ರಜಪೂತ್ ಅವರ ಜೊತೆ ಡೇಟಿಂಗ್ ಒಪ್ಪಿಕೊಂಡ ಸಾರಾ ಅಲಿ ಖಾನ್

ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ನಟಿ ಸಾರಾ ಅಲಿ ಖಾನ್ ಅವರು ವಿಚಾರಣೆ ನಡೆಸಿದಾಗ ತಾವು ಅಲ್ಪಕಾಲ ಸುಶಾಂತ್ ರನ್ನು ಡೇಟಿಂಗ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸಾರಾ 2018 ರ ಚಿತ್ರ ‘ಕೇದಾರನಾಥ್’ ಚಿತ್ರದೊಂದಿಗೆ ಸುಶಾಂತ್ ಎದುರು ಪಾದಾರ್ಪಣೆ ಮಾಡಿದರು. ಅವರ ವದಂತಿಯ ಪ್ರಣಯದ ವರದಿಗಳು ಆಗ ಹೆಚ್ಚು ಕಾಣಸಿಕೊಂಡಿದ್ದವು ಆದರೆ ಬಹಿರಂಗವಾಗಿ ಇಬ್ಬರು ಇದನ್ನು ಒಪ್ಪಿರಲಿಲ್ಲ.ಜೂನ್ 14 …

Read More »

ನಾಳೆಯ ಹೋರಾಟ ಯಾವ ಸ್ವರೂಪ ಬೇಕಾದ್ರೂ ಪಡೀಬೋದು: ಕರವೇ ಅಧ್ಯಕ್ಷ ಎಚ್ಚರಿಕೆ

ಬೆಂಗಳೂರು: ಸೋಮವಾರ ಕರ್ನಾಟಕ ಬಂದ್ ಯಾವ ಸ್ವರೂಪ ಬೇಕಾದ್ರು ಪಡೆಯಬಹುದು ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ. ರೈಲು, ವಿಮಾನ, ಹೆದ್ದಾರಿ, ಸಾರಿಗೆ ಓಡಾಟದಲ್ಲಿ ಏನು ಬೇಕಾದ್ರು ಆಗಬಹುದು. ಭೂಸುಧಾರಣಾ, ಎಪಿಎಂಪಿ ಕಾಯ್ದೆ ವಿರುದ್ಧ ಹೋರಾಟ ನಿಲ್ಲಲ್ಲ. ಈ ಎರಡು ಕಾಯ್ದೆಗಳು, ರೈತರಿಗೆ ಮರಣ ಶಾಸನ ಬರೆದಂತೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಂಡ ಸರ್ಕಾರಗಳು. ರೈತರನ್ನು ಉದ್ದಾರ ಮಾಡ್ತೀವಿ ಅಂತಾರೆ. ಒಳ್ಳೆ ಬೆಲೆ ಸಿಗುತ್ತೆ ಅಂತಿದ್ದಾರೆ …

Read More »

ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ.

ನವದೆಹಲಿ : ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ. 82 ವರ್ಷದ ಜಸ್ವಂತ್‌ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದ ಜಸ್ವಂತ್‌ ಸಿಂಗ್‌ ಬಳಿಕ ರಾಜಕೀಯಕ್ಕೆ ಪ್ರವೇಶಿಸಿ ಸಂಸತ್‌ ಗೆ ಆಯ್ಕೆಯಾಗಿದ್ದರು. ಅಟಲ್‌ ಬಿಹಾರಿ ವಾಜಪೇಯಿ ಸಚಿವ ಸಂಪುಟದಲ್ಲಿ ಹಲವಾರು ಪ್ರಮುಖ ಖಾತೆಗಳನ್ನು ಜಸ್ವಂತ್‌ ಸಿಂಗ್‌ ನಿಭಾಯಿಸಿದ್ದರು.‌ ಜಸ್ವಂತ್‌ ಸಿಂಗ್‌ …

Read More »

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

Read More »

ಬೆಳಗಾವಿ: ಗರ್ಭಿಣಿ ಸೇರಿ ಇಬ್ಬರ ಬರ್ಬರ ಕೊಲೆ

ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದ ಲಕ್ಷ್ಮಿ ನಗರದ ಹೊರವಲಯದಲ್ಲಿ ಶನಿವಾರ ಸಂಜೆ ಐದು ತಿಂಗಳ ಗರ್ಭಿಣಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅದೇ ಗ್ರಾಮದವರಾದ ರೋಹಿಣಿ ಗಂಗಪ್ಪ ಹುಲಿಮನಿ (22) ಹಾಗೂ ರಾಜಶ್ರೀ ರವಿ ಬನ್ನೂರ (21) ಕೊಲೆಯಾದವರು. ‘ಅವರು ವಾಯುವಿಹಾರಕ್ಕೆಂದು ಬ್ರಹ್ಮದೇವರ ದೇವಸ್ಥಾನದ ಕಡೆಗೆ ಹೋಗಿದ್ದಾಗ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದಿದ್ದವರು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಕತ್ತಿಗೆ ಕೊಯ್ದು ಹಾಗೂ ಬೆನ್ನಿಗೆ ಇರಿದು …

Read More »

ರಾಜ್ಯ ಸರ್ಕಾರದಿಂದ ಅನುದಾನ ರಹಿತ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕೊರೊನಾದಿಂದ ಸಂಕಷ್ಟದಲ್ಲಿರುವ ಅನುದಾನ ರಹಿತ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅನುದಾನ ರಹಿತ ಶಿಕ್ಷಕರಿಗೆ ಶೀಘ್ರವೇ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದ್ದಾರೆ. ಕರ್ನಾಟಕ ಧನವಿನಿಯೋಗ ವಿಧೇಯಕ 2020 ಮಂಡಿಸಿದ ಬಳಕ ಜೆಡಿಎಸ್ ನ ಬಸವರಾಜ ಹೊರಟ್ಟಿ, ಕೊರೊನಾ ಸಂಕಷ್ಟದಲ್ಲಿ ಸರ್ಕಾರ ಎಲ್ಲಾ ವರ್ಗದ ಜನರಿಗೂ ನೆರವು ಘೋಷಿಸಿದೆ. ಆದರೆ, ಅನುದಾನ ರಹಿತ ಶಿಕ್ಷಕರಿಗೆ ಸಹಾಯಧನ ನೀಡಿಲ್ಲ. ಹೀಗಾಗಿ ಅನುದಾನ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (27-09-2020-ಭಾನುವಾರ)

ನಿತ್ಯ ನೀತಿ: ಹಿಂ ಸೆ ಮತ್ತು ದ್ವೇಷದಿಂದ ಏನನ್ನೂ ಸಾಧಿಸಲಾಗುವುದಿಲ್ಲ. ಅಹಿಂಸೆ ಮತ್ತು ಪ್ರೀತಿಯಿಂದಲೋಕವನ್ನೇ ಜಯಿಸಬಹುದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ :ಭಾನುವಾರ, 27.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.12 ಚಂದ್ರ ಉದಯ ಬೆ.03.37 / ಚಂದ್ರ ಅಸ್ತ ರಾ.03.11 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಧಿಕ ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ(ರಾ.07.47) ನಕ್ಷತ್ರ: …

Read More »

ಇನ್ನೂ 20 ವರ್ಷ ಕಾಂಗ್ರೆಸ್‍ನ್ನು ವಿಪಕ್ಷ ಸ್ಥಾನದಲ್ಲೇ ಕೂರಿಸುತ್ತೇನೆ : ಬಿಎಸ್ವೈ ಚಾಲೆಂಜ್

ಬೆಂಗಳೂರು,  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 145ರಿಂದ 150 ಸ್ಥಾನ ಗೆದ್ದು ಇನ್ನೂ 20 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲೇ ಕೂರುವಂತೆ ಮಾಡುವುದು ನನ್ನ ಗುರಿ. ಅದನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು. ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಬಿಡಿಎ ವಸತಿ ಯೋಜನೆಯಲ್ಲಿ ನೀವು ಮಾಡಿರುವ ಆರೋಪ ಕುರಿತು ನೀವು ಸಿಬಿಐಗಾದರೂ ಹೋಗಿ, ಹೈಕೋರ್ಟ್‍ಗಾದರೂ ಹೋಗಿ, ಲೋಕಾಯುಕ್ತಕ್ಕಾದರೂ ಹೋಗಿ, …

Read More »

ಸಂಖ್ಯಾಬಲದ ಕೊರತೆಯಿಂದ ಬಿದ್ದುಹೋಯ್ತು ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯ

ಬೆಂಗಳೂರು,   ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟ ಮೇಲೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ. ಅವಿಶ್ವಾಸ ನಿರ್ಣಯದ ಬಗ್ಗೆ ಎರಡನೇ ಪ್ರತಿಪಕ್ಷ ಜೆಡಿಎಸ್‍ ತಟಸ್ಥ ನಿಲುವು ಅನುಸರಿಸಿತ್ತು. ಅವಿಶ್ವಾಸವನ್ನು ವಿಭಜನೆಯ ಮತಕ್ಕೆ ಹಾಕುವುದಾದರೆ ಕೊರೊನಾ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರನ್ನು ಪಿಪಿಇ ಕಿಟ್‍ ಹಾಕಿಸಿ ವಿಧಾನಸಭೆಗೆ ಕರೆ ತರುವುದಾಗಿ ಬಿಜೆಪಿ ಹೇಳಿತ್ತು. ಈ ಕುರಿತಂತೆ ಬೆಳಗ್ಗೆ ನಡೆದ ಚರ್ಚೆಯಲ್ಲಿ …

Read More »