ದೊಡ್ಡಬಳ್ಳಾಪುರ: ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ವಿನೂತನ ಪ್ರತಿಭಟನೆ ಮೂಲಕ ಗಮನ ಸೆಳೆದಿದೆ. ಕೆರೆಯ ದಂಡೆಯ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಯ ಪ್ರತಿಕೃತಿಗೆ ಹಾಲು, ತುಪ್ಪ ಮತ್ತು ಗಂಧದ ಅಭಿಷೇಕ ಮಾಡುವ ಮೂಲಕ ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಸುವಂತೆ ಪ್ರತಿಭಟನೆ ಮಾಡಿದರು ದೊಡ್ಡಬಳ್ಳಾಪುರ ತಾಲೂಕು ಚಿಕ್ಕತುಮಕೂರು ಕೆರೆಯ ದಂಡೆಯ ಮೇಲೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮವನ್ನು ಅರ್ಕಾವತಿ ನದಿ ಹೋರಾಟ ಸಮಿತಿ …
Read More »ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025
ಹೈದರಾಬಾದ್ನಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಗೆದ್ದ ವಿಶ್ವ ಸುಂದರಿಗೆ ಚಿನ್ನದಿಂದ ಮಾಡಿದ ವಜ್ರ ಖಚಿತ ಕೀರಿತವನ್ನು ತೊಡಿಸಲಾಗುತ್ತದೆ.ಈ ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ. ಈ ಕಿರೀಟದ ಮೌಲ್ಯ ಸುಮಾರು ಮೂರು ಕೋಟಿ …
Read More »ಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆದ 7 ವರ್ಷದ ಬಾಲಕಿ ಸಾವು
ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗೆ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಬೈಕ್ನಿಂದ ಬಿದ್ದ ಕೂಡಲೇ ಕ್ಯಾಂಟರ್ ಹರಿದು ಮಗು ಸಾವನ್ನಪ್ಪಿತ್ತು. ಈ ಘಟನೆ ಮಾಸುವ ಮುನ್ನವೇ ಮಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಕಾಲಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕಿ ಮೃತಪಟ್ಟಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ಬಾಲಕಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ, ಪೋಷಕರು ಸೇರಿದಂತೆ ವಿವಿಧ ಸಂಘಟನೆಗಳು ಆಸ್ಪತ್ರೆ ಎದುರು ಸೇರಿ ಪ್ರತಿಭಟನೆ ನಡೆಸಿದರು. ಮಳವಳ್ಳಿ …
Read More »ರಾಜ್ಯದಲ್ಲಿ ನಿಯಂತ್ರಣಕ್ಕೆ ಬಾರದ ಬಾಲ್ಯ ವಿವಾಹ ಸಿಎಂ ತವರು ಜಿಲ್ಲೆ ಮೈಸೂರಲ್ಲಿ ಅತೀ ಹೆಚ್ಚು ದೂರು:
ಬೆಂಗಳೂರು: ಪ್ರಗತಿಶೀಲ ರಾಜ್ಯವಾದ ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಅದೆಷ್ಟೇ ಜಾಗೃತಿ ಮೂಡಿಸಿ, ಕಠಿಣ ಕ್ರಮಗಳನ್ನು ಕೈಗೊಂಡರೂ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ತಂತ್ರಜ್ಞಾನಗಳಲ್ಲಿ ಆಧುನಿಕತೆಯನ್ನು ಮೈಗೂಡಿಸಿಕೊಂಡು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯ. ಆದರೂ ಕೂಡ ಬಾಲ್ಯ ವಿವಾಹದ ಪಿಡುಗು ಇನ್ನೂ ಮುಂದುವರೆದಿದೆ. ಅದರ ಜೊತೆಗೆ ಬಾಲ ಗರ್ಭಿಣಿಯರ ಸಂಖ್ಯೆಯೂ ಹೆಚ್ಚುತ್ತಿದೆ. ರಾಜ್ಯದ …
Read More »ಬಾಗಲಕೋಟೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ
ಬಾಗಲಕೋಟೆ: ಕೊರೊನಾ ಆತಂಕದ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು …
Read More »SSLCಯಲ್ಲಿ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್
ಬೆಂಗಳೂರು, ಮೇ 31: ಈ ವರ್ಷದ ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಎಸ್ಎಸ್ಎಲ್ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಈ ವೇಳೆ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲಸ ನೆಪ …
Read More »ಡಿಡಿಪಿಐ ಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆ ಪ್ರಯಾಣ ಮಾಡಬೇಕು.:C.M
ಡಿಸಿಗಳು, ಸಿಇಒಗಳ ಸಭೆ ಮುಂದುವರೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭೆಯ ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಫಲಿತಾಂಶ ಕಡಿಮೆ ಇರುವ ಜಿಲ್ಲೆಗಳಲ್ಲಿ ಡಿಡಿಪಿಐ ಗಳನ್ನೇ ನೇರ ಹೊಣೆ ಮಾಡುವಂತೆ ಸೂಚಿಸಿದರು. SSLC ಯಲ್ಲಿ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …
Read More »ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು
ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು ದಾವಣಗೆರೆ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಅಸುನೀಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಶಿಕಾರಿಪುರ ರಸ್ತೆಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಶಿಕಾರಿಪುರ ನಗರದ ರುದ್ರಮ್ಮ(79) ಹಾಗೂ ಶಿವಮೊಗ್ಗದ ಅನ್ಸರ್ ಅಹ್ಮದ್ ಎಂಬ ಇಬ್ಬರು ಸಾವನ್ನಪ್ಪಿದ್ದಾರೆ. ರುದ್ರಮ್ಮ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಿಕಾರಿಪುರಕ್ಕೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅವರಿದ್ದ ಕಾರಿಗೆ ಎದುರಿನಿಂದ ಬಂದ ಕಾರು …
Read More »ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಹೆಬ್ಬಾಳಕರ್
ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ …
Read More »ಪ್ರೀತಿಸಿ ಮದ್ವೆಯಾಗಿದ್ದವಳನ್ನ 10 ಬಾರಿ ಇರಿದು ಕೊಂದ ಪತಿ
ಚಿಕ್ಕಮಗಳೂರು, (ಮೇ 28): ಪ್ರೀತಿಸಿ (Love) ಮದುವೆಯಾಗಿದ್ದ ಪತ್ನಿಯನ್ನು (Wife) ಚಾಕು ಮನಸ್ಸೋ ಇಚ್ಛೆ ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದೆ. ಇನ್ನು ಪತಿ ಅವಿನಾಶ್ (32) ಎನ್ನುವಾತ ಚಾಕುವಿನಿಂದ ಬರೋಬ್ಬರಿ ಹತ್ತು ಬಾರಿ ಚುಚ್ಚಿ ಕೊಂದು ಎಸ್ಕೇಪ್ ಆಗಿದ್ದಾನೆ. ಕೀರ್ತಿ ಪೋಷಕರ ವಿರೋಧದ ನಡುವೆಯೂ ಆಕೆಯನ್ನು ನಾಲ್ಕು ವರ್ಷದ ಹಿಂದೆಯೇ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಇಬ್ಬರು ನಡುವೆ ಶುರುವಾದ ಸಣ್ಣ …
Read More »