ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಘಟನೆ.ರೈತರ ಜಮೀನಿನಲ್ಲಿ ಹಾದು ಹೋಗುತ್ತಿ ವೇಳೆ ಘಟನೆ. ಸ್ಥಳಕ್ಕೆ ಹಿರಿಯ ಅಣ್ಯಾಧಿಕಾರಗಳ ಭೇಟಿ ಪರಿಶೀಲನೆ.ಆನೆಗಳ ಸಾವಿನ ಬಗ್ಗೆ ತನಿಖೆ ನಡೆಸುತ್ತಿರೋ ಅರಣ್ಯಾಧಿಕಾರಿಗಳು. ಸುಳೆಗಾಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ. ಕಾಡು ಪ್ರಾಣಿ ದಾಳಿ ತಪ್ಪಿಸಲು ವಿದ್ಯುತ್ ತಂತಿ ಬೇಲಿ ಹಾಕಿರೋ ಸಾಧ್ಯತೆ. …
Read More »ಸುರಂಗ ರಸ್ತೆ ಬದಲು ಮೆಟ್ರೋ ವಿಸ್ತರಣೆ, ಸಾರ್ವಜನಿಕ ಸಾರಿಗೆಗೆ ಆದ್ಯತೆಯಿಂದ ಮಾತ್ರ ಸಂಚಾರದಟ್ಟಣೆ ತಹಬದಿಗೆ: ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: 18 ಕಿಲೋ ಮೀಟರ್ ಉದ್ದದ ಸುರಂಗ ಮಾರ್ಗ ರಸ್ತೆ ನಿರ್ಮಾಣದಿಂದ ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆ ಹೇಗೆ ಸಾಧ್ಯ. ಪೂರ್ವ ಸಿದ್ಧತೆ ನಡೆಸದೆ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಸಾರ್ವಜನಿಕರ ಹಣ ಪೋಲು ಮಾಡುವ ಬದಲು ಸಮೂಹ ಸಾರಿಗೆಗೆ ಆದ್ಯತೆ ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಟಿಯಲ್ಲಿ ಸುರಂಗ ರಸ್ತೆ ನಿರ್ಮಾಣದಿಂದಾಗಿ ಎದುರಾಗುವ ತೊಡಕುಗಳು ಹಾಗೂ …
Read More »ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ
ಮಂಗಳೂರು, ಅಕ್ಟೋಬರ್ 27: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ …
Read More »ರಸ್ತೆ ದುರಸ್ತಿಗೆ ರೋಡ್ನಲ್ಲಿ ಹೋಮ: ಈಗಲೂ ಸರಿಪಡಿಸದಿದ್ದರೆ ಮತ್ತೊಂದು ಪ್ರತಿಭಟನೆ
ರಸ್ತೆ ದುರಸ್ತಿಗೆ ರೋಡ್ನಲ್ಲಿ ಹೋಮ: ಈಗಲೂ ಸರಿಪಡಿಸದಿದ್ದರೆ ಮತ್ತೊಂದು ಪ್ರತಿಭಟನೆ ಹಾವೇರಿ: ರಾಣೆಬೆನ್ನೂರಿನ ಗೌರಿಶಂಕರ್ ನಗರದ 2ನೇ ಹಂತ 1ನೇ ಕ್ರಾಸ್ ರಸ್ತೆ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಆಗ್ರಹಿಸಿ ರೈತ ಸಂಘಟನೆ ಹಾಗೂ ಸ್ಥಳೀಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಾಣೆಬೆನ್ನೂರಿನ ಗೌರಿಶಂಕರ ನಗರದಲ್ಲಿ ಎರಡನೇ ಹಂತ, ಮೊದಲನೇ ಕ್ರಾಸ್ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ರೋಡ್ನಲ್ಲಿ ಹೋಮ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ …
Read More »ಯತೀಂದ್ರ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ; ಲೀಡರ್ ಯಾರಾಗಬೇಕು ಅಂತಾ ಹೈಕಮಾಂಡ್ ತೀರ್ಮಾನಿಸುತ್ತೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಮುಂದಿನ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ. ಅವರು ಹೇಳಿದ್ದು ಸೈದ್ಧಾಂತಿಕವಾಗಿ ಮಾತ್ರ. ಲೀಡರ್ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಹಿಂದ ಸಂಘಟನೆ ನಾನು ಮಾಡುತ್ತಿದ್ದೆ. ಈಗ ಅದನ್ನು ಸತೀಶ್ ಜಾರಕಿಹೊಳಿ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ. ಸತೀಶ್ …
Read More »ಮಳೆ ಹೊಡೆತಕ್ಕೆ ನೀರು ಪಾಲಾದ ಭತ್ತ
ಉಡುಪಿ : ಜಿಲ್ಲೆಯಲ್ಲಿ ನವರಾತ್ರಿಯಿಂದ ದಿನ ಬಿಟ್ಟು ದಿನ ಮಳೆಯಾಗುತ್ತಿದೆ. ದೀಪಾವಳಿ ಸಂದರ್ಭದಲ್ಲೂ ಭಾರೀ ಮಳೆಯಾಗಿದೆ. ಯಾವ ವರ್ಷದಲ್ಲೂ ಕೂಡ ನವರಾತ್ರಿಯ ಆಸುಪಾಸಿನ ದಿನಗಳಲ್ಲಿ ಈ ಪ್ರಮಾಣದ ಮಳೆ ಬಿದ್ದ ಉದಾಹರಣೆ ಇಲ್ಲ. ಆದರೆ, ಈ ಬಾರಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಗೆ ಭತ್ತ ಬೆಳೆದ ರೈತರು ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿದೆ. ಇದರಿಂದಾಗಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ …
Read More »ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿ
ಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ. ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿಯ ದಿನ ನವೆಂಬರ್ 14ರಂದು 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ಮಾಡಲಿದ್ದೇವೆ. ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು, ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದೆ. ಸಮಾರೋಪ ಸಮಾರಂಭವು …
Read More »ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ
ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿ : ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಾಗನೂರು (ಮೂಡಲಗಿ): ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಕ್ರೀಡಾಪಟುಗಳ ಮೂಲಭೂತ ಸೌಕರ್ಯಗಳಿಗಾಗಿ ಸರ್ಕಾರ ಹಾಗೂ ಸಂಘ -ಸಂಸ್ಥೆಗಳು ಸಹಾಯ ಸಹಕಾರ ನೀಡಬೇಕೆಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು . ಅವರು ನಾಗನೂರು ಪಟ್ಟಣದಲ್ಲಿ ಬೆಳಗಾವಿ …
Read More »ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ ಆಯ್ಕೆ ಖಾನಾಪುರ ಟಿ ಎ ಪಿ ಸಿ ಎಂ ಎಸ್
ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ ಆಯ್ಕೆ ಖಾನಾಪುರ ಟಿ ಎ ಪಿ ಸಿ ಎಂ ಎಸ್ ಶ್ರೀಶೈಲ ಮಾಟೋಳ್ಳಿ ಅಧ್ಯಕ್ಷ, ಸಂಗಪ್ಪ ಬಾಚೋಳ್ಕರ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಲಿಂಗನಮಠದ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮಾಟೋಳ್ಳಿಗೆ ನಂದಗಡ ಟಿಎಪಿಸಿಎಂಎಸ್ ಜವಾಬ್ದಾರಿ. ನೂತನ ಅಧ್ಯಕ್ಷ-ಉಪಾಧ್ಯಕ್ಷರೊಂದಿಗೆ ಸಹಕರಿಸುವ ಭರವಸೆ ನೀಡಿದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಪಾಟೀಲ. ಖಾನಾಪೂರ ತಾಲೂಕಿನ ನಂದಗಡದಲ್ಲಿ ಇರುವ ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ …
Read More »ಚನ್ನಮ್ಮನ ಹೋರಾಟ ನಮಗೆ ಆದರ್ಶವಾಗಲಿ: ಸಚಿವ ಸತೀಶ ಜಾರಕಿಹೊಳಿ
ಕಿತ್ತೂರು ಉತ್ಸವ-2025: ಚನ್ನಮ್ಮನ ಸಾಹಸಗಾಥೆಯ ಅನಾವರಣ ಚನ್ನಮ್ಮನ ಹೋರಾಟ ನಮಗೆ ಆದರ್ಶವಾಗಲಿ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ. ಕಿತ್ತೂರು ಚನ್ನಮ್ಮನವರ ಹೋರಾಟ ಹಾಗೂ ಆದರ್ಶವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಿದೆ. ಚನ್ನಮ್ಮನ ಹೋರಾಟ, ಸಾಹಸಗಾಥೆ ದೆಹಲಿ ತಲುಪಬೇಕಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯತತ್ಪರರಾಗೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕರೆ ನೀಡಿದರು. ಕಿತ್ತೂರಿನ ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಗುರುವಾರ (ಅ.23) ಜಿಲ್ಲಾಡಳಿತ ಹಾಗೂ ಕನ್ನಡ …
Read More »
Laxmi News 24×7