Breaking News

ರಾಷ್ಟ್ರೀಯ

ನರೇಂದ್ರ ಮೋದಿಯವರ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ನಡುವೆ ನಿನ್ನೆ ಪ್ರಧಾನಿ ಮೋದಿಯವರನ್ನು ಸಂಸತ್‍ನಲ್ಲಿ ಭೇಟಿ ಮಾಡಿದ್ದ ಯಡಿಯೂರಪ್ಪ ಭಾವುಕರಾಗಿ ಕಣ್ಣಿರಿಟ್ಟಿದ್ದಾರೆ ಎಂಬ ಸುದ್ದಿ ಲಭ್ಯವಾಗಿದೆ. ಸಿಎಂ ಭೇಟಿ ವೇಳೆ ಪ್ರಧಾನಿ ಮೋದಿಯವರು ಬಿಎಸ್‍ವೈ ಆರೋಗ್ಯದ ಬಗ್ಗೆ ಅತೀವ ಕಾಳಜಿ ತೋರಿದ್ದು, …

Read More »

ತೆರಿಗೆ ಹೆಚ್ಚಿಸಿ ಬೆಂಗಳೂರಿಗರಿಗೆ B.B.M.P. ಶಾಕ್

ಬೆಂಗಳೂರು: ಕೊರೊನಾ ಮಧ್ಯೆ ಬೆಂಗಳೂರು ಜನರಿಗೆ ತೆರಿಗೆ ಶಾಕ್ ಕಾದಿದೆ. ಬಿಬಿಎಂಪಿ ಆದಾಯ ಹೆಚ್ಚಿಸಲು ಮುಂದಾಗಿರುವ ಪಾಲಿಕೆ ಜನಸಾಮಾನ್ಯರಿಗೆ ಹೊರೆಮಾಡಲಿದೆ. ಆಸ್ತಿ ತೆರಿಗೆ, ಪ್ಲಾನ್ ಅಪ್ರೂವಲ್, ಖಾತಾ ಹಂಚಿಕೆ ದರ ಏರಿಕೆ ಜೊತೆಗೆ ಭೂ ಸಾರಿಗೆ ಸೆಸ್ ಜಾರಿಗೆ ತರಲು ಬಿಬಿಎಂಪಿ ತೀರ್ಮಾನ ಮಾಡಿದೆ. ಆಸ್ತಿ ತೆರಿಗೆ ಶೇ.15 ರಿಂದ 25ರಷ್ಟು ಹೆಚ್ಚಳ, ಖಾತಾ ಚಾರ್ಜ್ ಶೇ.2 ರಿಂದ 5 ರಷ್ಟು ಏರಿಕೆ ಸಾಧ್ಯತೆ ಇದೆ. ಆಸ್ತಿ ನೋಂದಣಿ ಮಾಡುವಾಗ …

Read More »

ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್D.C.C. ಚುನಾವಣೆ ಮುಹೂರ್ತ ಫಿಕ್ಸ್

ಬೆಳಗಾವಿ:  ರಾಜ್ಯ ರಾಜಕಾರಣವನ್ನೇ ಅಲ್ಲಾಡಿಸಿರುವ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆಯ ನೆನಪು ಮಾಸುವ ಮುನ್ನವೇ ಕರ್ನಾಟಕ ರಾಜ್ಯ ರಾಜಕಾರಣವನ್ನೇ ಅಲ್ಲಾಡಿಸುವಷ್ಟು ಪ್ರಬಲವಾಗಿರುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಡಿಸಿಸಿ) ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ.ನವೆಂಬರ್ 6ರಂದು ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಚುನಾವಣೆ ನಡೆಯಲಿದೆ. ಆಗಸ್ಟ್ ತಿಂಗಳಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.  ಮಾಜಿ ಸಂಸದ ರಮೇಶ ಕತ್ತಿ ಹಾಲಿ ಅಧ್ಯಕ್ಷರು. ಅವರು ಮತ್ತೊಮ್ಮೆ ಬ್ಯಾಂಕ್ ಮೇಲೆ ಹಿಡಿತ …

Read More »

ಹೈಕಮಾಂಡ್ ಒಪ್ಪಿಗೆ ಸೂಚಿಸದ್ರೇ.. ದೆಹಲಿಯಿಂದ ಹಿಂದುರಿಗಿದ ನಂತ್ರ ಸಂಪುಟ ಪುನರ್ ರಚನಯಾಗಲಿದೆ: ಲಕ್ಷ್ಮಣ್ ಸವದಿ,

ಬೆಳಗಾವಿ:    ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೆಳಗಾವಿಯಲ್ಲಿ ಸುಳಿವು ಬಿಟ್ಟುಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಿರುವ ಹೆಚ್ಚುವರಿ ಅನುದಾನ ಬಿಡುಗಡೆ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿಯಾಗಲಿದ್ದಾರೆ. ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೂ ಸಮಾಲೋಚನೆ ನಡೆಸಲಿದ್ದಾರ. ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಂತ್ರಿ ಮಂಡಲ ವಿಸ್ತರಣೆ ಹಾಗೂ ಪುನರ್ ವಿಂಗಡಣೆ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ. ಒಂದು …

Read More »

ರೈತರನ್ನು ದಾರಿ ತಪ್ಪಿಸಿದ್ದಕ್ಕಾಗಿ ಪ್ರಧಾನಿ ವಿರೋಧ ಪಕ್ಷಗಳ ಮೇಲೂ ಹೊಡೆದರು.

ನವದೆಹಲಿ, ಸೆಪ್ಟೆಂಬರ್ 18: ಲೋಕಸಭೆಯ ಕೃಷಿ ಮಸೂದೆಗಳು ಐತಿಹಾಸಿಕ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರೈತರನ್ನು ದಾರಿ ತಪ್ಪಿಸಿದ್ದಕ್ಕಾಗಿ ಪ್ರಧಾನಿ ವಿರೋಧ ಪಕ್ಷಗಳ ಮೇಲೂ ಹೊಡೆದರು. ಕೃಷಿಯಲ್ಲಿ ರೈತರಿಗೆ ಹೊಸ ಸ್ವಾತಂತ್ರ್ಯ ನೀಡಲಾಗಿದೆ. ಅವರು ಈಗ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಹೆಚ್ಚಿನ ಆಯ್ಕೆಗಳು ಮತ್ತು ಅವಕಾಶಗಳನ್ನು ಹೊಂದಿರುತ್ತಾರೆ. ಮಸೂದೆಗಳ ಅಂಗೀಕಾರಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಮಧ್ಯವರ್ತಿಗಳಿಂದ ರಕ್ಷಿಸಲು ಇವುಗಳನ್ನು ತರುವುದು ಅಗತ್ಯವಾಗಿತ್ತು. ಇವು ರೈತರಿಗೆ ಗುರಾಣಿಯಾಗಿದ್ದು, ಪ್ರಧಾನಿ …

Read More »

ಗೋಕಾಕ ತಾಲ್ಲೂಕಿನ ಹಿರೇನಂದಿ ಹಾಗೂ ಚಿಕ್ಕನಂದಿ ಗ್ರಾಮಪಂಚಾಯತಿಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚಾರಣೆ ಮಾಡಿದರು.

ಗೋಕಾಕ್ ತಾಲ್ಲೂಕಿನ ಮಮದಾಪುರ ವಲಯದಿಂದ ಇಂದು ಗ್ರಾಮ ಪಂಚಾಯಿತಿ ಯಲ್ಲಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೆರಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ರಥ ಕಾರ್ಯಕ್ರಮ ಆಚರಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅನಿಲ ಕಾಂಬಳೆ ಮತ್ತು ಮಮದಾಪುರ ವಲಯದ ಮೇಲ್ವಿಚಾರಕಿರಾದ N y ವಡ್ಡರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪೋಷಣ ಅಭಿಯಾನ ಯೋಜನೆ ಅತ್ಯಂತ ಪ್ರಮುಖವಾದ ಯೋಜನೆಯಾಗಿದೆ. ಮಕ್ಕಳ ಬೆಳವಣಿಗೆಗೆ ಮತ್ತು ಏಳಿಗೆಗೆ …

Read More »

ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ

ಉಡುಪಿ: ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ ಮಾಡಿದ್ದಾರೆ. ಕೋಸ್ಟ್ ಗಾರ್ಡ್ ಎಸ್‍ಪಿ ಚೇತನ್ ಕುಮಾರ್ ಹೆಸರಿನಲ್ಲಿ ಅಕೌಂಟ್ ತೆರೆದಿರುವ ಕಿಡಿಗೇಡಿಗಳು ದುಷ್ಕೃತ್ಯ ಎಸಗುವ ಹುನ್ನಾರ ಮಾಡಿದ್ದರು. ಕೋಸ್ಟಲ್ ಎಸ್‍ಪಿ ಎಸ್‍ಪಿ ಸಿಂಗ್ ಹೆಸರಿನಲ್ಲಿ ಐಡಿ ಕ್ರಿಯೇಟ್ ಮಾಡಿ, ಚೇತನ್ ಕುಮಾರ್ ಅವರ ಫೋಟೋ ಬಳಸಲಾಗಿತ್ತು. ಇದಾಗಿ ಕೇವಲ ಅರ್ಧಗಂಟೆಯಲ್ಲಿ ದುಷ್ಕೃತ್ಯ ಬೆಳಕಿಗೆ ಬಂದಿದೆ. ಉಡುಪಿಯ ಮತ್ತು ಬೆಂಗಳೂರಿನ ಸೈಬರ್ ಕ್ರೈಂಗೆ ಎಸ್‍ಪಿ ಚೇತನ್ ಕುಮಾರ್ ದೂರು …

Read More »

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ರಾಯಚೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ರಾಯಚೂರಿನ ಪೋತಗಲ್ ಬಳಿ ನಿಗದಿತ ಸ್ಥಳದಲ್ಲಿ ಕೋವಿಡ್ ನಿಯಮಾವಳಿ ಜೊತೆಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗಿದೆ. ಅಂತಿಮ ಸಂಸ್ಕಾರವನ್ನ ಅಶೋಕ್ ಗಸ್ತಿಯವರ ಪುತ್ರಿ ನೇಹಾ ಗಸ್ತಿ ನೆರವೇರಿಸಿದರು. ಅಂತ್ಯಕ್ರಿಯೆಯಲ್ಲಿ ಶಾಸಕ ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೇರಿದಂತೆ ಸುಮಾರು 30 ಜನ ಭಾಗವಹಿಸಿದ್ದರು. ಅಗಲಿದ ನಾಯಕನಿಗೆ ಜಿಲ್ಲೆಯಾದ್ಯಂತ ಅಭಿಮಾನಿಗಳು, …

Read More »

ಸಿಎಂ ಬದಲಾವಣೆವಿಚಾರಯಡಿಯೂರಪ್ಪ ಸ್ಥಾನಕ್ಕೆ ಯಾರು ಎಂಬುದನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಸೂಚಿಸಲಿದ್ದಾರೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಹಲವಾರು ಸುದ್ದಿಗಳು ಓಡಾಡುತ್ತಿದ್ದು ಈ ನಡುವೆ ಎರಡು ಚುನಾವಣೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆಯ ಲೆಕ್ಕಾಚಾರ ನಡೆಸುತ್ತಿದೆ ಎಂದು ಹೇಳಲಾಗಿದೆ. 2023ರ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಬದಲಾವಣೆ ನಡೆಯಲಿದೆ ಎಂದು ತಿಳಿದುಬಂದಿದೆ. ಯಡಿಯೂರಪ್ಪ ಸ್ಥಾನಕ್ಕೆ ಯಾರು ಎಂಬುದನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಸೂಚಿಸಲಿದ್ದಾರೆ ಎಂದು ಹೇಳಲಾಗಿದೆ. ಹೊಸ ಸಿಎಂ …

Read More »

ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ

ಬೆಂಗಳೂರು: ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಬಿಟ್ಟು ರಾಜ್ಯದ ಹಿತರಕ್ಷಣೆಗಾಗಿ ಪ್ರಧಾನಿ ಮೋದಿ ಬಳಿ ಮಾತನಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿರುವ ಸಿಎಂ ಬಿಎಸ್‍ವೈ ಸಂದೇಶ ನೀಡಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು …

Read More »