Breaking News

ರಾಷ್ಟ್ರೀಯ

ಪ್ರಜ್ವಲ್‌ ರೇವಣ್ಣಗೆ ‘ಕಂಬಿ’ ಎಣಿಕೆ ಫಿಕ್ಸ್‌

ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಇಡೀ ರಾಜ್ಯ ಅಷ್ಟೇ ಅಲ್ಲದೆ, ದೇಶಾದ್ಯಂತ ಸದ್ದು ಮಾಡಿತ್ತು. ಇನ್ನು ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ನವೆಂಬರ್‌ 11) ಸುಪ್ರೀಂಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಅವರಿಗೆ ಇನ್ಮುಂದೆ ಜೈಲೂಟ ಫಿಕ್ಸ್‌ ಆದಂತಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇನ್ನು …

Read More »

ಮಹಾರಾಷ್ಟ್ರ ಚುನಾವಣೆ: ಬಂಡಾಯದ ಬಿಸಿ, ಕಾಂಗ್ರೆಸ್ ನಿಂದ 28 ಮಂದಿ ಅಮಾನತು

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 28 ಬಂಡಾಯ ಅಭ್ಯರ್ಥಿಗಳನ್ನು ಈ ಕೂಡಲೇ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಅಮಾನತು ಮಾಡಿ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಎಫ್. ಪಟೋಲೆ ಆದೇಶಿಸಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಸೋಮವಾರ ತಿಳಿಸಿದ್ದಾರೆ.   ಭಾನುವಾರ ತಡರಾತ್ರಿ ಎರಡು ಪ್ರತ್ಯೇಕ ಪಟ್ಟಿಗಳನ್ನು ಬಿಡುಗಡೆ ಮಾಡಲಾಗಿದ್ದು, ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 21 ಅಭ್ಯರ್ಥಿಗಳು ಮತ್ತು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ …

Read More »

ಆತ್ಮಹ*ತ್ಯೆ ಪ್ರಕರಣ: ಆರ್ಥಿಕ ಮುಗ್ಗಟ್ಟು, ಶೋಕಿ ಜೀವನವೇ ಮುಳುವಾಯಿತೇ?

ಕಿನ್ನಿಗೋಳಿ: ಆರ್ಥಿಕ ಮುಗ್ಗಟ್ಟು ಮತ್ತು ಶೋಕಿ ಜೀವನವೇ ಪಕ್ಷಿಕೆರೆಯ ಕಾರ್ತಿಕ್‌ ಭಟ್‌ ಕುಟುಂಬದ ಅಂತ್ಯಕ್ಕೆ ಕಾರಣವಾಯಿತೇ ಎಂಬ ಸಂಶಯ ಬಲಗೊಳ್ಳುತ್ತಿದೆ. ಕಳೆದ ಸುಮಾರು ಸಮಯದಿಂದ ಕೆಲಸ ಇಲ್ಲದಿದ್ದರೂ ಶೋಕಿ ಜೀವನದಲ್ಲಿಯೇ ಕಾಲ ಕಳೆಯುತ್ತಿದ್ದ ಕಾರ್ತಿಕ್‌ ಭಟ್‌ (32) ಆರ್ಥಿಕ ಸಮಸ್ಯೆಯಿಂದ ಮೇಲೆ ಬರಲಾರದೆ ಪತ್ನಿ ಪ್ರಿಯಾಂಕಾ (28) ಮತ್ತು ಪುಟ್ಟ ಮಗ ಹೃದಯ್‌ (4) ನನ್ನು ನಿರ್ದಯವಾಗಿ ಕೊಲೆ ಮಾಡಿ ಬಳಿಕ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತೆ ಇಡೀ ಪ್ರಕರಣ …

Read More »

ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

ಬಳ್ಳಾರಿ: ಗಣಿಬಾಧಿತ ಸಂಡೂರು ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆ ಕಣ ಕಾವೇರಿದೆ. ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಉಭಯ ಪಕ್ಷಗಳ ಸಚಿವರು, ಶಾಸಕರು, ಮುಖಂಡರು ಕ್ಷೇತ್ರದಲ್ಲೇ ಬಿಡಾರ ಹೂಡಿ ಮತಬೇಟೆ ನಡೆಸಿದ್ದಾರೆ. ಕಾಂಗ್ರೆಸ್‌ ಕ್ಷೇತ್ರ ಉಳಿಸಿಕೊಳ್ಳುವ ತವಕದಲ್ಲಿದ್ದರೆ, ಬಿಜೆಪಿ ಕ್ಷೇತ್ರವನ್ನು ಕಸಿದುಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.   ಕಾಂಗ್ರೆಸ್‌ ಒಂದೇ ಕುಟುಂಬಕ್ಕೆ ಟಿಕೆಟ್‌ ನೀಡಿದೆ ಎಂಬುದೇ ಬಿಜೆಪಿಗೆ ಅಸ್ತ್ರವಾದರೆ, ಕಾಂಗ್ರೆಸ್‌ಗೆ ಬಿಜೆಪಿ ಅಭ್ಯರ್ಥಿ ಸ್ಥಳೀಯರಲ್ಲ, ಹೊರಗಿನವರು ಎಂಬುದು ಪ್ರತ್ಯಸ್ತ್ರವಾಗಿದೆ. ಸಂಡೂರು ಎಸ್‌ಟಿ …

Read More »

ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

ಹೊಸದಿಲ್ಲಿ: 5 ಲಕ್ಷ ರೂ. ಲಂಚ ಸ್ವೀಕಾರದ ಆರೋಪ ಎದುರಿಸುತ್ತಿರುವ ದಿಲ್ಲಿ ನಗರ ವಸತಿ ಸುಧಾರಣ ಮಂಡಳಿಯ ಕಾನೂನು ಅಧಿಕಾರಿಯ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 3.79 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾಗಿ ಹೇಳಿದ್ದಾರೆ. ಆರೋಪಿಯನ್ನು ವಿಜಯ್‌ ಮಗ್ಗೊà ಎಂದು ಗುರುತಿಸಲಾಗಿದೆ. ನಿರ್ಬಂಧ ತೆಗೆಯಲು ವಿಜಯ್‌ ಮತ್ತು ಅವರ ಸಹವರ್ತಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಉದ್ಯಮಿ ನ.4ರಂದು ದೂರು ನೀಡಿದ್ದರು. 5 …

Read More »

ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

ಹೊಸದಿಲ್ಲಿ: ಉಪಮುಖ್ಯಮಂತ್ರಿ ವಿರುದ್ದದ ಆದಾಯ ಮೀರಿದ ಆಸ್ತಿ (Disproportionate assets) ಪ್ರಕರಣದ ಸಿಬಿಐ ತನಿಖೆಗೆ ಒಪ್ಪಿಗೆ ಹಿಂತೆಗೆದುಕೊಳ್ಳುವ ರಾಜ್ಯ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಶುಕ್ರವಾರ(ನ8) ಕರ್ನಾಟಕ ಸರಕಾರ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಿದೆ.   ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ ಉತ್ತರ ಕೋರಿದೆ. 2023 ನವೆಂಬರ್ 23 …

Read More »

ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಉದ್ಯಮಿಯೊಬ್ಬರ ಕುಟುಂಬವೊಂದು ತಮ್ಮ ಬದುಕಿನಲ್ಲಿ ಅದೃಷ್ಟ ತಂದು ಕೊಟ್ಟ ಕಾರಿಗೆ ಅದ್ಧೂರಿ ಸಮಾಧಿ ಕಾರ್ಯಕ್ರಮವನ್ನು ನಡೆಸಿದ್ದು ಸದ್ಯ ಭಾರೀ ಸುದ್ದಿಯಾಗುತ್ತಿದೆ. ಲಾಠಿ ತಾಲೂಕಿನ ಪಾದರಶಿಂಗ ಗ್ರಾಮದಲ್ಲಿ ಗುರುವಾರ ಸಂಜಯ ಪೋಲಾರ್ ಮತ್ತು ಕುಟುಂಬ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧರ್ಮಗುರುಗಳು, ಆಧ್ಯಾತ್ಮಿಕ ಮುಖಂಡರು ಸೇರಿದಂತೆ ಸುಮಾರು 1,500 ಜನರು ಭಾಗವಹಿಸಿದ್ದರು ಎನ್ನುವುದು ಗಮನಾರ್ಹ ಸಂಗತಿ.   ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಚಿತ್ರವೂ , ವಿಶೇಷವೂ ಎನಿಸುವ ಸಮಾಧಿ …

Read More »

ಬಳ್ಳಾರಿಯಲ್ಲಿ ನಿಮ್ಮ ಅಟ್ಟಹಾಸ ಮುರಿದದ್ದು ಸಿದ್ದರಾಮಯ್ಯ ಅನ್ನೋದು ಮರೀಬೇಡಿ: ಸಿಎಂ

ಬಳ್ಳಾರಿ: ಶಾಸಕ ಜಿ.ಜನಾರ್ದನರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ, ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ. ನಿಮ್ಮ ಅಟ್ಟಹಾಸ ಮುರಿದದ್ದು, ಬಳ್ಳಾರಿ ಜಿಲ್ಲೆಯ ಮಹಾ ಜನತೆಯ ಭಯಮುಕ್ತಗೊಳಿಸಿದ್ದು ಇದೇ ಸಿದ್ದರಾಮಯ್ಯ ಅನ್ನೋದು ಮರೀಬೇಡಿ ಎಂದು ಸಿಎಂ ಸಿದ್ದರಾಮಯ್ಯ ಶಾಸಕ ಜನಾರ್ದನರೆಡ್ಡಿಗೆ ಬಹಿರಂಗವಾಗಿಯೇ ನೇರಾ ನೇರ ಎಚ್ಚರಿಕೆ ನೀಡಿದರು.   ಜಿಲ್ಲೆಯ ಸಂಡೂರಿನ ವಿಠಲಾಪುರದಲ್ಲಿ ಶನಿವಾರ ನಡೆದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಪರ ಮತಯಾಚಿಸಿ ಮಾತನಾಡಿ ಪ್ರಚಾರ ಸಭೆಯಲ್ಲಿ, ತಮ್ಮ ವಿರುದ್ಧ …

Read More »

30 ವರ್ಷ ಮೈತ್ರಿಯಿದ್ದರೂ ಶಿವಸೇನೆ ಬಿಜೆಪಿಯಾಗಲಿಲ್ಲ,ಕಾಂಗ್ರೆಸ್ ಹೇಗಾಗುತ್ತದೆ?

ಛತ್ರಪತಿ ಸಂಭಾಜಿನಗರ: ಬಿಜೆಪಿಯೊಂದಿಗೆ ಮೂರು ದಶಕಗಳ ಮೈತ್ರಿ ಮಾಡಿಕೊಂಡರೂ ಶಿವಸೇನೆ ತನ್ನ ಗುರುತನ್ನು ಕಳೆದುಕೊಂಡಿಲ್ಲ ಮತ್ತು ಈಗ ಅದು ಕಾಂಗ್ರೆಸ್‌ ಆಗಿ ಬದಲಾಗುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ(ನ9)ಹೇಳಿದ್ದಾರೆ.   ನವೆಂಬರ್ 20 ರ ಮಹಾರಾಷ್ಟ್ರ ಚುನಾವಣೆಗೆ ಮುಂಚಿತವಾಗಿ ಕಲಂನೂರಿ, ಹಿಂಗೋಲಿ ಮತ್ತು ವಸ್ಮತ್ ವಿಧಾನಸಭಾ ಕ್ಷೇತ್ರಗಳ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಅಭ್ಯರ್ಥಿಗಳ ಪರ ಹಿಂಗೋಲಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಸೇನಾ (ಯುಬಿಟಿ) …

Read More »

ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ

ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಕಾರ್ತಿಕ್ ಭಟ್, ಮುಲ್ಕಿಯಲ್ಲಿನ ಫ್ಲ್ಯಾಟ್ ನಲ್ಲಿ ಪತ್ನಿ ಪ್ರಿಯಾಂಕಾ (28) ಹಾಗೂ 4 ವರ್ಷದ ಮಗ ಹೃದಯ್ ನನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಬಳಿಕ ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ರೈಲು ಹಳಿ ಬಳಿ …

Read More »