Breaking News

ರಾಷ್ಟ್ರೀಯ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಗರದ ಮುಲ್ಲಾ ಓಣಿಯ ಸೋಂಕಿತ ವ್ಯಕ್ತಿಯಿಂದ ಸೋಂಕು ಹರಡ್ತಿದೆ. P-236 ರೋಗಿ ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದ 63 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ ಎಂದು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರೋಗಿ ನಂಬರ್ P-236ನೇ ವ್ಯಕ್ತಿ ಜೊತೆ ದ್ವಿತೀಯ ಸಂಪರ್ಕ ಹೊಂದಿದವರಿಗೆ ಸೋಂಕು ತಗುಲಿದೆ. ಪ್ರಯೋಗಾಲಯದಿಂದ ಬಂದ ವರದಿಯಲ್ಲಿ ಸೋಂಕು ತಗುಲಿರೋದು ಖಚಿತವಾಗಿದೆ. ಜಿಲ್ಲೆಯಲ್ಲಿ …

Read More »

ದಿನದ 24 ಗಂಟೆಯೂ ಗಂಡನ ಕಾವಲು – ಮಂಗಳೂರು ವೃದ್ಧನ ಪತ್ನಿಯ ನೋವು ಕೇಳಿದ್ರೆ ಮನಕಲುಕುತ್ತೆ

ಮಂಗಳೂರು: ಸಾಮಾನ್ಯವಾಗಿ ಪತ್ನಿ, ಪತಿಯ ಯಶಸ್ಸು, ನೋವು, ಬೇಸರ ಮತ್ತು ಕಣ್ಣೀರಿನಲ್ಲಿಯೂ ಜೊತೆಯಲ್ಲಿಯೇ ಇರುತ್ತಾರೆ. ಪತಿಗೆ ಹುಷಾರಿಲ್ಲ ಎಂದರೆ ಒಂದು ಮಗುವನ್ನು ನೋಡಿಕೊಳ್ಳುವ ರೀತಿಯಲ್ಲಿ ಗಂಡನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಇದೇ ರೀತಿ ಮಂಗಳೂರಿನಲ್ಲಿ ಪತ್ನಿಯೊಬ್ಬರು ತಮ್ಮ ಪತಿಯನ್ನು ದಿನದ 24 ಗಂಟೆಗಳ ಕಾಲ ಕಾಯುತ್ತಾ ಅವರನ್ನು ಕಣ್ಣಿನ ರೆಪ್ಪೆ ತರ ನೋಡಿಕೊಳ್ಳುತ್ತಿದ್ದಾರೆ. ಆ ಪತ್ನಿಯ ಕಷ್ಟ, ನೋವು ನೋಡಿದರೆ ಪ್ರತಿಯೊಬ್ಬರ ಮನಕಲುಕುತ್ತದೆ. ಕಳೆದ ದಿನ ಮಂಗಳೂರಿನಲ್ಲಿ ಪೊಲೀಸರು ವೃದ್ಧರೊಬ್ಬರ ಬಳಿ …

Read More »

ಧಾರವಾಡ:ಮನೆ ಮೇಲಿಂದ ಬಿದ್ದು ವೃದ್ಧೆ ಸಾವು..

ಧಾರವಾಡ: ಶುಕ್ರವಾರ ರಾತ್ರಿ ಸುರಿದ ಮಳೆ-ಗಾಳೆಯಿಂದ ಮನೆ ಮೇಲೆ ಬಿದ್ದಿದ್ದ ತೆಂಗಿನ ಮರದ ಗರಿ ತೆಗೆಯಲು ಹೋದ ವೃದ್ಧೆಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.   ಸಪ್ತಾಪುರ 8ನೇ ಕ್ರಾಸ್‍ನಲ್ಲೇ ಈ ಘಟನೆ ನಡೆದಿದ್ದು, 65 ವರ್ಷದ ಸರೊಜಾ ಸಾಟೆ ಎಂಬವರೇ ಮೃತಪಟ್ಟವರು. ನಿನ್ನೆ ರಾತ್ರಿ ನಗರಾದ್ಯಂತ ಭಾರೀ ಗಾಳಿ ಬೀಸಿತ್ತು. ಇದರಿಂದ ಮನೆ ಇವುಗಳನ್ನು ತೆರವುಗೊಳಿಸಲು ಮುಂದಾದಾಗ ಆಯತಪ್ಪಿ ಕೆಳಗೆ ಬಿದ್ದಾಗ ಪಕ್ಕದ ಮನೆಯ ಕಾಂಪೌಂಡ್ …

Read More »

ದುಬೈನಿಂದ ಫೇಸ್‌ಬುಕ್‌ ಮೂಲಕ ಮಗನ ಅಂತ್ಯಸಂಸ್ಕಾರ ವೀಕ್ಷಿಸಿದ ಕೇರಳ ಕುಟುಂಬ!

ನಿರ್ಬಂಧಗಳಿಂದಾಗಿ ಕೇರಳದಲ್ಲಿ ನಡೆದ ಮಗನ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಯುಎಇಯಲ್ಲಿರುವ ಭಾರತೀಯ ಕುಟುಂಬಕ್ಕೆ ಸಾಧ್ಯವಾಗಲಿಲ್ಲ. ಕೇರಳದ ತಮ್ಮ ಸ್ವಂತ ಊರಿನಲ್ಲಿ ಪುತ್ರನ ಅಂತ್ಯಸಂಸ್ಕಾರ ನಡೆಸಲು ಪೋಷಕರು ನಿರ್ಧರಿಸಿದರು. ಆದರೆ, ಕೋವಿಡ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದ್ದು, ಮಗನ ಪಾರ್ಥಿವ ಶರೀರದೊಂದಿಗೆ ಕೇರಳಕ್ಕೆ ತೆರಳಲು ಪೋಷಕರಿಗೆ ಅವಕಾಶ ಸಿಗಲಿಲ್ಲ. ಹೀಗಾಗಿ, ಸರಕಾರದ ಅನುಮತಿ ಪಡೆದು ಸರಕು ವಿಮಾನದಲ್ಲಿಪುತ್ರನ ಶವವನ್ನು ಕೇರಳಕ್ಕೆ ಕಳುಹಿಸಿದರು. ಅಂತ್ಯಸಂಸ್ಕಾರವನ್ನು ಫೇಸ್‌ಬುಕ್‌ ಮೂಲಕವೇ ವೀಕ್ಷಿಸಬೇಕಾಯಿತು

Read More »

ಭಾರತೀಯ ನೌಕಾಪಡೆಗೂ ತಟ್ಟಿದ ಕೊರೊನಾ ಭೀತಿ – 21 ಸಿಬ್ಬಂದಿಗೆ ಸೋಂಕು

ಮುಂಬೈ: ಭಾರತೀಯ ನೌಕಾಪಡೆಗೂ ಕೊರೊನಾ ವೈರಸ್ ಭೀತಿ ಶುರುವಾಗಿದ್ದು, ಮುಂಬೈನಲ್ಲಿ ಇರುವ ನೌಕಾನೆಲೆಯ 21 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ನೌಕಾಪಡೆಯ 20 ಸೇಲರ್ ಗಳು ಸೇರಿ ಒಟ್ಟು 21 ಮಂದಿ ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದಾರೆ. ಐಎನ್‍ಎಸ್ ಅಶ್ವಿನಿ ನೌಕಾಪಡೆ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿದ್ದ ಮಂದಿಯನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಸೋಂಕಿತ ಸೇಲರ್ ಗಳು ಮುಂಬೈನ ಐಎನ್‍ಎಸ್ ಆಂಗ್ರೆಯಲ್ಲಿ …

Read More »

ವುಹಾನ್ ಲ್ಯಾಬ್‍ನಿಂದ ವೈರಸ್ ಹೊರಬಂದಿದ್ದು ಹೇಗೆ..? : ತನಿಖೆಗೆ ಟ್ರಂಪ್ ಚಿಂತನೆ

ವಾಷಿಂಗ್ಟನ್, ಏ.18-ವಿಶ್ವವ್ಯಾಪಿ 1.50 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕಿಲ್ಲರ್ ಕೊರೊನಾ ವೈರಸ್‍ನ ಉಗಮ ಬಿಂದು ಚೀನಾದ ವುಹಾನ ನಗರಿಯ ಪ್ರಯೋಗಾಲಯದಿಂದ ಡೆಡ್ಲಿ ವೈರಸ್ ತಪ್ಪಿಸಿಕೊಂಡಿರುವ ವರದಿ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕೊರೊನಾ ವೈರಸ್ ಸೋಂಕು ಮತ್ತು ಸಾವು ನೋವಿನ ಬಗ್ಗೆ ಸಾಕಷ್ಟು ಸುಳ್ಳುಗಳನ್ನು ಹೇಳಿ ಜಗತ್ತಿನ ದಿಕ್ಕು ತಪ್ಪಿಸುತ್ತಿರುವ ಚೀನಾದ ಕರ್ಮಕಾಂಡಗಳು ಒಂದೊಂದೇ ಬಯಲಿಗೆ ಬರುತ್ತಿದ್ದು, ಆ ದೇಶಕ್ಕೆ …

Read More »

ಕೊರೋನಾ ವಿರುದ್ಧ ಹೋರಾಟಕ್ಕಾಗಿ ತನ್ನ ಮದುವೆ ಮುಂದೂಡಿದ ಮಳವಳ್ಳಿ ಡಿವೈಎಸ್ಪಿ;

ಮಂಡ್ಯ‌(ಏ.18): ಕೊರೋನಾ ಆತಂಕ ಹೆಚ್ಚಾದ ಹಿನ್ನೆಲೆ, ದೇಶಾದ್ಯಂತ ಲಾಕ್​ಡೌನ್ ಜಾರಿಯಾಗಿದೆ. ಮಹಾಮಾರಿ ಕೊರೋನಾಗೆ ಜನರು ತತ್ತರಿಸಿ ಹೋಗಿದ್ದಾರೆ. ಈ ಲಾಕ್​ಡೌನ್ ನಡುವೆ ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಸೇರಿ ವಿವಿಧ ವರ್ಗಗಳ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಹಗಲಿರುಳು ಎನ್ನದೆ ಕುಟುಂಬಸ್ಥರಿಂದ ದೂರ ಉಳಿದು ದೇಶದ ಹಿತಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಡ್ಯದಲ್ಲಿ ದಕ್ಷ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯಕ್ಕಾಗಿ ತಮ್ಮ ಮದುವೆಯನ್ನೇ ಮುಂದೂಡಿ ಮಾದರಿಯಾಗಿದ್ದಾರೆ. ಹೌದು, ಮಳವಳ್ಳಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ …

Read More »

ಮಹಾರಾಷ್ಟ್ರದಲ್ಲಿ ಕೊರೋನಾಗೆ 201 ಬಲಿ; ದೇಶಾದ್ಯಂತ 452 ಸಾವು, 13,835 ಸೋಂಕಿತರು

ಮುಂಬೈ (ಏ. 18): ದೇಶದಲ್ಲಿ ಕೊರೋನಾ ವೈರಸ್​ ದಾಳಿಗೆ ಜನರು ತತ್ತರಿಸಿದ್ದಾರೆ. ದೇಶದ ಇದುವರೆಗಿನ ಸೋಂಕಿತರ ಪ್ರಮಾಣ ಹೆಚ್ಚಾಗಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ ಕೊರೋನಾದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ದೇಶದಲ್ಲಿ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ 452ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೋನಾದಿಂದಾಗಿ ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆಯೊಳಗೆ ಒಟ್ಟು 32 ಜನರು ಸಾವನ್ನಪ್ಪಿದ್ದಾರೆ. 1,076 ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಕೇವಲ 24 ಗಂಟೆಗಳಲ್ಲಿ 13,835ಕ್ಕೆ …

Read More »

ಕೊರೋನಾ ಟೆಸ್ಟ್​ಗಾಗಿ ರಾಜ್ಯದಲ್ಲಿ 16 ಲ್ಯಾಬ್​ಗಳಿಗೆ ಅನುಮತಿ ನೀಡಿದ ಐಸಿಎಂಆರ್​

ಸರ್ಕಾರಿ ಲ್ಯಾಬ್‌ಗಳ ಎಲ್ಲಾ ಪ್ರೋಟೋಕಾ‌ಲ್‌ಗಳನ್ನು ಖಾಸಗಿ ಲ್ಯಾಬ್‌ಗಳು ಕೂಡಾ ಪಾಲಿಸಬೇಕು. ಸರ್ಕಾರದಿಂದ ಯಾವುದೇ ಟೆಸ್ಟಿಂಗ್ ಕಿಟ್‌ಗಳನ್ನು ನೀಡುವುದಿಲ್ಲ ಎಂದು ಖಾಸಗಿ ಲ್ಯಾಬ್‌ಗಳಿಗೆ ನಿರ್ಬಂಧ ವಿಧಿಸಿ ಅನುಮತಿ ನೀಡಿದೆ.   ಬೆಂಗಳೂರು(ಏ.18): ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಂದು ಒಂದೇ ದಿನ ಹೊಸದಾಗಿ 38 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೂ ದಾಖಲಾದ ಪ್ರಕರಣಗಳ ಪೈಕಿ ಇದೇ ಹೆಚ್ಚಿನ ಸಂಖ್ಯೆಯಾಗಿದೆ. ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ವೈದ್ಯಕೀಯ …

Read More »

ಲಾಕ್‍ಡೌನ್‍ನಿಂದಾಗಿ ಗಾರ್ಬೇಜ್ ಸಿಟಿ ಕಂಪ್ಲೀಟ್ ಆಗಿ ಗ್ರೀನ್ ಸಿಟಿಯಾಗಿದೆ…..

ಬೆಂಗಳೂರು: ಸಿಲಿಕಾನ್ ಸಿಟಿ ಅಂದಾಕ್ಷಣ ಇಲ್ಲಿನ ಟ್ರಾಫಿಕ್, ಹೊಗೆ ನೆನಪಾಗುತ್ತದೆ. ಅಲ್ಲದೇ ಲಾಕ್‍ಡೌನ್‍ನಿಂದಾಗಿ ಗಾರ್ಬೇಜ್ ಸಿಟಿ ಕಂಪ್ಲೀಟ್ ಆಗಿ ಗ್ರೀನ್ ಸಿಟಿಯಾಗಿದೆ. ಆದರೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಬೆಂಗಳೂರು ತನ್ನ ನೈಜ ಸೌಂದರ್ಯವನ್ನು ಮರಳಿ ಪಡೆಯುತ್ತಿದೆ. ಹೌದು..ಕೊರೊನಾ ಲಾಕ್‍ಡೌನ್‍ನಿಂದಾಗಿ ಬೆಂಗಳೂರು ತನ್ನ ನೈಜ ಸೌಂದರ್ಯವನ್ನು ಮರಳಿ ಪಡೆಯುತ್ತಿದೆ. ಈಗ ವಸಂತ ಕಾಲ ಆರಂಭವಾಗುತ್ತಿದ್ದು, ನಗರದಾದ್ಯಂತ ಹಚ್ಚ ಹಸಿರು, ಬಣ್ಣ ಬಣ್ಣದ ಹೂವುಗಳು ಅರಳಿನಿಂತಿವೆ. ನಗರದ ಎಂಜಿ ರೋಡ್, ಬ್ರಿಗೇಡ್ ರೋಡ್, ಮಹಲ್ …

Read More »