Breaking News

ರಾಷ್ಟ್ರೀಯ

ನಾಯಕತ್ವ ಬದಲಾವಣೆ ಕೇಳಿದ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಸಂದೇಶ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಮತ್ತು ಸಿಎಂ ಬದಲಾವಣೆ ಕೇಳಿರುವ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದೆ ಎನ್ನಲಾಗಿದೆ. ಕೆಲ ಲಿಂಗಾಯತ ಶಾಸಕರೇ ಸಿಎಂ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದಿದ್ದು, ವಯಸ್ಸಿನ ಕಾರಣ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಪ್ರವಾಸಕ್ಕೂ ಮುನ್ನವೇ ದೆಹಲಿಗೆ ಭೇಟಿ ನೀಡಿರುವ ಮಾಜಿ ಸಿಎಂ, ಸಚಿವ ಜಗದೀಶ್ ಶೆಟ್ಟರ್ ಹಿರಿಯ ನಾಯಕರನ್ನ ಭೇಟಿ ಮಾಡಿ, ನಾಯಕತ್ವ ಬದಲಾವಣೆ ಕುರಿತು ತಮ್ಮ ಅಭಿಪ್ರಾಯವನ್ನ ತಿಳಿಸಿದ್ದಾರೆ. ಹೈ ಪ್ರಶ್ನೆಯ ಸಂದೇಶ: …

Read More »

ಆರೆಸ್ಸೆಸ್‌ ರೀತಿಯ ತರಬೇತಿ: ನಮ್ಮ ಶತ್ರುವಿಗೂ ನೀಡೆವು: ಬಿ. ಕೆ. ಹರಿಪ್ರಸಾದ

ಬೆಳಗಾವಿ: ಆರೆಸ್ಸೆಸ್‌ ರೀತಿ ಯಲ್ಲಿ ನಮ್ಮ ಶತ್ರುಗಳಿಗೂ ತರಬೇತಿ ನೀಡುವುದಿಲ್ಲ. ಆರೆಸ್ಸೆಸ್‌ಗೂ ಕಾಂಗ್ರೆಸ್‌ ತರಬೇತಿ ಶಿಬಿರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಿ. ಕೆ. ಹರಿಪ್ರಸಾದ್‌ ಅವರು ಸ್ಪಷ್ಟಪಡಿಸಿದರು.   ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೆಸ್ಸೆಸ್‌ ರೀತಿಯ ಸಂಘಟನೆ ಕಾಂಗ್ರೆಸ್‌ಗೆ ಅಗತ್ಯವಿಲ್ಲ. ಪಕ್ಷದ ಕಾರ್ಯಕರ್ತರಿಗೆ ತರಬೇತಿ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಘಟಪ್ರಭಾದಲ್ಲಿ ನಾ.ಸು. ಹರ್ಡೀಕರ ಸಮಾಧಿ ಸ್ಥಳದಲ್ಲಿ ಕೇಂದ್ರ ಸ್ಥಾಪಿಸಲಾಗಿದ್ದು, …

Read More »

ರೈತರಿಗೆ ತೊಂದರೆಯಾದರೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ: ಬಿ.ಸಿ ಪಾಟೀಲ

ಬೆಳಗಾವಿ: ನಗರಕ್ಕೆ ಸೋಮವಾರ ಆಗಮಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಪರವಾಗಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರ್ಯಕರ್ತರು ಪಕ್ಷದ ಆಸ್ತಿ ಹಾಗೂ ರೈತರು ದೇಶದ ಬೆನ್ನೆಲುಬು ನಿಮ್ಮೆಲ್ಲರ ಸಮಸ್ಯೆಗಳಿಗೆ ಸದಾ ಸ್ಪಂದಿಸುವೆ ಎಂದು ಹೇಳಿದರು.   ರೈತರ ಬಗ್ಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಏನಾದರೂ ತೊಂದರೆ ಇದ್ದರೆ ನಮಗೆ ತಿಳಿಸಿದರೆ ಅದಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ …

Read More »

ಅನ್‍ಲಾಕ್ ಬಳಿಕ ಮೊದಲ ವೀಕೆಂಡ್, ಪ್ರವಾಸಿಗರಿಂದ ತುಂಬಿ ತುಳುಕಿದ ನಂದಿಬೆಟ್ಟ- ಫುಲ್ ಟ್ರಾಫಿಕ್

ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಹರಡುವ ಭೀತಿಯಿಂದ ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅನ್‍ಲಾಕ್ ನಿಯಮ ಜಾರಿ ಬಳಿಕ ಕೆಲ ದಿನಗಳ ಹಿಂದಷ್ಟೇ ಸಾರ್ವಜನಿಕರಿಗೆ ಮುಕ್ತವಾಗಿಸಲಾಗಿದೆ. ಲಾಕ್‍ಡೌನ್ ವೇಳೆ ಪ್ರಶಾಂತವಾಗಿದ್ದ ನಂದಿ ಬೆಟ್ಟ ಇದೀಗ ಅನ್‍ಲಾಕ್ ರೂಲ್ಸ್ ಜಾರಿ ಬಳಿಕ ಗಿಜುಗುಡುತ್ತಿದೆ. ಅದ್ರಲ್ಲೂ ನಂದಿಬೆಟ್ಟ ಅನ್‍ಲಾಕ್ ಆದ ನಂತರ ಮೊದಲ ವೀಕೆಂಡ್ ದಿನವಾದ ಭಾನುವಾರದಂದು ಜನಜಂಗುಳಿಯಿಂದ ಕೂಡಿತ್ತು. ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಮಾರ್ಚ್ 14ರಿಂದ ಲಾಕ್‍ಡೌನ್ ಆಗಿದ್ದ ನಂದಿಗಿರಿಧಾಮ ಬರೋಬ್ಬರಿ …

Read More »

ಬೈಕ್‍ನಲ್ಲಿ ಹೋಗುತ್ತಿದ್ದಾಗ ತಲೆ ಮೇಲೆ ಬಿತ್ತು ಮರದ ಕೊಂಬೆ……..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಳೆಯ ಮರಗಳಿಂದಾಗಿ ಹಲವು ಅನಾಹುತಗಳು ಸಂಭವಿಸುತ್ತಿರುವುದು ತಿಳಿದೇ ಇದೆ. ಬಿಬಿಎಂ ಮಾತ್ರ ಇಂಹ ಮರಗಳನ್ನು ಗುರುತಿಸಿ ಕೊಂಬೆಗಳನ್ನು ಕತ್ತರಿಸುತ್ತಿಲ್ಲ. ಇದೀಗ ಮತ್ತೊಂದು ಅನಾಹುತ ಸಂಭವಿಸಿದ್ದು, ಬೈಕ್ ಸವಾರರೊಬ್ಬರ ಮೇಲೆ ಮರದ ಕೊಂಬೆ ಬಿದ್ದು ತೆಲೆ ತೀವ್ರ ಪೆಟ್ಟಾಗಿದೆ. ನಗರದ ತಿಲಕ್ ನಗರದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದ್ದು, ಈ ಘಟನೆಯಿಂದಾಗಿ ಬೈಕ್ ಸವಾರರು ಭಯಭೀತರಾಗಿದ್ದಾರೆ. ಸಂಚರಿಸುವಾಗ ನಮ್ಮ ತಲೆ ಮೇಲೆ ಕೊಂಬೆಗಳು ಬಿದ್ದರೆ ಹೇಗೆ ಎಂದು …

Read More »

ಕೊರೊನಾ ವರದಿ ವಿಳಂಬ, ಚಿಕಿತ್ಸೆ ನಿರ್ಲಕ್ಷದ ಬಗ್ಗೆ ಕಿಡಿ:ವಿಡಿಯೋ ಮಾಡಿ ಅಳಲು

ಚಿತ್ರದುರ್ಗ: ಇಷ್ಟು ದಿನ ಜನ ಸಾಮಾನ್ಯರು ಕೋವಿಡ್ ಕೇಂದ್ರಗಳಲ್ಲಿ ಹಾಗೂ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ, ವ್ಯವಸ್ಥೆ ಸರಿ ಎಲ್ಲ ಎಂದು ವಿಡಿಯೋ ಹರಿಬಿಟ್ಟು ಅಳಲು ತೋಡಿಕೊಂಡಿರುವುದನ್ನು ನೋಡಿದ್ದೇವೆ. ಆದರೆ ಇದೀಗ ಕೊರೊನಾ ವಾರಿಯರ್ಸ್‍ಗೂ ಇದೇ ರೀತಿ ಸಮಸ್ಯೆಯಾಗುತ್ತಿದ್ದು, ಇದೀಗ ಜೀವ ಉಳಿಸುವ ಕೆಲಸ ಮಾಡುವರಿಗೇ ಜೀವ ಭಯ ಶುರುವಾಗಿದೆ. ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಹಿರೇಗುಂಟನೂರು ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ವಿಡಿಯೋ ಮಾಡಿ ಅವ್ಯವಸ್ಥೆ ಕುರಿತು …

Read More »

ಅರ್ಚಕರನ್ನು ಬರ್ಬರಾಗಿ ಹತ್ಯೆ ಮಾಡಿದ್ದ ಮೂವರು ಹಂತಕರ ಮೇಲೆ ಪೊಲೀಸರು ಶೂಟ್‍ಔಟ್

ಮಂಡ್ಯ: ಜಿಲ್ಲೆಯ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರನ್ನು ಬರ್ಬರಾಗಿ ಹತ್ಯೆ ಮಾಡಿದ್ದ ಮೂವರು ಹಂತಕರ ಮೇಲೆ ಪೊಲೀಸರು ಶೂಟ್‍ಔಟ್ ಮಾಡಿದ್ದು, ಶೂಟ್‍ಔಟ್‍ನಲ್ಲಿ ಹಂತಕರಿಗೆ ಗಂಭೀರ ಗಾಯಗಳಾಗಿವೆ. ಇಂದು ಬೆಳಗ್ಗೆ ಮದ್ದೂರು ಮಳವಳ್ಳಿ ರಸ್ತೆಯ ಸಾದೊಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಆಂಧ್ರ ಮೂಲದ ವಿಜಿ (25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ (28) ಮತ್ತು ತೊಪ್ಪನಹಳ್ಳಿಯ ಮಂಜು (30) ಎಂದು ಗುರುತಿಸಲಾಗಿದೆ. ಹಂತಕರು ಈ ಸ್ಥಳದಲ್ಲಿರುವ ಖಚಿತ …

Read More »

ರೋಚಕ ಕದನದಲ್ಲಿ ಗೆದ್ದು ಬೀಗಿದ ಡೊಮಿನಿಕ್ ಥೀಮ್ ಗೆ ಚೊಚ್ಚಲ ಗ್ರಾಂಡ್ ಸ್ಲ್ಯಾಮ್ ಕಿರೀಟ

ನ್ಯೂಯಾರ್ಕ್: ರೋಚಕ ಫೈನಲ್ ಹಣಾಹಣಿಯಲ್ಲಿ ಅಲೆಕ್ಸಾಂಡರ್ ಜ್ವರೇವ್ ವಿರುದ್ಧ ಗೆದ್ದು ಬೀಗಿದ ಡೊಮಿನಿಕ್ ಥೀಮ್ ಚೊಚ್ಚಲ ಯುಎಸ್ ಓಪನ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಕಳೆದ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಜರ್ಮನಿಯ ಆಟಗಾರನ ವಿರುದ್ಧ ಆಸ್ಟ್ರೀಯಾದ ಆಟಗಾರ 2-6 4-6 6-4 6-3 7-6(6) ಸೆಟ್ ಗಳ ಅಂತರದಿಂದ ಗೆಲುವು ಸಾಧಿಸಿದರು. ಮೊದಲ ಎರಡು ಸೆಟ್ ಗಳನ್ನು ಸೋತ ಥೀಮ್ ನಂತರ ಅದ್ಭುತವಾಗಿ ಕಮ್ ಬ್ಯಾಕ್ ಮಾಡಿ ಜಯ ಸಾಧಿಸಿದರು. 16 ವರ್ಷಗಳ …

Read More »

“ತಾಯಿ-ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ಬೇರೆ ಮಾಡುತ್ತಿದೆ ರಾಜ್ಯ ಸರ್ಕಾರ”

ಬೆಂಗಳೂರು, – ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ತಾಯಿ ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ರಾಜ್ಯ ಸರ್ಕಾರ ಬೇರೆ ಮಾಡುತ್ತಿದೆ ಎಂದು ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಎಸ್. ಆರ್.ಪಾಟೀಲ್ ಆರೋಪಿಸಿದರು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಬರೆದಿರುವ ರೈತರ ಭದ್ರತೆ, ದೇಶದ ಭದ್ರತೆ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶ ಆಹಾರ ಭದ್ರತೆ ಸಾಧಿಸಿದೆ, ರೈತರ ಬದುಕು ಮಾತ್ರ ಸುಧಾರಣೆಯಾಗಿಲ್ಲ. ಕಾರ್ಮಿಕರ ಸಂಕಷ್ಟಗಳು …

Read More »

ನಟಿ ರಾಗಿಣಿ, ಸಂಜನಾಗೆ ಇಂದು ಸಿಗುತ್ತಾ ಬೇಲ್..​?

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ ಲಿಂಕ್ ಪ್ರಕರಣ ಸಂಬಂಧ ಅರೆಸ್ಟ್​ ಆಗಿರುವ ನಟಿ ರಾಗಿಣಿ, ಸಂಜನಾ ಸೇರಿದಂತೆ ಪ್ರಕರಣದ 5 ಆರೋಪಿಗಳ ಜಾಮೀನು ಅರ್ಜಿಗಳು ಇಂದು ವಿಚಾರಣೆ ಬರಲಿವೆ. ಸಿಟಿ ಸಿವಿಲ್ ಅವರಣದಲ್ಲಿನ ಎನ್​​​ಡಿಪಿಎಸ್ ನ್ಯಾಯಾಲಯದಲ್ಲಿ ರಾಗಿಣಿ, ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ, ರಾಹುಲ್ ತೋಷೆ, ವೈಭವ್ ಜೈನ್ ಹಾಗೂ ವಿನಯ್ ಕುಮಾರ್​​​ನ ಅರ್ಜಿಗಳ ವಿಚಾರಣೆ ನಡೆಯಲಿದೆ. ರಾಗಿಣಿ ಹಾಗೂ ರಾಹುಲ್ ಸಾಮಾನ್ಯ ಜಾಮೀನು ಅರ್ಜಿ ಸಲ್ಲಿಸಿದ್ರೆ, ಶಿವಪ್ರಕಾಶ್, ವೈಭವ್ ಜೈನ್ ಹಾಗೂ …

Read More »