ಲಂಡನ್/ವಾಷಿಂಗ್ಟನ್ : ಕೊರೋನಾ ಇಳಿಮುಖದ ಸುಳಿವಿನಲ್ಲಿ ನಿಯಂತ್ರಣ ಕ್ರಮಗಳು ಸಡಿಲಗೊಂಡ ಬೆನ್ನಲ್ಲೇ ಹಲವು ದೇಶಗಳಲ್ಲಿ 2ನೇ ಹಂತದ ಕೊರೋನಾ ಸೋಂಕು ಸ್ಫೋಟಗೊಂಡಿದ್ದು ಆತಂಕ ಮೂಡಿಸಿವೆ. ಆಘಾತಕಾರಿ ಸಂಗತಿಯೆಂದರೆ ಹೀಗೆ 2ನೇ ಹಂತದಲ್ಲಿ, ಸೋಂಕಿತರ ಪೈಕಿ ಯುವಸಮೂಹ ಪ್ರಮಾಣ ಕಳವಳಕಾರಿಕಷ್ಟುಹೆಚ್ಚಿದೆ. ‘ಕೊರೋನಾ ವೈರಸ್ ವೃದ್ಧರಿಗೆ ಮಾತ್ರ ಮಾರಕ. ಯುವಕರಿಗೆ ಏನೂ ಆಗಲ್ಲ’ ಎಂದು ಭಾವನೆಯಲ್ಲಿ ಮೈಮರೆತ ಯುವ ಸಮೂಹ, ತನಗೆ ಅರಿವಿಲ್ಲದೇ ಸೋಂಕು ವಾಹಕರಾಗುತ್ತಿರುವುದು ಜಾಗತಿಕ ಅಂಕಿ ಅಂಶಗಳಿಂದ ಖಚಿತಪಟ್ಟಿದೆ. ಅಷ್ಟುಮಾತ್ರವಲ್ಲ. …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ
ಧಾರವಾಡ: ಲ್ಯಾಪ್ ಟಾಪ್ ವಿತರಿಸುವಂತೆ ವಿವಿಧ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಕೊರೊನಾ ಸಂಕಷ್ಟದಿಂದಾಗಿ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ವಿಳಂಬವಾಗಿದೆ. ಈ ಮೊದಲು ಲ್ಯಾಪ್ ಟ್ಯಾಪ್ ವಿತರಿಸುವುದಾಗಿ ಹೇಳಿದ ವಿವಿ, ಇದೀಗ …
Read More »ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ?
ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ? ಗೋಕಾಕ:ಸುಮಾರು ದಿನಗಳಿಂದ ಸುದ್ದಿ ಯಲ್ಲಿರುವ ಟೈಗರ್ ಗ್ಯಾಂಗ್ ಬಗ್ಗೆ ಇವತ್ತು ಲಕ್ಷ್ಮಿ ನ್ಯೂಸ್ ವಾಹಿನಿ ಜೊತೆ ಮಾತನಾಡಿದ ಚಿಕ್ಕ ಸಾಹುಕಾರರು ಇಬ್ಬರು ಸಹೋದರರ ಪರ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಯಲ್ಲಿ ನನ್ನ ಅಣ್ಣಾ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು ಸರಿಯಿದೆ ಈ ಒಂದು ಟೈಗರ್ ಗ್ಯಾಂಗ್ ಮುಂಚೆ ಇದ್ದಿದ್ದೇ ಬೇರೆ, ಇದು ಬೇರೆ ಯಾವುದೋ ಬಿಲ್ಲಿ …
Read More »ಪರಿಹಾರದ ಚೆಕ್ ವಿತರಣೆ
ಬೆಳಗಾವಿ: ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ತಾಲ್ಲೂಕಿನ ಹಲಗಾ ಗ್ರಾಮದ ಐದು ಕುಟುಂಬಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಿಸಿದ್ದಾರೆ. ಐದು ತಿಂಗಳ ಹಿಂದೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಐದು ಮನೆಗಳು ಆಹುತಿಯಾಗಿದ್ದವು. ಪ್ರತಿ ಕುಟುಂಬಕ್ಕೆ ತಲಾ ₹ 5 ಲಕ್ಷ ಮಂಜೂರಾಗಿದೆ. ಶಾಸಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು ಚೆಕ್ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. …
Read More »ಮುಂಬೈ, ಗೋವಾದ ಹಲವೆಡೆ ಎನ್ಸಿಬಿ ದಾಳಿ ……………
ಮುಂಬೈ/ಪಣಜಿ, ಸೆ.12-ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆಯ ಭಾಗವಾಗಿ ಮಾದಕ ವಸ್ತುಗಳ ನಿಯಂತ್ರಣ ಮಂಡಳಿ (ಎನ್ಸಿಬಿ) ಅಧಿಕಾರಿಗಳ ತಂಡಗಳು ಇಂದು ಬೆಳಗ್ಗೆಯಿಂದ ಮುಂಬೈ ಮತ್ತು ಗೋವಾದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿದೆ. ಮುಂಬೈ ಮತ್ತು ಪಣಜಿಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ದಾಳಿಗಳು ನಡೆದಿದ್ದು, ಚಿತ್ರತಾರೆಯರೂ ಸೇರಿದಂತೆ ಕೆಲವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸುಶಾಂತ್ಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದ ಸಂಬಂಧ ಬಂಧಿತರಾದ ಚಿತ್ರನಟಿ …
Read More »ಡ್ರಗ್ಸ್ ನಶೆಯಲ್ಲಿ ತೇಲಾಡುವ ಮತ್ತಷ್ಟು ನಟ-ನಟಿಯರ ಹೆಸರು ಬಾಯ್ಬಿಟ್ಟ ರಿಯಾ..!
ಮುಂಬೈ, ಸೆ.12-ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆ ತೀವ್ರಗೊಂಡಷ್ಟು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಸುಶಾಂತ್ಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದ ಸಂಬಂಧ ಬಂಧಿತರಾದ ಚಿತ್ರನಟಿ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್ಸಿಬಿ) ಅಧಿಕಾರಿಗಳ ಮುಂದೆ ಮತ್ತಷ್ಟು ಸಂಗತಿಗಳನ್ನು ಬಹಿರಂಗಗೊಳಿಸಿದ್ದಾರೆ. ಬಾಲಿವುಡ್ ತಾರೆ ಮತ್ತು ಹಿರಿಯ ಅಭಿನೇತ ಸೈಫ್ ಅಲಿ ಖಾನ್ ಅವರ ಪುತ್ರಿ ಸಾರಾ ಅಲಿ ಖಾನ್, …
Read More »ಚುನಾವಣೆಗೆ ಬಿಜೆಪಿ, ಜೆಡಿಎಸ್ ಭರದ ಸಿದ್ಧತೆ
ಬೆಂಗಳೂರುಸ : ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುವ ಮೊದಲೇ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ ತೆರೆಮರೆಯಲ್ಲಿ ಭರದ ಸಿದ್ಧತೆ ಆರಂಭಿಸಿವೆ. ಕ್ಷೇತ್ರದ 264 ಬೂತ್ಗಳಲ್ಲಿ ಬೂತ್ ಕಮಿಟಿ, ಪೇಜ್ ಪ್ರಮುಖ್, ವಾಟ್ಸ್ ಆಯಪ್ ಗ್ರೂಪ್ಗಳನ್ನು ರಚಿಸಲು ಮುಂದಾಗಿದ್ದು, ಇದೇ ತಿಂಗಳ ಅಂತ್ಯದ ವೇಳೆಗೆ ಎಲ್ಲವನ್ನೂ ಪೂರ್ಣಗೊಳಿಸಲು ಉದ್ದೇಶಿಸಿದೆ. ಈಗಾಗಲೇ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಸ್ಥಳೀಯ ಮಟ್ಟದ ಮುಖಂಡರು ಹಾಗೂ …
Read More »800 ರೂ.ಗಡಿ ದಾಟಿದ ಬಾಕ್ಸ್ ಟೊಮೆಟೋ! ರೈತರ ಮೊಗದಲ್ಲಿ ಸಂತಸ
ಕೋಲಾರ: ನಗರದಲ್ಲಿರುವ ಏಷ್ಯಾದ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆಯಲ್ಲಿ ಶುಕ್ರವಾರ ಬಾಕ್ಸ್ ಟೊಮೆಟೋ 810 ರೂ.ವರೆಗೂ ಹರಾಜಾಗಿದ್ದು, ಟೊಮೆಟೋ ಬೆಳೆದವರ ಸಂತಸಕ್ಕೆಕಾರಣವಾಗಿದೆ. ಹದಿನೈದು ಕೆ.ಜಿ. ತುಂಬಿದ ಬಾಕ್ಸ್ ಒಮ್ಮೊಮ್ಮೆ ಕೇವಲ ಹದಿನೈದು ರೂ.ಗಿಂತಲೂ ಕಡಿಮೆ ಕುಸಿದು ರೈತರು ಟೊಮೆಟೋವನ್ನು ಬೀದಿಗೆ ಎಸೆಯುವುದನ್ನು ಕಾಣುತ್ತಿದ್ದೆವು. ಆದರೆ, ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಟೊಮೆಟೋ ಬಾಕ್ಸ್ 800 ರ ಗಡಿ ದಾಟಿ ಹರಾಜಾಗಿರುವುದು ಧಾರಣೆ ಏರುಮುಖದ ನಿರೀಕ್ಷೆ ಹುಟ್ಟಿಸಿದೆ. ಮಳೆ …
Read More »ಡ್ರಗ್ಸ್ ಮಾಫಿಯಾ ಬೇರು ಸಹಿತ ಕಿತ್ತೊಗೆಯಲು ಬದ್ಧ: ಡಿಸಿಎಂ ಅಶ್ವತ್ಥ್ ನಾರಾಯಣ್
ಮಳವಳ್ಳಿ, – ರಾಜ್ಯದ ಕಳಂಕಕ್ಕೆ ಕಾರಣವಾದ ಡ್ರಗ್ಸ್ ಮಾಫಿಯಾವನ್ನು ಬೇರು ಸಹಿತ ಕಿತ್ತೊಗೆಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದರು. ಕಾವೇರಿ ನದಿಯಿಂದ ರಾಮನಗರ ಜಿಲ್ಲೆಗೆ ಕುಡಿಯುವ ನೀರಿನ ಸುಮಾರು 540 ಕೋಟಿ ವೆಚ್ಚದಲ್ಲಿ ಯೋಜನೆ ತಾಲ್ಲೂಕಿನ ನೆಟ್ಕಲ್ ಗ್ರಾಮದ ಬಳಿ ನಡೆಯುತ್ತಿರುವ ಪೈಪ್ಲೈನ್ ಯಾರ್ಡ್ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಬೇರು ಸಹಿತ ಕಿತ್ತೊಗೆಯಲು ನಾವು ಬದ್ಧರಾಗಿದ್ದೇವೆ ಎಂದರು. …
Read More »ಫ್ಯಾನ್, ಬೆಡ್ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ
ಮುಂಬಯಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ವಜಾಗೊಳಿಸಿದ್ದು, ಹೀಗಾಗಿ ಆಕೆಗೆ ಜೈಲೇ ಗತಿಯಾಗಿದೆ. ಹೈಫೈ ಜೀವನ ನಡೆಸುತ್ತಿದ್ದ ರಿಯಾ ಸದ್ಯ ಸೆರೆಮನೆ ವಾಸಿಯಾಗಿದ್ದು, ಮೂಲ ಸೌಕರ್ಯಗಳಿಲ್ಲದ ಕತ್ತಲೆ ಕೋಣೆಯಲ್ಲಿ ದಿನ ಕಳೆಯಬೇಕಿದೆ. ಇನ್ಮೇಲೆ ರಿಯಾಗೆ ಚಾಪೆನೇ ಗತಿ? ಹೌದು ಭದ್ರತೆಯ ಕಾರಣಗಳಿಂದ ರಿಯಾ ಚಕ್ರವರ್ತಿಯನ್ನು ಪ್ರತ್ಯೇಕ ಕೋಣೆಯಲ್ಲಿಡಲಾಗಿದೆ ಎಂದು ಮೂಲಗಳು ತಿಳಿಸಿದ್ದು, ರಿಯಾ ಇರುವ ಬೈಕುಲ್ಲಾ ಜೈಲಿನಲ್ಲಿ ಫ್ಯಾನ್ ಇಲ್ಲ, …
Read More »
Laxmi News 24×7