Breaking News

ರಾಷ್ಟ್ರೀಯ

ಬಸ್‌ ಕಡೆ ಜನರ ಒಲವು: ಸಾರಿಗೆ ಆದಾಯ ಚೇತರಿಕೆ

ಚಿಕ್ಕೋಡಿ: ಕಳೆದ ಆರು ತಿಂಗಳಿಂದ ಕೋವಿಡ್ ಹೊಡೆತಕ್ಕೆ ನಷ್ಟ ಅನುಭವಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗವು ಈಗ ಹಂತ ಹಂತವಾಗಿ ಆದಾಯದಲ್ಲಿ ಚೇತರಿಸಿಕೊಳ್ಳುತ್ತಿದೆ. ಲಾಕ್‌ಡೌನ್‌ ತೆರವುಗೊಂಡಿರುವ ಪರಿಣಾಮ ದಿನದಿಂದ ದಿನಕ್ಕೆ ಪ್ರಯಾಣಿಕರು ಬಸ್‌ ಕಡೆ ವಾಲುತ್ತಿದ್ದಾರೆ. ಕಳೆದ ಮಾರ್ಚ್‌ ಮೂರನೇ ವಾರದಿಂದ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರಕಾರ ಲಾಕ್‌ಡೌನ್‌ ಜಾರಿ ಮಾಡಿ ಬಸ್‌ ಸಂಚಾರ ನಿಷೇಧಿಸಿತ್ತು. ಹೀಗಾಗಿ ನಾಲ್ಕು ತಿಂಗಳು ಬಸ್‌ …

Read More »

ಬೆಳಗಾವಿ: ಸಕ್ಕರೆ ಕಾರ್ಖಾನೆ ಎದುರು ರೈತರ ಧರಣಿ

ಎಂ.ಕೆ. ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಕಬ್ಬಿನ ಬಾಕಿ ಬಿಲ್ ಹಾಗೂ ಕಾರ್ಮಿಕರ ವೇತನ ಪಾವತಿಗೆ ಆಗ್ರಹಿಸಿ ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ರೈತರು ಸೋಮವಾರ ಧರಣಿ ಆರಂಭಿಸಿದ್ದಾರೆ. ‘2017-18ನೇ ಸಾಲಿನ ಕಬ್ಬಿನ ಬಾಕಿ ಬಿಲ್ ₹ 7.8 ಕೋಟಿ, 2018-19 ಮತ್ತು 2019-20ನೇ ಸಾಲಿನ ಕಬ್ಬು ಕಟಾವು ಮತ್ತು ಸಾಗಾಣಿಕೆಯ ಬಾಕಿ ₹ 1.2 ಕೋಟಿ ಹಾಗೂ 2019-20ನೇ ಸಾಲಿನಲ್ಲಿ ಜನವರಿ ನಂತರ ಕಬ್ಬು ಪೂರೈಸಿದ ರೈತರ ₹ …

Read More »

ತನ್ನ ತಂದೆಯ ಅಂಗಡಿಯಿಂದಲೇ ಬರೋಬ್ಬರಿ 14 ಕೆ.ಜಿ ಚಿನ್ನ ಕದ್ದಮಗ

ಚೆನ್ನೈ: ಮಗನೊಬ್ಬ ತನ್ನ ತಂದೆಯ ಅಂಗಡಿಯಿಂದಲೇ ಬರೋಬ್ಬರಿ 14 ಕೆ.ಜಿ ಚಿನ್ನ ಕದ್ದ ಘಟನೆ ಚೆನ್ನೈನಲ್ಲಿ ನಡೆದಿದೆ.ಆರೋಪಿ ಮಗನನ್ನು ಎಸ್ ಹರ್ಷ ಬೋತ್ರಾ(24) ಎಂದು ಗುರುತಿಸಲಾಗಿದೆ. ಸದ್ಯ ಈತನನ್ನ ಪೊಲೀಸರು ಬಂಧಿಸಿದ್ದಾರೆ. ಸುಭಾಶ್ ಚಂದ್ರ ಬೋತ್ರಾ ಮಗನಾಗಿರುವ ಹರ್ಷ ಆನ್‍ಲೈನ್ ವಹಿವಾಟಿನಲ್ಲಿ ಆಗಿರುವ 1.5 ಕೋಟಿ ನಷ್ಟವನ್ನು ಸರಿದೂಗಿಸಲು ಚಿನ್ನ ಕದ್ದಿದ್ದಾನೆ ಎಂದು ಹೇಳಿದ್ದಾನೆ. ಆರಂಭದಲ್ಲಿ ಪೊಲೀಸರು ಹೊರಗಿನವರ ಕೈವಾಡ ಇರಬಹುದೆಂದು ಶಂಕಿಸಿದ್ದಾರೆ. ಆದರೆ ಈ ಸಂಬಂಧ ಸ್ಥಳೀಯ ಸಿಸಿಟಿವಿ …

Read More »

ಪಬ್ ಜಿ  ಮೊಬೈಲ್ ಗೇಮ್ ಬ್ಯಾನ್ 21 ವರ್ಷದ ಯುವಕ  ಆತ್ಮಹತ್ಯೆ

ಕೋಲ್ಕತ್ತಾ: ಪಬ್ ಜಿ  ಮೊಬೈಲ್ ಗೇಮ್ ಬ್ಯಾನ್ ಆದ ಬಳಿಕ ಬೇಸರಗೊಂಡ 21 ವರ್ಷದ ಯುವಕ  ಆತ್ಮಹತ್ಯೆಗೆ ಶರಣಾದ ಘಟನೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ನಡೆದಿದೆ. ಐಟಿಐ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರೀತಮ್ ಹಲ್ದರ್ ಆತ್ಮಹತ್ಯೆಗೆ ಶರಣಾದ ವಿದ್ಯರ್ಥಿ ಎಂದು ಗುರುತಿಸಲಾಗಿದೆ. ಚಕ್‌ದಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕುರ್ಬಾ ಲಾಲ್‌ಪುರ್ ಪ್ರದೇಶದಲ್ಲಿರುವ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಬೆಳಗ್ಗಿನ ಉಪಹಾರ ಸ್ವೀಕರಿಸಿದ ಬಳಿಕ ಆತ ಕೊಠಡಿಗೆ ತೆರಳಿದ್ದ …

Read More »

ಗೋಣಿಚೀಲಗಳಲ್ಲಿ ಮಂಗಗಳ ಮೃತದೇಹ……………..

ಉಡುಪಿ: ಎರಡು ಗೋಣಿಚೀಲಗಳಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಡಿನಲ್ಲಿ ತುಂಬಿರುವ ಎರಡು ಸೆಣಬಿನ ಗೋಣಿ ಎಸೆದು ಹೋಗಿದ್ದರು. ಇದನ್ನು ಕಂಡ ಸ್ಥಳೀಯರು ತೆರೆದು ನೋಡಿದಾಗ ಹಲವಾರು ಮಂಗಗಳ ಮೃತದೇಹಗಳು ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತೋಟಕ್ಕೆ ಬಂದು ಉಪಟಳ ನೀಡುತ್ತಿದ್ದ ಮಂಗಗಳಿಗೆ ವಿಷವಿಟ್ಟು ಕೊಂದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಆಗುಂಬೆ ಘಾಟಿ ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಂಗಗಳು ಕಾಣಿಸಿಕೊಳ್ಳುತ್ತವೆ. …

Read More »

5 ತಿಂಗಳಿಂದ ಪ್ರವಾಸಿಗರಿಂದ ದೂರವಿದ್ದ ವಿಶ್ವ ಪ್ರಸಿದ್ದ ಗಿರಿಧಾಮ ಈಗ ಮುಕ್ತ

ಚಿಕ್ಕಬಳ್ಳಾಪುರ : ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದ ಜಿಲ್ಲೆಯ ವಿಶ್ವವಿಖ್ಯಾತ ನಂದಿ ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಅವಕಾಶ ನಿಡುತ್ತಿದ್ದು ಗಿರಿಧಾಮ ವೀಕ್ಷಣೆಗೆ ಪ್ರವಾಸಿಗರು ತುದಿಗಾಲಲ್ಲಿ ನಿಂತಿದ್ದಾರೆ. ಪ್ರತಿ ಶನಿವಾರ, ಭಾನುವಾರ ಸಹಸ್ರಾರು ಸಂಖ್ಯೆಯಲ್ಲಿ ಗಿರಿಧಾಮಕ್ಕೆ ಲಗ್ಗೆ ಇಟ್ಟು ಬೆಟ್ಟದ ಕಾನನ ಮಧ್ಯೆ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದು ಹೋಗುತ್ತಿದ್ದ ಐಟಿ, ಬಿಟಿ ಉದ್ಯೋಗಿಗಳಿಗೆ, ಪ್ರೇಮಿಗಳಿಗೆ ಸತತ ಐದು ತಿಂಗಳಿಂದ ಗಿರಿಧಾಮಕ್ಕೆ ಪ್ರವೇಶವಿಲ್ಲವಾಗಿತ್ತು. ಆದರೆ ಕೇಂದ್ರ ಸರ್ಕಾರ …

Read More »

ಹೈಪರ್​ಸಾನಿಕ್ ಮಿಸೈಲ್ ಕ್ಲಬ್​ ಸೇರಿತು ಭಾರತ

ನವದೆಹಲಿ: ಒಡಿಶಾದ ಬಾಲಸೋರ್​ನ ಎಪಿಜೆ ಅಬ್ದುಲ್ ಕಲಾಂ ಟೆಸ್ಟಿಂಗ್ ರೇಂಜ್​ನಲ್ಲಿ ಹೈಪರ್ ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಭಾರತ ಇಂದು ಹೈಪರ್​ ಸಾನಿಕ್ ಮಿಸೈಲ್ ಕ್ಲಬ್​ ಸೇರ್ಪಡೆಯಾಗಿದೆ. ಈ ಕ್ಷಿಪಣಿಯ ಶಬ್ದದ ವೇಗಕ್ಕಿಂತಲೂ ಆರು ಪಟ್ಟು ವೇಗದಲ್ಲಿ ಸಾಗುತ್ತದೆ. ಇಂತಹ ಮಿಸೈಲ್ ಹೊಂದಿರುವ ಇತರ ದೇಶಗಳು ಅಮೆರಿಕ, ರಷ್ಯಾ ಮತ್ತು ಚೀನಾ. ಹೈಪರ್​ ಸಾನಿಕ್ ಟೆಸ್ಟ್ ಡೆಮಾನ್​ಸ್ಟ್ರೇಟರ್​ ವೆಹಿಕಲ್​ ಅನ್ನು ಡಿಫೆನ್ಸ್ ರಿಸರ್ಚ್​ ಆಯಂಡ್ ಡೆವಲಪ್​ಮೆಂಟ್ ಆರ್ಗನೈಸೇಷನ್ …

Read More »

ಜೆಡಿಎಸ್ ಪಕ್ಷ ತೀರಿಸುವ ಕೆಲಸ ನಡೆಯುತ್ತಿದೆ : ಗಂಭೀರ ಆರೋಪ

ನಾಗಮಂಗಲ  : ಜಿಲ್ಲಾಡಳಿತ ಜೆಡಿಎಸ್‌ ಪಕ್ಷವನ್ನು ತೀರಿಸುವ ಕೆಲಸ ಮಾಡುತ್ತಿದೆ. ಜನರಿಂದ ಆಯ್ಕೆಯಾದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಕನಿಷ್ಠ ಪ್ರಯತ್ನವನ್ನೂ ಮಾಡುತ್ತಿಲ್ಲ. ಜನರಿಂದ ತಿರಸ್ಕೃತರಾದವರೇ ಅಧಿಕಾರಿಗಳಿಗೆ ಗಾಡ್‌ಫಾದರ್‌ಗಳಾಗಿದ್ದಾರೆ ಎಂದು ನಾಗಮಂಗಲ ಶಾಸಕ ಕೆ.ಸುರೇಶ್‌ಗೌಡ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ನಾಗಮಂಗಲ ಶಾಸಕ ಕೂಡ ಜಿಲ್ಲಾಡಳಿತದ ಕಾರ್ಯವೈಖರಿ ವಿರುದ್ಧ ಸಿಟ್ಟಿಗೆದ್ದಿದ್ದಾರೆ. …

Read More »

`LPG’ ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಮೋದಿ ಸರ್ಕಾರ ಕನ್ನ ಹಾಕುತ್ತಿದೆ : ಈಶ್ವರ್ ಖಂಡ್ರೆ ಕಿಡಿ

ಬೆಂಗಳೂರು : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನು ಧೀಡಿರ್ ಆಗಿ ರದ್ದುಗೊಳಿಸುವ ಮೂಲಕ ಮಧ್ಯಮ ವರ್ಗದ ಜನರಿಗೆ ಮೋಸ ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಈಶ್ವರ್ ಖಂಡ್ರೆ, ಈಶ್ವರ್ ಖಂಡ್ರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನ ಧಿಡೀರ್ ಆಗಿ ರದ್ದುಗೊಳಿಸಿದೆ.‌ ಮಹಿಳೆಯರ ವೋಟ್ ಪಡೆದು ಅಧಿಕಾರಕ್ಕೆ ಬಂದ ಮೋದಿ …

Read More »

ಕೋವಿಡ್-19, ಶಾಸಕರ ವಿರೋಧಗಳ ನಡುವೆ ಮಹಾರಾಷ್ಟ್ರ ವಿಧಾನಸಭೆಯ 2 ದಿನಗಳ ಮುಂಗಾರು ಅಧಿವೇಶನ ಆರಂಭ

ಮುಂಬೈ: ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಮಹಾರಾಷ್ಟ್ರ ವಿಧಾನಸಭೆಯ ಎರಡು ದಿನಗಳ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಉಪಾಧ್ಯಕ್ಷ ನರಹರಿ ಝಿರ್ವಾಲ್, ಕೋವಿಡ್-19 ಹಿನ್ನೆಲೆಯಲ್ಲಿ ಸದಸ್ಯರು ಮಾಸ್ಕ್ ಧರಿಸುವಂತೆ, ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಕ್ರಾಸ್ ಚಿಹ್ನೆಯಿರುವ ಸೀಟಿನಲ್ಲಿ ಕೂರದಂತೆ ಸದನದ ಸದಸ್ಯರಿಗೆ ಮಾರ್ಗದರ್ಶನ ನೀಡಿದರು. ಇಬ್ಬರು ಕುಳಿತುಕೊಳ್ಳುಲ್ಲಿ ಒಬ್ಬರು ಸದಸ್ಯರಿಗೆ ಮಾತ್ರ ಈ ಬಾರಿ ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸದನ ಸದಸ್ಯರು ವಿದ್ಯಾರ್ಥಿಗಳು ಮತ್ತು ಪ್ರೇಕ್ಷಕರು ಕುಳಿತುಕೊಳ್ಳುವ …

Read More »