Breaking News

ರಾಷ್ಟ್ರೀಯ

ಅನುದಾನ ಹಂಚಿಕೆ ತಾರತಮ್ಯ: ಆಕ್ರೋಶ

ಬೆಳಗಾವಿ: ಮಹಾನಗರ ಪಾಲಿಕೆಯ ಬಜೆಟ್‌ನಲ್ಲಿ ಎಲ್ಲ 58 ವಾರ್ಡ್‌ಗಳಿಗೂ ಅನುದಾನ ಸರಿಯಾಗಿ ಹಂಚಿಕೆ ಆಗಿಲ್ಲ ಎಂದು ಆರೋಪಿಸಿ ಪ್ರತಿಪಕ್ಷ ನಾಯಕರು, ಆಡಳಿತಾರೂಢ ಪಕ್ಷವನ್ನು ತರಾಟೆ ತೆಗೆದುಕೊಂಡರು. ಆಯ್ದ 37 ವಾರ್ಡ್‌ ಸದಸ್ಯರಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ತಾರತಮ್ಯ ಎಸಗಲಾಗಿದೆ ಎಂದೂ ಆಕ್ಷೇಪ ವ್ಯಕ್ತಪಡಿಸಿದರು.   ಮೇಯರ್‌ ಸವಿತಾ ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಶನಿವಾರ ನಡೆದ ಕೌನ್ಸಿಲ್‌ ಸಭೆಯಲ್ಲಿ ಈ ಬಗ್ಗೆ ಕೆಲಕಾಲ ಬಿಸಿ ಚರ್ಚೆ …

Read More »

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್: ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂದ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್​ 17: ಮುಡಾ ಹಗರಣದಲ್ಲಿ (muda) ಸಿಎಂ ಸಿದ್ದರಾಮಯ್ಯ(Siddaramaiah)ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರ ಸಿಎಂಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಸದ್ಯ ಈ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮಾಡಿದ್ದು, ರಾಜ್ಯಪಾಲರ ನಿರ್ಣಯವನ್ನ ಸಂಪುಟ ಸಭೆ ಖಂಡಿಸಿದೆ. ಬಳಿಕ ಮಾತನಾಡಿದ ಸಿದ್ದರಾಮಯ್ಯ, ನಾನು ಯಾವ ಕಾರಣಕ್ಕೆ ರಾಜೀನಾಮೆಯನ್ನ ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆಯನ್ನ …

Read More »

ಖಾಸಗಿ ಶಾಲೆಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆ;

ಸರ್ಕಾರಿ ಶಾಲೆಗಳು ಬದಲಾಗುತ್ತಿವೆ‌. ಖಾಸಗಿ ಶಾಲೆಗಳ ಅಬ್ಬರದ ನಡುವೆಯೋ ಸರ್ಕಾರಿ ಶಾಲೆಗಳು ಪೈಪೋಟಿ ನೀಡುತ್ತಿವೆ. ಇದಕ್ಕೆ ವಿಜಯಪುರದ ಸರ್ಕಾರಿ ಶಾಲೆಗಳು ಉದಾಹರಣೆಯಾಗಿದೆ. ಯಾಕೆ ಅಂತೀರಾ? ಈ ಸ್ಟೋರಿ ಓದಿ.ಸರ್ಕಾರಿ ಶಾಲೆಗಳು ಅಂದರೆ ಸಾಕು ಜನರಿಗೆ ಅಸಡ್ಯ. ಅಲ್ಲಿ ಮಕ್ಕಳು ಕಲಿಯೋದಿಲ್ಲ, ಕಲಿಸೋರು ಇಲ್ಲ. ಸೌಲಭ್ಯಗಳಂತೂ ಇಲ್ಲವೇ ಇಲ್ಲ ಎನ್ನುವುದು ಪೋಷಕರ ಮಾತು. ಇದಕ್ಕೆ ತದ್ವಿರುದ್ಧವಾಗಿ ಬದಲಾಗುತ್ತಿವೆ ವಿಜಯಪುರದ ಸರ್ಕಾರಿ ಶಾಲೆಗಳು. ಅದರಲ್ಲೂ ವಿಜಯಪುರದ ಇಬ್ರಾಹಿಂಪುರದ ಬಳಿಯ ಸರ್ಕಾರಿ ಪ್ರಾಥಮಿಕ ಶಾಲೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!ಸಿದ್ನಾಳ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ಮಂದಿರ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಸಿದ್ನಾಳ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ಮಂದಿರ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …

Read More »

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು, : ಬೆಂಗಳೂರು ಮಳೆ(Bengaluru Rain) ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ‘ಬೆಂಗಳೂರು ನಗರದಲ್ಲಿಕಂಟ್ರೋಲ್‌ ರೂಂ ಗಳನ್ನು ಗುರುತಿಸಲಾಗಿದೆ. ದೊಡ್ಡ ಚರಂಡಿಗಳು ಓಪನ್‌ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್‌ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಜೊತೆಗೆ ಕೋಡಿಗೆ ಗೇಟ್‌ ಅಳವಡಿಸುವ ಮೂಲಕ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ …

Read More »

ಸಾಹುಕಾರ ಜಾರಕಿಹೊಳಿಅವ ರಿ ಗೆ ಬಿಎಲ್​​​​ ಸತೋಷ್ ದಿಢೀರ್ ಬುಲಾವ್

ಬೆಂಗಳೂರು, (ಆಗಸ್ಟ್ 16): ಮೈಸೂರು ಪಾದಯಾತ್ರೆಗೆ ಸೆಡ್ಡು ಹೊಡೆದು ರೆಬೆಲ್​ ಟೀಂ ಪ್ರತ್ಯೇಕ ಪಾದಯಾತ್ರೆ ಮಾಡುವುದಕ್ಕೆ ಸರ್ಕಸ್​ ಮಾಡುತ್ತಿದೆ. ಕಳೆದ ವಾರವಷ್ಟೇ ಬೆಳಗಾವಿಯಲ್ಲಿ ಬಿಜೆಪಿ ಸಮಾನ ಮನಸ್ಕರ ತಂಡೆ ಸಭೆ ಸೇರುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದರು. ಇದೀಗ ಮತ್ತೆ ಸಭೆ ಸೇರುವುದಕ್ಕೆ ಆಗಸ್ಟ್​ 21ರಂದು ಬೆಂಗಳೂರಿನಲ್ಲಿ ನಿರ್ಧರಿಸಿದ್ದರು. ಅನಿವಾರ್ಯ ಕಾರಣದಿಂದ ಸಭೆಯೂ ಮುಂದೂಡಿಕೆಯಾಗಿದ್ದು, ಇದೀಗ ಎಲ್ಲರ ಚಿತ್ತ ಇದೀಗ ಹೈಕಮಾಂಡ್​ನತ್ತ ನೆಟ್ಟಿದೆ. ಪಾದಯಾತ್ರೆಯನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕತ್ವದ …

Read More »

ತಾತ್ಕಾಲಿಕ ಗೇಟ್‌: ಮೊದಲ ಹಂತ ಯಶಸ್ವಿ

ಕೊಪ್ಪಳ: ತುಂಗಭದ್ರಾ ಜಲಾಶಯದ ಮುರಿದು ಬಿದ್ದ 19ನೇ ಕ್ರೆಸ್ಟ್‌ ಗೇಟ್‌ಗೆ ತಾತ್ಕಾಲಿಕ ಗೇಟ್‌ ಅಳವಡಿಕೆ ಸಾಹಸ ಕಾರ್ಯ ಕೈ ಹಿಡಿದಿದ್ದು, ಶುಕ್ರವಾರ ರಾತ್ರಿ ಐದು ಸ್ಟಾಪ್‌ ಲಾಗ್‌ಗಳ ಪೈಕಿ ಒಂದನ್ನು ಯಶಸ್ವಿಯಾಗಿ ಇಳಿಸಲಾಗಿದೆ. ತಜ್ಞರ ತಂಡಕ್ಕೆ ಯಶಸ್ಸಿನ ಮೊದಲ ಮೆಟ್ಟಿಲು ಲಭಿಸಿದ್ದು, ಆತ್ಮವಿಶ್ವಾಸ ಹೆಚ್ಚಿಸಿದೆ. ಇನ್ನುಳಿದ 4 ಸ್ಟಾಪ್‌ ಲಾಗ್‌ ಇಳಿಸುವ ಕಾರ್ಯ ಶನಿವಾರ ಸಂಜೆಗೆ ಬಹುತೇಕ ಪೂರ್ಣಗೊಳ್ಳಲಿದೆ. ಶುಕ್ರವಾರ ಬೆಳಗ್ಗೆಯಿಂದ ತಾತ್ಕಾಲಿಕ ಗೇಟ್‌ ಅಳವಡಿಕೆಗೆ ಜಲಾಶಯದಲ್ಲಿ ಅಡ್ಡಿ ಮಾಡುತ್ತಿದ್ದ ಸ್ಕೈವಾಕ್‌ …

Read More »

ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 6 ಗಂಟೆಯಲ್ಲಿ `FIR’ ದಾಖಲಿಸಬೇಕು : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 6 ಗಂಟೆಯಲ್ಲಿ `FIR’ ದಾಖಲಿಸಬೇಕು : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ ನವದೆಹಲಿ : ವೈದ್ಯರ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ವೈದ್ಯರ ಆಕ್ರೋಶ ಹೆಚ್ಚುತ್ತಿದೆ. ದೇಶಾದ್ಯಂತ ವೈದ್ಯರು ಮತ್ತು ದಾದಿಯರು ಮುಷ್ಕರ ನಡೆಸಿದ್ದು, ಆರೋಗ್ಯ ಸೇವೆಗಳನ್ನ ಸ್ಥಗಿತಗೊಳಿಸಿದ್ದಾರೆ. ಎಲ್ಲಾ ಆರೋಗ್ಯ ಕಾರ್ಯಕರ್ತರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಮುಷ್ಕರ ನಿರತ ವೈದ್ಯರು ಒತ್ತಾಯಿಸುತ್ತಿದ್ದಾರೆ. ಈ ದಿಕ್ಕಿನಲ್ಲಿ ಬಹಳ ಮುಖ್ಯವಾದ ಹೆಜ್ಜೆಯನ್ನ ಇಟ್ಟಿರುವ ಕೇಂದ್ರ …

Read More »

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿ 28 ಜನರ ವಿರುದ್ಧ `FIR’ ದಾಖಲು!

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿ 28 ಜನರ ವಿರುದ್ಧ `FIR’ ದಾಖಲು! ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿದಂತೆ 28 ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕರಾದ …

Read More »

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ : ಇಂದಿನಿಂದ ಕೌನ್ಸೆಲಿಂಗ್ ಆರಂಭ

ಬೆಂಗಳೂರು : 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಸಹಶಿಕ್ಷಕರು, ದೈಹಿಕ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರುಗಳಿಗೆ ಅಂತರ್ ವಿಭಾಗ ಮಟ್ಟದ ಕೋರಿಕೆ/ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.   ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ …

Read More »