Breaking News
Home / ರಾಷ್ಟ್ರೀಯ (page 12)

ರಾಷ್ಟ್ರೀಯ

ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಈ ವೆಬ್ ಗೆ ಲಾಗಿನ್ ಆಗಿ.!

ಬೆಂಗಳೂರು : ದ್ವಿತೀಯ ಪಿಯುಸಿ ಬರೆದ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಇಂದಿನಿಂದಲೇ ಅವಕಾಶ ನೀಡಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು …

Read More »

ಅವಳಿ ಜವಳಿಗೆ ಪಿಸಿಎಂಸಿಯಲ್ಲಿ ಅವಳಿ ಅಂಕ ವ್ಯತ್ಯಾಸ!

ಸಾಗರ: ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ಅವಳಿ ಜವಳಿ ಹೆಣ್ಣು ಮಕ್ಕಳಿಬ್ಬರು ಈ ಬಾರಿ ನಡೆದ ಪಿಯುಸಿ ಪರೀಕ್ಷೆಯಲ್ಲಿ ಪಿಸಿಎಂಸಿ ವಿಷಯದಲ್ಲಿ ಅವಳಿ ಅಂಕಗಳ ವ್ಯತ್ಯಾಸದೊಂದಿಗೆ ಉತ್ತಮ ಸಾಧನೆ ಮಾಡಿರುವ ಫಲಿತಾಂಶ ಬುಧವಾರ ಲಭ್ಯವಾಗಿದೆ.

Read More »

ಹೆಬ್ಬಾಳ್ಕರ್ ಪಂಚಮಸಾಲಿ ಹೌದೊ ಅಲ್ಲವೋ ಎನ್ನುವ ಗೊಂದಲ ವಿಚಾರ ಇಡೀ ಜಗತ್ತಿಗೆ ಗೊತ್ತಿದೆ.:ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರಿಂದಲೇ ಸಮಾಜದವರು ಅವರನ್ನು ನಮ್ಮವರು ಎಂದು ಒಪ್ಪಿಕೊಂಡಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ನೀಡಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಚುನಾವಣೆಯ ಸಂದರ್ಭದಲ್ಲಿ ಯಾರೂ ಸಹ ವಿಷಯಾಂತರ ಮಾಡಬಾರದು. ನಮ್ಮವರು ಎನ್ನುವ ಕಾರಣಕ್ಕೆ ಮೀಸಲಾತಿ ಹೋರಾಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು ಎಂದು ಸಮರ್ಥಿಸಿಕೊಂಡರು. ಯಾರೊ ಒಬ್ಬರು ಏನೇನೋ ಮಾತನಾಡುತ್ತಾರೆ …

Read More »

ನಟರಾದ ಪ್ರಕಾಶ್ ರಾಜ್- ಕಮಲ್ ಹಾಸನ್ ಟೀಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಪ್ರಲ್ಹಾದ ಜೋಶಿ

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ನಟರಾದ ಪ್ರಕಾಶ್ ರಾಜ್ ಮತ್ತು ಕಮಲ್ ಹಾಸನ್ ಅವರ ಅಭಿಪ್ರಾಯಗಳು ಮತ್ತು ಟೀಕೆಗಳನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಮಂಗಳವಾರ ಹೇಳಿದ್ದಾರೆ. ಪ್ರಕಾಶ್ ರಾಜ್ ಮತ್ತು ಕಮಲ್ ಹಾಸನ್ ಇಬ್ಬರೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ಇತ್ತೀಚಿಗೆ ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಜೋಶಿ, ‘ಆ ಹೇಳಿಕೆಗಳಲ್ಲಿ …

Read More »

ಮೋದಿ ಭಾವಚಿತ್ರ, ಹೆಸರು ಬಳಕೆಗೆ ಈಶ್ವರಪ್ಪಗೆ ನಿರ್ಬಂಧಿಸಿ : ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ನೀಡಿಲ್ಲವೆಂದು ಬಂಡಾಯ ಎದ್ದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಈ ವೇಳೆ ಅವರು ಮೋದಿ ಅವರ ಭಾವಚಿತ್ರ ಹಾಗೂ ಹೆಸರನ್ನು ಬಳಸಿದಂತೆ ನಿರ್ಬಂಧಿಸಿ ಇದೀಗ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಚುನಾವಣಾ ವೇಳೆ ಮೋದಿ ಭಾವಚಿತ್ರ ಹೆಸರು ಬಳಕೆಗೆ ಕೆಎಸ್ ಈಶ್ವರಪ್ಪಗೆ ನಿರ್ಬಂಧ ವಿಧಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಇದೀಗ …

Read More »

ಸಾಲು ಸಾಲು ಹಬ್ಬ; ಕೋಳಿ ಮಾಂಸ ದುಬಾರಿ

ಹೊಸಕೋಟೆ: ಮುನಿ ದ್ಯಾವರ, ಜಾತ್ರೆ, ಯುಗಾದಿಯ ಹೊಸ ತೊಡಕು, ನಂತರ ರಂಜಾನ್ ಹಬ್ಬಗಳು ಸಲುಸಾಲಾಗಿ ಬಂದಿರುವುದರಿಂದ ಕೋಳಿ ಮಾಂಸದ ಬೆಲೆ ದಿಢೀರನೆ ಏರಿಕೆಯಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಚಿಕ್ಕ ಬಾಯ್ಲರ್ ಕೋಳಿ ಕೆ.ಜಿಗೆ ₹170 ಇದ್ದದ್ದು, ಏಕಾಏಕಿ ₹240 ಆಗಿದೆ. ಅದೇ ರೀತಿಯಲ್ಲಿ ದೊಡ್ಡ ಬಾಯ್ಲರ್ ಕೋಳಿ ₹180ರಿಂದ ₹240ಕ್ಕೆ ಮುಟ್ಟಿದೆ. ಕೆಲವೆಡೆ ಹತ್ತಿಪ್ಪತ್ತು ರೂಪಾಯಿ ವ್ಯತ್ಯಾಸವೂ ಆಗಿದೆ. ಚಿಕ್ಕಬಾಯ್ಲರ್ ಮಾಂಸದ ಬೆಲೆ ₹70 ಹೆಚ್ಚಳವಾಗಿದ್ದರೆ, ದೊಡ್ಡ ಬಾಯ್ಲರ್ …

Read More »

ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಿ- ಪ್ರಕಾಶ ರಾಜ್‌

ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಿ- ಪ್ರಕಾಶ ರಾಜ್‌ ಟೀಕೆ ಬೆಳಗಾವಿ: ‘ಒಂದೇ ಪಕ್ಷ, ಒಂದೇ ಭಾಷೆ ಎನ್ನುವ ಮಹಾಪ್ರಭು ಎರಡು ನಾಲಿಗೆ ಹಾವು ಇದ್ದಂತೆ. ಸುಳ್ಳುಗಳ ಮಹಾಪುರಾಣ ಹೇಳುವ ಈ ದುರಹಂಕಾರಿ ಮತ್ತು ಸರ್ವಾಧಿಕಾರಿಯನ್ನು ಕೆಳಗಿಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ನಟ ಪ್ರಕಾಶ ರಾಜ್‌ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ಟೀಕಿಸಿದರು.   ಕರ್ನಾಟಕದ ಸಮಸ್ತ ಜನಪರ ಸಂಘಟನೆಗಳು ಸೋಮವಾರ ಹಮ್ಮಿಕೊಂಡಿದ್ದ ‘ದೇಶ ಉಳಿಸಿ ಸಂಕಲ್ಪ ಸಮಾವೇಶ’ದಲ್ಲಿ …

Read More »

ಪಕ್ಷಿಗಳ ಬಾಯಾರಿಕೆ ನೀಗಿಸಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಉದ್ಯಾನ ವಿಭಾಗ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಹಯೋಗದಲ್ಲಿ ಹಸಿರು ಉದ್ಯಾನ, ಬೊಟಾನಿಕಲ್ ಉದ್ಯಾನ ಹಾಗೂ ವಿವಿಧ ಸ್ನಾತಕೋತ್ತರ ವಿಭಾಗಗಳ ಎದುರು ಪಕ್ಷಿಗಳಿಗೆ ಧಾನ್ಯ ಹಾಗೂ ನೀರು ಇಡುವ ಕಾರ್ಯಕ್ಕೆ ಭಾನುವಾರ ಕುಲಪತಿ ಕೆ.ಬಿ.ಗುಡಸಿ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ವಿಶ್ವವಿದ್ಯಾಲಯದ ಆವರಣದಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಲಾಗಿದೆ. ಬೇಸಿಗೆಯ ಬಿರು ಬಿಸಿಲಿನಿಂದ ಬಳಲುತ್ತಿರುವ ಪಕ್ಷಿಗಳಿಗೆ ಧಾನ್ಯ ಹಾಗೂ ನೀರುಣಿಸುವ ಕಾರ್ಯಕ್ಕೆ …

Read More »

ಹನುಮಾನ್ ಚಾಲೀಸ ಪಠಣಕ್ಕೆ ನಿರ್ಬಂಧ ಇದೆಯೇ?: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆ’ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಆರೋಪಿಸಿದರು. ಬೆಂಗಳೂರಿನ ನಗರ್ತಪೇಟೆಯಲ್ಲಿ ಅಂಗಡಿಯಲ್ಲಿ ಹನುಮಾನ್ ಚಾಲೀಸ ಹಾಕಿದ್ದಕ್ಕೆ ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಕ್ಕೆ ಭಾನುವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ನಿಮ್ಮ ತುಷ್ಟೀಕರಣದ ರಾಜ್ಯದಲ್ಲಿ ಹನುಮಾನ್ ಚಾಲೀಸ ಪಠಣ ಮಾಡಲು ನಿರ್ಬಂಧ ಇದೆಯೇ? ಇದು ಖಂಡನೀಯ. ಕೂಡಲೇ ಪ್ರಕರಣ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು. …

Read More »

ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಶ್ರೀ ಕಣಕ್ಕೆ:

ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಿರ್ಧರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸೋಮವಾರ ಈ ವಿಷಯ ತಿಳಿಸಿದ ಅವರು, ‘ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್‌ ಫಿಕ್ಸಿಂಗ್‌ ಮಾಡಿಕೊಂಡಿವೆ ಎಂದು ಜನರು ಮಾತನಾಡುತ್ತಿದ್ದಾರೆ. ಇದು ಮತದಾರರಿಗೆ ಮಾಡುವ ಮೋಸ’ ಎಂದರು. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಲ್ಹಾದ ಜೋಶಿ ವಿರುದ್ಧ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. …

Read More »