Breaking News

ರಾಷ್ಟ್ರೀಯ

ಅಂದು ವೇಶ್ಯೆ ಆಗಿದ್ದಾಕೆ ಇಂದು ಬಾಲಿವುಡ್‍ನ ಸ್ಟಾರ್ ಬರಹಗಾರ್ತಿ

ಮುಂಬೈ: ಬಾಲಿವುಡ್‍ನ ಖ್ಯಾತ ಬರಹಗಾರ್ತಿ ಒಬ್ಬರ ಕತೆ ಕೇಳಿದರೆ ಯಾವ ಸಿನಿಮಾ ಕತೆಗಳಿಗಿಂತಲೂ ಕಡಿಮೆಯಿಲ್ಲ ಎನಿಸುತ್ತೆ. ಆದರೆ ಇದು ಸಿನಿಮಾ ಕತೆಯಲ್ಲ ಖ್ಯಾತ ಬರಹಗಾರ್ತಿಯ ನಿಜ ಜೀವನದ ವ್ಯತೆ. ಹಿಂದೆ ಜೀವನ ನಡೆಸಲು ಮುಂಬೈನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಇಂದು ಬಾಲಿವುಡ್‍ನಲ್ಲಿ ತಮ್ಮ ಪ್ರತಿಭೆ ಮೂಲಕ ಖ್ಯಾತಿ ಗಳಿಸಿದ್ದಾರೆ. ಇವರು ಬರೆದ ಕತೆಗಳು ಇಂದು ಬಿಟೌನ್‍ನಲ್ಲಿ ಹಿಟ್ ಸಿನಿಮಾಗಳಾಗಿವೆ. ಅಂದು ಜೀವನ ನಿರ್ವಹಣೆಗಾಗಿ ವೇಶ್ಯೆ ಆಗಿದ್ದವರು ಇಂದು ಬಾಲಿವುಡ್‍ನಲ್ಲಿ ಖ್ಯಾತಿ …

Read More »

ಐಪಿಎಲ್ ರದ್ದಾದ್ರೆ ಬಿಸಿಸಿಐಗೆ ಅಂದಾಜು 4,000 ಕೋಟಿ ರೂ. ನಷ್ಟ!

ಮುಂಬೈ: ಕೊರೊನಾ ವೈರಸ್ ಕಾರಣದಿಂದ ವಿಶ್ವ ಕ್ರೀಡಾಲೋಕ ತತ್ತರಿಸಿದೆ. ಹಲವು ಪ್ರತಿಷ್ಠಿತ ಟೂರ್ನಿಗಳು ಕೊರೊನಾದಿಂದ ರದ್ದಾಗಿದ್ದು, ಮತ್ತಷ್ಟು ಟೂರ್ನಿಗಳನ್ನು ಮುಂದೂಡಲಾಗಿದೆ. ಇತ್ತ 2020ರ ಐಪಿಎಲ್ ಟೂರ್ನಿ ಕೂಡ ಲಾಕ್‍ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 15ಕ್ಕೆ ಮುಂದೂಡಲಾಗಿತ್ತು. ಆದರೆ ಮತ್ತೆ ಲಾಕ್‍ಡೌನ್ ಮುಂದುವರಿಸಿದ ಕಾರಣ ಬಿಸಿಸಿಐ ಮುಂದಿನ ಆದೇಶದವರೆಗೂ ಐಪಿಎಲ್ ಮುಂದೂಡಿತ್ತು. ಆದರೆ ಇದುವರೆಗೂ ಐಪಿಎಲ್ ಆರಂಭವಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಮತ್ತೆ 2020ರ ಐಪಿಎಲ್ ಶೆಡ್ಯೂಲ್ ಮುಂದೂಡಲು ಬಿಸಿಸಿಐ ಚಿಂತನೆ ನಡೆಸಲು …

Read More »

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಭಾನುವಾರ ರಾತ್ರಿ 8:45ರ ವೇಳೆಗೆ ಮನಮೋಹನ್ ಸಿಂಗ್ ಅವರಿಗೆ ಎದೆನೋವು ಕಾಣಸಿಕೊಂಡಿದೆ. ಆ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಏಮ್ಸ್​ …

Read More »

ಎಣ್ಣೆ ಪಾರ್ಟಿಗೆ ಸೈಡ್ಸ್ ತರಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ

ಚೆನ್ನೈ:ಎಣ್ಣೆ ಪಾರ್ಟಿಗೆ ಸೈಡ್ಸ್ ತರಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ವಾಸು(38) ಎಂದು ಗುರುತಿಸಲಾಗಿದ್ದು, ವಿನಯಗಂ(43) ಕೊಲೆಯಾದ ದುರ್ದೈವಿಯಾಗಿದ್ದಾನೆ. ತಮಿಳುನಾಡಿನ ಚೆಂಗಲ್ಪಟ್ಟುವಿನ ಗುಡುವಾಂಚೇರಿ ಪಟ್ಟಣದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ವಾಸು ಹಾಗೂ ವಿನಯಗಂ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ಹೂವು ಮಾರುವುದು, ಕ್ಯಾಬ್ ಓಡಿಸುವುದು ಹಾಗೂ ರಿಯಲ್ ಎಸ್ಟೇಟ್ ಬ್ರೋಕರ್ಸ್ ಆಗಿದ್ದರು. ಲಾಕ್‍ಡೌನ್ ಸಡಿಲಿಕೆ …

Read More »

ಇ-ಪಾಸ್​​ ಪಡೆದ ಅಂತರ್​​ ರಾಜ್ಯ ಪ್ರಯಾಣಿಕರಿಗೆ ಬಸ್​​ ವ್ಯವಸ್ಥೆ – ಕೆಎಸ್​ಆರ್​​ಟಿಸಿ ಸಂಸ್ಥೆ

ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್‌ನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಈ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಿದ್ದ ಲಾಕ್‌ಡೌನ್‌ ವಿಸ್ತರಣೆಯಾಗಿದೆ. ಎರಡು ಹಂತದ ಲಾಕ್‌ಡೌನ್‌ಗಳನ್ನು ಬಹಳ ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್‌ಡೌನ್‌ ಸಡಿಲಗೊಳಿಸಿ ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಿದೆ. ಇದರಲ್ಲಿ ಅಂತರ್‌ ರಾಜ್ಯ ಪ್ರಯಾಣವೂ ಒಂದು. ಹೌದು, ಅಂತರ್​ ರಾಜ್ಯ ಪ್ರಯಾಣಕ್ಕಾಗಿ ಜನ ಸರ್ಕಾರದಿಂದ ಇ- ಪಾಸ್‌ ಪಡೆಯಬೇಕಾದ ಅಗತ್ಯ ಇದೆ. ಯಾವುದೇ ಮುನ್ಸೂಚನೆ ಇಲ್ಲದೇ ದೇಶವ್ಯಾಪಿ …

Read More »

1,000 ಕಿ.ಮೀ ಸೈಕಲ್ ಪ್ರಯಾಣ- ತಿಂಡಿ ತಿನ್ನಲು ಕುಳಿತಾಗ ಕಾರು ಡಿಕ್ಕಿಯಾಗಿ ಸಾವು

ಲಕ್ನೋ: ಕೊರೊನಾ ಲಾಕ್‍ಡೌನ್ ಪರಿಣಾಮ ಸಾವಿರಾರು ಕಾರ್ಮಿಕರು ನಡೆದುಕೊಂಡು, ಸೈಕಲ್ ಮೂಲಕ ತಮ್ಮ ತಮ್ಮ ಗ್ರಾಮಗಳಿಗೆ ಮರಳುತ್ತಿದ್ದಾರೆ. ಇದೇ ರೀತಿ ಕಾರ್ಮಿಕನೊಬ್ಬ ಸೈಕಲ್ ಮೂಲಕ ತನ್ನೂರಿಕೆ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಸಘೀರ್ ಅನ್ಸಾರಿ (26). ದೆಹಲಿಯಿಂದ ಬಿಹಾರದ ತನ್ನ ಚಂಪಾರನ್ ಗ್ರಾಮಕ್ಕೆ ಅನ್ಸಾರಿ ಹೋಗುತ್ತಿದ್ದರು. ಆದರೆ ಲಕ್ನೋದಲ್ಲಿ ತಿಂಡಿ ಮಾಡುತ್ತಿದ್ದಾಗ ಕಾರು ಬಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅನ್ಸಾರಿಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ಏನಿದು ಪ್ರಕರಣ? ಕೊರೊನಾ …

Read More »

ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ಹರಿದ ರೈಲು,ಅಪ್ಪಚ್ಚಿಯಾದ ಮಕ್ಕಳು, ಮಹಿಳೆಯರ ಮೃತ ದೇಹಗಳು

ಮುಂಬೈ: ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ರೈಲು ಹರಿದ ದಾರುಣ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ 15 ಜನ ವಲಸೆ ಕಾರ್ಮಿಕರು ಔರಂಗಾಬಾದ್-ಜಲ್ನಾ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು. ನಸುಕಿನ ಜಾವ 4 ಗಂಟೆಗೆ ಬಂದ ಗೂಡ್ಸ್ ರೈಲು ಕಾರ್ಮಿಕರ ಮೇಲೆ ಹರಿದಿದೆ. ಪರಿಣಾಮ ಮಕ್ಕಳು, ಕಾರ್ಮಿಕರ ದೇಹ ತುಂಡು ತುಂಡಾಗಿ ಟ್ರ್ಯಾಕ್ ಮೇಲೆ, ಕೆಳಗೆ ಬಿದ್ದಿವೆ.ಕರ್ಮದ್ …

Read More »

ರಸ್ತೆ ಬದಿಯ ವೈನ್ ಸ್ಟೋರ್ ನಿಂದ ನಟಿ ರಾಕುಲ್ ಪ್ರೀತ್ ಸಿಂಗ್ ಮದ್ಯ ಖರೀದಿ

ಮುಂಬೈ: ಲಾಕ್‍ಡೌನ್‍ನಲ್ಲಿ ಎಣ್ಣೆ ಸಿಗದೆ ಮದ್ಯಪ್ರಿಯರು ಪರದಾಡಿದ್ದರು. ಆದರೆ ಈಗ ಮದ್ಯದಂಗಡಿ ತೆರೆದಿರುವ ಹಿನ್ನೆಲೆ ಕ್ಯೂನಲ್ಲಿ ನಿಂತು ಮದ್ಯಪ್ರಿಯರು ಎಣ್ಣೆ ಖರೀದಿಸುವಲ್ಲಿ ಬ್ಯೂಸಿ ಆಗಿದ್ದಾರೆ. ಮದ್ಯ ಖರೀದಿಗೆ ಪುರುಷರು, ಮಹಿಳೆಯರು, ಯುವಕ-ಯುವತಿಯರು ಕ್ಯೂನಲ್ಲಿನಿಂತ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಮಧ್ಯೆ ರಸ್ತೆ ಬದಿಯ ವೈನ್ ಸ್ಟೋರ್ ನಿಂದ ನಟಿ ರಾಕುಲ್ ಪ್ರೀತ್ ಸಿಂಗ್ ಮದ್ಯ ಖರೀದಿಸಿ ಹೋಗುತ್ತಿದ್ದಾರೆ ಎನ್ನಲಾದ ವಿಡಿಯೋವೊಂದು ಕೂಡ ವೈರಲ್ ಆಗಿದೆ. ಮದ್ಯ ಮಾರಾಟಕ್ಕೆ …

Read More »

ವಿಶಾಖಪಟ್ಟಣಂ ವಿಷಾನಿಲ ದುರಂತದ ಬೆನ್ನಲ್ಲೇ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್

ರಾಯಗಢ: ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಾಗಿ 11 ಮಂದಿ ಸಾವನ್ನಪ್ಪಿ, ಸಾವಿರಾರು ಮಂದಿ ಅಸ್ವಸ್ಥಗೊಂಡ ಬೆನ್ನಲ್ಲೇ ಇದೀಗ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್ ಆಗಿ 7 ಮಂದಿ ಅಸ್ವಸ್ಥಗೊಂಡಿರುವ ದುರ್ಘಟನೆ ನಡೆದಿದೆ. ಛತ್ತೀಸಗಢದ ರಾಯಗಢ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪೇಪರ್ ಮಿಲ್ ಅನ್ನು ಶುದ್ಧಿಕರಿಸುತ್ತಿದ್ದ ವೇಳೆ ವಿಷಾನಿಲ ಸೋರಿಕೆಯಾಗಿ ಏಳು ಮಂದಿ ಕಾರ್ಮಿಕರು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಗ್ಗೆ …

Read More »

ಪೊಲೀಸ್ ಠಾಣೆಯಲ್ಲಿ ಸೀಜ್ ಮಾಡಿಟ್ಟಿದ್ದ ಎಣ್ಣೆಯನ್ನೇ ಕದ್ದ ಪೇದೆ…….

ಹೈದರಾಬಾದ್: ಲಾಕ್‍ಡೌನ್ ಅವಧಿಯಲ್ಲಿ ಮದ್ಯದಂಗಡಿಗಳಿಂದ ಸೀಜ್ ಮಾಡಿ ಪೊಲೀಸ್ ಠಾಣೆಯಲ್ಲಿ ಇಟ್ಟಿದ್ದ ಮದ್ಯವನ್ನ ಪೊಲೀಸ್ ಪೇದೆಯೇ ಕದ್ದು ಸಿಕ್ಕಿಬಿದ್ದ ಘಟನೆ ತೆಲಂಗಾಣದ ಕರೀಮ್‍ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕರೀಮ್‍ನಗರ ಜಿಲ್ಲೆಯ ಇರಡು ಟೌನ್ ಪೊಲೀಸ್ ಠಾಣೆಯಲ್ಲಿ ಮದ್ಯವನ್ನು ಸೀಜ್ ಮಾಡಿ ಇಡಲಾಗಿತ್ತು. ಲಾಕ್‍ಡೌನ್ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ಮದ್ಯ ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಹಲವು ಮದ್ಯದಂಗಡಿಗಳನ್ನು ಸೀಜ್ ಮಾಡಿ, ಅಂಗಡಿಯಲ್ಲಿದ್ದ ಮದ್ಯವನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಆದರೆ …

Read More »