ಬೀದರ್: ಕಳೆದ 23 ದಿನಗಳಿಂದ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿದ 3 ಜನ ಕೊರೊನಾ ಶಂಕಿತರ ವರದಿ ನೆಗೆಟಿವ್ ಬಂದ ಹಿನ್ನೆಲೆ ಇಂದು ಮಧ್ಯಾಹ್ನ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ದೆಹಲಿ ತಬ್ಲಿಘಿ ಜಮಾತ್ಗೆ ಹೋಗಿ ಬಂದಿದ್ದ ದುಬಲಗುಂಡಿ ಗ್ರಾಮದ ಇಬ್ಬರು ಹಾಗೂ ಹಳ್ಳಿಖೇಡ ಬಿ ಪಟ್ಟಣದ ಒಬ್ಬರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ, ಅಂಬುಲೆನ್ಸ್ ಮೂಲಕ ಅವರ ಊರುಗಳಿಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ …
Read More »ದ.ಕನ್ನಡದಲ್ಲಿ ಕೊರೊನಾಗೆ ಎರಡನೇ ಬಲಿ- ರಾಜ್ಯದಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ
ಮಂಗಳೂರು: ಹೆಮ್ಮಾರಿ ಕೊರೊನಾ ವೈರಸ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆ ಕಂಡಿದೆ. ಬಂಟ್ವಾಳದ ಕೊರೊನಾ ಸೋಂಕಿತ ಮಹಿಳೆ ಏಪ್ರಿಲ್ 19ರಂದು ಮೃತರಾಗಿದ್ದರು. ಈ ಬೆನ್ನಲ್ಲೇ ಕೊರೊನಾ ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದ ಮೃತ ಮಹಿಳೆಯ ಅತ್ತೆ ಕೂಡ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎರಡನೇ ಸಾವು ಇದಾಗಿದೆ. 75 ವರ್ಷದ ವೃದ್ಧೆ …
Read More »ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ.
ಕೊಪ್ಪಳ: ಲಾಕ್ಡೌನ್ ಶುರುವಾದಗಿನಿಂದ ಪೊಲೀಸರು ಹಗಲಿರುಳು ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೂ ಕೆಲವರು ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ. ಪೊಲೀಸರು ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಗೋಣಿ ಚೀಲದ ಪಿಪಿಇ ಕಿಟ್ ಹಾಕಿಸಿದ್ದಾರೆ. ಈ ಮೂಲಕ ಕೊಪ್ಪಳ ನಗರ ಠಾಣಾ ಪೊಲೀಸರು ವಿಭಿನ್ನ ರೀತಿಯಲ್ಲಿ ಕೊರೊನಾ ವೈರಸ್ ಜಾಗೃತಿ ಮೂಡಿಸಿದ್ದಾರೆ. ಭಾರತ ಲಾಕ್ಡೌನ್ ನಡುವೆಯೂ ವಾಹನ …
Read More »ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ.
ಬೆಂಗಳೂರು : ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಹಾಗೂ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ರಾಜ್ಯ ಸರ್ಕಾರ ಇಂದುಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ತಮ್ಮ ಜೀವನವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಗುತ್ತಿಗೆ ಆದಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗು ಸರ್ಕಾರಿ ವೈದ್ಯರು ಕಡಿಮೆ ಸಂಬಳ ಪಡೆಯಲಾಗುತ್ತಿದೆ.ವೇತನ ಹೆಚ್ಚಸಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದರು. ಇದರಿಂದ …
Read More »ಕೋವಿಡ್ 19 ಗೆದ್ದ ವ್ಹೀಲ್ಚೇರ್ನಲ್ಲಿ ಓಡಾಡೋ 92 ವರ್ಷದ ಅಜ್ಜಿ……….
ಪುಣೆ: ಇಲ್ಲಿಯವರೆಗಿನ ಪ್ರಕರಣಗಳಲ್ಲಿ ಕೋವಿಡ್ 19ಗೆ ಹೆಚ್ಚಾಗಿ ವಯಸ್ಸಾದವರೇ ಬಲಿಯಾಗಿದ್ದು, ಇತ್ತ ಪ್ರಧಾನಿ ಮೋದಿ ಕೂಡ 65 ವರ್ಷ ಮೇಲ್ಪಟ್ಟವರು ಜಾಗರೂಕರಾಗಿರಬೇಕು ಎಂದು ಸಲಹೆ ನೀಡಿದ್ದರು. ಆದರೆ ಇದೀಗ 92 ವರ್ಷದ ಅಜ್ಜಿಯೊಬ್ಬರು ಸಾವು ಗೆದ್ದು ಬೀಗಿದ್ದಾರೆ. ಹೌದು. ಪುಣೆ ಮೂಲದ ಅಜ್ಜಿ ನಾನ್ಜೆಜೆನೇರಿಯನ್ ಕೊರೊನಾ ವೈರಸ್ ಎಂಬ ಮಾರಕ ರೋಗವನ್ನು ಮೆಟ್ಟಿ ನಿಂತಿದ್ದಾರೆ. ನಾನ್ಜೆಜೆನೇರಿಯನ್ ಅವರು 7 ತಿಂಗಳ ಹಿಂದೆಯಿಂದ ಪಾರ್ಶ್ವವಾಯುಗೆ ತುತ್ತಾಗಿದ್ದರು. ಇದೀಗ ಈಕೆಯ ಜೊತೆ ಕುಟುಂಬದ …
Read More »ಮೊಬೈಲಿನಿಂದ ಹರಡುತ್ತೆ ಕೊರೊನಾ – ವೈದ್ಯಕೀಯ ಸಿಬ್ಬಂದಿಗೆ ಫೋನ್ ಬಳಕೆಗೆ ನಿಷೇಧ
ಕೋಲ್ಕತ್ತಾ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯಗಳು ಅನೇಕ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿವೆ. ಈ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವೈದ್ಯಕೀಯ ಸಿಬ್ಬಂದಿ, ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಿದೆ. ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ)ಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಕೊರೊನಾ ವೈರಸ್ ಮೊಬೈಲ್ …
Read More »ಸಾಧು-ಸಂತರ ಮೇಲೆ ಮಹಾರಾಷ್ಟ್ರದಲ್ಲಿ ನಡೆದಿರುವ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನ
ಬೆಳಗಾವಿ – – ಸಾಧು-ಸಂತರ ಮೇಲೆ ಮಹಾರಾಷ್ಟ್ರದಲ್ಲಿ ನಡೆದಿರುವ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಈ ವಿಷಯ ತಿಳಿಸಿದ್ದಾರೆ. ಮಹಾರಾಷ್ಟ್ರ ಸಿಪಿಐ ಶಾಸಕನಿಂದ ಈ ದುಷ್ಕೃತ್ಯ ನಡೆದಿದ್ದು, ಆತನನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿರುವ ಅವರು, ಶ್ರೀರಾಮ ಸೇನೆಯ ಕಾರ್ಯಕರ್ತರು ರಾಜ್ಯದ್ಯಂತ ಮನೆಯಲ್ಲೇಯ ಸಾಧು ಸಂತರ ಫೋಟೋ ಇಟ್ಟು ಪ್ರತಿಭಟನೆ ನಡೆಸಿ, ಪ್ರಧಾನಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ …
Read More »ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಬಸ್…..
ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಗಳನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ಲಕ್ಷ್ಮಣ ಸವದಿ ಅವರು ಗುರುವಾರ (ಏ.೨೩) ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದ ಬಳಿಯಲ್ಲಿ ಬಸ್ ಗಳನ್ನು ಅವರು ಹಸ್ತಾಂತರಿಸಿದರು. ಕೋವಿಡ್-೧೯ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಈ ಕ್ಲಿನಿಕ್ ಗಳನ್ನು ಬಳಸಲಾಗುವುದು ಎಂದು …
Read More »ಪಿಎಸ್ಐ ಮಹೇಂದ್ರ ನಾಯಕ್ 2.50 ಲಕ್ಷ ಮೌಲ್ಯದ ದಿನಸಿಯನ್ನು ತಮ್ಮ ಸ್ವಂತ ಹಣದಲ್ಲಿ ಠಾಣಾ ವ್ಯಾಪ್ತಿಯ ಅಸಹಾಯಕರಿಗೆ ಹಂಚಿದ್ದಾರೆ.
ಧಾರವಾಡ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಜೊತೆಗೆ ಪೊಲೀಸ್ ಇಲಾಖೆಯ ಸಿಬ್ಬಂದಿ ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮಹೇಂದ್ರ ನಾಯಕ್ 2.50 ಲಕ್ಷ ಮೌಲ್ಯದ ದಿನಸಿಯನ್ನು ತಮ್ಮ ಸ್ವಂತ ಹಣದಲ್ಲಿ ಠಾಣಾ ವ್ಯಾಪ್ತಿಯ ಅಸಹಾಯಕರಿಗೆ ಹಂಚಿದ್ದಾರೆ. ಮೂಲತಃ ವಿಜಯಪುರ ತಾಲೂಕಿನ ಐನಾಪುರ ತಾಂಡಾದ ನಿವಾಸಿಯಾದ ಪಿಎಸ್ಐ, ಬಡತನದ ಹಿನ್ನೆಲೆಯಿಂದ ಬಂದಿದ್ದರು. ಹೀಗಾಗಿ ಲಾಕ್ಡೌನ್ ಸಮಯದಲ್ಲಿ ಹಸಿದವರಿಗೆ, ಅಸಹಾಯಕರಿಗೆ ನಿತ್ಯ ನೆರವಾಗುತ್ತಿದ್ದಾರೆ. ತಮ್ಮ …
Read More »ವಾಕಿಂಗ್ ಮಾಡುತ್ತಿದ್ದವರಿಗೆ ವ್ಯಾನ್ ಹತ್ತಿ ಎಂದ ಪೊಲೀಸರು……..
ಶಿವಮೊಗ್ಗ: ವಾಕಿಂಗ್ ಹಾಗೂ ಆಟವಾಡಲು ಬಂದವರಿಗೆ ಪೊಲೀಸರು ಶಾಕ್ ಕೊಟ್ಟಿದ್ದು, ಇದ್ದಕ್ಕಿದ್ದಂತೆ ಬನ್ನಿ ವ್ಯಾನ್ ಹತ್ತಿ ಎಂದು ಕರೆದೊಯ್ದಿದ್ದಾರೆ. ನಗರದ ವಿವಿಧ ಬಡಾವಣೆಗಳಲ್ಲಿ ವಾಯುವಿಹಾರ ಮಾಡುತ್ತಿದ್ದವರನ್ನು ನಗರದ ಒಳಾಂಗಣ ಕ್ರೀಡಾಂಗಣದ ಆವರಣಕ್ಕೆ ಕರೆತಂದು ಡಿಸಿ ಶಿವಕುಮಾರ್, ಎಸ್ಪಿ ಶಾಂತರಾಜ್ ಪಾಠ ಮಾಡಿದ್ದಾರೆ. ಇನ್ನೂ ವಿಶೇಷವೆಂದರೆ ಇದಕ್ಕೂ ಮುನ್ನ ಟೀ, ಬಿಸ್ಕೆಟ್ ನೀಡಿ ಆರೈಕೆ ಮಾಡಿದ್ದಾರೆ. ವಿವಿಧ ಬಡಾವಣೆಗಳಿಂದ ಸುಮಾರು 300ಕ್ಕೂ ಹೆಚ್ಚು ಜನ ವಾಕಿಂಗ್ಗೆ ಬಂದವರಿಗೆ, ಒಂದೇ ಜಾಗದಲ್ಲಿ ಕರೆ …
Read More »
Laxmi News 24×7