ದೇಶಾದ್ಯಂತ ಕೊರೋನಾ ಸೋಂಕು ಹರಡುತ್ತಿರುವ ಹಿನ್ನಲೆ ಲಾಕ್ ಡೌನ.ಲಾಕ್ ಡೌನನಿಂದ ಬಾಲಕನ ಚಿಕಿತ್ಸೆಗಾಗಿ ವಾಹನ ಸಿಗದೆ ಕುಟುಂಬಸ್ಥರ ಪರದಾಟ.೫ ರೂಪಾಯಿ ನಾಣ್ಯ ನುಂಗಿದ ಬಾಲಕ. ಬಾಗಲಕೋಟ ಜಿಲ್ಲೆಯ ಮುಧೋಳ ತಾಲ್ಲೂಕಿನ ಸೈದಾಪೂರ ಸಮೀರವಾಡಿ ಗ್ರಾಮಸಲ್ಲಿ ಘಟನೆ.ನಾಣ್ಯ ನುಂಗಿದ ಕುತಬು ಎನ್ನುವ ಬಾಲಕ. ಅಂಬ್ಯುಲೆನ್ಸ್ ಸಿಗದೇ ಕಾರಣ ಕುಟುಂಬಸ್ಥರಲ್ಲಿ ಆತಂಕ.ಗ್ರಾಮದ ಪಂಚಾಯತ ಸದಸ್ಯ ಓಸ್ವಾಲ್ ಕಾರು ತೆಗೆದುಕೊಂಡು ಬಂದು ಬಾಲಕನನ್ನು ಆಸ್ಪತ್ರೆ ರವಾನೆ ಪೋನ ಕರೆಗೆ ತಕ್ಷಣ ನೇರವಿಗೆ ಬಂದ …
Read More »ಕೊರೊನಾ ಲಾಕ್ಡೌನ್ ಹಿನ್ನೆಲೆ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸಕ್ಕೆ ನೆಲಮಂಗಲ ಪೊಲೀಸರು
ಬೆಂಗಳೂರು: ಕೊರೊನಾ ಲಾಕ್ಡೌನ್ ಹಿನ್ನೆಲೆ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸಕ್ಕೆ ನೆಲಮಂಗಲ ಪೊಲೀಸರು ಮುಂದಾಗಿದ್ದಾರೆ. ಕರುಣೆಯ ಗೋಡೆ ಎಂಬ ನೂತನ ಯೋಜನೆಯನ್ನು ಉದ್ಘಾಟನೆ ಮಾಡಿ ಬಡ ಜೀವಗಳಿಗೆ ನೆರವಾಗಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಬಸ್ ನಿಲ್ದಾಣದ ಬಳಿ ಕರುಣೆಯ ಗೋಡೆ ಉದ್ಘಾಟಿಸಲಾಗಿದ್ದು, ತಹಶೀಲ್ದಾರ್ ಶ್ರೀನಿವಾಸಯ್ಯ, ಡಿವೈಎಸ್ಪಿ ಮೋಹನ್ ಕುಮಾರ್ ಮತ್ತು ಪಿಎಸ್ಐ ಮಂಜುನಾಥ್ರಿಂದ ಯೋಜನೆಗೆ ಚಾಲನೆ ದೊರಕಿದೆ. ಈ ಕರುಣೆಯ ಗೋಡೆಯಲ್ಲಿ ಬ್ರೆಡ್, ರಸ್ಕ್, ಬಿಸ್ಕತ್, ಹಣ್ಣುಗಳು, ನೀರಿನ …
Read More »ನಗರದ 65 ವರ್ಷದ ವೃದ್ಧ ಕೊರೊನಾಗೆ ಬಲಿಯಾದ ಬೆನ್ನಲ್ಲೇ ಈಗ ಅವರ ಮಗ ಸೇರಿ ಮೂರು ಮಂದಿಗೆ ಕೊರೊನಾ ಸೋಂಕು
ಚಿಕ್ಕಬಳ್ಳಾಪುರ: ನಗರದ 65 ವರ್ಷದ ವೃದ್ಧ ಕೊರೊನಾಗೆ ಬಲಿಯಾದ ಬೆನ್ನಲ್ಲೇ ಈಗ ಅವರ ಮಗ ಸೇರಿ ಮೂರು ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕ್ಕಬಳ್ಳಾಪುರ ನಗರದ 65 ವರ್ಷದ ವೃದ್ಧ ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟಿದ್ದರು. ಈಗ ಅವರ ಸಂಪರ್ಕದಲ್ಲಿದ್ದ ಅವರ ಕೊನೆಯ ಮಗ(26) ಹಾಗೂ ಮೃತರ ಜೊತೆ ಆತ್ಮೀಯವಾಗಿ ಸಂಪರ್ಕದಲ್ಲಿದ್ದ ಎದುರುಗಡೆ ಮನೆಯ 20 ಮತ್ತು 19 ವರ್ಷದ ಯುವಕರಿಗೆ ಸೋಂಕು ತಗುಲಿದೆ. ವೃದ್ಧ ಮೃತಪಟ್ಟ …
Read More »ಮೈಸೂರಿನಲ್ಲಿ ಒಬ್ಬನಿಂದ 11 ಮಂದಿಗೆ ಸೋಂಕು – ರಾಜ್ಯದಲ್ಲಿ ಒಂದೇ ದಿನ 38 ಮಂದಿಗೆ ಕೊರೊನಾ
ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇವತ್ತು ಒಂದೇ ದಿನ 38 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 353ಕ್ಕೆ ಏರಿಕೆ ಕಂಡಿದೆ. ಬೆಳಗ್ಗೆ ಒಟ್ಟು 38 ಜನರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಮೈಸೂರಿನಲ್ಲೇ ಇಂದು 12 ಮಂದಿಗೆ ಕೊರೊನಾ ದೃಢವಾಗಿದೆ. ಇನ್ನೂ ಬಳ್ಳಾರಿಯಲ್ಲಿ ಒಬ್ಬ ಸೋಂಕಿತನಿಂದ ಏಳು ಮಂದಿಗೆ ಕೊರೊನಾ ಬಂದಿದೆ. ಬೆಂಗಳೂರಿನಲ್ಲಿ 9 …
Read More »ವಿಶ್ವದ ಆರ್ಥಿಕತೆ 9 ಟ್ರಿಲಿಯನ್ ಡಾಲರನಷ್ಟು ಕುಸಿತ: ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್
ನವದೆಹಲಿ: ವಿಶ್ವದ ಆರ್ಥಿಕತೆ 9 ಟ್ರಿಲಿಯನ್ ಡಾಲರನಷ್ಟು ಕುಸಿತ ಕಂಡಿದ್ದು, ಭಾರತದ ಆರ್ಥಿಕತೆ ಸಧ್ಯ ಶೇ.1.9ರಷ್ಟಿದೆ ಕಳೆದ 4 ತಿಂಗಳುಗಳಿಂದ ಉತ್ಪಾದನೆ ತೀವ್ರವಾಗಿ ಕಡಿಮೆಯಾಗಿದೆ ಎಂದು ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಕ್ತಿಕಾಂತ್ ದಾಸ್, ಕೊರೊನಾ ವಿರುದ್ಧ ಹೋರಾಡಲು ಬ್ಯಾಂಕ್ ಗಳಿಗೆ ಶೇ.60ರಷ್ಟು ಹೆಚ್ಚುವರಿ ಹಣ ನೀಡಲಾಗುತ್ತಿದೆ. ರಾಜ್ಯಗಳ ಯಾವುದೇ ಬ್ಯಾಂಕ್ ಗಳಲ್ಲಿ ಹಣದ ಕೊರತೆ ಆಗಿಲ್ಲ. ಬ್ಯಾಂಕ್ ಗಳಿಗೆ ಹೆಚ್ಚುವರಿ ಹಣ …
Read More »ಲಾಕ್ಡೌನ್ ಹಿನ್ನೆಲೆಯಲ್ಲಿ ಏ.20ರಿಂದ ಓಡಾಟಕ್ಕೆ ಪಾಸ್ ಅವಶ್ಯಕತೆ ಇಲ್ಲ.: ಅಶ್ವತ್ಥನಾರಾಯಣ್
ಬೆಂಗಳೂರು, ಏ.17- ಲಾಕ್ಡೌನ್ ಹಿನ್ನೆಲೆಯಲ್ಲಿ ಏ.20ರಿಂದ ಓಡಾಟಕ್ಕೆ ಪಾಸ್ ಅವಶ್ಯಕತೆ ಇರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ. ಐಟಿ, ಬಿಟಿ ಉದ್ದಿಮೆಗಳ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಯಥಾ ಪ್ರಕಾರ ಇರುತ್ತದೆ. ಇದು ಎಷ್ಟು ದಿನ ಅನ್ನೋದು ಗೊತ್ತಿಲ್ಲ. ಹೀಗಾಗಿ ನಮ್ಮ ಎಚ್ಚರಿಕೆಯಲ್ಲಿ ನಾವು ಕೆಲಸ ಕಾರ್ಯ ಆರಂಭಿಸಬೇಕಿದೆ ಎಂದು ಹೇಳಿದ್ದಾರೆ. ಐಟಿ ನೌಕರರ ಓಡಾಟಕ್ಕೆ ಪಾಸ್ ಅಗತ್ಯ ಉದ್ಭವ …
Read More »ಬೆಂಗಳೂರಿಗರೇ ಹುಷಾರ್, ಹೊಸಬರಿಗೆ ಮನೆ ಬಾಡಿಗೆ ಕೊಡಬೇಡಿ..!
ಬೆಂಗಳೂರು,ಏ.17-ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ತಡೆಗಟ್ಟಲು ಮುಂದಾಗಿರುವ ಬಿಬಿಎಂಪಿ ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಕೊರೊನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುವ ಕೆಲವು ವ್ಯಕ್ತಿಗಳು ಮನೆ ಖಾಲಿ ಮಾಡಿಕೊಂಡು ಬೇರೆ ವಾರ್ಡ್ಗಳಿಗೆ ತೆರಳುತ್ತಿರುವುದು ಸಾಬೀತಾದ ನಂತರ ಬಿಬಿಎಂಪಿ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಹೊಸಬರು ಮನೆ ಕೇಳಿಕೊಂಡು ಬಂದರೆ ಬಾಡಿಗೆ ನೀಡಬೇಡಿ. ಒಂದು ವೇಳೆ ನಿಮ್ಮ ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ …
Read More »ಮೈಸೂರು:ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢ ಸ್ಟ್ರಿಕ್ಟ್ ರೂಲ್ಸ್ ಜಾರಿ
ಮೈಸೂರು: ಜಿಲ್ಲೆಯಲ್ಲಿ ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದ್ದು, ಈ ಮೂಲಕ ಮೈಸೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 61ಕ್ಕೇರಿದೆ. ಹೀಗಾಗಿ ಇಂದಿನಿಂದ ಸ್ಟ್ರಿಕ್ಟ್ ರೂಲ್ಸ್ ಜಾರಿಯಾಗುತ್ತಿದೆ. ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ಹಾಟ್ಸ್ಪಾಟ್ಗಳ ಪಟ್ಟಿಯಲ್ಲಿ ಮೈಸೂರು ಕೂಡ ಇದೆ. ಈಗಾಗಲೇ ನಂಜನಗೂಡಿನ ಔಷಧಿ ಕಂಪನಿ ನೌಕರನಿಂದಾಗಿ ಇಡೀ ಮೈಸೂರು ರೆಡ್ಝೋನ್ನಲ್ಲಿದೆ. 12 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ ಅನ್ನೋ ಸಮಾಧಾನ ಮೂಡಿದ ಬೆನ್ನಲ್ಲೇ …
Read More »55 ಸಾವಿರ ಕುಟುಂಬಗಳಿಗೆ ದಿನಸಿ, ತರಕಾರಿ ವಿತರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ
ಕೋಲಾರ: ಜಿಲ್ಲೆಯ ಮಾಲೂರಲ್ಲಿ 55 ಸಾವಿರ ಕುಟುಂಬಗಳಿಗೆ ದಿನಸಿ, ತರಕಾರಿ ವಿತರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಅಲ್ಲದೆ ರೈತರ ತೋಟಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿ, ಧೈರ್ಯ ತುಂಬಿದರು. ಸಂಕಷ್ಟದಲ್ಲಿರುವ ರೈತರ ತೋಟಗಳಿಗೆ ಭೇಟಿ ನೀಡಿ ರೈತರ ಸಂಕಷ್ಟ ಕೇಳುವುದರ ಜೊತೆಗೆ ಅವರು ಬೆಳೆದಿರುವ ತರಕಾರಿ ಖರೀದಿ ಮಾಡಿ ಜನರಿಗೆ ಹಂಚಲು ಕಾಂಗ್ರೆಸ್ ಮುಂದಾಗಿದೆ. ಎಲೆಕೋಸು, ಕ್ಯಾರೆಟ್, ಟೊಮ್ಯಾಟೋ, ಕ್ಯಾಪ್ಸಿಕಂ ತೋಟಗಳಿಗೆ ಡಿಕೆಶಿ ಭೇಟಿ ನೀಡಿದರು. ಅಲ್ಲದೆ …
Read More »ಕೊರೊನಾ ಪೋಸ್ಟ್ಗಳಿಗೆ ಲೈಕ್, ಕಾಮೆಂಟ್ ಮಾಡೋ ಮುನ್ನ ಹುಷಾರ್
ನವದೆಹಲಿ: ಕೊರೊನಾ ಬಗ್ಗೆ ಸತ್ಯವಲ್ಲದ ಸುದ್ದಿಗಳನ್ನು ಲೈಕ್, ಕಮೆಂಟ್ ಮಾಡುವ ಮುನ್ನ ಎಚ್ಚರವಾಗಿರಿ. ಯಾಕೆಂದರೆ ಸತ್ಯವಲ್ಲದ ಮಾಹಿತಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ದೊಡ್ಡ ಸುದ್ದಿ ಮಾಡುತ್ತಿದೆ. ಸೋಶಿಯಲ್ ಮಿಡಿಯಾಗಳನ್ನ ಓಪನ್ ಮಾಡಿದರೆ ಸಾಕು ಕೊರೊನಾ ಬಗ್ಗೆ ಅನೇಕ ಪೋಸ್ಟ್ಗಳು ಫೇಸ್ಬುಕ್, ವ್ಯಾಟ್ಸಪ್ ಇನ್ಸ್ಟ್ರಾಗ್ರಾಂನಲ್ಲಿ ಬರುತ್ತಿವೆ. ಹೀಗೆ ಬರುವ ಸುದ್ದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪು ಮಾಹಿತಿ ಶೇರ್ ಆಗುತ್ತಿದೆಯಂತೆ. ಹೀಗೆ ಸತ್ಯವಲ್ಲದ ಮಾಹಿತಿ …
Read More »
Laxmi News 24×7