ಮನೆ ಅಂಗಳದಲ್ಲೇ ಹೋಳೆಯಂತೆ ತುಂಬಿದ ಚರಂಡಿ ನೀರು. ಗಬ್ಬು ನಾತಕ್ಕೆ ಗ್ರಾ.ಪಂ.ನಾಕರ ರೊಚ್ಚಿಗೆದ್ದ ಗ್ರಾಮಸ್ಥರು. ರೋಗಕ್ಕೆ ಕೈ ಬೀಸಿ ಕರೆಯುತ್ತೀರುವ ಗ್ರಾ.ಪಂ ಅಧಿಕಾರಿ. ರೋಗಕ್ಕೆ ಕೈ ಬೀಸಿ ಕರೆಯುತ್ತೀರುವ ಗ್ರಾ.ಪಂ ಅಧಿಕಾರಿ. ಪಿಡಿಒ ನಿರ್ಲಕ್ಷ್ಯಕ್ಕೆ ಗ್ರಾಮದಲ್ಲಿ ಹೋಳೆ ಹರಿದ ಚರಂಡಿ ನೀರು. ಸೊಳ್ಳೆ, ನೊಣ,ತಿಗಣಿ ಕಾಟಕ್ಕೆ ಗ್ರಾಮಸ್ಥರಿಗಿಲ್ಲ ನಿದ್ದೆ. ಯಾದಗೀರಿ ಜಿಲ್ಲೆಯ ಎಮ್ ಹೊಸಳ್ಳಿ ಗ್ರಾಮದಲ್ಲಿ ದುರ್ನಾತ. ಭಯಾನಕ ಕರೋನ ರೋಗಕ್ಕೆ ಭಯಪಟ್ಟ ಗ್ರಾಮಸ್ಥರು. ಮನೆಗೆ ನುಗ್ಗಿದ ಚರಂಡಿ ನೀರು …
Read More »ರಾಮನಗರದ ತೋಟದ ಮನೆಯಲ್ಲಿ ನಿಖಿಲ್-ರೇವತಿ ಸಿಂಪಲ್ ಮದುವೆ ……
ಬೆಂಗಳೂರು,ಏ.16-ಸ್ಯಾಂಡಲ್ ವುಡ್ ನ ಯುವರಾಜ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ವಿವಾಹ ಮಹೋತ್ಸವದ ಅಂಗವಾಗಿ ಇಂದು ಅರಿಶಿಣ ಶಾಸ್ತ್ರ ಅವರವರ ನಿವಾಸದಲ್ಲಿ ನಡೆಯಲಿದೆ. ಮೊದಲು ರಾಮನಗರ ಚನ್ನಪಟ್ಟಣ ಮಧ್ಯೆ ಬೃಹತ್ ವೇದಿಕೆಯಲ್ಲಿ ವಿವಾಹ ನಡೆಸಲು ನಿರ್ಧಾರವಾಗಿತ್ತು. ತದನಂತರ ಕೊರೋನಾ ಹಾವಳಿಯಿಂದ ಸಮಸ್ಯೆ ಎದುರಾಗುತ್ತದೆ ಎಂದು ಅರಮನೆ ಮೈದಾನದ ಒಳಗೆ ನಿಗದಿ ಮಾಡಲಾಯಿತು. ಆದರೂ ಅದೂ ಬೇಡವೆಂದು ವಧುವಿನ ಸ್ವಗೃಹದಲ್ಲಿ ವಿವಾಹ ಎಂದು ನಿಶ್ಚಯವಾಗಿತ್ತು. ಇವೆಲ್ಲವೂ ಒಂದು ಕಡೆಯಾದರೆ ಕೊನೆಗೂ …
Read More »ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢ
ಬೆಳಗಾವಿ – ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 36ಕ್ಕೆ ಏರಿದಂತಾಗಿದೆ. ಹಿರೇಬಾಗೇವಾಡಿಯ 8, ರಾಯಬಾಗದ 7 ಜನರಿಗೆ ಸೋಂಕಿರುವುದು ಇಂದು ದೃಢಪಟ್ಟಿದೆ. ಇವರೆಲ್ಲ ನಿಜಾಮುದ್ದೀನ್ ಧರ್ಮಸಭೆಗೆ ಹಾಜರಾಗಿ ಹಿಂದಿರುಗಿದವರ ಜೊತೆ ಸಂಪರ್ಕಕ್ಕೆ ಬಂದಿದ್ದರು ಎಂದು ಗೊತ್ತಾಗಿದೆ. ಹಿರೇಬಾಗೇವಾಡಿಯಲ್ಲಿ 6 ಮಹಿಳೆಯರಿಗೆ ಸೋಂಕು ತಗುಲಿದೆ. ಚಿಕ್ಕೋಡಿಯ ಒಬ್ಬರಿಗೆ, ಬೆಳಗಾವಿಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ಒಂದೇ ದಿನ …
Read More »ಪಿಜ್ಜಾ ಡೆಲಿವರಿ ಮಾಡುವ ಡೆಲಿವರಿ ಬಾಯ್ಗೆ ಕೊರೊನಾ ಸೋಂಕು ದೃಢ……
ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಹೆಸರಾಂತ ಪಿಜ್ಜಾ ಡೆಲಿವರಿ ಮಾಡುವ ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ಡೆಲಿವರಿ ಬಾಯ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಯುವಕನ ಸಂಪರ್ಕದಲ್ಲಿದ್ದ ಸಹೋದ್ಯೊಗಿಗಳು ಹಾಗೂ ಪಿಜ್ಜಾ ಡೆಲಿವರಿ ಪಡೆದಿದ್ದ 72 ಕುಟುಂಬಗಳನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಬುಧವಾರ ದಕ್ಷಿಣ ದೆಹಲಿಯ ಡಿಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಲ್ವಿಯಾ ನಗರದಲ್ಲಿ ಇರುವ ಪಿಜ್ಜಾ ಡೆಲಿವರಿ ಮಾಡುವ ರೆಸ್ಟೋರೆಂಟ್ನಲ್ಲಿ ಡೆಲಿವರಿ ಬಾಯ್ ಕರ್ತವ್ಯ ನಿರ್ವಹಿಸುತ್ತಿದ್ದನು. ಈತನಿಗೆ ಕೊರೊನಾ ಸೋಂಕು ತಗುಲಿರುವುದು …
Read More »ಒಂದೇ ದಿನ ರಾಜ್ಯದಲ್ಲಿ ಅತಿ ಹೆಚ್ಚು 34 ಮಂದಿಗೆ ಕೊರೊನಾ……….
ಕರ್ನಾಟಕದಲ್ಲಿ ಸೊಂಕಿತರ ಸಂಖ್ಯೆ 313ಕ್ಕೆ ಏರಿಕೆ – ಬೆಳಗಾವಿಯಲ್ಲಿ ಒಟ್ಟು 36, ಮೈಸೂರಿನಲ್ಲಿ 61ಕ್ಕೆ ಏರಿಕೆ ಒಂದೇ ದಿನ ರಾಜ್ಯದಲ್ಲಿ ಅತಿ ಹೆಚ್ಚು 34 ಮಂದಿಗೆ ಕೊರೊನಾ ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಅತಿ ಹೆಚ್ಚು 34 ಪ್ರಕರಣಗಳು ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 12, ವಿಜಯಪುರದಲ್ಲಿ 7, ಬೆಂಗಳೂರು 5, ಮೈಸೂರು 3, ಕಲಬುರಗಿ, ಗದಗ್ ಜಿಲ್ಲೆಯಲ್ಲಿ ಒಂದೊಂದು ಪ್ರಕರಣ …
Read More »ರಸ್ತೆ ಮಧ್ಯೆಯೇ ಆಟೋ ತಡೆದ ಪೊಲೀಸ್ರು- ತಂದೆಯನ್ನು ಎತ್ತಿಕೊಂಡೇ ನಡೆದ ಮಗ
ತಿರುವನಂತಪುರಂ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಮಾಡಲಾಗಿದ್ದ ಲಾಕ್ ಡೌನ್ ಅನ್ನು ಮೇ.3ರವರೆಗೆ ವಿಸ್ತರಿಸಲಾಗಿದೆ. ಈ ಮಧ್ಯೆ ಕೆಲವೊಂದು ಮನಕಲಕುವ ಘಟನೆಗಳು ನಡೆದಿವೆ. ಇದಕ್ಕೆ ಕೇರಳದಲ್ಲಿ ನಡೆದ ಒಂದು ಘಟನೆಯೇ ಸಾಕ್ಷಿ. ಹೌದು. ಆಸ್ಪತ್ರೆಯಿಂಂದ ಡಿಸ್ಚಾರ್ಜ್ ಆದ ವ್ಯಕ್ತಿ ಮನೆಗೆ ವಾಪಸ್ ಹೋಗುತ್ತಿದ್ದಾಗ ಪೊಲೀಸರು ಆಟೋ ತಡೆದಿದ್ದಾರೆ. ಇದರಿಂದಾಗಿ ತಂದೆಯನ್ನು ಮಗನೇ ಎತ್ತಿಕೊಂಡು ಹೋಗಿ ಮನೆ ತಲುಪಿದ ಘಟನೆಯೊಂದು ಬೆಳಕಿಗೆ ಬಂದಿದೆ. ಕೊಲ್ಲಂ ಸಮೀಪದ 65 ವರ್ಷದ ವೃದ್ಧ ಅನಾರೋಗ್ಯದಿಂದಾಗಿ …
Read More »ಇಂದು ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ ಪಡೆದುಕೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆತಿಹೆಚ್ಚು ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು, ಬೆಂಗಳೂರು ಕೊರೊನಾ ಹಾಟ್ ಸ್ಪಾಟ್ ಎಂದು ಈಗಾಗಲೇ ಘೋಷಿಸಲಗಿದೆ. ಎಷ್ಟೇ ಮುಂಜಾಗೃತ ಕ್ರಮಗಳನ್ನು ಕೈಗೊಂಡರೂ ಕೂಡ ಕೊರೊನ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಇಂದು ಬೆಂಗಳೂರಿನಲ್ಲಿ 66 ವರ್ಷದ ವ್ಯಕ್ತಿಯೊಬ್ಬರು …
Read More »ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ರಬಕವಿಯಲ್ಲಿ ವಶಪಡಿಸಿಕೊಂಡಿದ್ದಾರೆ
ರಬಕವಿ -ಪಡಿತರ ದಾಸ್ತಾನನ್ನು ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಬಾಗಲಕೋಟ ರಬಕವಿ-ಬನಹಟ್ಟಿ ತಾಲ್ಲೂಕಿನ ರಬಕವಿಯಲ್ಲಿ ವಶಪಡಿಸಿಕೊಂಡಿದ್ದಾರೆ.ರಬಕವಿ ಬನಹಟ್ಟಿ ತಹಶೀಲ್ದಾರ ಪ್ರಶಾಂತ ಚನಗೋಂಡ ನೇತೃತ್ವದಲ್ಲಿ ದಾಳಿ ನಡೆಸಿ ಲಾರಿ ವಶಕ್ಕೆ ಪಡೆಯಲಾಗಿದೆ. ಹೌದು ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದು ಜನ್ರು ಪಡಿತರ ಧಾನ್ಯ ಸಿಗದೆ ಪರದಾಡುವಂತಾಗಿದೆ .ಆದ್ರೆ.ರಬಕವಿ ಬನಹಟ್ಟಿಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯ ಸಂಗ್ರಹಿಸಿ ರಬಕವಿಯಿಂದ ಮಹಾರಾಷ್ಟ್ರ ಕ್ಕೆ ಸಾಗಾಟ ಮಾಡುವ ವೇಳೆ ದಾಳಿ ಮಾಡಿ ಲಾರಿ …
Read More »ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಕಾರಣ, ‘ನಾಗರಿಕರು ತಮ್ಮ ಬಾಲ್ಕನಿಗಳಲ್ಲಿ ಭಾನುವಾರ (ಏ.12) ಸಂಜೆ 5 ಗಂಟೆಗೆ ನಿಂತು ಗೌರವದಿಂದ ನಮ್ಮ ಪ್ರಧಾನಿಗೆ ನಮಸ್ಕರಿಸಬೇಕು. ಈ ಮನುಷ್ಯ …
Read More »ಅಯ್ಯೋ… ದೇವರೇ…ಬಯಲಲ್ಲಿ ಬೀಸಾಡಿದ್ದ ಬಾಳೆಹಣ್ಣು ತಿಂದು ಹೊಟ್ಟೆ ತುಂಬಿಸಿಕೊಂಡ ವಲಸೆ ಕಾರ್ಮಿಕರು!
ಲಾಕ್ಡೌನ್ ವಿಸ್ತರಣೆಯಾಗಿರುವುದು ಕೊರೊನಾ ವೈರಸ್ ನಿಯಂತ್ರಣ ಮಾಡುವ ಹಾದಿಯಲ್ಲಿ ಒಳ್ಳೆಯ ನಿರ್ಧಾರವಾದರೂ, ವಲಸೆ ಕಾರ್ಮಿಕರ ಪಾಲಿಗೆ ಉಸಿರುಗಟ್ಟಿದ ಪರಿಸ್ಥಿತಿಯನ್ನು ಹುಟ್ಟು ಹಾಕಿದೆ. ಬುಧವಾರ ಮಧ್ಯಾಹ್ನ ರಾಜಧಾನಿ ಹೊಸದಿಲ್ಲಿಯಲ್ಲಿ ಕಂಡುಬಂದ ಮನಕುಲಕುವ ದೃಶ್ಯವೇ ಇದಕ್ಕೆ ಸಾಕ್ಷಿ ಎಂದು ಹೇಳಬಹುದು. ರಾಜಧಾನಿಯ ಪ್ರಮುಖ ಶವಾಗಾರಗಳಲ್ಲಿ ಒಂದಾದ ನಿಗಂಬೋಧ್ ಘಾಟ್ ಬಳಿ ಸತ್ತವರ ಆಚರಣೆಗಳಿಗಾಗಿ ಸಂಗ್ರಹಿಸಲಾಗಿದ್ದ ಬಾಳೆ ಹಣ್ಣುಗಳನ್ನು ಯಮುನಾ ನದಿ ದಡದಲ್ಲಿ ಎಸೆಯಲಾಗಿತ್ತು. ಇದನ್ನು ಕಂಡ ವಲಸೆ ಕಾರ್ಮಿಕರು, ಹಸಿವು ತಾಳಲಾರದೆ ಬಾಳೆ …
Read More »
Laxmi News 24×7