ಬೆಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ (93) ಅವರು ನಿಧನರಾಗಿದ್ದಾರೆ. ಎಂ.ವಿ.ರಾಜಶೇಖರನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಎಂ.ವಿ.ರಾಜಶೇಖರನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಅವರು ಪತ್ನಿ ಗಿರಿಜಾ ರಾಜಶೇಖರನ್, ಇಬ್ಬರು ಗಂಡು ಮತ್ತು ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ. ಕೃಷಿಕ ಮತ್ತು …
Read More »“ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ”
“ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ” ನಿಪ್ಪಾಣಿ ಮತಕ್ಷೇತ್ರದ ಆಡಿ ಗ್ರಾಮಕ್ಕೆ ಭೇಟಿ ನೀಡಿ, ಕೊರೋನಾ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡು ವಿವಿಧ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೊರೋನಾ ತಡೆಗಟ್ಟಲು ಕೈಗೊಳ್ಳುತ್ತಿರುವ ಕ್ರಮಗಳ ಕುರಿತು …
Read More »ದಿಸ್ಪುರ್:ಮದ್ಯಪ್ರಿಯರಿಗೆ ಗುಡ್ನ್ಯೂಸ್ – ಇಂದಿನಿಂದ ಬಾರ್ಗಳು ಓಪನ್
ದಿಸ್ಪುರ್: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್ಡೌನ್ ಆಗಿದೆ. ಈ ನಡುವೆ ಮದ್ಯ ಪ್ರಿಯರು ಅಂಗಡಿ ಓವನ್ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದರು. ಇದೀಗ ಲಾಕ್ಡೌನ್ ನಡುವೆಯೇ ಅಸ್ಸಾಂ ಮತ್ತು ಮೇಘಾಲಯದ ಮದ್ಯದಂಗಡಿಗಳು ಇಂದಿನಿಂದ ಮತ್ತೆ ತೆರೆಯಲು ನಿರ್ಧರಿಸಿವೆ ಎಂದು ಉಭಯ ರಾಜ್ಯಗಳ ಅಬಕಾರಿ ಇಲಾಖೆಗಳು ತಿಳಿಸಿವೆ. ಅಸ್ಸಾಂನಲ್ಲಿ, ಮದ್ಯದಂಗಡಿಗಳು, ಸಗಟು ಗೋದಾಮುಗಳು ಮತ್ತು ಸಾರಾಯಿ ಮಳಿಗೆಗಳು ಸೇರಿದಂತೆ ಲಿಕ್ಕರ್ ಶಾಪ್ ಇಂದಿನಿಂದ ಪ್ರತಿದಿನ 7 ಗಂಟೆಗಳ ಕಾಲ …
Read More »ಕ್ವಾರಂಟೈನ್ ಸೇವೆ ನೀಡಿದ ಪ್ರಪ್ರಥಮ NIMA ವೈದ್ಯ
ಹುಬ್ಬಳ್ಳಿ: ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ (NIMA) ಸಂಸ್ಥೆಯ ಹಿರಿಯ ಸದಸ್ಯರಾದ ಡಾ.ಗುರುನಾಥ ಕಂಠಿಯವರು ಏಪ್ರಿಲ್ 4ರಂದು ಹುಬ್ಬಳ್ಳಿಯ ಕ್ವಾರಂಟೈನ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಮೂಲಕ ಕ್ವಾರಂಟೈನ್ ಸೇವೆ ಸಲ್ಲಿಸಿದ ಧಾರವಾಡ ಜಿಲ್ಲೆಯ ಪ್ರಪ್ರಥಮ NIMA ವೈದ್ಯಕೀಯ ಸಂಸ್ಥೆಯ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಯುರ್ವೇದ ವೈದ್ಯರುಗಳಾದ ಡಾ.ಗುರುನಾಥ ಕಂಠಿ, ಡಾ.ಎನ್.ಎನ್.ಭರದ್ವಾಡ ಮತ್ತು ಡಾ.ಎಂ.ಸಿ.ಪಾಟೀಲ್ ಇವರು ಮಾರ್ಚ್ 9 ರಂದು ಕೊವಿಡ್-19 ಸೇವೆಗಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ವೊಂದರ ಕ್ವಾರಂಟೈನ್ …
Read More »ಕಾರ್ಮಿಕರ ಊಟದಲ್ಲಿಯೂ ರಾಜಕೀಯ : ತನಿಖೆಗೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು : ಬೆಂಗಳೂರು ನಗರದಲ್ಲಿ ಕಾರ್ಮಿಕರಿಗೆ ಸಿದ್ದ ಆಹಾರ ಮತ್ತು ಆಹಾರ ಸಾಮಾಗ್ರಿಗಳನ್ನು ವಿತರಿಸುವ ಕಾರ್ಮಿಕ ಇಲಾಖೆಯ ಯೋಜನೆಯನ್ನು ಬಿಜೆಪಿ ರಾಜಕೀಯವಾಗಿ ದುರುಪಯೋಗಗೊಳಿಸುತ್ತಿದ್ದು ಪಾರದರ್ಶಕತೆ ಇಲ್ಲದೆ ನಡೆಯುತ್ತಿರುವ ಈ ಯೋಜನೆಯ ಬಗೆಗಿನ ದೂರುಗಳ ಬಗ್ಗೆ ತನಿಖೆ ನಡೆಸಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಒತ್ತಾಯಿಸಿದ್ದಾರೆ. ಕಟ್ಟಡ ನಿರ್ಮಾಣ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ನಿಧಿಯಿಂದ ನೀಡಲಾಗುತ್ತಿರುವ ಆಹಾರದ ಪೊಟ್ಟಣಗಳನ್ನು ಬಿಜೆಪಿ …
Read More »ಅನುಪಮಾ ಪರಮೇಶ್ವರನ್ ಎಫ್ಬಿ ಹ್ಯಾಕ್, ಫೋಟೋ ಮಾರ್ಫ್- ಗರಂ ಆದ ನಟಸಾರ್ವಭೌಮ ಬೆಡಗಿ
ಬೆಂಗಳೂರು: ಸಿನಿಮಾ ತಾರೆಯ ಫೋಟೋಗಳನ್ನು ಎಡಿಟ್ ಮಾಡಿ ವಿಕೃತಗೊಳಿಸುವುದನ್ನು ಕಿಡಿಗೇಡಿಗಳು ಮಾಡುತ್ತಲೇ ಇರುತ್ತಾರೆ. ಇದಕ್ಕಾಗಿ ಹಲವು ನಟಿಯರು ಮುಜುಗರಕ್ಕೆ ಈಡಾಗಿರುವುದೂ ಉಂಟು. ಇದೀಗ ನಟ ಸಾರ್ವಭೌಮ ಬೆಡಗಿ ಸಹ ಇಂತಹದ್ದೇ ಕಷ್ಟಕ್ಕೆ ಸಿಲುಕಿಕೊಂಡಿದ್ದು, ಬೇರೆ ಯುವತಿಯ ದೇಹಕ್ಕೆ ಅನುಪಮಾ ಪರಮೇಶ್ವರನ್ ಮುಖವನ್ನು ಜೋಡಿಸಲಾಗಿದೆ ಇದನ್ನು ಕಂಡ ಅವರು ಆಶ್ಚರ್ಯಕ್ಕೊಳಗಾಗಿದ್ದಾರೆ. ಇಂಟರ್ನೆಟ್ ಜಾಲಾಡಿದರೆ ನೈಜ ಫೋಟೋಗಳಿಗಿಂತ ಫೇಕ್, ಎಡಿಟೆಡ್, ಮಾರ್ಫ್ ಮಾಡಿದ ಫೋಟೋಗಳು ಕಾಣುವುದೇ ಹೆಚ್ಚು. ಅದರಲ್ಲೂ ನಟ, ನಟಿಯರ ಫೋಟೋಗಳನ್ನು …
Read More »ಚಿಕ್ಕಮಗಳೂರು:ಮಲೆನಾಡಲ್ಲಿ ಮಳೆ ಅಬ್ಬರ- ಬೃಹತ್ ಗಾತ್ರದ ಆಲಿಕಲ್ಲು ಪತ್ತೆ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾನುವಾರ ಜಿಲ್ಲೆಯ ಮೂಡಿಗೆರೆ ಹಾಗೂ ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗಿದರೆ ಕೊಪ್ಪ ಹಾಗೂ ಎನ್.ಆರ್.ಪುರದಲ್ಲಿ ಸಾಧಾರಣ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕಳಸ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಆಲಿಕಲ್ಲು ಸಮೇತ ವರುಣ ಅಬ್ಬರಿಸಿದ್ದಾನೆ. ಬೃಹತ್ ಗಾತ್ರದ ಆಲಿಕಲ್ಲನ್ನು ಹಿಡಿದು ಯುವಕರು ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟಿದ್ದಾರೆ. ಇತ್ತ ಶೃಂಗೇರಿಯ ಸುತ್ತಮುತ್ತಲೂ ಭಾರೀ ಮಳೆಯಾಗಿದೆ. ಮಳೆ ದೇವರೆಂದೇ ಖ್ಯಾತಿಯಾಗಿರುವ ಕಿಗ್ಗಾದ ಋಷ್ಯಶೃಂಗ …
Read More »ಇನ್ಫೋಸಿಸ್ ಫೌಂಡೇಶನ್ನಿಂದ 220ಕ್ಕೂ ಅಧಿಕ ಕಾರ್ಮಿಕರಿಗೆ ಆಹಾರದ ಕಿಟ್
ಹುಬ್ಬಳ್ಳಿ: ಸುಧಾಮೂರ್ತಿ ಅವರ ಇನ್ಫೋಸಿಸ್ ಫೌಂಡೇಶನ್ ನೀಡಿರುವ ಆಹಾರ ಧಾನ್ಯಗಳ ಕಿಟ್ಗಳನ್ನು ಭಾನುವಾರ 220ಕ್ಕೂ ಹೆಚ್ಚು ಕಾರ್ಮಿಕರಿಗೆ ವಿತರಿಸಲಾಯಿತು. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿನ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್ಸಿಎಫ್ಸಿ) 8 ಗೋದಾಮುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 220ಕ್ಕೂ ಹೆಚ್ಚು ಕಾರ್ಮಿಕರು, ಲಾರಿ ಚಾಲಕರು, ಕ್ಲೀನರ್ಗಳಿಗೆ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಇಸ್ಕಾನ್ನ ಸಾಯಿನಾಥ್ ವಿತರಿಸಿದರು ಇನ್ಫೋಸಿಸ್ ಫೌಂಡೇಶನ್ ನೀಡಿರುವ ಆಹಾರ ಧಾನ್ಯಗಳ ಪ್ರತಿ ಕಿಟ್ನಲ್ಲಿ 5 ಕೆ.ಜಿ. ಅಕ್ಕಿ, …
Read More »ರಾಯಬಾಗದ ಕ್ಯಾನ್ಸರ್ ಪೀಡಿತ ಮಹಿಳೆ ಸಮಸ್ಯೆಗೆ ತುರ್ತು ಸ್ಪಂದನೆ: ಬಿ.ಎಸ್.ಯಡಿಯೂರಪ್
ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಕ್ಯಾನ್ಸರ್ ರೋಗಿಯೊಬ್ಬರಿಗೆ ವ್ಯವಸ್ಥೆಯಾಗಿದ್ದ ಆಪರೇಶನ್ ರದ್ದಾಗಿತ್ತು. ಈ ಕುರಿತು ರೋಗಿಯ ಸಂಬಂಧಿಯೊಬ್ಬರಿಂದ ಬಂದ ಮಾಹಿತಿ ಆಧರಿಸಿ ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸೋಮವಾರವೇ ಆಪರೇಶನ್ ಗೆ ವ್ಯವಸ್ಥೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಶಿರಗೂರ ಗ್ರಾಮದ ಬಾಹುಸಾಬ ಲಕ್ಷ್ಮಣ್ ಕಾಂಬಳೆ ಎನ್ನುವವರು ಮುಖ್ಯಮಂತ್ರಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದರು. “ನಮ್ಮ ಮನೆಯ ಹಿರಿಯ ಮಹಿಳೆ ಕಮಲವ್ವ ಹಿಡಕಲ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾಳೆ. …
Read More »ಲಾಕ್ಡೌನ್ ಎಫೆಕ್ಟ್: ಮಗುವಿಗೆ ಚಿಕಿತ್ಸೆ ಕೊಡಿಸಲಾಗದೆ ಪೋಷಕರ ಪರದಾಟ
ಚಾಮರಾಜನಗರ: ಲಾಕ್ಡೌನ್ ಪರಿಣಾಮ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗದೆ ಹೆತ್ತವರು ಸಂಕಟ ಪಡುತ್ತಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ನಡೆದಿದೆ. ಕೂಲಿಗಾಗಿ ಬಂದ ಧಾರವಾಡ ಮೂಲದ 14 ವಲಸೆ ಕಾರ್ಮಿಕರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರ ಕಷ್ಟ ಹೇಳತೀರದಾಗಿದೆ. ಈ ಪೈಕಿ ಗುರುನಾಥ್ ಮತ್ತು ತುಳಸಮ್ಮನ ಅವರ ಚಿಕ್ಕ ಮಗುವಿನ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ ಹೆತ್ತವರು ಒದ್ದಾಡುತ್ತಿದ್ದಾರೆ. ಗುರುನಾಥ್ ದಂಪತಿ ಧಾರವಾಡ ಜಿಲ್ಲೆ ಕುಂಬಾರಕೊಪ್ಪ ಗ್ರಾಮದವರಾಗಿದ್ದು, ಕೊಳ್ಳೇಗಾಲದ ಚೆಸ್ಕಾಂ ಕಟ್ಟಡ ನಿರ್ಮಾಣಕ್ಕೆ ಬಂದಿದ್ದಾರೆ. …
Read More »
Laxmi News 24×7