ಮೇಷ: ಸಾರ್ವಜನಿಕ ರಂಗದಲ್ಲಿ ದುಡಿಯುವ ವ್ಯಕ್ತಿಗಳಿಗೆ ಮಹತ್ವದ ಜವಾಬ್ದಾರಿ. ಏಕಕಾಲದಲ್ಲಿ ಅನೇಕ ಕಾರ್ಯಗಳ ನಿರ್ವಹಣೆ ಸಂಭವ. ಪರ್ಯಾಯ ಚಿಕಿತ್ಸೆಯಿಂದ ಹಳೆಯ ಸಮಸ್ಯೆಗೆ ಪರಿಹಾರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ವೃಷಭ: ಎಡ- ಬಲ ಗಮನಿಸಿ ಎಚ್ಚರಿಕೆಯಿಂದ ಮುಂದುವರಿದರೆ ಯಶಸ್ಸು. ಉದ್ಯೋಗಸ್ಥರಿಗೆ ಪ್ರಗತಿ ಸ್ಥಿರ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಕೈಸೇರಿ ಸಮಾಧಾನ. ಮನೆಯಲ್ಲಿ ಎಲ್ಲರ ಆರೋಗ್ಯ ಸಮಾಧಾನಕರ. ನೂತನ ವಾಹನ ಖರೀದಿಗೆ ಚಿಂತನೆ. ಮಿಥುನ: ದಿಟ್ಟ ನಿರ್ಧಾರದಿಂದ ಮುನ್ನಡೆದರೆ ಯಶಸ್ಸು ಖಂಡಿತ. ಎಂತಹ …
Read More »ರಾಜಕಾರಣಕ್ಕೆ: ಪ್ರತಾಪ್ ಸಿಂಹ
ಬೆಂಗಳೂರು: ಕೊಡಗು- ಮೈಸೂರು ಸಂಸದ ರಾಗಿದ್ದ ಪ್ರತಾಪ್ ಸಿಂಹ ರಾಜ್ಯ ರಾಜಕಾರಣಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದು, ಮುಂದಿನ ದಿನ ಗಳಲ್ಲಿ ಅಧಿಕೃತವಾಗಿ ವಿಧಾನಸಭೆ ಪ್ರವೇಶಿಸುವುದಾಗಿಯೂ ತಿಳಿಸಿದ್ದಾರೆ. “ಉದಯವಾಣಿ’ಯ “ನೇರಾನೇರ’ ಸಂದರ್ಶನದ ವೇಳೆ ಈ ಕುರಿತು ಮುಕ್ತವಾಗಿ ಮಾತ ನಾಡಿರುವ ಪ್ರತಾಪ್, “ನಾನೀಗ ಸದ್ಯಕ್ಕೆ ವಿಧಾನಸೌಧದಲ್ಲಿ ಇಲ್ಲದಿರಬಹುದು. ಆದರೆ ರಾಜ್ಯ ರಾಜ ಕಾರಣದಲ್ಲೇ ಇದ್ದೇನೆ’ ಎಂದಿದ್ದಾರೆ. “ಇತ್ತೀಚೆಗೆ ರಾಜ್ಯದ ವಿಷಯಗಳ ಬಗ್ಗೆ ತಾರ್ಕಿಕವಾಗಿ ಹಾಗೂ ಪ್ರಬಲವಾಗಿ ಮಾತ ನಾಡುತ್ತಿದ್ದೇನೆ. ಮೊದಲು ರಾಜ್ಯದ ಬಗ್ಗೆ ನಾನು ಮಾತನಾಡುತ್ತಿರಲಿಲ್ಲ. ಈಗಾಗಲೇ ನಾನು …
Read More »ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು
ಬೆಳಗಾವಿ: ಗಲಭೆ ಪೀಡಿತ ಬಾಂಗ್ಲಾದೇಶದಿಂದ 25 ವೈದ್ಯಕೀಯ ವಿದ್ಯಾರ್ಥಿಗಳು ಪಾರಾಗಿ ಬೆಳಗಾವಿಗೆ ಆಗಮಿಸಿದ್ದಾರೆ. ನಾಲ್ಕು ದಿನಗಳ ಹಿಂದೆಯೇ ಈ ಎಲ್ಲ ವಿದ್ಯಾರ್ಥಿಗಳು ಬೆಳಗಾವಿಗೆ ಬಂದಿದ್ದಾರೆ. ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೆರವಿನಿಂದ ಸುರಕ್ಷಿತವಾಗಿ ಬೆಳಗಾವಿಗೆ ಬಂದಿದ್ದಾರೆ. ಬಾಂಗ್ಲಾಬಾಂಗ್ಲಾದಿಂದ ಬೆಳಗಾವಿಗೆ ಬಂದ ವೈದ್ಯಕೀಯ ವಿದ್ಯಾರ್ಥಿ ನೇಹಲ್ ಸವಣೂರು ಮಾಧ್ಯಮದವರೊಂದಿಗೆ ಮಾತನಾಡಿ, ಬಾಂಗ್ಲಾದಲ್ಲಿ ನಾನೂ ಭಯಭೀತನಾಗಿದ್ದೆ. ಈಗಿನ ಪರಿಸ್ಥಿತಿ ಇನ್ನೂ ಭಯಂಕರ ಇದೆ. ಹೇಗೋ ಬಚಾವ್ …
Read More »ವೇಮನರ ತತ್ವ ಜಗತ್ತಿಗೆ ಮಾದರಿ: ಸಚಿವ ಎಚ್.ಕೆ.ಪಾಟೀಲ
ಲೋಕಾಪುರ: ವೇಮನರ ತತ್ವ, ಸಿದ್ಧಾಂತಗಳು ಜಗತ್ತಿಗೆ ಮಾದರಿಯಾಗಿವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು. ಸಮೀಪದ ಮೆಟಗುಡ್ಡ ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಸ್ಧಾನ ಹಾಗೂ ಹೇಮ ವೇಮ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ರಚನಾತ್ಮಕ ಕೆಲಸಗಳನ್ನು ಮಾಡುವುದರಿಂದ ಒಳ್ಳೆ ಸಮಾಜ ನಿರ್ಮಾಣ ಸಾಧ್ಯ ಎಂದರು. ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಅವರ ವಚನ ಮತ್ತು ಬದುಕನ್ನು ನಾಡಿಗೆ ತಿಳಿಸುವ ಕಾರ್ಯ ನಡೆಯಬೇಕು. ಸಮುದಾಯಗಳ ಮಧ್ಯೆ ಸಮನ್ವಯ …
Read More »ಕೇಂದ್ರ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ಉಚಿತ ಹೊಲಿಗೆ ಯಂತ್ರದ ಜೊತೆಗೆ 1 ಲಕ್ಷ ರೂ. ಸಾಲ!
ನವದೆಹಲಿ : ಕೇಂದ್ರದಲ್ಲಿ ಮೂರನೇ ಬಾರಿಗೆ ಎನ್ಡಿಎ ಸರ್ಕಾರ ರಚನೆಯಾಗುವುದರೊಂದಿಗೆ, ನಡೆಯುತ್ತಿರುವ ಅನೇಕ ಯೋಜನೆಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗಿದೆ. ಈ ಅನುಕ್ರಮದಲ್ಲಿ, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆ ನಡೆಯುತ್ತಿದೆ. ಅನೇಕರು ಈಗಾಗಲೇ ಇದರಿಂದ ಪ್ರಯೋಜನ ಪಡೆದಿದ್ದಾರೆ. ಇಂದಿಗೂ, ಯಾವುದೇ ಮಹಿಳೆ ಅಥವಾ ಪುರುಷ ಈ ಯೋಜನೆಯ ಲಾಭವನ್ನು ಪಡೆಯಬಹುದು. ಕೇಂದ್ರ ಸರ್ಕಾರವು ವಿವಿಧ ರೀತಿಯ ವೃತ್ತಿಗಳಿಗೆ ಸಂಬಂಧಿಸಿದ ವಿಶೇಷ ಉಪಕರಣಗಳು ಮತ್ತು ಯಂತ್ರಗಳನ್ನು ಒದಗಿಸುತ್ತದೆ. ಹೊಲಿಗೆ ಯಂತ್ರವೂ ಈ …
Read More »ಆಗಸ್ಟ್ 21ರ ಬಳಿಕ ಖಾಸಗಿ ಶಾಲೆಗಳು ಬಂದ್-ಕಾರಣ ಏನು?
ಬೆಂಗಳೂರು, ಆಗಸ್ಟ್ 05: ರಾಜ್ಯದಲ್ಲಿ ಆಗಸ್ಟ್ 21ರ ಬಳಿಕ ಖಾಸಗಿ ಶಾಲೆಗಳನ್ನು ಬಂದ್ ಮಾಡಲು ರುಪ್ಸಾ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ನಿರ್ಧಾರ ಮಾಡಲಾಗಿದೆ. ಹಾಗಾದರೆ ಯಾಕೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಶಾಲಾ ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ಹಾಗೂ ಖಾಸಗಿ ಶಾಲೆಗಳ ಮೇಲಿನ ಅನ್ಯಾಯ ವಿರೋಧಿಸಿ ರುಪ್ಸಾ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ …
Read More »ಸಿಎಂ ಪತ್ನಿಗೆ ನೀಡಿದ್ದ 14 ನಿವೇಶನ ವಾಪಸ್ ಪಡೆಯಲು ಮನವಿ
ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರಿಗೆ ನೀಡಿರುವ 14 ನಿವೇಶನಗಳನ್ನು ವಾಪಸ್ ಪಡೆಯಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮುಡಾ ಆಯುಕ್ತ ರಘುನಂದನ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಹಾಂ, ‘ಮೈಸೂರಿನ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464 ರಲ್ಲಿ 2001ರಲ್ಲಿಯೇ ಮುಡಾ ನಿವೇಶನಗಳನ್ನು ರಚಿಸಿ, ನಂತರದಲ್ಲಿ 19 ಫಲಾನುಭವಿಗಳಿಗೆ ಹಂಚಿದೆ. 2004ರಲ್ಲಿ ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಅದೇ …
Read More »ನಿರಂತರ ಮಳೆಯಿಂದಾಗಿ ಅಂಗನವಾಡಿಗಳಿಗೆ ರಜೆ ಘೋಷಣೆ
ನಿರಂತರ ಮಳೆಯಿಂದಾಗಿ ಅಂಗನವಾಡಿಗಳಿಗೆ ರಜೆ ಘೋಷಣೆ ನಿರಂತರ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರು ಕಿತ್ತೂರು, ಖಾನಾಪುರ, ಮತ್ತು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಅಂಗನವಾಡಿಗಳಿಗೆ ರಜೆ ಘೋಷಿಸಿದ್ದಾರೆ. ### ರಜೆ ಆದೇಶದ ವಿವರಗಳು – *ಅಂಗನವಾಡಿ ರಜೆ ಅವಧಿ*: – *ಕಿತ್ತೂರು ತಾಲೂಕು*: ಆಗಸ್ಟ್ 6 ರಿಂದ 8ರವರೆಗೆ. – *ಬೆಳಗಾವಿ ಗ್ರಾಮೀಣ ಮತ್ತು ಖಾನಾಪುರ ತಾಲೂಕುಗಳು*: ಆಗಸ್ಟ್ 6 ರಿಂದ 10ರವರೆಗೆ. ಈ ರಜೆ ಆದೇಶವನ್ನು …
Read More »ವಯನಾಡು ಭೂಕುಸಿತ: ದೇಣಿಗೆ ನೀಡಿದ ಕಬಡ್ಡಿ ಪಟು
ರಿಪ್ಪನ್ಪೇಟೆ: ಕೇರಳದ ವಯನಾಡಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೂ ಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಇಲ್ಲಿನ ರಾಮಕೃಷ್ಣ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ, ಕಬಡ್ಡಿ ಪಟು ಆರ್. ಶ್ರೇಯಾ ಹಾಗೂ ಆಕೆಯ ಸೋದರ ಶ್ರವಂತ್ ₹ 15,000 ದೇಣಿಗೆ ನೀಡಿದ್ದಾರೆ. ಈಚೆಗೆ ಹೈದರಾಬಾದ್ನಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ಶ್ರೇಯಾ ಹಾಗೂ ಇದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶ್ರವಂತ್ ಅವರು ಗ್ರಾಮದ ಸವಿತಾ …
Read More »ಯಾದಗಿರಿ ಪಿಎಸ್ಐ ಸಾವು; ಮೃತ ಪತ್ನಿಗೆ ಸರ್ಕಾರ ಉದ್ಯೋಗ, ಪರಿಹಾರ
ಬೆಂಗಳೂರು: ಯಾದಗಿರಿ ಪಿಎಸ್ಐ ಸಾವು ಪ್ರಕರಣದಲ್ಲಿ ಮೃತರ ಪತ್ನಿಗೆ ಸರ್ಕಾರದಿಂದ ಉದ್ಯೋಗ ಕೊಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಪಿಎಸ್ಐ ಸಾವು ಪ್ರಕರಣವನ್ನು ಈಗಾಗಲೇ ಸಿಒಡಿಗೆ ನೀಡಲಾಗಿದೆ. ಅವರು ತನಿಖೆ ಶುರು ಮಾಡಿದ್ದಾರೆ. ಪೋಸ್ಟ್ ಮಾರ್ಟಮ್ ರಿಪೋರ್ಟ್ ನಿರೀಕ್ಷೆ ಮಾಡುತ್ತಿದ್ದೇವೆ. ಅದು ಬಂದ ಮೇಲೆ ಯಾಕೆ ಸಾವಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ನಾನು ಬುಧವಾರ ಮೃತ ಪಿಎಸ್ಐ ಮನೆಗೆ ಹೋಗಿ ಅವರ …
Read More »