Breaking News

ರಾಷ್ಟ್ರೀಯ

ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ.

ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ. ಸಮಯ : ಸಾಯಂಕಾಲ 5.15ಕ್ಕೆ ಹುಬ್ಬಳ್ಳಿಯಿಂದ ಹೊರಟು 6.25 ಕ್ಕೆ ಮಂಗಳೂರು ತಲುಪುವುದು ಮತ್ತು ಮರಳಿ ಮಂಗಳೂರಿನಿಂದ ಸಾಯಂಕಾಲ 6.45ಕ್ಕೆ ಹೊರಟು 7.55ಕ್ಕೆ ಹುಬ್ಬಳ್ಳಿ ತಲುಪುವುದು. ಬಹುದಿನಗಳಿಂದ ನಾವು ಬಂದರು ನಗರಿ ಮಂಗಳೂರಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ನಡೆಸಿದ ಪ್ರಯತ್ನ ಈಗ ಫಲಪ್ರದವಾಗಿದೆ. ಇದೇ ಮಾರ್ಚ್ …

Read More »

ರಾಜ್ಯ ಜಲಸಂಪನ್ಮೂಲ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ರಮೇಶ ಜಾರಕಿಹೊಳಿಗೆ ಮೊದಲ ದೊಡ್ಡ ಗೆಲುವು ಸಿಕ್ಕಂತಾಗಿದೆ.

ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಮಹದಾಯಿ ಯೋಜನೆಯ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಲ್ಲಿ ಟೀಮ್ ಬಿಜೆಪಿ ಯಶಸ್ವಿಯಾಗಿದೆ. ತನ್ಮೂಲಕ, ತಡವಾದರೂ ತಂಡ ಕಿರೀಟ ಮುಡಿಗೇರಿಸಿಕೊಂಡಿದೆ. ಜೊತೆಗೆ, ರಾಜ್ಯ ಜಲಸಂಪನ್ಮೂಲ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ರಮೇಶ ಜಾರಕಿಹೊಳಿಗೆ ಮೊದಲ ದೊಡ್ಡ ಗೆಲುವು ಸಿಕ್ಕಂತಾಗಿದೆ. ಮಹದಾಯಿ ಹೋರಾಟ ಇಂದು-ನಿನ್ನೆಯದಲ್ಲ. ಹಲವು ದಶಕಗಳ ಹೋರಾಟವಿದು. ಇದೀಗ ನ್ಯಾಯಾಧಿಕರಣದ ತೀರ್ಪಿನ ಗೆಜೆಟ್ ನೋಟಿಫಿಕೇಶನ್ ಹೊರಡಿಸುವ ಮೂಲಕ ಮೊದಲ ಜಯ ಕರ್ನಾಟಕದ ಪಾಲಿಗಾದಂತಾಗಿದೆ. ಮುಂದೆ ಸರ್ವೋಚ್ಛ ನ್ಯಾಯಾಲಯದಲ್ಲಿ ಹೋರಾಟ ಇದ್ದೇ …

Read More »

ಬಾಲಿವುಡ್ ಸೂಪರ್ ಹಿಟ್ ಸಿನ್ಮಾ ನೆನಪು ಮಾಡ್ಕೊಂಡ ಟ್ರಂಪ್

ಅಹಮದಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ ಬಾಲಿವುಡ್ ಸೂಪರ್ ಹಿಟ್ ಸಿನಿಮಾವನ್ನು ನೆನಪು ಮಾಡಿಕೊಂಡರು. ಮೊಟೆರಾದ ಸ್ಟೇಡಿಯಂಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು. ದೇಶದ ಪ್ರತಿಯೊಂದು ಕ್ಷೇತ್ರಗಳ ಸಾಧನೆಯನ್ನು ತಿಳಿಸಿ ನಾನು ಭಾರತವನ್ನು ಪ್ರೀತಿಸುತ್ತೇನೆ. ಬಾಲಿವುಡ್ ಮತ್ತು ಹಾಲಿವುಡ್ ಹೊಸತನಕ್ಕೆ ಮಾದರಿಯಾಗಿವೆ. ಶಾರೂಖ್ ಖಾನ್ ಮತ್ತು ಕಾಜೋಲ್ ನಟನೆಯ ‘ದಿಲ್‍ವಾಲೇ ದುಲ್ಹನಿಯಾ ಲೇ ಜಾಯೇಂಗೆ’ (ಡಿಡಿಎಲ್‍ಜೆ) ಚಿತ್ರದ ಯಶಸ್ಸು ಭಾರತೀಯ ಸಿನಿಮಾ ಏನು …

Read More »

ಸಬರಮತಿ ಆಶ್ರಮದಲ್ಲಿ ಗಾಂಧಿ ಚರಕದಿಂದ ನೂಲು ನೇಯ್ದ ಟ್ರಂಪ್ ದಂಪತಿ

ಅಹಮದಾಬಾದ್, ಫೆ.24- ಭಾರತ ಪ್ರವಾಸ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮಲೇನಿಯಾ ಟ್ರಂಪ್ ಅಹಮದಾಬಾದ್‍ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸಬರ್‍ಮತಿ ಆಶ್ರಮಕ್ಕೆ ಭೇಟಿ ನೀಡಿದರು.ಮೋದಿಯವರೊಂದಿಗೆ ಇಂದು ಮಧ್ಯಾಹ್ನ ಆಶ್ರಮಕ್ಕೆ ತೆರಳಿದ ಟ್ರಂಪ್ ದಂಪತಿ ಬಾಪು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು ಟ್ರಂಪ್ ದಂಪತಿಗಳಿಗೆ ಮಾರ್ಗದರ್ಶಕರಾಗಿದ್ದ ಟ್ರಂಪ್ ಆಶ್ರಮದ ಮಹತ್ವ ಮತ್ತು ಅಲ್ಲಿ ಗಾಂಧೀಜಿಯವರು ಬಳಸುತ್ತಿದ್ದ ವಸ್ತುಗಳ ಬಗ್ಗೆ ವಿವರಿಸಿದರು.ಆಶ್ರಮದಲ್ಲಿದ್ದ ಗಾಂಧೀಜಿ ಮತ್ತು …

Read More »

ನಮ್ಮ ದೇಶದವರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ವಿಕೃತ ಮನಸ್ಸಿನವರು:ಶಾಸಕಿ ಅನಿತಾ ಕುಮಾರಸ್ವಾಮಿ ಬೇಸರ

ರಾಮನಗರ: ಪಾಕ್ ಪರ ಘೋಷಣೆ ಕೂಗುತ್ತಿರುವುದನ್ನು ನೋಡಿ ನಿಜವಾಗಿಯೂ ನನಗೆ ಆಶ್ಚರ್ಯವಾಗುತ್ತಿದೆ. ನಮ್ಮ ದೇಶದವರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ವಿಕೃತ ಮನಸ್ಸಿನವರು ಅಂತ ಹೇಳಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಪರ ಅಮೂಲ್ಯ ಘೋಷಣೆ ಕೂಗಿದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು. ಮುಂದೆ ಇನ್ಯಾರು ಆ ರೀತಿ ಮಾಡಬಾರದು, ಆ ರೀತಿ ಕ್ರಮ ಕೈಗೊಂಡರೆ ಬೇರೆಯವರಿಗೂ …

Read More »

(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂಘಟಿತರು ಹಾಗೂ ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ

ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ 10 ಲಕ್ಷ ಭದ್ರತಾ ಠೇವಣಿ ಹಾಗೂ ಕಾರ್ಯಕ್ರಮದ ಹೊಣೆಗಾರಿಕೆಯನ್ನು ಆಯೋಜಕರೇ ಹೊತ್ತುಕೊಳ್ಳಬೇಕು ಶಾಂತಿಯುತ ಪ್ರತಿಭಟನೆ ನೆಪದಲ್ಲಿ ಕಾನೂನು ಉಲ್ಲಂಘಿಸಿದವರಿಗೆ ಮೂಗುದಾರ ಹಾಕಲು ಸರ್ಕಾರ ಮುಂದಾಗಿದೆ. ಬೆಂಗಳೂರು,ಫೆ.21-ಕೇಂದ್ರ ಸರ್ಕಾರದ ನಾಗರಿಕ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂಘಟಿತರು ಹಾಗೂ ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ. ನಿನ್ನೆ ಫ್ರೀಡಂಪಾರ್ಕ್‍ನಲ್ಲಿ ಸಿಎಎ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅಮೂಲ್ಯ ಲಿಯೋನ …

Read More »

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯ…………

ಮುಂಬೈ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗಿದೆ. ದಾದಾ ಸಾಹೇಬ್ ಪಾಲ್ಕೆ ಹಾಗೂ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷದ ಜನ್ಮದಿನೋತ್ಸವದ ಅಂಗವಾಗಿ ಮುಂಬೈನಲ್ಲಿ ಗುರುವಾರ ಅದ್ದೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುದೀಪ್ ಅವರಿಗೆ ದಾದಾ ಸಾಹೇಬ್ ಪಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು. ದಬಾಂಗ್ 3′ ಸಿನಿಮಾದ …

Read More »

ಜೈಲಲ್ಲಿ ನಿರ್ಭಯಾ ಹಂತಕನ ಹೈಡ್ರಾಮ- ಗೋಡೆಗೆ ತಲೆ ಚಚ್ಚಿಕೊಂಡ ವಿನಯ್ ಶರ್ಮಾ

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಅಪರಾಧಿಗಳ ಪೈಕಿ ಒಬ್ಬನಾಗಿರುವ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಹೈ ಡ್ರಾಮಾ ನಡೆಸಿದ್ದು, ಗೋಡೆಗೆ ತಲೆ ಚಚ್ಚಿಕೊಳ್ಳುವ ಮೂಲಕ ನಾಟಕವಾಡಿದ್ದಾನೆ. ಈ ಕುರಿತು ಜೈಲಿನ ಮೂಲಗಳು ಮಾಹಿತಿ ನೀಡಿದ್ದು, ಫೆಬ್ರವರಿ 16ರಂದು ಈ ಘಟನೆ ನಡೆದಿದೆ. ತಕ್ಷಣವೇ ಜೈಲು ಅಧಿಕಾರಿಗಳು ತಡೆದಿದ್ದಾರೆ. ಗೋಡೆಗೆ ಬಲವಾಗಿ ತಲೆ ಚಚ್ಚಿಕೊಂಡಿದ್ದರಿಂದ ವಿನಯ್ ಶರ್ಮಾಗೆ ಗಾಯವಾಗಿದೆ. ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ. ನಿರ್ಭಯಾ ಅತ್ಯಾಚಾರಿಗಳ …

Read More »

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ :

ಬೆಂಗಳೂರು,ಫೆ.20-ಕೆಪಿಸಿಸಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಪಟ್ಟಂತೆ ಪ್ರಕ್ರಿಯೆಗಳನ್ನು ಆರಂಭಿಸಿರುವ ಕಾಂಗ್ರೆಸ್ ವರಿಷ್ಠರು ಹಂತ ಹಂತವಾಗಿ ರಾಜ್ಯದ ನಾಯಕರುಗಳನ್ನು ಭೇಟಿ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಿನ್ನೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಸೋನಿಯಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭಕ್ತ ಚರಣದಾಸ್ ಮತ್ತು ಮಧುಸೂದನ ಮಿಸ್ತ್ರಿ ವರದಿಯನ್ನು ಅನುಷ್ಠಾನಕ್ಕೆ ತರಬೇಕೆಂದು ಒತ್ತಡ ಹೇರಿದರು. ಆ …

Read More »

 ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರಿಸುವುದಿಲ್ಲ: ಸಿಎಂ ಉದ್ದವ್ ಠಾಕ್ರೆ

ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರಿಸುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಸ್ಪಷ್ಟಪಡಿಸಿದ್ದು, ಕೋರೆಗಾಂವ್ ಗಲಭೆಯ ವೇಳೆ ದಲಿತ ಸಮುದಾಯದ ಮೇಲಿನ ದೌರ್ಜನ್ಯವು “ದುರದೃಷ್ಟಕರ” ಎಂದು ಹೇಳಿದ್ದಾರೆ. ಈ ಕುರಿತು ಇಂದು ಟ್ವೀಟ್ ಮಾಡಿರುವ ಉದ್ದವ್ ಠಾಕ್ರೆ, ಎಲ್ಗರ್ ಮತ್ತು ಭೀಮಾ ಕೋರೆಗಾಂವ್ ಎರಡೂ ಪ್ರತ್ಯೇಕ ಪ್ರಕರಣಗಳಾಗಿವೆ, ದಲಿತ ಸಹೋದರರು ಭೀಮಾ ಕೋರೆಗಾಂವ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದರ ತನಿಖೆಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡುವುದಿಲ್ಲ. ದಲಿತ …

Read More »