Breaking News

ರಾಷ್ಟ್ರೀಯ

ಜಾರಿ ಬಿದ್ದ ಶಾಸಕ ರೇವಣ್ಣ

ಹೊಳೆನರಸೀಪುರ: ತಾಲ್ಲೂಕಿನ ಹರದನಹಳ್ಳಿಯ ಶಿವನ ದೇವಾಲಯದಲ್ಲಿ ಬುಧವಾರ ಬೆಳಗಿನ ಜಾವ ಪೂಜೆ ಸಲ್ಲಿಸಿ ಬರುವಾಗ ಮೆಟ್ಟಿಲಿನ ಮೇಲೆ ಕಾಲು ಜಾರಿಬಿದ್ದ ಶಾಸಕ ಎಚ್.ಡಿ. ರೇವಣ್ಣ ಅವರ ಬಲಪಕ್ಕೆಯ 6 ನೇ ಮೂಳೆಯಲ್ಲಿ ಸಣ್ಣ ಬಿರುಕು ಬಿಟ್ಟಿದೆ. 7ನೇ ಮೂಳೆಗೆ ಹೆಚ್ಚು ಹಾನಿಯಾಗಿದೆ.   ‌ಅವರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಧನಶೇಖರ್, ಮೂಳೆ ತಜ್ಞರಾದ ಡಾ.ಜೆ.ಕೆ. ದಿನೇಶ್, ಡಾ. ದಿನೇಶ್ ಕುಮಾರ್ ಹಾಗೂ ಡಾ. ಸತ್ಯಪ್ರಕಾಶ್, ತೀವ್ರ ನಿಗಾ ಘಟಕದಲ್ಲಿ …

Read More »

ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಕ್ಯಾಮ್​; ಮಾಜಿ ಸಚಿವ ನಾಗೇಂದ್ರ ಪತ್ನಿ ED ವಶಕ್ಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದಿದ್ದಾರೆ. ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 10ರಂದು ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್​ ಶಾಸಕ ಬಸನ್​ಗೌಡ ದದ್ದಲ್​ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದರು .ಪ್ರಕರಣಕ್ಕೆ ಸಂಬಂಧಿಸಿದಂತೆ …

Read More »

SIT’ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ,ಮುಡಾ’ ಹಗರಣದಲ್ಲಿ ಸಿಎಂ ಇಡೀ ಕುಟುಂಬವೆ ಭಾಗಿ

SIT’ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ ಶಿವಮೊಗ್ಗ : ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, SIT ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಎಂದು ವಾಗ್ದಾಳಿ ನಡೆಸಿದರು.   ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಿಷ್ಠ ನೋಟಿಸ್ ಕೊಟ್ಟು ನಾಗೇಂದ್ರಗೆ ಅಧಿಕಾರಿಗಳು ವಿಚಾರಣೆಗೆ ಕರೆದಿಲ್ಲ. ಎಸ್‌ಐಟಿ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ …

Read More »

ವೈದ್ಯಕೀಯ ಸೀಟು ಕೊಡಿಸುವುದಾಗಿವಂಚನೆ:

ಬೆಳಗಾವಿ: ನೀಟ್‌ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ವಿವಿಧ ಕಾಲೇಜುಗಳಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ವಂಚಿಸಿದ ಅಂತಾರಾಜ್ಯ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿ ಸಿ 12 ಲಕ್ಷ ರೂ. ನಗದು ಹಾಗೂ 15 ಕಂಪ್ಯೂಟರ್‌, ಡೆಬಿಟ್‌ / ಕ್ರೆಡಿಟ್‌ ಕಾರ್ಡ್‌ ಸೇರಿ 12 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಂಡಕಲ್‌ನ ಅರಗೊಂಡ ಅರವಿಂದ ಉರೂಫ್‌ ಅರುಣ ಕುಮಾರ (47) ಬಂಧಿತ ಆರೋಪಿ. ಬೆಳಗಾವಿ …

Read More »

ಭಾರಿ ಮಳೆ ಭಾಗಶಃ ಭರ್ತಿಯಾದ ರಕ್ಕಸಕೊಪ್ಪ ಜಲಾಶಯ

ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ ಹಿನ್ನೆಲೆ‌; ಭಾಗಶಃ ಭರ್ತಿಯಾದ ರಕ್ಕಸಕೊಪ್ಪ ಜಲಾಶಯ ಬೆಳಗಾವಿ, ಜುಲೈ 16: ಪಶ್ಚಿಮ ಘಟ್ಟದಲ್ಲಿ ಬರೆದ ಭಾರಿ ಮಳೆಯ ಕಾರಣದಿಂದ ಬೆಳಗಾವಿ ಜಿಲ್ಲೆಯ ರಕ್ಕಸೊಪ್ಪ ಜಲಾಶಯ ಭಾಗಶಃ ಭರ್ತಿಯಾಗಿದೆ. ಬೆಳಗಾವಿ ನಗರಕ್ಕೆ ನೀರು ಕೊಡುವ ಏಕೈಕ ಜಲಾಶಯವು ಬಹುತೇಕ ಭರ್ತಿಯಾದ ಹಿನ್ನೆಲೆಯಲ್ಲಿ ನಗರ ನಿವಾಸಿಗಳಲ್ಲಿ ಸಂತಸ ಮೂಡಿದೆ. ಬೆಳಗಾವಿ ತಾಲೂಕಿನ ರಕ್ಕಸೊಪ್ಪ ಗ್ರಾಮದ ಬಳಿ ಇರುವ ಈ ಡ್ಯಾಂವು 0.60 ಟಿಎಂಸಿ ಸಾಮರ್ಥ್ಯವನ್ನು ಹೊಂದಿದ್ದು, ಈಗಾಗಲೇ …

Read More »

ಜೂನ್ ತಿಂಗಳ ರೇಷನ್‌ ಬಿಡುಗಡೆ

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, 2 ಕೆ.ಜಿ.ರಾಗಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಎಪಿಎಲ್ ಸದಸ್ಯರ ಪಡಿತರ ಚೀಟಿಗೆ 5 ಕೆಜಿ ಅಕ್ಕಿ, 2 …

Read More »

ಕಾವೇರಿ ನೀರು ಬಿಡದಿದ್ದರೆ ಕೋರ್ಟ್‌ಗೆ: ತಮಿಳುನಾಡು ಬೆದರಿಕೆ

ಚೆನ್ನೈ: ಕರ್ನಾಟಕದಿಂದ ಕಾವೇರಿ ನೀರಿ ಪಡೆಯಲು ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್‌ ಮೊರೆ ಹೋಗುವ ಬಗ್ಗೆ ತಮಿಳುನಾಡಿನ ಸರ್ವಪಕ್ಷ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಆದೇಶದಂತೆ ನಿತ್ಯ 1 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರವು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಸಿಎಂ ಎಂ.ಕೆ. ಸ್ಟಾಲಿನ್‌ ನೇತೃತ್ವದ ತಮಿಳುನಾಡು ಸರ್ಕಾರ, ಮಂಗಳವಾರ ಸರ್ವಪಕ್ಷ ಸಭೆ ಕರೆದಿತ್ತು. ಸಭೆಯಲ್ಲಿ ಕರ್ನಾಟಕದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿ, ನಿರ್ಣಯ ಕೈಗೊಳ್ಳಲಾಯಿತು. ಜತೆಗೆ, ಸುಪ್ರೀಂ …

Read More »

2025ರ ಡಿ.31 ರೊಳಗೆ 197 ಕೆರೆಗೆ ಭದ್ರಾ ನೀರು: ಡಿಸಿಎಂ ಡಿಕೆಶಿ

ವಿಧಾನಸಭೆ: ಭದ್ರಾ ಉಪ ಜಲಾನಯನ ಪ್ರದೇಶದಿಂದ ಏತ ವ್ಯವಸ್ಥೆ ಮೂಲಕ ನೀರನ್ನೆತ್ತಿ 197 ಕೆರೆಗಳನ್ನು ತುಂಬಿಸುವ ಯೋಜನೆಯನ್ನು 2025 ರ ಡಿ.31 ರೊಳಗಾಗಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು. ಕಾಂಗ್ರೆಸ್‌ನ ಎಚ್‌.ಡಿ. ತಮ್ಮಯ್ಯ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, 2020ರಲ್ಲೇ 1281.80 ಕೋಟಿ ರೂ. ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ವಿವಿಧ ಹಂತಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಕಡೂರು ಕೆರೆ …

Read More »

ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

ಬೆಂಗಳೂರು, ಜುಲೈ 17: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತಕರ (ಕಲ್ಯಾಣ) ವಿಧೇಯಕ, 2024 ನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಈ ವಿಧೇಯಕದಿಂದ ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಿದ ಶ್ರೇಯ …

Read More »

ಸಿಎಂ ರಾಜೀನಾಮೆ ನೀಡಲಿ: ಅಶೋಕ್‌

ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರಕಾರಕ್ಕೆ ತಟ್ಟಬಾರದೆಂದರೆ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವ ಜತೆಗೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಆಗ್ರಹಿಸಿದ್ದಾರೆ. ವಾಲ್ಮೀಕಿ ಹಗರಣದ ಬಗ್ಗೆ ನಿಯಮ 69ರ ಅಡಿ ಚರ್ಚೆ ಪ್ರಾರಂಭಿಸಿ ಸತತ 3 ಗಂಟೆ ಕಾಲ ಮಾತನಾಡಿ, ಈ ಪ್ರಕರಣದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಹಗರಣವಾ ಗಿದೆ ಎಂದು ಗೊತ್ತಾದಾಗ …

Read More »