ಬೆಂಗಳೂರು, ಸೆಪ್ಟೆಂಬರ್ 29: ಅಕ್ಟೋಬರ್ 1ರಿಂದ ಬಹುತೇಕ ಖಾಸಗಿ ಕಂಪನಿಗಳ ವರ್ಕ್ ಫ್ರಮ್ ಹೋಮ್ (Work from Home) ಅಂತ್ಯವಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ (Bengaluru) ಟ್ರಾಫಿಕ್ ಡಬಲ್ ಆಗುವ ಸಾಧ್ಯತೆ ಹೆಚ್ಚಿದೆ. ಉದ್ಯೋಗಿಗಳು ಕಚೇರಿಗೇ ಹೋಗಿ ಕೆಲಸ ಮಾಡಬೇಕಿರುವ ಕಾರಣ ವಾಹನಗಳ ಓಡಾಟದ ಸಂಖ್ಯೆಯೂ ಸಹಜವಾಗಿ ಹೆಚ್ಚಲಿದೆ. ಅಂದಾಜಿನ ಪ್ರಕಾರ ಔಟರ್ ರಿಂಗ್ ರೋಡ್ ಒಂದರಲ್ಲಿಯೇ ಪ್ರತಿನಿತ್ಯ 10 ಲಕ್ಷ ಉದ್ಯೋಗಿಗಳು ಓಡಾಡುವ ನಿರೀಕ್ಷೆ ಇದೆ.ಬೆಂಗಳೂರಿನ ಬಹುತೇಕ ಖಾಸಗಿ ಕಂಪನಿಗಳು ವರ್ಕ್ ಫ್ರಮ್ ಹೋಮ್ ಸೌಲಭ್ಯ ಹಿಂಪಡೆಯಲು …
Read More »ಇದು ಸೋಲಲ್ಲ, ಗೆಲುವಿನ ಮುಂದೂಡಿಕೆಯಷ್ಟೇ.
ಪ್ರತಿರೋಧವೇ ಇಲ್ಲವೆಂದು ಪ್ರಭುತ್ವದಿಂದ ಬೀಗುತಿದ್ದ ನೆಲದಲ್ಲಿ ಪ್ರಜಾಪ್ರಭುತ್ವವನ್ನು ಪ್ರತಿಷ್ಠಾಪಿಸಿದ ಶ್ರೇಯಸ್ಸು ಸತೀಶಣ್ಣನವರಿಗೆ ಸಲ್ಲುತ್ತದೆ. ಚುನಾವಣೆಯಲ್ಲಿ ಸೋತರೂ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದ ಕೀರ್ತಿ ನಿಮ್ಮದಾಗಿದ್ದು ಈ ಫಲಿತಾಂಶದಿಂದ ಧೃತಿಗೆಡಬೇಕಾಗಿಲ್ಲ. ಇದು ಸೋಲಲ್ಲ, ಗೆಲುವಿನ ಮುಂದೂಡಿಕೆಯಷ್ಟೇ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಈ ಬಾರಿ ರಾಜಕೀಯ ಜಿದ್ದಾಜಿದ್ದಿಗಿಂತ ಪ್ರತಿಷ್ಠೆಯ ಕಣವಾಗಿತ್ತು,ಆಯಾ ಪಕ್ಷದ ಕಾರ್ಯಕರ್ತರಿಗೇ ಗೊಂದಲದ ಗುಡಾಗಿತ್ತು, ಈ ಚುನಾವಣೆ ಮೇಲೆ ಇಡೀ ರಾಜ್ಯದ ಕಣ್ಣಿತ್ತು,ಲೋಕೋಪಯೋಗಿ ಸಚಿವರ ಜಾಣ ನಡೆ,ರಮೇಶ್ ಕತ್ತಿಯವರ …
Read More »ಹುಟ್ಟೂರಿನ ಕೆರೆಯಲ್ಲಿ ಎಸ್.ಎಲ್.ಭೈರಪ್ಪನವರ ಅಸ್ಥಿ ವಿಸರ್ಜನೆ
ಹಾಸನ: ಖ್ಯಾತ ಕಾದಂಬರಿಕಾರ, ಚಿಂತಕ ಎಸ್.ಎಲ್.ಭೈರಪ್ಪ ಅವರ ಅಸ್ಥಿಯನ್ನು ಹುಟ್ಟೂರಾದ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರದ ಕೆರೆಯಲ್ಲಿ ಭಾನುವಾರ ವಿಸರ್ಜಿಸಲಾಯಿತು. ಭೈರಪ್ಪ ಅವರ ಪುತ್ರರಾದ ರವಿಶಂಕರ್ ಹಾಗೂ ಉದಯ್ ಶಂಕರ್ ವಿಧಿವಿಧಾನಗಳಂತೆ ಪೂಜೆ ಸಲ್ಲಿಸಿ, ಚಿತಾಭಸ್ಮವನ್ನು ವಿಸರ್ಜನೆ ಮಾಡಿದರು. ಇದಕ್ಕೂ ಮುನ್ನ ಮಂತ್ರೋಚ್ಚಾರಣೆ, ಘೋಷಗಳು ಮೊಳಗುತ್ತಿದ್ದಂತೆ ಗ್ರಾಮದಲ್ಲಿ ಅಸ್ಥಿ ಮೆರವಣಿಗೆ ನಡೆದಿದ್ದು, ನೂರಾರು ಮಂದಿ ಗ್ರಾಮಸ್ಥರು ಮತ್ತು ಅಭಿಮಾನಿಗಳು ಭಾಗಿಯಾಗಿದ್ದರು. ಶಾಸಕ ಸಿ.ಎನ್. ಬಾಲಕೃಷ್ಣ ಹಾಗೂ ಮಾಜಿ ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ, ಜಿ.ಪಂ.ಮಾಜಿ ಸದಸ್ಯ …
Read More »ಭುವನೇಶ್ವರಿ ಉತ್ಸವದ ಸಮಾರೋಪ…
ಭುವನೇಶ್ವರಿ ಉತ್ಸವದ ಸಮಾರೋಪ… ವಿವಿಧ ರಾಜ್ಯಗಳ ಹಬ್ಬದಾಚರಣೆಯ ನೃತ್ಯಗಳ ಪ್ರಸ್ತುತಿ ಭುವನೇಶ್ವರಿ ಉತ್ಸವದ ಸಮಾರೋಪ… ವಿವಿಧ ರಾಜ್ಯಗಳ ಹಬ್ಬದಾಚರಣೆಯ ನೃತ್ಯಗಳ ಪ್ರಸ್ತುತಿ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವಿವಿಧ ಗಣ್ಯರಿಂದ ಶ್ಲಾಘನೆ ಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಭುವನೇಶ್ವರಿ ಉತ್ಸವ ಇಂದು ಸಮಾರೋಪಗೊಂಡಿತು. ಮೂರನೇಯ ದಿನವಾದ ಇಂದು ವಿವಿಧ ರಾಜ್ಯಗಳ ಹಬ್ಬಗಳನ್ನು ಆಧರಿಸಿದ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ನವರಾತ್ರಿಯ ನಿಮಿತ್ಯ ಆಯೋಜಿಸಿದ್ದ ನಡೆಯುತ್ತಿದ್ದ ಭುವನೇಶ್ವರಿ ಉತ್ಸವ ಇಂದು ಸಮಾರೋಪಗೊಂಡಿತು. ಸಮಾರೋಪ …
Read More »ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಮೇಲೆ ಅಧಿಪತ್ಯ ಸಾಧಿಸಲು ಎರಡು ಪ್ರಬಲ ರಾಜಕೀಯ ಕುಟುಂಬಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.
ಬೆಳಗಾವಿ: ಇದು ಭಾರತದ ಮೊಟ್ಟ ಮೊದಲ ಮತ್ತು ಕರ್ನಾಟಕದ ಏಕೈಕ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ. ಕಳೆದ 56 ವರ್ಷಗಳಿಂದ ಸಹಕಾರ ತತ್ವದಡಿ ಸಂಘ ಮುನ್ನಡೆಯುತ್ತಿದೆ. ಇದನ್ನು ಹುಟ್ಟು ಹಾಕಿದ್ದು, ಓರ್ವ ಸಹಕಾರಿ ಭೀಷ್ಮ. ಆ ಮಹಾನಾಯಕನ ದೂರದೃಷ್ಟಿಯ ಫಲದಿಂದ ಲಕ್ಷಾಂತರ ಕುಟುಂಬಗಳಿಗೆ ಬೆಳಕು ಸಿಕ್ಕಿದೆ. ಸಾವಿರಾರು ಕುಟುಂಬಗಳಿಗೆ ಉದ್ಯೋಗದ ಆಸರೆ ದಕ್ಕಿದೆ. ಈಗ ಸಂಘದ ಮೇಲೆ ಅಧಿಪತ್ಯ ಸಾಧಿಸಲು ಎರಡು ಪ್ರಬಲ ರಾಜಕೀಯ ಕುಟುಂಬಗಳ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ರಾಜ್ಯದ …
Read More »ವಿಶೇಷಚೇತನರ ಕೋಟಾದಡಿ ನಕಲಿ ಪ್ರಮಾಣಪತ್ರ ಸೃಷ್ಟಿಸಿ ವಂಚನೆ: ಇಬ್ಬರು ಸರ್ಕಾರಿ ವೈದ್ಯರು, ಶಿಕ್ಷಕ ಸೇರಿ ಐವರು ಸೆರೆ
ಬೆಂಗಳೂರು: ವಿಶೇಷಚೇತನರ ಕೋಟಾದಡಿ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ, ವೈದ್ಯಕೀಯ ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮುಖ್ಯ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ್ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಳಾದ ಶಿಕ್ಷಕ ಭರಮಪ್ಪ, ವಿಜಯನಗರದ ಹೊಸಪೇಟೆಯ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಹರಿಪ್ರಸಾದ್, ಮಕ್ಕಳ ತಜ್ಞ ಡಾ.ಶ್ರೀನಿವಾಸ್, ಕೊಪ್ಪಳದ …
Read More »ಓದುವ ವಯಸ್ಸಲ್ಲಿ ಪ್ರೀತಿ-ಪ್ರೇಮ: ಹೆದರಿ ದುರಂತ ಅಂತ್ಯ
ಕೋಲಾರ, (ಸೆಪ್ಟೆಂಬರ್ 25): ಅಪ್ರಾಪ್ತ ಪ್ರೇಮಿಗಳ ಪ್ರೀತಿ-ಪ್ರೇಮ ಸಾವಿನಲ್ಲಿ ಅಂತ್ಯವಾಗಿದೆ. ಹೌದು…ಕುಟುಂಬದ ಭಯದಿಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ. ಮುಂಜಾನೆ ಎದ್ದು ತನ್ನ ತಾಯಿಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ತಾನು ಪ್ರೀತಿಸಿದ್ದ ಹುಡುಗಿಯೊಂದಿಗೆ ನಿರ್ಜನ ಪ್ರದೇಶದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸತೀಶ್ ಮತ್ತು ಶ್ವೇತ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮನೆಯವರು ತಮ್ಮ ಪ್ರೀತಿಯನ್ನು …
Read More »ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ
ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆ ಚುನಾವಣೆಯ ಹಿನ್ನೆಲೆ ಶ್ರೀ ಮಲಪ್ರಭಾ ಸಹಕಾರಿ ಕಾರ್ಖಾನೆಯ ಪುನಶ್ಚೇತನ ರೈತರ ಪ್ಯಾನಲ್’ನ್ನು ಬೆಂಬಲಿಸಿ’ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಇಂದು ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಪ್ಯಾನಲ್’ನ ಸರ್ವ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ, ಶ್ರೀ ಮಲಪ್ರಭಾ …
Read More »ಕಾಂತಾರ ಚಾಪ್ಟರ್ 1′ ಟ್ರೈಲರ್ ಬಿಡುಗಡೆ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟ ರಿಷಬ್ ಶೆಟ್ಟಿ ದಂಪತಿ
ಬೈಂದೂರು(ಉಡುಪಿ): ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆಯಾಗಿದ್ದು ಭಾರಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ರಿಷಬ್ ಶೆಟ್ಟಿ ಪತ್ನಿ ಸಹಿತ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ಸಿನಿಮಾದ ಯಶಸ್ಸಿಗಾಗಿ ಪ್ರಾರ್ಥಿಸಿದರು. ತಮ್ಮ ಪ್ರತಿ ಸಿನಿಮಾ ಬಿಡುಗಡೆಗೂ ಮುನ್ನ ರಿಷಬ್ ಅವರು ತಾಯಿ ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಇನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ …
Read More »14 ದಲಿತ ಕ್ರಿಶ್ಚಿಯನ್ ಹೆಸರನ್ನು ಹಿಂಪಡೆಯಲು ಬಿಜೆಪಿ ನಿಯೋಗ ಆಗ್ರಹ
ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಪಟ್ಟಿಯಲ್ಲಿ ದಲಿತ ಕ್ರಿಶ್ಚಿಯನ್ ನಮೂದು ಹಿಂಪಡೆಯುವಂತೆ ಬಿಜೆಪಿ ನಿಯೋಗ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿತು. ಬೆಂಗಳೂರಿನ ವಸಂತನಗರದ ಆಯೋಗದ ಕಚೇರಿಯಲ್ಲಿ ಅಧ್ಯಕ್ಷ ಮಧುಸೂದನ್ ನಾಯಕ್ಗೆ ಮನವಿ ಸಲ್ಲಿಕೆ ಮಾಡಿದರು. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಪಟ್ಟಿಯಲ್ಲಿ ದಲಿತ ಕ್ರಿಶ್ಚಿಯನ್ ನಮೂದು ಹಿಂಪಡೆಯುವಂತೆ ಹಾಗೂ ಮತ್ತೊಮ್ಮೆ ಎಸ್ಸಿ ಸಮುದಾಯದ ಗಣತಿ ನಡೆಸದಂತೆ ಆಗ್ರಹಿಸಿದರು. ಹಿಂದುಳಿದ ವರ್ಗಗಳ ಆಯೋಗದ ಕಚೇರಿಯಲ್ಲಿ …
Read More »
Laxmi News 24×7