Breaking News

ರಾಷ್ಟ್ರೀಯ

ಕಮ್ಮಿ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್! BSNL ನಿಂದ ಭರ್ಜರಿ ಆಫರ್ ಬಿಡುಗಡೆ‌ -ʼʼJio, Airtelʼʼನಿಂದ BSNLಗೆ ಸಿಮ್ ಪೋರ್ಟ್!

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ JioBoycott ಅಭಿಯಾನ ಆರಂಭವಾಗಿದ್ದು, BSNLkigharwapsi (ಬಿಎಸ್‌ಎನ್‌ಎಲ್‌ ಘರ್ ವಾಪಸಿ) ಅಂತ ಬರೆದುಕೊಂಡಿದ್ದಾರೆ. ಯಾವಾಗ ಅಭಿಯಾನ ಆರಂಭವಾಯ್ತೋ ಎಚ್ಚೆತ್ತುಕೊಂಡ ಬಿಎಸ್‌ಎನ್‌ಎಲ್‌ ಟ್ವೀಟ್ ಮಾಡಿ ತನ್ನ ಹೊಸ ಆಫರ್ ಘೋಷಿಸಿದೆ. ಇದರ ಜೊತೆಗೆ ಅಮರನಾಥ ಯಾತ್ರಿಕರಿಗೆ ವಿಶೇಷವಾಗಿ 196 ರೂಗಳಿಗೆ ಹೊಸ ಸಿಮ್ ನೀಡುವ ಘೋಷಣೆ ಮಾಡಿದೆ. ಹೌದು ಪ್ರಮುಖ ಟೆಲಿಕಾಂ ಆಪರೇಟರ್‌ಗಳಾದ Jio, Airtel ಮತ್ತು Vi ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಗಳನ್ನು ಸರಾಸರಿ 15 ಪ್ರತಿಶತದಷ್ಟು …

Read More »

ವರ್ಗಾವಣೆ ನಿಯಮ ಬದಲು ಸರ್ಕಾರದ ವಿರುದ್ಧ ಖಾಕಿ ಕೆಂಡ!

ಬೆಂಗಳೂರು ;ಪೊಲೀಸ್ ಕಾನ್​ಸ್ಟೆಬಲ್​ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವರ್ಗಾವಣೆ ಬಯಸುವವರಿಗೆ ಈಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ ನಿಯಮವನ್ನು 10 ವರ್ಷ ಅವಧಿಗೆ ಹೆಚ್ಚಳ ಮಾಡುವ ಸಿದ್ಧತೆ ನಡೆಸಿರುವ ಮಾಹಿತಿ ಹಿನ್ನೆಲೆಯಲ್ಲಿ ನಾಲ್ಕು ವರ್ಷದಿಂದ ವರ್ಗಾವಣೆಗಾಗಿ ಕಾಯುತ್ತಿರುವ ಪೊಲೀಸ್ ಕಾನ್​ಸ್ಟೆಬಲ್​ಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕುಟುಂಬ ಸಮೇತ ಪ್ರತಿಭಟನೆಗಿಳಿಯುವ ಎಚ್ಚರಿಕೆ ಕೊಟ್ಟಿದ್ದಾರೆ. ಮೊದಲಿಗೆ ಎರಡೂವರೆ ವರ್ಷ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದರೆ ಕಾನ್​ಸ್ಟೆಬಲ್​ಗಳನ್ನು …

Read More »

ಧಾರಾಕಾರ ಮಳೆ-148 ಅಡಿ ಎತ್ತರದ ಮಂದಿರ ಮುಳುಗಡೆ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ನದಿ ಮೂಲಕ ಹಿಡಕಲ್‌ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಿಡಕಲ್‌ ಜಲಾಶಯದಲ್ಲಿರುವ 148 ಅಡಿ ಎತ್ತರದ ಶ್ರೀ ವಿಠಲ ಮಂದಿರ ಸಂಪೂರ್ಣ ಮುಳುಗಡೆಯಾಗಿದೆ. ಸಾವಂತವಾಡಿ, ಅಂಬೋಲಿ ಅರಣ್ಯ ಪ್ರದೇಶದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ನದಿ ಮೂಲಕ ಹಿಡಕಲ್‌ ಜಲಾಶಯಕ್ಕೆ 25 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿರುವ ಶ್ರೀ ವಿಠಲ ಮಂದಿರ ಸಂಪೂರ್ಣ ಜಲಾವೃತಗೊಂಡಿದ್ದು, ಕಳೆದ 15 …

Read More »

ಇಂಡಿಯಾ’ ಒಕ್ಕೂಟಕ್ಕೆ ಕಾಂಗ್ರೆಸ್‌ ಶಾಸಕರಿಂದಲೇ ಮೋಸ! MLC ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು!

ಮುಂಬೈ: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ , ಭಾರತೀಯ ಜನತಾ ಪಕ್ಷ (BJP) ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ (NDA Alliance) ಮಹಾರಾಷ್ಟ್ರದಲ್ಲಿ ಭಾರಿ ಹಿನ್ನಡೆ ಉಂಟಾಗಿತ್ತು. ಅದೇ ಸಮಯದಲ್ಲಿ, ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಭರ್ಜರಿ ಸಾಧನೆ ಮಾಡಿತ್ತು. ಆದರೆ ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಆಟ ಫುಲ್ ತಲೆಕೆಳಗಾಗಿದೆ. ಹೌದು.. ಮಹಾರಾಷ್ಟ್ರದಲ್ಲಿ ನಿನ್ನೆ ನಡೆದ ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 9 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಪೈಕಿ …

Read More »

ಭ್ರಷ್ಟಾಚಾರ ಆರೋಪ ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ

ಬೆಂಗಳೂರು : ವಾಲ್ಮೀಕಿ ‌ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪದಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಚಿವ ಬಿ. ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರನನ್ನು ವಶಕ್ಕೆ ಪಡೆದಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ಹಣವನ್ನು ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ ಅನೇಕರು ಕೊಳ್ಳೆ ಹೊಡೆದ ಆರೋಪದಲ್ಲಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು. ನಿನ್ನೆಯಿಂದ ಇಡಿ ಅಧಿಕಾರಿಗಳು ನಾಗೇಂದ್ರ …

Read More »

ಭ್ರೂಣಹತ್ಯೆ ಆರೋಪಿಗೆ ಹೂಮಳೆ ಸ್ವಾಗತ ;

ಬೆಳಗಾವಿ : ಹಣದ ಆಸೆಗಾಗಿ ಭ್ರೂಣಹತ್ಯೆ ಹಾಗೂ ಶಿಶು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಜೈಲು ಪಾಲಾಗಿದ್ದ ಕಿತ್ತೂರಿನ ನಕಲಿ ವೈದ್ಯನೆ ಊರಿನ ಜನ ಹೂ ಮಳೆ ಸ್ವಾಗತ ಕೋರಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈಧ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪಿ ಅಬ್ದುಲ್ ಲಾಡಖಾನ್ ಎಂಬಾತ ಭ್ರೂಣಹತ್ಯೆ ನಡೆಸುತ್ತಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನ ತಿಗಡೊಳ್ಳಿ ಗ್ರಾಮದ ತೋಟದ ಮನೆ ಆವರಣದಲ್ಲಿ ಹೂತಿದ್ದ ಮೂರು ಭ್ರೂಣಗಳ …

Read More »

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಒಂದು‌ ಕಳಂಕ;ಸತೀಶ್‌ ಜಾರಕಿಹೊಳಿ

ಬೆಳಗಾವಿ: ವಾಲ್ಮೀಕಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದ್ದು, ಈ ಪ್ರಕರಣದಲ್ಲಿ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಶುಕ್ರವಾರ ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ವಾಲ್ಮೀಕಿ ಪ್ರಕರಣ ತನಿಖಾ ಹಂತದಲ್ಲಿದ್ದು, ದಾಖಲೇ ನೋಡಿದ ಮೇಲೆಯೇ ಈ ಪ್ರಕರಣ ಗೊತ್ತಾಗಲಿದೆ. ತಕ್ಷಣ ಈ ಪ್ರಕರಣ ಹೀಗೆ ಇದೆ ಎಂದು ಹೇಳಲು ಕಷ್ಟ ಎಂದು …

Read More »

ಕೆಡಿಪಿ ಸಭೆಯಲ್ಲಿ ಕುಡುಕ ಶಿಕ್ಷಕರ ಕುರಿತು ಚರ್ಚೆ

ಬೆಳಗಾವಿ : ಕೆಲ‌ ಶಾಲಾ ಶಿಕ್ಷಕರು ದಿನನಿತ್ಯ ಶಾಲೆಗೆ ಮಧ್ಯಪಾನ ಮಾಡಿ ಬರುತ್ತಿರುವ ಕುರಿತು ದೂರುಗಳು ಬಂದಿದ್ದು ಇಂತಹ ಶಿಕ್ಷಕರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು ಎಂದು ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶುಕ್ರವಾರ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಧ್ಯಪಾನ ಮಾಡಿ ಶಾಲೆಗೆ ಬರುವ ಶಿಕ್ಷಕರ ಕುರಿತು ಗಂಭೀರ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ …

Read More »

ಮದ್ಯನೀತಿ ಹಗರಣ: ಅರವಿಂದ್​ ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​

ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಆ ಬಳಿಕ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10ರಂದು 21 ದಿನಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ತಿಹಾರ್ …

Read More »

ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಸರ್ವಾಧಿಕಾರಿ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

ಬೆಂಗಳೂರು, ಜುಲೈ 12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಖಂಡಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಕಮಲ ಪಾಳೆಯ ಕಿಡಿ ಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕಿಸಿದೆ. ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿವೈ …

Read More »